ಅಹಮದಾಬಾದ್: ಏರ್ ಇಂಡಿಯಾ (Air India) ವಿಮಾನ ದುರಂತದಲ್ಲಿ (Plane Crash) ನಾನು ನನ್ನ ಪ್ರೀತಿಯನ್ನು (Love) ಕಳೆದುಕೊಂಡೆ ಎಂದು ಯುವಕನೊಬ್ಬ ಅಹಮದಾಬಾದ್ (Ahmedabad) ಆಸ್ಪತ್ರೆಯ ಮುಂದೆ ಕಣ್ಣೀರಿಟ್ಟಿದ್ದಾನೆ.
ಆಸ್ಪತ್ರೆಯ ವೇಯ್ಟಿಂಗ್ ರೂಮ್ನಲ್ಲಿ ಯುವಕ ಒಬ್ಬನೇ ಕುಳಿತು ಕಣ್ಣೀರು ಹಾಕುತ್ತಿದ್ದ. ಹಳೆಯ ನೆನಪುಗಳನ್ನು ಮೆಲುಕು ಹಾಕ್ತಾ, ಅಳುತ್ತಲೇ ಇದ್ದ. ಅಲ್ಲೇ ಇದ್ದ ಕೆಲವರು, ಆತನಿಗೆ ಯಾರಿಗಾಗಿ ಕಾಯುತ್ತಿರುವೆ? ಯಾರು ಮೃತಪಟ್ಟಿದ್ದಾರೆ ಎಂದು ಕೇಳಿದ್ದಾರೆ. ಈ ವೇಳೆ ಯುವಕ ಉತ್ತರಿಸಿದ್ದು ಒಂದೇ ಒಂದು ಪದ! `ನನ್ನ ಪ್ರೀತಿ’ ಎಂದು ಮತ್ತೆ ಬಿಕ್ಕಳಿಸಿ ಅತ್ತಿದ್ದಾನೆ. ಇದನ್ನೂ ಓದಿ: Ahmedabad Plane Crash- ಆಕಾಶದಲ್ಲಿ ಹಾರಾಡುವ ಕನಸು ಕಂಡಿದ್ದ ಗಗನಸಖಿಯ ದುರಂತ ಅಂತ್ಯ
ವಿಮಾನ ದುರಂತದ ಸುದ್ದಿ ತಿಳಿಯುತ್ತಿದ್ದಂತೆ ಮುಂಬೈನಿಂದ ಯುವಕ ಬಂದಿದ್ದ. ಆತ ಆಸ್ಪತ್ರೆಯ ಮುಂದೆ ಕಣ್ಣೀರು ಹಾಕುತ್ತ ಮೃತದೇಹಕ್ಕಾಗಿ ಕಾಯುತ್ತಿದ್ದಾನೆ ಎಂದು ತಿಳಿದು ಬಂದಿದೆ.
ಗುರುವಾರ ಅಹಮದಾಬಾದ್ನಲ್ಲಿ ಅಪಘಾತಗೊಂಡ ಏರ್ ಇಂಡಿಯಾ ವಿಮಾನದಲ್ಲಿ 10 ಮಂದಿ ಸಿಬ್ಬಂದಿ ಸೇರಿ 242 ಜನ ಇದ್ದರು. ಈ ಅವಘಡದಲ್ಲಿ 241 ಜನ ಸಾವನ್ನಪ್ಪಿದ್ದಾರೆ. ಓರ್ವ ಮಾತ್ರ ಪವಾಡ ಸದೃಶ್ಯವಾಗಿ ಬದುಕುಳಿದಿದ್ದಾರೆ. ಇದನ್ನೂ ಓದಿ: ಅಪಾರ್ಟ್ಮೆಂಟ್ನ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು