ರಾಮನಗರ: ಡಿ.ಕೆ.ಶಿವಕುಮಾರ್ (DK Shivakumar) ಮತ್ತು ಡಿ.ಕೆ.ಸುರೇಶ್ (DK Suresh) ಆಶೀರ್ವಾದ ಇರೋದಕ್ಕೆ ನನಗೆ ಅನುದಾನ ಸಿಗುತ್ತಿದೆ. ನಮಗೆ ತೃಪ್ತಿ ಇದೆ. ಅವರ ಆಶೀರ್ವಾದ ಪಡೆದುಕೊಂಡರೆ ಅನುದಾನ ಸಿಗಬಹುದು ಎಂದು ಮಾಗಡಿ ಶಾಸಕ ಬಾಲಕೃಷ್ಣ (HC Balakrishna) ತಿಳಿಸಿದ್ದಾರೆ.
ಸರ್ಕಾರದ ವಿರುದ್ಧ ಕಾಂಗ್ರೆಸ್ (Congress) ಶಾಸಕರ ಅಸಮಾಧಾನ ವಿಚಾರ ಕುರಿತು ಬಿಡದಿಯಲ್ಲಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ನ ಹಿರಿಯ ಶಾಸಕರಲ್ಲಿ ಮನವಿ ಮಾಡುತ್ತೇನೆ. ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು, ಸಿಎಂ ಭೇಟಿ ಮಾಡಿ. ನಿಮ್ಮ ಸಮಸ್ಯೆಗಳ ಬಗ್ಗೆ ಮಾತನಾಡಿ. ಬಜೆಟ್ನಲ್ಲಿ ಪ್ರತಿ ಶಾಸಕರಿಗೂ 50 ಕೋಟಿ ಹಣ ಕೊಡಿ ಅಂತ ಸಿಎಂ ಹೇಳಿದ್ದಾರೆ. ಕೆಲವೇ ದಿನಗಳಲ್ಲಿ ಎಲ್ಲಾ ಕ್ಷೇತ್ರಕ್ಕೂ ಅನುದಾನ ಬರುತ್ತೆ. ರಾಜಿನಾಮೆ ಕೊಡ್ತೀನಿ ಅನ್ನೋದು ಕೆಲವರ ವೈಯಕ್ತಿಕ ಅಭಿಪ್ರಾಯ. ಅದನ್ನ ಸೂಕ್ತ ವೇದಿಕೆಯಲ್ಲಿ ವ್ಯಕ್ತಪಡಿಸಬೇಕು ಎಂದರು. ಇದನ್ನೂ ಓದಿ: PublicTV Explainer: ಫಾಸ್ಟ್ಯಾಗ್ 3,000 ರೂ. ವಾರ್ಷಿಕ ಪಾಸ್ – ನಿಮಗೆ ಲಾಭನಾ, ನಷ್ಟನಾ?
ಇನ್ನೂ ಸಿಎಂ ಬಳಿ ಈಗ ಹಣ ಇಲ್ಲ, ಕೇಂದ್ರದ ಬಳಿ ಕೇಳಬೇಕು ಎಂಬ ಪರಮೇಶ್ವರ್ (G Parameshwar) ಹೇಳಿಕೆ ವಿಚಾರ ಕುರಿತು ಮಾತನಾಡಿ, ಕೇಂದ್ರದಿಂದ ನಮಗೆ ಬರಬೇಕಾದ ಹಣ ಬಂದಿಲ್ಲ. ಕೇಂದ್ರದವರು ನಮಗೆ ಹಣ ಕೊಡಬೇಕು. ನಮ್ಮ ಹತ್ತಿರವೂ ಹಣ ಇದೆ, ಅದರ ಜೊತೆ ಅವರೂ ಕೊಟ್ಟರೆ ಹೆಚ್ಚು ಅಭಿವೃದ್ಧಿ ಮಾಡಬಹುದು. ಇದು ಪರಮೇಶ್ವರ್ ಅವರ ಮಾತಿನ ಅರ್ಥ. ಕೇಂದ್ರದ ಹಣಕ್ಕೆ ಹಿಂದೆಯಿಂದಲೂ ಒತ್ತಾಯ ಮಾಡಿದ್ದೇವೆ. ದೆಹಲಿಗೂ ಹೋಗಿ ಹಣ ಕೇಳಿದ್ದೇವೆ, ಅವರು ಹಣ ಕೊಟ್ಟರೆ ಇನ್ನೂ ಹೆಚ್ಚಿನ ಅಭಿವೃದ್ಧಿ ಮಾಡಬಹುದು ಎಂದು ಪರಮೇಶ್ವರ್ ಹೇಳಿಕೆಯನ್ನ ಸಮರ್ಥಿಸಿಕೊಂಡರು. ಇದನ್ನೂ ಓದಿ: `ಕೈ’ ಕಂಪನ ಸಂಕಟ: 2 ವರ್ಷ ಗ್ಯಾರಂಟಿ ಪಿರಿಯೆಡ್, ವೇಯ್ಟಿಂಗ್ ಪಿರಿಯೆಡ್ ಮುಗಿತು, ಇನ್ನೇನಿದ್ರೂ ಫೈಟಿಂಗ್ ಪಿರಿಯೆಡ್!
ಕೆಲವೊಂದು ಸಂದರ್ಭಗಳಲ್ಲಿ ಏರುಪೇರು ಆದಾಗ ಮನಸ್ಸಿಗೆ ಬೇಸರ ಆಗುತ್ತೆ. ಬೇಸರ ಆಗುವುದರಿಂದ ಸಮಸ್ಯೆ ಬಗೆಹರಿಯಲ್ಲ. ಸಿಎಂ, ಡಿಸಿಎಂ ಜೊತೆ ಕೂತು ಮಾತುಕತೆ ಮಾಡಬೇಕು. ರಾಜಿನಾಮೆ ಕೊಟ್ರೆ, ಇನ್ನೊಬ್ಬ ಎಂಎಲ್ಎ ಆಗುತ್ತಾನೆ. ರಾಜಿನಾಮೆ ಕೊಟ್ರೆ ಸಮಸ್ಯೆ ಬಗೆಹರಿಯುತ್ತಾ? ಜನ ಆಶೀರ್ವಾದ ಮಾಡಿದ್ದಾರೆ, ನಾವು ಕೆಲಸ ಮಾಡಬೇಕು. ಸಿಎಂ, ಡಿಸಿಎಂ ಭೇಟಿ ಮಾಡಿ ಸಮಸ್ಯೆ ಹೇಳಿಕೊಂಡು ಅನುದಾನ ತರಬೇಕು. ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂಬುದು ಅವರ ಸಮಸ್ಯೆ, ಹಣ ಕೊಟ್ಟಿಲ್ಲ ಎಂದು ಅವರು ಹೇಳುತ್ತಿಲ್ಲ ಎಂದರು. ಇದನ್ನೂ ಓದಿ: ಸಾಹಿತಿ ಪ್ರೊ.ದೊಡ್ಡ ರಂಗೇಗೌಡರ ಆರೋಗ್ಯ ವಿಚಾರಿಸಿದ ಸಚಿವ ಶಿವರಾಜ ತಂಗಡಗಿ