Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಶಾಲೆಗಳಿಗೆ ಹತ್ತಾರು ಎಕರೆ ಜಮೀನು ನೀಡಿದ್ದೇನೆ; ಹೆಚ್‌ಡಿಕೆ, ಮಂಜುನಾಥ್ ಒಂದು ಎಕರೆ ದಾನ ಮಾಡಿದ್ದಾರಾ?- ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಾನು ಶಾಲೆಗಳಿಗೆ ಹತ್ತಾರು ಎಕರೆ ಜಮೀನು ನೀಡಿದ್ದೇನೆ; ಹೆಚ್‌ಡಿಕೆ, ಮಂಜುನಾಥ್ ಒಂದು ಎಕರೆ ದಾನ ಮಾಡಿದ್ದಾರಾ?- ಡಿಕೆಶಿ

Districts

ನಾನು ಶಾಲೆಗಳಿಗೆ ಹತ್ತಾರು ಎಕರೆ ಜಮೀನು ನೀಡಿದ್ದೇನೆ; ಹೆಚ್‌ಡಿಕೆ, ಮಂಜುನಾಥ್ ಒಂದು ಎಕರೆ ದಾನ ಮಾಡಿದ್ದಾರಾ?- ಡಿಕೆಶಿ

Public TV
Last updated: January 12, 2025 7:16 pm
Public TV
Share
3 Min Read
DK Shivakumar 1
SHARE

ರಾಮನಗರ: ರಾಮನಗರ (Ramanagara) ಜಿಲ್ಲೆಗೆ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇವೆ. ಕನಕಪುರ ಕ್ಷೇತ್ರದಲ್ಲಿ ಸೋಲಾರ್ ಪ್ಲಾಂಟ್ ತಂದಿದ್ದೇನೆ. ಅದರ ಪಕ್ಕದಲ್ಲಿ ವಿದ್ಯಾರ್ಥಿ ವಸತಿ ನಿಲಯಕ್ಕೆ ಜಮೀನು ನೀಡಿದ್ದೇನೆ. ನಮ್ಮ ಅಜ್ಜಿ ಹೆಸರಿನಲ್ಲಿ ಖರೀದಿ ಮಾಡಿದ್ದ ಜಮೀನನ್ನು ಶಾಲೆಗೆ ಬರೆದುಕೊಟ್ಟಿದ್ದೇನೆ. ಕುಮಾರಸ್ವಾಮಿ (HD Kumaraswamy) ಅಥವಾ ಸಂಸದ ಮಂಜುನಾಥ್ (Dr Manjunath) ಅವರು ರಾಜ್ಯದಲ್ಲಿ ಯಾರಿಗಾದರೂ ಒಂದು ಎಕರೆ ದಾನ ಮಾಡಿದ್ದಾರಾ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಪ್ರಶ್ನಿಸಿದರು.

ಕನಕಪುರ ತಾಲೂಕಿನ ದೊಡ್ಡಾಲಹಳ್ಳಿ ಗ್ರಾಮದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಸಿ ಮಾತನಾಡಿದ ಅವರು, ನೀವು ನನ್ನನ್ನು ಬೆಳೆಸಿದ್ದೀರಿ. ಜಿಲ್ಲಾ ಪಂಚಾಯಿತಿ ಸದಸ್ಯ, ಶಾಸಕ, ಮಂತ್ರಿ ಹಾಗೂ ಉಪಮುಖ್ಯಮಂತ್ರಿ ಮಾಡಿದ್ದೀರಿ. ಸುರೇಶ್ ಅವರನ್ನು ಸಂಸದರನ್ನಾಗಿ ಮಾಡಿದ್ದೀರಿ ಎಂಬ ಕಾರಣಕ್ಕೆ ನಿಮ್ಮ ಋಣ ತೀರಿಸಲು ನಾನು ಈ ಕೆಲಸ ಮಾಡಿದ್ದೇನೆ. ನಮ್ಮ ಜೊತೆಯಲ್ಲಿದ್ದುಕೊಂಡು ತಟ್ಟೆಮರೆ ಏಟು ಕೊಟ್ಟವರಿಗೆ ನೀವು ಈ ವಿಚಾರ ತಿಳಿಸಿ. ಮುಂದೆ ನೀವು ಆತ್ಮಸಾಕ್ಷಿಗೆ ಮತ ಹಾಕುವಂತೆ ಹೇಳಬೇಕು ಎಂದರು. ಇದನ್ನೂ ಓದಿ: ಹಸುಗಳ ಮೇಲೆ ಪೈಶಾಚಿಕ ಕೃತ್ಯ ನಡೆಸಿದವರನ್ನು ಎನ್‍ಕೌಂಟರ್ ಮಾಡಿ ಬಿಸಾಕಿ: ರೇಣುಕಾಚಾರ್ಯ

ಸುರೇಶ್ ಅವರು ಸಂಸದರಾಗಿದ್ದಾಗ ಅವರ ಕ್ಷೇತ್ರದಲ್ಲಿ ಹೆಚ್ಚು ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. ನಮ್ಮ ತಾಲೂಕಿನಲ್ಲಿ 120ಕ್ಕೂ ಹೆಚ್ಚು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. ಈ ಭಾಗದ ಜನರಲ್ಲಿ ಹೆಚ್ಚು ಕ್ಯಾನ್ಸರ್ ರೋಗ ಪತ್ತೆಯಾಗುತ್ತಿದೆ ಎಂದು ವೈದ್ಯರು ಹೇಳಿದಾಗ ಇದನ್ನು ತಪ್ಪಿಸಲು ಈ ಕುಡಿಯುವ ನೀರಿನ ಘಟಕ ಸ್ಥಾಪಿಸಿದೆವು. ನಾನು ಇಂಧನ ಸಚಿವನಾಗಿದ್ದಾಗ, ಸುರೇಶ್ ಸಂಸದರಾಗಿದ್ದಾಗ ಈ ಭಾಗದ ಪ್ರತಿ ಇಬ್ಬರು ರೈತರಿಗೆ ಪ್ರತ್ಯೇಕವಾಗಿ ಟ್ರಾನ್ಸ್ಫಾರ್ಮ್ ಅಳವಡಿಸಿದ್ದೆವು. ಈ ಲೋಕಸಭಾ ಕ್ಷೇತ್ರದಲ್ಲಿ ಮಾತ್ರ ಇಂತಹ ಯೋಜನೆ ಮಾಡಲಾಗಿದ್ದು, ರಾಜ್ಯದ ಬೇರೆ ಯಾವುದೇ ಜಿಲ್ಲೆಯಲ್ಲಿ ಹಾಗೂ ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ದೇಶದಲ್ಲಿ ಎಲ್ಲಿಯೂ ಇಂತಹ ಯೋಜನೆ ಮಾಡಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: IPL 2025: ಮಾರ್ಚ್‌ 23 ರಿಂದ ಐಪಿಎಲ್‌ ಆರಂಭ: ಬಿಸಿಸಿಐ ಉಪಾಧ್ಯಕ್ಷ ಘೋಷಣೆ

15-20 ವರ್ಷಗಳ ಹಿಂದೆ ಈ ಭಾಗದಲ್ಲಿ ಜಮೀನಿನ ಬೆಲೆ ಎಷ್ಟಿತ್ತು? ಈಗ ಎಷ್ಟು ಆಗಿದೆ? ನಿಮಗೆ ನೇರವಾಗಿ ಹಣ ನೀಡಲಾಗದಿದ್ದರೂ ನಿಮ್ಮ ಆಸ್ತಿ ಮೌಲ್ಯವನ್ನು ಹೆಚ್ಚಿಸಿ ನಿಮಗೆ ನೆರವಾಗಿದ್ದೇನೆ. ಆ ಮೂಲಕ ನಿಮ್ಮ ಬದುಕಿನಲ್ಲಿ ಬದಲಾವಣೆ ತಂದಿದ್ದೇನೆ. ಇನ್ನು ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ದೆಹಲಿಗೆ ಕಳುಹಿಸಲಾಗಿದೆ. ಕೇಂದ್ರ ಗೃಹ ಸಚಿವಾಲಯದಿಂದ ಇಂಟೆಲಿಜೆನ್ಸ್ನವರು ವರದಿ ಕಳುಹಿಸುವುದು ಬಾಕಿ ಇದೆ. ಈ ವಿಚಾರವಾಗಿ ಕೇಂದ್ರ ಸಚಿವರು ಹಾಗೂ ಪ್ರಧಾನಮಂತ್ರಿಗಳಿಗೆ ಒಂದೆರಡು ದಿನಗಳಲ್ಲಿ ಪತ್ರ ಬರೆಯಲಿದ್ದೇನೆ. ನಂತರ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಅಧಿಕೃತವಾಗಿ ಘೋಷಣೆಯಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಮೂರು ಹೊಸ ಹಸುಗಳನ್ನು ನಾನೇ ಕೊಡಿಸುತ್ತೇನೆ: ಜಮೀರ್

ರಾಮನಗರವನ್ನು ಜಿಲ್ಲಾ ಕೇಂದ್ರವಾಗಿಯೇ ಉಳಿಯಲಿದೆ. ಹೀಗಾಗಿ ನೀವು ನಿಮ್ಮ ಆಸ್ತಿ ಮಾರಿಕೊಳ್ಳಬೇಡಿ. ನಾವು ಬೆಂಗಳೂರಿನವರು, ನಮ್ಮ ಈ ಗುರುತನ್ನು ನಾವು ಯಾಕೆ ಬಿಟ್ಟುಕೊಡಬೇಕು? ಭವಿಷ್ಯದಲ್ಲಿ ನಿಮ್ಮ ಜಮೀನಿನ ಬೆಲೆ ಏನಾಗುತ್ತದೆ ಎಂದು ನೀವು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಈ ವಿಚಾರವಾಗಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಬಹಳ ಟೀಕೆ ಟಿಪ್ಪಣಿ ಮಾಡುತ್ತಿದ್ದಾರೆ. ಹಾಗಿದ್ದರೆ ಇವರುಗಳು ತಮ್ಮ ಊರು ಬಿಟ್ಟು ಇಲ್ಲಿಗೆ ಬಂದು ಯಾಕೆ ನೂರಾರು ಎಕರೆ ಜಮೀನು ಖರೀದಿ ಮಾಡಿದ್ದಾರೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಕನ್ನಡತಿ, ಮದ್ದೂರಿನ ಸೊಸೆಗೆ ಮಿಸೆಸ್ ಇಂಡಿಯಾ ಕಿರೀಟ

TAGGED:bjpcongressDK ShivakumarDr Manjunathhd kumaraswamyjdsramanagaraಕಾಂಗ್ರೆಸ್ಜೆಡಿಎಸ್ಡಾ ಮಂಜುನಾಥ್ಡಿಕೆ ಶಿವಕುಮಾರ್ಬಿಜೆಪಿರಾಮನಗರಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Raymond Group Chairman Gautam Singhania Speed Boat Overturn Maldives
Latest

ಮಾಲ್ಡೀವ್ಸ್‌ನಲ್ಲಿ ಸ್ಪೀಡ್ ಬೋಟ್ ಅಪಘಾತ – ರೇಮಂಡ್ಸ್ ಮುಖ್ಯಸ್ಥ ಗೌತಮ್ ಸಿಂಘಾನಿಯಾಗೆ ಗಾಯ

Public TV
By Public TV
13 minutes ago
congress flag
Bengaluru City

ದಾವಣಗೆರೆ ದಕ್ಷಿಣ: ಲಿಂಗಾಯತ v/s ಮುಸ್ಲಿಂ ಸಮುದಾಯ ನಾಯಕರ ನಡುವೆ ಕದನ – ಯಾರಿಗೆ ಟಿಕೆಟ್?

Public TV
By Public TV
25 minutes ago
hassan man dies
Crime

ಜೂಜಾಡುವ ವೇಳೆ ಪೊಲೀಸರ ದಾಳಿ – ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವು

Public TV
By Public TV
51 minutes ago
Dharwad HP Gas Tanker Gas Leakage
Dharwad

ಮಂಗಳೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ – ಕಲಘಟಗಿ, ಯಲ್ಲಾಪುರ ಮಾರ್ಗದಲ್ಲಿ ಸಂಚಾರ ನಿಷೇಧ

Public TV
By Public TV
1 hour ago
Nelamangala Lorry Accident Child Death
Bengaluru City

ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಲಾರಿ ಹರಿದು 4ರ ಬಾಲಕಿ ದುರ್ಮರಣ

Public TV
By Public TV
2 hours ago
siddaramaiah ramzan prayer
Bengaluru City

ರಂಜಾನ್‌ ಸಂಭ್ರಮ: ಮುಸ್ಲಿಂ ಬಾಂಧವರ ಜೊತೆ ಸಾಮೂಹಿಕ ಪ್ರಾರ್ಥನೆಯಲ್ಲಿ ಸಿಎಂ ಭಾಗಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?