ಕನ್ನಡದ ಹೆಸರಾಂತ ನಟಿ ಪವಿತ್ರಾ ಲೋಕೇಶ್ ಮತ್ತು ನಟ ನರೇಶ್ ತಮ್ಮ ರಿಲೇಷನ್ ಶಿಪ್ (Relationship) ಬಗ್ಗೆ ಬಹಿರಂಗವಾಗಿಯೇ ಮಾತನಾಡುತ್ತಿದ್ದಾರೆ. ಸಿಕ್ಸ್ತ್ ಸೆನ್ಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು ತಮ್ಮ ಸಂಬಂಧವನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ‘ಆಕಾಶ ಬಿದ್ದರೂ, ಭೂಮಿ ಬಾಯ್ತೆರೆದರೂ ಒಟ್ಟಿಗೆ ಇರ್ತೆವೆ’ ಎಂದು ಹೇಳಿಕೊಂಡಿದ್ದಾರೆ. ಪ್ರೀತಿಯಿಂದ ಪವಿತ್ರಾ ಲೋಕೇಶ್ ಅವರನ್ನು ತಾವು ‘ಅಮ್ಮು’ ಎಂದು ಕರೆಯುವುದಾಗಿ ತಿಳಿಸಿದ್ದಾರೆ. ಈ ಮೂಲಕ ತಾವು ಇಬ್ಬರೂ ರಿಲೇಶನ್ ಶಿಪ್ ನಲ್ಲಿ ಇರುವುದನ್ನು ಮೊದಲ ಬಾರಿಗೆ ಒಪ್ಪಿಕೊಂಡಿದ್ದಾರೆ.
ಈ ಹಿಂದೆ ಪವಿತ್ರಾ ಲೋಕೇಶ್ (Pavitra Lokesh) ಜೊತೆಗಿನ ಸ್ನೇಹಕ್ಕೆ ತಮ್ಮದೇ ಆದಂತಹ ವ್ಯಾಖ್ಯಾನ ನೀಡಿದ್ದರು ನಟ ನರೇಶ್ (Naresh). ತಮ್ಮ ಲವ್ ಸ್ಟೋರಿ ಆಧರಿಸಿದ ‘ಮತ್ತೆ ಮದುವೆ’ (Matte Maduve)ಸಿನಿಮಾದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ್ದ ನರೇಶ್, ‘ಎರಡು ಹೃದಯಗಳು ಒಂದಾಗುವುದೇ ಮದುವೆ’ ಎಂದು ಹೇಳಿದ್ದರು. ಮದುವೆ ವ್ಯವಸ್ಥೆ ಹಾಳಾಗಿ ಹೋಗಿದೆ. ಫ್ಯಾಮಿಲಿ ಕೋರ್ಟ್ ಸಂಖ್ಯೆ ಹೆಚ್ಚಾಗಿವೆ ಎಂದರೆ ಮದುವೆ (marriage) ಕುರಿತು ಯೋಚಿಸಬೇಕಿದೆ ಎಂದಿದ್ದರು ನರೇಶ್.
ಇಂತಹ ಮಾತುಗಳನ್ನು ಆಡುವ ಮೂಲಕ ಪವಿತ್ರಾ ಲೋಕೇಶ್ ಜೊತೆಗಿನ ಬಾಂಧವ್ಯವನ್ನು ಒಪ್ಪಿಕೊಂಡಿದ್ದರು. ಮದುವೆ ಅಂದರೆ, ತಾಳಿ ಕಟ್ಟಲೇಬೇಕು ಅಂತೇನೂ ಇಲ್ಲ ಎನ್ನುವ ಅರ್ಥದಲ್ಲಿ ಮಾತನಾಡಿದ್ದರು. ಎರಡು ಹೃದಯಗಳು ಬೆರತ ಮೇಲೆ ಅದುವೇ ಮದುವೆ ಎಂದು ಹೇಳುವ ಮೂಲಕ ಪವಿತ್ರಾ ಲೋಕೇಶ್ ಮತ್ತು ತಮ್ಮದು ಯಾವ ರೀತಿಯ ಸಂಬಂಧವೆಂದು ಅವರು ವಿವರಿಸಿದ್ದರು. ಇದನ್ನೂ ಓದಿ:ಎರಡೂವರೆ ದಶಕದ ಬಳಿಕ ಬಾಲಿವುಡ್ ಗೆ ಮರಳಿದ ಜ್ಯೋತಿಕಾ
ಈಗಾಗಲೇ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು, ತಮ್ಮ ರಿಯಲ್ ಲೈಫ್ ಘಟನೆಯನ್ನು ಈ ಜೋಡಿ ಸಿನಿಮಾ ಮಾಡಿರುವುದು ಟ್ರೈಲರ್ ನಲ್ಲಿ ಗೊತ್ತಾಗುತ್ತಿದೆ. ಈ ಹಿಂದೆ ರಿಲೀಸ್ ಆಗಿದ್ದ ಟೀಸರ್ ಬಹಳ ಸದ್ದು ಮಾಡಿತ್ತು. ಅದರ ಬೆನ್ನಲ್ಲೇ ಈಗ ಬಿಡುಗಡೆಯಾಗಿರುವ ಮತ್ತೆ ಮದುವೆ ಮೊದಲ ನೋಟ ಸಂಚಲನ ಸೃಷ್ಟಿಸಿದೆ.
ಪವಿತ್ರಾ ಲೋಕೇಶ್ ಹಾಗೂ ನರೇಶ್ ನಡುವೆ ಪ್ರೀತಿ ಹುಟ್ಟಿದ್ದೇಗೆ? ಆ ಪ್ರೀತಿಗೆ ನರೇಶ್ ಮೂರನೇ ಪತ್ನಿ ರಮ್ಯಾ ರಘುಪತಿಯೇ ವಿಲನ್ ಆಗಿ ನಿಂತಿರುವುದು. ಈ ಮೂವರ ಜಗಳ ಹಾದಿ ಬೀದಿ ರಂಪವಾಗಿದ್ದು. ಮೈಸೂರು ಹೋಟೆಲ್ ನಲ್ಲಿ ನಡೆದ ಹೈಡ್ರಾಮಾ ಕಹಾನಿ. ಈ ವಯಸ್ಸಿನಲ್ಲಿ ನರೇಶ್ ಮತ್ತೆ ಪ್ರೀತಿಯಲ್ಲಿ ಬೀಳೋದು. ಜನ ಹೀಯಾಳಿಸೋದು. ಹೀಗೆ ನಾನಾ ವಿಷಯಗಳನ್ನು ಟ್ರೇಲರ್ ನಲ್ಲಿ ತೋರಿಸಲಾಗಿದೆ.
ನರೇಶ್ ಲೈಫ್ ಸ್ಟೋರಿಯಲ್ಲಿ ಮೂರನೇ ಪತ್ನಿ ರಮ್ಯಾ ಅವರೇ ವಿಲನ್ ಆಗಿ ಕಾಣಿಸಿಕೊಂಡಿದ್ದರೆ, ಪವಿತ್ರಾ ಲೋಕೇಶ್ ಹಿನ್ನೆಲೆಯ ಕಥೆಯಲ್ಲಿ ವಿಲನ್ ಆಗಿ ನಿಂತವರು ಪತಿ ಸುಚೇಂದ್ರ ಪ್ರಸಾದ್ ಎನ್ನುವಂತೆ ಟ್ರೈಲರ್ ನಲ್ಲಿ ತೋರಿಸಲಾಗಿದೆ. ಹಾಗಾಗಿ ಈ ಸಿನಿಮಾಗೆ ರಮ್ಯಾ ಮತ್ತು ಸುಚೇಂದ್ರ ಪ್ರಸಾದ್ ಹಿನ್ನೆಲೆಯ ಪಾತ್ರಗಳೇ ಖಳನಾಯಕರಾ? ಟ್ರೈಲರ್ ನೋಡಿದ ಮೇಲೆ ಇಂಥದ್ದೊಂದು ಪ್ರಶ್ನೆಯು ಮೂಡದೇ ಇರದು. ನೈಜ ಪಾತ್ರಗಳನ್ನು ಹೋಲುವಂತೆಯೇ ದೃಶ್ಯಗಳನ್ನು ಕಟ್ಟಿರುವುದರಿಂದ ರಮ್ಯಾ ಮತ್ತು ಸುಚೇಂದ್ರ ಪ್ರಸಾದ್ ನೆನೆಪಾಗುವುದು ಸುಳ್ಳಲ್ಲ.