Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ದುಪ್ಪಟ್ಟು ಅಧಿಕಾರ ಕೊಟ್ಟಾಗ ತಪ್ಪು ಮಾಡಿದ್ದೇನೆ : ಸ್ನೇಹಿತ್ ಮನದಾಳ

Public TV
Last updated: December 11, 2023 1:07 pm
Public TV
Share
5 Min Read
Snehith 6
SHARE

ಬಿಗ್ ಬಾಸ್ (Bigg Boss Kannada) ಮನೆಯ 64 ದಿನಗಳ ಸುಧೀರ್ಘ ಪ್ರಯಾಣ ಮುಗಿಸಿಕೊಂಡು ಸ್ನೇಹಿತ್ (Snehith)ಮನೆಯಿಂದ ಹೊರಗೆ ಬಿದ್ದಿದ್ದಾರೆ. ಈ ಸೀಸನ್‌ನ ಮೊದಲ ಕ್ಯಾಪ್ಟನ್ ಆಗಿ ಆಯ್ಕೆಯಾಗಿದ್ದ ಸ್ನೇಹಿತ್‌, ಈ ಸೀನನ್‌ ಕೊನೆಯ ಕ್ಯಾಪ್ಟನ್ ಕೂಡ ಆಗುವ ಸಾಧ್ಯತೆಯನ್ನು ತೆರೆದಿಟ್ಟೇ ಹೋಗಿದ್ದಾರೆ. ಯಾಕೆಂದರೆ ಅವರೇ ಮನೆಯ ಕ್ಯಾಪ್ಟನ್‌ ರೂಮ್‌ಗೆ ಬೀಗ ಹಾಕಿದ್ದಾರೆ. ಮನೆಯಿಂದ ಹೊರಗೆ ಬಂದಿದ್ದೇ ಸ್ನೇಹಿತ್‌, JioCinema ಆಪ್‌ಗೆ ಎಕ್ಸ್‌ಕ್ಲೂಸಿವ್ ಸಂದರ್ಶನ ನೀಡಿದ್ದಾರೆ. ಗೇಮ್‌ನಲ್ಲಿನ ಛಲ, ನಮ್ರತಾ ಜೊತೆಗಿನ ಸ್ಮರಣೀಯ ಕ್ಷಣಗಳು, ವಿನಯ್‌ ಜೊತೆಗಿನ ಸ್ನೇಹ, ಕ್ಯಾಪ್ಟನ್ ಆದಾಗ ಮಾಡಿದ ತಪ್ಪುಗಳು ಎಲ್ಲದರ ಬಗ್ಗೆಯೂ ಸ್ನೇಹಿತ್ ಮನಬಿಚ್ಚಿ ಮಾತಾಡಿದ್ದಾರೆ.

Snehith 7

64 ದಿನ ಬಿಗ್‌ಬಾಸ್ ಮನೆಯಲ್ಲಿದ್ದು ಹೊರಗೆ (Eliminate) ಬಂದಿದ್ದೀನಿ. ಒಂದು ಮೊಮೆಂಟ್‌ನಲ್ಲಿಯೂ ನನಗೆ ಪಶ್ಚಾತ್ತಾಪ ಮಾಡ್ತಿಲ್ಲ. ಪ್ರತಿ ವಾರವನ್ನು ನಾನು ನನ್ನ ಕೊನೆಯ ವಾರ ಎಂದುಕೊಂಡೇ ಆಡಿದ್ದೇನೆ. ಒಂದು ವಾರ ಗೆದ್ದಿರಬಹುದು, ಒಂದು ವಾರ ಸೋತಿರಬಹುದು. ಎಲ್ಲೋ ಒಳಗಡೆ ಫೀಲಿಂಗ್ ಇತ್ತು. ಸಂಜೆ ಅಲ್ಲಿ ಕೂತಾಗ, ಈವತ್ತು ಹೊರಗೆ ಹೋಗಿ ತಾಜಾ ಗಾಳಿ ಉಸಿರಾಡುತ್ತೇನೆ ಎಂದು ಅನಿಸಿತ್ತು. ನನ್ನ ಇನ್‌ಸ್ಟಿಂಕ್ಟ್‌ ತುಂಬ ಸ್ಟ್ರಾಂಗ್ ಇದೆ. ಆ ಇನ್‌ಸ್ಟಿಂಕ್ಟ್‌ ಈವತ್ತು ಎಲ್ಲೋ ಹೊಡಿತಿತ್ತು, ಈವತ್ತೇ ನನ್ನ ಲಾಸ್ಟ್‌ ಡೇ ಅಂತ. ನನಗೆ ಕ್ಯಾಪ್ಟನ್ ಆಗಿ ದುಪ್ಪಟ್ಟು ಅಧಿಕಾರ ಕೊಟ್ಟಾಗ ಒಂದಿಷ್ಟು ತಪ್ಪುಗಳನ್ನು ಮಾಡಿದ್ದೇನೆ. ಆ ತಪ್ಪುಗಳಿಂದ ಒಂದಿಷ್ಟು ಜನ ತೊಂದರೆಯನ್ನೂ ಅನುಭವಿಸಿದ್ದಾರೆ. ಆ ಗಿಲ್ಟ್ಕ ನನಗೆ ಕೊನೆಯತನಕ ಕಾಡುತ್ತದೆ. ಅದೊಂದನ್ನು ಬಿಟ್ಟರೆ, ನನ್ನ ಪ್ರಕಾರ ನನ್ನ ಫ್ರೆಂಡ್ಸ್ ಜೊತೆ ಹೇಗಿರ್ತೀನೋ ಹಾಗೇ ಇರ್ತಾ ಇದ್ದೆ. ಅವ್ರಿಗೋಸ್ಕರ ಜೀವಕೊಡಲೂ ಸಿದ್ಧವಾಗ್ತಿದ್ದೆ. ಯಾರು ಆಗಲ್ವೋ ಅವ್ರು ಆಗಲ್ಲ ಅಷ್ಟೆ. ತೀರಾ, ಗೇಮ್‌ಗೋಸ್ಕರ ರಾಜಿ ಮಾಡಿಕೊಂಡಿಲ್ಲ. ನನ್ನ ಫ್ರೆಂಡ್ಸ್‌ಗೆ ಕೊನೆ ಕ್ಷಣದ ತನಕವೂ ನಿಷ್ಠನಾಗಿದ್ದೆ. ನಂಗೆ ಯಾರು ಆಗಲ್ವೋ ಅವರನ್ನು ಅವಾಯ್ಡ್ ಮಾಡ್ತಿದ್ದೆ.

Snehith 1

ಕಳೆದ ವಾರ ಬೆಸ್ಟ್ ವಾರ

ನಾನು ಕಳೆದ ವಾರ ಎಲಿಮಿನೇಷನ್‌ನಲ್ಲಿದ್ದ ಕೊನೆಯ ಇಬ್ಬರು ಸ್ಫರ್ಧಿಗಳಲ್ಲಿ ನಾನೂ ಒಬ್ಬನಾಗಿದ್ದೆ. ನನ್ನ ಪ್ರಕಾರ ಆ ವಾರ ನನ್ನ ಬೆಸ್ಟ್ ವಾರ. ಎಷ್ಟು ಟಾಸ್ಕ್ ಗೆದ್ದಿದೀನಿ ಅಂದ್ರೆ, ಮನೆಯಲ್ಲಿ ಸುಮಾರು ಜನ ಇಷ್ಟು ವಾರಗಳಲ್ಲಿಯೂ ಅಷ್ಟೊಂದು ಟಾಸ್ಕ್ ಗೆದ್ದಿಲ್ಲ. ಆದರೆ ಯಾಕೆ ಬಾಟಮ್‌ ಟು ನಲ್ಲಿದ್ದೆ ಎಂದು ಗೊತ್ತಾಗಿರಲಿಲ್ಲ. ಗೊತ್ತಿಲ್ಲ ನನಗೆ, ನನ್ನ ಭಾಷೆಯೋ ಏನೋ ಒಂದು ಜನರ ಜೊತೆಗೆ ಕನೆಕ್ಟ್ ಆಗಿಲ್ವೇನೋ. ಅದನ್ನು ನಾನು ತಿದ್ದಿಕೊಳ್ಳಲು ಪ್ರಯತ್ನಿಸಿದ್ದೀನಿ. ಆದಷ್ಟೂ ಕನ್ನಡ ಮಾತಾಡಲು ಟ್ರೈ ಮಾಡಿದೀನಿ.

Snehith 2

ಇಷ್ಟು ದಿನ ಇದ್ದಿದ್ದೇ ದೊಡ್ಡದು

ನನ್ನ ಪ್ರಕಾರ ನಾನು ಇಷ್ಟು ದಿನ ಬಿಗ್‌ಬಾಸ್ ಮನೆಯಲ್ಲಿದ್ದಿದ್ದೇ ದೊಡ್ಡ ವಿಷಯ. ನನಗೆ ಯಾವುದೇ ರೀತಿಯ ಅಧಿಕಾರಿ ನಿಯಮಗಳನ್ನು ಅನುಸರಿಸುವುದು ತುಂಬ ಕಷ್ಟ. ಅಷ್ಟು ದಿನ ಬಿಗ್‌ಬಾಸ್‌ ಮನೆಯಲ್ಲಿದ್ದು, ಅಲ್ಲಿನ ನಿಯಮಗಳನ್ನು ಅನುಸರಿಸಿ ಇದ್ದಿದ್ದೇ ದೊಡ್ಡ ವಿಷಯ.

ಮತ್ತೆ ಬಿಗ್‌ಬಾಸ್ ಮನೆಯೊಳಗೆ ಹೋದರೆ ನಾನು ನನ್ನ ಗೇಮ್‌ನಲ್ಲಿ ಏನೂ ಬದಲಾವಣೆ ಮಾಡ್ಕೊಳಲ್ಲ. ಈಗ ಆಡುತ್ತಿದ್ದಷ್ಟೇ ಅಗ್ರೆಸಿವ್ ಆಗಿ ಆಡುತ್ತೇನೆ. ಯಾರ ಜೊತೆಯಲ್ಲಿ ಫ್ರೆಂಡ್ ಆಗಿದ್ನೋ ಅವರ ಜೊತೆಗೇ ಸ್ನೇಹ ಮುಂದುವರಿಸುತ್ತೇನೆ. ಮನೆಯಲ್ಲಿ ಇನ್ನೊಂದಿಷ್ಟು ಜನರ ಜೊತೆ ನನಗೆ ಹೊಂದಿಕೆ ಆಗುವುದಿಲ್ಲ. ಅವ್ರ ಆದ್ಯತೆಗಳೇ ಬೇರೆ, ನನ್ನ ಆದ್ಯತೆಗಳೇ ಬೇರೆ. ಹಾಗಾಗಿ ಈಗ ನನ್ನನ್ನು ಬಿಗ್‌ಬಾಸ್ ಮನೆಯೊಳಗೆ ವಾಪಸ್ ಕಳಿಸಿದರೂ ನಾನು ಹಾಗೆಯೇ ಇರ್ತೀನಿ. ಬದಲಾಗುವುದಿಲ್ಲ.

Snehith 3

ನಮ್ಮ ಸ್ನೇಹ ಜೆನ್ಯೂನ್ ಆಗಿತ್ತು

ನಾವು ಇಲ್ಲಿಎಲ್ಲವನ್ನೂ ಬಿಟ್ಟು ಹೊಗಿರ್ತೀವಿ. ನಮ್ಮ ಅಪ್ಪ-ಅಮ್ಮ, ಫ್ರೆಂಡ್ಸ್ ಎಲ್ಲರನ್ನೂ ಬಿಟ್ಟುಬಿಗ್‌ಬಾಸ್ ಮನೆಗೆ ಹೋಗುತ್ತಿರುತ್ತೀವಿ. ಅಲ್ಲಿ ನಮ್ಮ ಫಿಲಾಸಫಿಗೆ ನಮ್ಮ ಸಿದ್ದಾಂತಗಳಿಗೆ ಹೊಂದಿಕೆಯಾಗುವವರನ್ನು ಹುಡುಕಿಕೊಳ್ಳುತ್ತೀವಿ. ನಾನು, ವಿನಯ್ ಮತ್ತು ನಮ್ರತಾ ಬಂಧನ ಅಷ್ಟೇ ಜೆನ್ಯೂನ್ ಆಗಿತ್ತು. ಅದನ್ನು ನೋಡಿ ಉಳಿದವರು ಹೊಟ್ಟೆಕಿಚ್ಚು ಪಟ್ಟುಕೊಳ್ಳುತ್ತಿದ್ದರು. ನಮ್ಮ ಮೂರುಜನರಲ್ಲಿ ಯಾರನ್ನೋ ಸೇವ್ ಮಾಡಿ, ಇನ್ಯಾರನ್ನೋ ನಾಮಿನೇಟ್ ಮಾಡಿದರೆ ಅವರು ಬಂದು ಕ್ವಶ್ಚನ್ ಮಾಡುತ್ತಿರಲಿಲ್ಲ. ಆ ಸ್ನೇಹದ ಬಗ್ಗೆ ನನಗೆ ಹೆಮ್ಮೆ ಇದೆ. ಅದೇ ನನ್ನ ಸಮಸ್ಯೆಯಾಗಿದ್ದರೆ ಇಟ್ಸ್ ಓಕೆ.

Snehith 4

ಕ್ಯಾಪ್ಟನ್ ಆದ ಅನುಭವ

ಮೊದಲ ವಾರ ನನಗೆ ಕ್ಯಾಪ್ಟನ್ ಆಗುವ ಆತ್ಮವಿಶ್ವಾಸವೇ ಇರಲಿಲ್ಲ. ಆದರೆ ಆ ಟಾಸ್ಕ್‌ಗಳಲ್ಲಿ ಚೆನ್ನಾಗಿ ಆಡಿದೆ. ಲೈಫ್‌ನಲ್ಲಿ ರೂಲ್ಸ್ ಫಾಲೊ ಮಾಡಿಯೇ ಗೊತ್ತಿಲ್ಲ ನನಗೆ. ಅಂಥವನು ಮನೆಯ ಕ್ಯಾಪ್ಟನ್ ಆದ್ರೆ ಏನಾಗುತ್ತದೆ ಎಂದು ಜನರು ನೋಡಿರುತ್ತಾರೆ. ಆಗ ಸಮರ್ಥರು-ಅಸಮರ್ಥರು ಎಂದೆಲ್ಲ ಏನೇನೋ ಇಕ್ವೆಷನ್ಸ್ ಇತ್ತು ಮನೆಯಲ್ಲಿ.

ಎರಡನೇ ಕ್ಯಾಪ್ಟನ್ಸಿ ಇನ್ನಷ್ಟು ಕ್ರೇಜಿಯಾಗಿತ್ತು. ಯಾಕಂದ್ರೆ ದುಪ್ಪಟ್ಟು ಅಧಿಕಾರ ಇತ್ತು. ನನ್ನ ಪ್ರಕಾರ ಬಿಗ್‌ಬಾಸ್ ಯಾವುದೇ ಸೀಸನ್‌ನಲ್ಲಿಯೂ ಕ್ಯಾಪ್ಟನ್‌ಗೆ ಅಷ್ಟೊಂದು ಅಧಿಕಾರ ಕೊಟ್ಟಿರಲಿಲ್ಲ. ಅಷ್ಟು ಪವರ್ ನನಗೆ ಕೊಟ್ಟಿತ್ತು. ನಾನು ತುಂಬ ಕಷ್ಟಪಟ್ಟು ಆ ಕ್ಯಾಪ್ಟನ್ ಷಿಪ್‌ ಗೆದ್ದಿದ್ದೆ. ಅದರ ಬಗ್ಗೆ ನನಗೆ ಹೆಮ್ಮೆ ಇದೆ. ಮನೆಯ ಫಸ್ಟ್ ಕ್ಯಾಪ್ಟನ್ ಸ್ನೇಹಿತ್, ಲಾಸ್ಟ್ ಕ್ಯಾಪ್ಟನ್ ಸ್ನೇಹಿತ್ ಮತ್ತು ಮನೆಯ ಕ್ಯಾಪ್ಟನ್ ರೂಮನ್ನು ಬ್ಲಾಕ್ ಮಾಡಿದ್ದೂ ಸ್ನೇಹಿತ್.

ಕ್ಯಾಪ್ಟನ್ಸಿ ಎನ್ನುವುದು ನಮ್ಮ ಸಾಮರ್ಥ್ಯದ ಮೇಲೆ ಆಗಿದ್ದು. ಯಾರೋ ವೋಟ್ ಮಾಡಿ ಆಗಿದ್ದಲ್ಲ. ಹಾಗಾಗಿ ನನಗೆ ಏನು ಸೂಕ್ತ ಅನಿಸುತ್ತದೆಯೋ ಅದನ್ನೇ ಮಾಡಬೇಕು. ನಾನು ಮಾಡಿರವುದೂ ಅದನ್ನೇ. ಎಲ್ಲೋ ಕೊನೆಯಲ್ಲಿ ಫೇರ್ ಆಗಿರಬೇಕು ಎಂದು ಏನೋ ಮಾಡೋಕೆ ಹೋದೆ. ಅದು ಬ್ಯಾಕ್‌ಫೈರ್ ಆಯ್ತು. ನಾನು ಮೊದಲು ಇದ್ದ ಹಾಗೆಯೇ ಇದ್ದಿದ್ದರೆ, ನಮ್ರತಾನೋ ವಿನಯ್‌ ಕ್ಯಾಪ್ಟನ್ ಆಗಿರ್ತಿದ್ರು. ಅದರ ಬಗ್ಗೆ ಪಶ್ಚಾತ್ತಾಪ ಇದೆ.

Snehith 5

ನಮ್ರತಾ ಬಗೆಗಿನ ಆಕರ್ಷಣೆ ಜೆನ್ಯೂನ್

ನಮ್ರತಾ ಬಗ್ಗೆ ಏನೇನೋ ಹೇಳಿದೇನೋ ಅದೆಲ್ಲವೂ ಜೆನ್ಯೂನ್. ನನಗೆ ಅವರ ಬಗ್ಗೆ ಫೀಲಿಂಗ್ ಇತ್ತು. ಅದನ್ನು ಹೇಳಿಕೊಂಡಿದ್ದೀನಿ. ಅದು ಎಲ್ಲರಿಗೂ ಗೊತ್ತು ಕೂಡ. ಅದನ್ನು ನಾನು ಕ್ಯಾಮೆರಾ ಮೊಮೆಂಟ್‌ಗೊಸ್ಕರ ಹೇಳಿದ್ದು ಅಲ್ಲವೇ ಅಲ್ಲ. ಅದು ಅವರಿಗೂ ಗೊತ್ತು. ನನ್ನ ಪ್ರಕಾರ ಜೆನ್ಯೂನ್ ಆಗಿರುವುದು ಮೈಕಲ್, ವಿನಯ್, ನಮ್ರತಾ ಅಷ್ಟೆ. ನನ್ನ ಪ್ರಕಾರ ಫೇಕ್ ಆಗಿರುವುದು ಸಂಗೀತಾ, ಟಾಪ್‌ 5ನಲ್ಲಿ ವರ್ತೂರ್ ಇರ್ತಾರೆ, ಪ್ರತಾಪ್ ಇರ್ತಾರೆ, ವಿನಯ್ ಇರ್ತಾರೆ. ಇನ್ನೊಂದೆರಡು ಜಾಗ ಓಪನ್ ಇದೆ. ತುಕಾಲಿ ಅವರು ಇರಬಹುದು. ಕಾರ್ತಿಕ್-ಸಂಗೀತಾ ಮಧ್ಯದಲ್ಲಿ ಇಬ್ಬರಲ್ಲಿ ಒಬ್ಬರು ಇರಬಹುದು. ಇಲ್ಲ ಇಬ್ಬರೂ ಇರಬಹುದು.  ನನಗೆ ವಿನಯ್ ವಿನ್ ಆಗಬೇಕು ಎಂದಿದೆ. ವರ್ತೂರ್, ಪ್ರತಾಪ್ ಮಧ್ಯದಲ್ಲಿ ಯಾರಾದರೂ ಆಗಲೂಬಹುದು.

 

JioCinema ಫನ್ ಫ್ರೈಡೆ ಮಜವೇ ಬೇರೆ

ಫನ್‌ ಫ್ರೈಡೆ ಟಾಸ್ಕ್‌ಗಳನ್ನು ನಾನು ತುಂಬಾ ಎಂಜಾಯ್ ಮಾಡಿದ್ದೇನೆ. ಅದರಲ್ಲಿ ಆನೆ ಚಿತ್ರಕ್ಕೆ ಬಾಲ ಬರೆಯುವ ಟಾಸ್ಕ್‌ ಸಖತ್ ಎಂಜಾಯ್ ಮಾಡಿದೆ. ಒಂದು ಸಿಕ್ರೇಟ್ ಏನೆಂದರೆ ನನಗೆ ಕಣ್ಣು ಕಟ್ಟಿದ್ದರೂ ಕೆಳಗಡೆ ಕಾಣುತ್ತಿತ್ತು. ಕಂಡರೂ ಅಷ್ಟು ಕೆಟ್ಟದಾಗಿ ಆನೆ ಬಾಲ ಬರೆದಿದ್ದೆ ಅಂದ್ರೆ, ನನ್ನ ಪೇಂಟಿಂಗ್ ಸ್ಕಿಲ್ಸ್ ಎಷ್ಟು ಚೆನ್ನಾಗಿದೆ ನೀವೇ ಊಹಿಸಿಕೊಳ್ಳಿ!

ಎಲ್ಲ ಲೈಟ್ಸ್ ಆಫ್ ಆದಮೇಲೆ ನಾನು ನಮ್ರತಾ, ವಿನಯ್ ಕೂತುಕೊಂಡು ಮಾತಾಡ್ತಿದ್ವಿ. ಅದು ನಮ್ಮ ‘ಮೀ ಟೈಮ್’. ನಾವು ಒಟ್ಟಿಗೇ ಒಂದಿಷ್ಟು ಹೊತ್ತು ಕಾಲ ಕಳೆಯುತ್ತಿದ್ದೆವು. ಫಸ್ಟ್‌ ಕ್ಯಾಪ್ಟನ್ಸಿ ಗೆದ್ದು ನನ್ನಮ್ಮಂಗೆ ಡೆಡಿಕೇಟ್ ಆಗಿದ್ದನ್ನು ಯಾವತ್ತೂ ಮರೆಯಲ್ಲ. ಅದು ನನ್ನಮ್ಮಂಗೂ ಮೆಮರಬಲ್ ಆಗಿರುತ್ತದೆ

TAGGED:Bigg Boss KannadaeliminateSnehithಎಲಿಮಿನೇಟ್ಬಿಗ್ ಬಾಸ್ ಕನ್ನಡಸ್ನೇಹಿತ್
Share This Article
Facebook Whatsapp Whatsapp Telegram

Cinema Updates

Upendra
ಇನ್ಮುಂದೆ ಉಪ್ಪಿ ʻನೆಕ್ಸ್ಟ್‌ ಲೆವೆಲ್‌ʼ – ಸದ್ದಿಲ್ಲದೇ ಸೆಟ್ಟೇರುತ್ತಿದೆ ಹೊಸ ಸಿನಿಮಾ
Cinema Latest Sandalwood
Pavithra Gowda Insta Profile
ಟೆನ್ಷನ್ ಹೊತ್ತಲ್ಲಿ ಬದಲಾಯ್ತು ಪವಿತ್ರಾ ಗೌಡ ಪ್ರೊಫೈಲ್
Cinema Latest Top Stories
S O Muttanna
ದೇವರಾಜ್ ಪುತ್ರ ಪ್ರಣಂ ಸಿನಿಮಾ ಹಾಡಿಗೆ ಸಂಜಿತ್ ಹೆಗ್ಡೆ ದನಿ
Cinema Latest Sandalwood Top Stories
Kantara Chapter 1
ಕಾಂತಾರ ಚಾಪ್ಟರ್‌ 1 – ಇದು ಬರೀ ಸಿನಿಮಾ ಅಲ್ಲ `ಶಕ್ತಿ’ ಎಂದ ರಿಷಬ್ ಶೆಟ್ಟಿ
Cinema Latest Top Stories
rishab shetty 1
3 ವರ್ಷದ ಸಿನಿ ಪಯಣದ ಒಂದು ಝಲಕ್: ಕಾಂತಾರ ಅದ್ಭುತ ಲೋಕ
Cinema Latest Main Post Sandalwood

You Might Also Like

Bidar rain
Bidar

ಬೀದರ್ | ಸತತ 1 ಗಂಟೆ ಧಾರಾಕಾರ ಮಳೆ – ರಸ್ತೆಗಳು ಸಂಪೂರ್ಣ ಜಲಾವೃತ

Public TV
By Public TV
26 minutes ago
CRIME
Crime

ಮನೆಯಲ್ಲಿದ್ದ ಮಹಿಳೆಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಹಲ್ಲೆ; ಹಿಡಿದು ಪೊಲೀಸರಿಗೊಪ್ಪಿಸಿದ ಜನ

Public TV
By Public TV
26 minutes ago
Hassan 3 Suspended For celebrating Birthday In Govt Office
Districts

ಸರ್ಕಾರಿ ಕಚೇರಿಯಲ್ಲಿ ಖಾಸಗಿ ವ್ಯಕ್ತಿಯ ಹುಟ್ಟುಹಬ್ಬ ಆಚರಣೆ – ಮೂವರು ಸಾರಿಗೆ ಅಧಿಕಾರಿಗಳ ಅಮಾನತು

Public TV
By Public TV
38 minutes ago
Davanagere Shruna Annual Fest
Davanagere

ದಾವಣಗೆರೆ ಶೃಂಗ ಸಮ್ಮೇಳನ – 15 ವರ್ಷಗಳ ಬಳಿಕ ಒಂದಾದ ಪಂಚಪೀಠಾಧೀಶರು

Public TV
By Public TV
43 minutes ago
Maharashtra Murder
Crime

ʻದೃಶ್ಯಂʼ ಸಿನಿಮಾ ಸ್ಟೈಲ್‌ನಲ್ಲಿ ಕೊಲೆ – ಪ್ರಿಯಕರನ ಜೊತೆಗೂಡಿ ಗಂಡನನ್ನ ಕೊಂದು ಟೈಲ್ಸ್‌ ಕೆಳಗೆ ಹೂತಿದ್ದ ಪತ್ನಿ

Public TV
By Public TV
1 hour ago
Bengaluru Lady PSI Trapped In Lokayukta
Bengaluru City

1.25 ಲಕ್ಷ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಪಿಎಸ್‌ಐ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?