ನಾನು ರಾಜೀನಾಮೆ ನೀಡಲ್ಲ – ದೆಹಲಿಯಲ್ಲಿ ಶ್ರೀನಿವಾಸ ಗೌಡ ಹೇಳಿಕೆ

Public TV
1 Min Read
Srinivasa Gowda a copy

ನವದೆಹಲಿ: ನಾನು ರಾಜೀನಾಮೆ ನೀಡುವುದಿಲ್ಲ ಮತ್ತು ಬಿಜೆಪಿಗೆ ಹೋಗುವುದಿಲ್ಲ ಎಂದು ಕೋಲಾರ ಶಾಸಕ ಶ್ರೀನಿವಾಸಗೌಡ ಹೇಳಿದ್ದಾರೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಇಫ್ಕೋ ಸಂಸ್ಥೆ ಸಭೆಗಾಗಿ ದೆಹಲಿಗೆ ಬಂದಿದ್ದೇನೆ. ದೆಹಲಿಗೆ ಬರುವ ಮುನ್ನ ಸಿಎಂ ಕುಮಾರಸ್ವಾಮಿಗೆ ತಿಳಿಸಿದ್ದೇನೆ ಎಂದರು.

ನಾನು ಯಡಿಯೂರಪ್ಪ ಪುತ್ರ ವಿಜಯೇಂದ್ರ ಜೊತೆ ಬಂದಿದ್ದೇನೆ ಎನ್ನುವುದು ಸುಳ್ಳು. ವಿಮಾನದಲ್ಲಿ ನಾನು ಅವರ ಮುಖವನ್ನೇ ನೋಡಿಲ್ಲ ಎಂದು ಹೇಳಿದರು. ಹಿಂದೆ ನನಗೆ ಬಿಜೆಪಿ 5 ಕೋಟಿ ಆಫರ್ ಮಾಡಿತ್ತು. ಆಗ ನಾನು ಅದನ್ನು ಬಹಿರಂಗವಾಗಿ ಹೇಳಿದ್ದು, ಈಗ ನನ್ನನ್ನು ಯಾವ ಬಿಜೆಪಿ ನಾಯಕರು ಸಂಪರ್ಕಿಸಿಲ್ಲ ಎಂದು ತಿಳಿಸಿದರು.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿಜಯೇಂದ್ರ ಜೊತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶ್ರೀನಿವಾಸ ಗೌಡ ಸಹ ಬಿಜೆಪಿ ಸೇರುತ್ತಾರಾ ಎನ್ನುವ ಪ್ರಶ್ನೆ ಎದ್ದಿತ್ತು.

https://www.youtube.com/watch?v=_SWeDFTmboc

Share This Article
Leave a Comment

Leave a Reply

Your email address will not be published. Required fields are marked *