Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಸಂಸದನಾಗಲು, ಶಾಸಕನಾಗಲು ಎಂದೂ ಹಪಹಪಿಸಿಲ್ಲ: ನಿಖಿಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಾನು ಸಂಸದನಾಗಲು, ಶಾಸಕನಾಗಲು ಎಂದೂ ಹಪಹಪಿಸಿಲ್ಲ: ನಿಖಿಲ್

Districts

ನಾನು ಸಂಸದನಾಗಲು, ಶಾಸಕನಾಗಲು ಎಂದೂ ಹಪಹಪಿಸಿಲ್ಲ: ನಿಖಿಲ್

Public TV
Last updated: November 30, 2024 10:41 am
Public TV
Share
3 Min Read
Nikhil Kumaraswamy 1 2
SHARE

ಹಾಸನ: ನಾನು ಸಂಸದನಾಗಲು, ಶಾಸಕನಾಗಲು ಎಂದು ಕೂಡ ಹಪಹಪಿಸಿಲ್ಲ. ಹಾಗಿದ್ದರೆ ನಾನು ಚಿತ್ರರಂಗಕ್ಕೆ ಹೋಗುತ್ತಿರಲಿಲ್ಲ. ರಾಜಕಾರಣಕ್ಕೆ ಬರುತ್ತಿದ್ದೆ ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ.

ಹಾಸನ (Hassan) ಜಿಲ್ಲೆ, ಅರಕಲಗೂಡಿನಲ್ಲಿ ಮಾಜಿಸಚಿವ ಎ.ಮಂಜು ಅವರ ಹುಟ್ಟುಹಬ್ಬ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಾಸನ ಜಿಲ್ಲೆಯ ಜನತೆ ಒಬ್ಬ ಸಾಧಾರಣ ರೈತ ಕುಟುಂಬದ ಮಗನಾಗಿ ಜನಿಸಿರುವ ದೇವೇಗೌಡರನ್ನು ಕೆಂಪುಕೋಟೆ ಮೇಲೆ ಬಾವುಟ ಹಾರಿಸುವ ಶಕ್ತಿಯನ್ನು ತುಂಬಿ ಇತಿಹಾಸ ಸೃಷ್ಟಿ ಮಾಡಿದ್ದಾರೆ. ನಿಮ್ಮ ಹೃದಯದಲ್ಲಿ ನಮ್ಮ ಕುಟುಂಬದ ಮೇಲೆ ಇಟ್ಟಿರುವ ಪ್ರೀತಿ, ಗೌರವ ಎಷ್ಟು ಜನ್ಮ ಎತ್ತಿ ಬಂದರೂ ತೀರಿಸಲು ಸಾಧ್ಯವಿಲ್ಲ. ನಿಮ್ಮ ಋಣಕ್ಕಾಗಿ ಪ್ರಾಮಾಣಿಕವಾಗಿ ನಮ್ಮ ಇಡೀ ಪಕ್ಷ, ನಮ್ಮ ಕುಟುಂಬ ನಿಮ್ಮ ಜೊತೆಯಲ್ಲಿ ಸದಾಕಾಲ ಇರುತ್ತೇವೆ. ರಾಮನಗರ ಜಿಲ್ಲೆಯ ಜನತೆ ಕೂಡ ನಮ್ಮ ಕುಟುಂಬಕ್ಕೆ ಎಂಟು ಬಾರಿ ಶಾಸಕ ಸ್ಥಾನ, ಮೂರು ಬಾರಿ ಕುಮಾರಣ್ಣ ಅವರನ್ನು ಸಂಸದರನ್ನಾಗಿ ಆಯ್ಕೆ ಮಾಡಿದ್ದಾರೆ ಎಂದರು. ಇದನ್ನೂ ಓದಿ: ಕಲ್ಟ್ ಚಿತ್ರತಂಡದ ಯಡವಟ್ಟು – ಸಚಿವ ಜಮೀರ್ ಪುತ್ರ ಜೈದ್ ಖಾನ್ ವಿರುದ್ಧ ದೂರು

Nikhil Kumaraswamy Hassan

ಚುನಾವಣೆಯಲ್ಲಿ ಏಳುಬೀಳು ಸರ್ವೇ ಸಾಮಾನ್ಯ. ನಾನು ರಾಜಕಾರಣದ ಹಿನ್ನೆಲೆಯಲ್ಲಿ ಬಂದಿರುವ ವ್ಯಕ್ತಿಯಾಗಿದ್ದರೂ ಚಿತ್ರರಂಗದಲ್ಲಿ ನನ್ನದೇ ಆದಷ್ಟು ಸವಾಲುಗಳನ್ನು ಸ್ವೀಕಾರ ಮಾಡಿದೆ. ಜಾಗ್ವಾರ್ ಮೂಲಕ ನಮ್ಮ ತಂದೆ ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದು, ಅನೇಕ ಚಿತ್ರಗಳನ್ನು ಮಾಡಿದೆ. ತದನಂತರ ಸಾರ್ವಜನಿಕ ಬದುಕಿನಲ್ಲಿ ಜವಾಬ್ದಾರಿಗಳನ್ನು ಅರಿತಿದ್ದೇನೆ. ಆ ಒಂದು ಕಾರಣದಿಂದ ಸಂಪೂರ್ಣವಾಗಿ ಸಾರ್ವಜನಿಕ ಬದುಕಿಗೆ ಧುಮುಕಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: Cyclone Fengal | ತಮಿಳುನಾಡಿಗೆ ಇಂದು ಅಪ್ಪಳಿಸಲಿದೆ ಫೆಂಗಲ್ ಚಂಡಮಾರುತ – ಭೂಕುಸಿತ ಸಾಧ್ಯತೆ

ದೇವೇಗೌಡರಿಗೆ 92 ವಯಸ್ಸಾದರೂ ರಾಜ್ಯಸಭೆಯಲ್ಲಿ ಏಕಾಂಗಿಯಾಗಿ ನೆಲ, ಜಲ, ಭಾಷೆ ಉಳಿಸುವ ಕೆಲಸ ಮಾಡುತ್ತಿದ್ದಾರೆ. ನನ್ನ ಜೀವನದ ಸ್ಪೂರ್ತಿ ದೇವೇಗೌಡರು. ನನ್ನ ಜವಾಬ್ದಾರಿಯನ್ನು ಅರಿತಿದ್ದೇನೆ. ಅನಿರೀಕ್ಷಿತವಾದ ಬೆಳವಣಿಗೆಯಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಬೇಕಾಗಿ ಬಂತು. ಈ ಚುನಾವಣೆಯ ಸೋಲಿನ ಬಗ್ಗೆ ಹೆಚ್ಚಾಗಿ ಪರಾಮರ್ಶೆ ಮಾಡಲ್ಲ. ಕರ್ನಾಟಕ ರಾಜ್ಯದಲ್ಲಿ ಕಟ್ಟಿರುವ ರೈತ ಪರವಾದ ಪಕ್ಷ, ಪ್ರಾದೇಶಿಕ ಪಕ್ಷ ಜೆಡಿಎಸ್. ಲಕ್ಷಾಂತರ ಕಾರ್ಯಕರ್ತರ ದುಡಿಮೆ, ಎಲ್ಲಾ ತಂದೆ, ತಾಯಿಯರ ಆಶೀರ್ವಾದ, ರೈತರ ಆಶೀರ್ವಾದ ಮಾಡಿ ಇಲ್ಲಿಯವರೆಗೆ ಬೆಳೆಸಿ, ಉಳಿಸಿದ್ದೀರಿ. ಹಲವಾರು ಸಂದರ್ಭದಲ್ಲಿ ಅಖಾಡ ಸಿದ್ಧವಾಗಿತ್ತು. ಬಹಳ ಸುಲಭವಾಗಿ ಶಾಸಕನಾಗಬಹುದಿತ್ತು. ಆದರೆ ಇಲ್ಲಿಯವರೆಗೂ ನಾನು, ಪಕ್ಷ ಸಂಕಷ್ಟದಲ್ಲಿತ್ತು. ಆ ಸಂದರ್ಭದಲ್ಲಿ ಒಬ್ಬ ಪಕ್ಷದ ಶಿಸ್ತಿನ ಸಿಪಾಯಿಯಾಗಿ, ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷದ ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದೇನೆ. 19 ಸ್ಥಾನ ಗೆದ್ದು 18ಕ್ಕೆ ಇಳಿದಿದ್ದೇವೆ. ನಿಮ್ಮೆಲ್ಲರ ಆಶೀರ್ವಾದಿಂದ ಇಡೀ ರಾಜ್ಯ ಪ್ರವಾಸ ಮಾಡುತ್ತೇನೆ. ಮೂಲೇಲಿ ಕೂರುವ ಜಾಯಮಾನ ನನ್ನದಲ್ಲ ಎಂದು ನುಡಿದರು. ಇದನ್ನೂ ಓದಿ: ವಿಶೇಷ ಚೇತನರ ಅನುದಾನಕ್ಕೂ ಸರ್ಕಾರ ಕೊಕ್ಕೆ – 80% ರಷ್ಟು ಅನುದಾನ ಕಡಿತ ಆರೋಪ!

ನಾನು ಸೋತು ಒಂದು ವಾರ ಆಗಿದೆ. ನೀವು ಎದೆಗುಂದಬಾರದು ಎಂದು ಅನೇಕರು ಹೇಳಿದ್ದಾರೆ. ನನಗಿನ್ನು 36 ವರ್ಷ. ನನ್ನ ಮುಂದೆ ಇರುವುದು ಒಂದೇ ಸವಾಲು. ಜನತಾದಳ ಪಕ್ಷವನ್ನು ದಡ ಮುಟ್ಟಿಸಬೇಕು. ನಾನು ಶಾಸಕನಾಗಬೇಕು ಎನ್ನುವುದು ನನ್ನ ಮುಂದೆ ಇರುವ ಪ್ರಶ್ನೆ ಅಲ್ಲ. ಪ್ರಾದೇಶಿಕ ಪಕ್ಷ ಉಳಿಯಬೇಕಿದೆ. ಕನ್ನಡಿಗರ ಅಸ್ಮಿತೆಗಾಗಿ ಈ ಪಕ್ಷ ಉಳಿಯಬೇಕಿದೆ. ಆ ಹಿನ್ನೆಲೆಯಲ್ಲಿ ಹೋರಾಟ ಮಾಡುತ್ತೇನೆ. ಕೊನೆ ಉಸಿರು ಇರುವವರೆಗೂ ಹೋರಾಡುತ್ತೇನೆ. ಮಾತನಾಡಲು ವೇದಿಕೆಗಳು ಮುಂದಿನ ದಿನಗಳಲ್ಲಿ ಸಜ್ಜಾಗುತ್ತದೆ. ಹೋರಾಟ ಎನ್ನುವುದನ್ನು ರಕ್ತಗತವಾಗಿ ಮೈಗೂಡಿಸಿಕೊಂಡಿದ್ದೇನೆ. ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಒಬ್ಬ ಯುವಕನಾಗಿ ನಿಖಿಲ್ ಕುಮಾರಸ್ವಾಮಿ ನಿಮ್ಮ ಜೊತೆಯಲ್ಲಿ ಪ್ರಾಮಾಣಿಕವಾಗಿ ಇರುತ್ತಾನೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: Davanagere| ವಿದ್ಯುತ್ ಅವಘಡಕ್ಕೆ ಒಂದೂವರೆ ಎಕರೆ ಅಡಿಕೆ ತೋಟ ಸುಟ್ಟು ಕರಕಲು

TAGGED:Channapatna By Electionhassanjdsnikhil kumaraswamyಚನ್ನಪಟ್ಟಣ ಉಪಚುನಾವಣೆಜೆಡಿಎಸ್ನಿಖಿಲ್ ಕುಮಾರಸ್ವಾಮಿಹಾಸನ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
5 minutes ago
exit polls
Latest

Exit Poll Results | ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿಗೆ ಅಧಿಕಾರ – ತಮಿಳುನಾಡಲ್ಲಿ ಡಿಎಂಕೆ ಕಮಾಲ್ – ಒಂದರಲ್ಲಿ ದಳಪತಿಗೆ ಪಟ್ಟ

Public TV
By Public TV
8 minutes ago
TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
28 minutes ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
51 minutes ago
Dharwad Suicide
Dharwad

ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣಾದ ಕೇಸ್ – ಮೂವರು ಕಾನ್‌ಸ್ಟೆಬಲ್‌ಗಳು ಸಸ್ಪೆಂಡ್

Public TV
By Public TV
54 minutes ago
Virtual Court Proceedings
Court

ದೆಹಲಿ ಹೈಕೋರ್ಟ್ ಸಿಜೆ ಪೀಠದ ವರ್ಚುವಲ್‌ ವಿಚಾರಣೆ ವೇಳೆ ಕಾಣಿಸಿದ ಅಶ್ಲೀಲ ವೀಡಿಯೋ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?