Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನಗೆ ನ್ಯಾಯ ಬೇಕು – ಪಾಕ್‌ ಯುವತಿಯನ್ನು ಮದುವೆಯಾಗಿ ವಜಾಗೊಂಡಿದ್ದ ಯೋಧನಿಂದ ಮೋದಿಗೆ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನನಗೆ ನ್ಯಾಯ ಬೇಕು – ಪಾಕ್‌ ಯುವತಿಯನ್ನು ಮದುವೆಯಾಗಿ ವಜಾಗೊಂಡಿದ್ದ ಯೋಧನಿಂದ ಮೋದಿಗೆ ಮನವಿ

Latest

ನನಗೆ ನ್ಯಾಯ ಬೇಕು – ಪಾಕ್‌ ಯುವತಿಯನ್ನು ಮದುವೆಯಾಗಿ ವಜಾಗೊಂಡಿದ್ದ ಯೋಧನಿಂದ ಮೋದಿಗೆ ಮನವಿ

Public TV
Last updated: May 4, 2025 5:30 pm
Public TV
Share
2 Min Read
i must get justice crpf man sacked over pak wife has an appeal for pm
SHARE

ಶ್ರೀನಗರ: ಪಾಕಿಸ್ತಾನದ (Pakistan) ಯುವತಿಯನ್ನು ಪ್ರೀತಿಸಿ ಮದುವೆಯಾಗಿ ಕೆಲಸ ಕಳೆದುಕೊಂಡಿದ್ದ ಸಿಆರ್‌ಪಿಎಫ್‌ (CRPF) ಯೋಧ, ನ್ಯಾಯಕ್ಕಾಗಿ ಪ್ರಧಾನಿ ಮೋದಿಯವರ (Narendra Modi) ಮೊರೆ ಹೋಗಿದ್ದಾರೆ.

41ನೇ ಬೆಟಾಲಿಯನ್‍ನಲ್ಲಿ ಸಿಆರ್‌ಪಿಎಫ್ ಯೋಧರಾಗಿದ್ದ ಮುನೀರ್ ಅಹಮದ್ ಪಾಕಿಸ್ತಾನದ ಯುವತಿ ಮೆನಾಲ್ ಖಾನ್ ಅವರನ್ನು ಪ್ರೀತಿಸುತ್ತಿದ್ದರು. ಆಕೆಯ ಜೊತೆ ವಿವಾಹಕ್ಕೆ ಸಿಆರ್‌ಪಿಎಫ್ ಬಳಿ ಅನುಮತಿಯನ್ನು ಕೋರಿದ್ದರು. ಅವರಿಗೆ ಅನುಮತಿ ನೀಡುವ ಮುನ್ನವೇ ಮುನೀರ್ ಅವರು ವಿವಾಹವಾಗಿದ್ದರು. ಇದರಿಂದ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿತ್ತು. ಇನ್ನೂ ಮುನೀರ್ ಅಹ್ಮದ್ ಅವರ ಪತ್ನಿ ಮೆನಾಲ್ ಖಾನ್ ಅವರನ್ನು ಗಡೀಪಾರು ಮಾಡುವ ಹಂತದಲ್ಲಿದ್ದರು, ಕೊನೆ ಕ್ಷಣದಲ್ಲಿ ನ್ಯಾಯಾಲಯದಿಂದ ಗಡೀಪಾರಿಗೆ ತಡೆ ತರಲಾಗಿದೆ.

CRPF jawan sacked for ‘concealing his marriage with Pakistani woman

ಈ ಬಗ್ಗೆ ಪ್ರತಿಕ್ರಿಯಿಸಿರುವ ಮುನೀರ್‌, ವೀಸಾ ಅವಧಿ ಮುಗಿದ ನಂತರವೂ ತನ್ನ ಪತ್ನಿ ಭಾರತದಲ್ಲಿ ಉಳಿದುಕೊಂಡಿರುವ ಬಗ್ಗೆ ಅಧಿಕಾರಿಗಳಿಗೆ ತಿಳಿಸಿಲ್ಲ ಎಂದು ವಜಾ ಪತ್ರದಲ್ಲಿ ತಿಳಿಸಲಾಗಿದೆ. ಆದರೆ ಈ ಬಗ್ಗೆ ನಾನು ಮಾಹಿತಿ ನೀಡಿದ್ದೇನೆ, ನನ್ನ ಬಳಿ ಪುರಾವೆಗಳಿವೆ. ನಾನು ಸರಿಯಾದ ದಾಖಲೆಗಳನ್ನು ಒದಗಿಸಿದ್ದೇನೆ ಎಂದಿದ್ದಾರೆ.

ಮುನೀರ್ ಅಹ್ಮದ್ ಅವರು ಪಾಕ್‌ನ ಯುವತಿ ಮೆನಾಲ್ ಖಾನ್ ಅವರನ್ನು ಕಳೆದ ವರ್ಷ ಮೇ 24 ರಂದು ವೀಡಿಯೊ ಕರೆಯಲ್ಲಿ ವಿವಾಹವಾಗಿದ್ದರು. ಅಕ್ಟೋಬರ್‌ನಲ್ಲಿ ಮದುವೆಯ ಬಗ್ಗೆ ಸಿಆರ್‌ಪಿಎಫ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾಗಿ ಅವರು ಹೇಳಿಕೊಂಡಿದ್ದಾರೆ. ಮೆನಾಲ್ ಖಾನ್ ಫೆಬ್ರವರಿಯಲ್ಲಿ ವಾಘಾ-ಅಟ್ಟಾರಿ ಗಡಿಯ ಮೂಲಕ ಭಾರತಕ್ಕೆ ಬಂದು ಮುನೀರ್ ಅಹ್ಮದ್ ಜೊತೆ ವಾಸವಾಗಿದ್ದರು. ಅವರ 15 ದಿನಗಳ ವೀಸಾ ಮಾರ್ಚ್‌ನಲ್ಲಿ ಮುಕ್ತಾಯಗೊಂಡಿತ್ತು. ನಂತರ ಮುನೀರ್ ದೀರ್ಘಾವಧಿಯ ವೀಸಾಕ್ಕೆ ಅರ್ಜಿ ಸಲ್ಲಿಸಿದ್ದರು. ಇದೇ ವೇಳೆ ಪಹಲ್ಗಾಮ್ ಭಯೋತ್ಪಾದಕ ದಾಳಿಯಾಗಿತ್ತು. ಇದರಿಂದ ಕೇಂದ್ರ ಸರ್ಕಾರ ಪಾಕ್‌ ಪ್ರಜೆಗಳನ್ನು ದೇಶ ತೊರೆಯುವಂತೆ ಆದೇಶಿಸಿತ್ತು. ಇನ್ನೂ ಮೆನಾಲ್ ಖಾನ್ ಅಹ ಗಡೀಪಾರಾಗುವ ಹಂತದಲ್ಲಿದ್ದರು. ಅಷ್ಟರಲ್ಲೇ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ ಅವರ ಗಡೀಪಾರಿಗೆ ತಡೆ ನೀಡಿತ್ತು.

ಫೆಬ್ರವರಿಯಲ್ಲಿ ಪತ್ನಿ ಬಂದ ನಂತರ ನಾನು ರಜೆಯಲ್ಲಿದ್ದೆ. ಮಾರ್ಚ್ 23 ರಂದು ಮತ್ತೆ ಕರ್ತವ್ಯಕ್ಕೆ ಸೇರಿಕೊಂಡೆ. ಅಧಿಕಾರಿಗಳಿಗೆ ಈ ವೇಳೆ ಎಲ್ಲಾ ಮಾಹಿತಿ ತಿಳಿಸಿದೆ. ನಾನು ಅವರ ವೀಸಾದ ಪ್ರತಿಯನ್ನು ನೀಡಿ ದೀರ್ಘಾವಧಿಯ ವೀಸಾ ಅರ್ಜಿಯ ಬಗ್ಗೆಯೂ ಹೇಳಿದೆ. ನಂತರ ಇದ್ದಕ್ಕಿದ್ದಂತೆ, ನನ್ನನ್ನು (ಭೋಪಾಲ್‌ಗೆ) ವರ್ಗಾಯಿಸಲಾಯಿತು. ನಾನು 2027 ರಲ್ಲಿ ಜಮ್ಮು ಮತ್ತು ಕಾಶ್ಮೀರದ ನನ್ನ ನಿಯೋಜನೆ ಪೂರ್ಣಗೊಳಿಸಬೇಕಾಗಿತ್ತು. ಬೇರೆ ಬೆಟಾಲಿಯನ್‌ಗೆ ವರ್ಗಾಯಿಸಿದಾಗಲೆಲ್ಲಾ, 15 ದಿನಗಳ ಸೇರ್ಪಡೆ ಸಮಯ ಸಿಗುತ್ತದೆ. ನನಗೆ ಅದು ಸಿಗಲಿಲ್ಲ. ನನಗೆ ರೈಲು ಟಿಕೆಟ್ ಕೂಡ ನೀಡಲಾಗಿಲ್ಲ. ನಾನು 41ನೇ ಬೆಟಾಲಿಯನ್‌ಗೆ ಸೇರಿದೆ. ಸಂದರ್ಶನದ ವೇಳೆ ಮದುವೆಯ ಬಗ್ಗೆ ಎಲ್ಲವನ್ನೂ ಹೇಳಿದೆ. ನನ್ನ ವರ್ಗಾವಣೆಯ ಬಗ್ಗೆ ನಾನು ಮಹಾನಿರ್ದೇಶಕರಿಗೆ ಸಹ ಪತ್ರ ಬರೆದಿದ್ದೇನೆ. ಆ ಅರ್ಜಿ ಪ್ರಕ್ರಿಯೆಯಲ್ಲಿದೆ ಎಂದು ಮುನೀರ್‌ ಹೇಳಿಕೊಂಡಿದ್ದಾರೆ.

ಸೇವೆಯಿಂದ ವಜಾಗೊಳಿಸಿದ್ದರಿಂದ ನಾನು ಆಘಾತಕ್ಕೊಳಗಾಗಿದ್ದೇನೆ. ಒಬ್ಬ ಜವಾನನಾಗಿ ನನಗೆ ನ್ಯಾಯ ಸಿಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಲು ಬಯಸುತ್ತೇನೆ. ನಾನು 2024 ರಲ್ಲಿ ವಿವಾಹವಾದೆ ಮತ್ತು 2022 ರಿಂದ ಇಲಾಖೆಗೆ ಎಲ್ಲಾ ಮಾಹಿತಿ ನೀಡುತ್ತಿದ್ದೇನೆ. ಇದರಲ್ಲಿ ಅಕ್ರಮ ಎಲ್ಲಿದೆ ಎಂದು ಅವರು ಪ್ರಶ್ನಿಸಿದ್ದಾರೆ.

TAGGED:CRPFindiaindian armypakistanಪಾಕಿಸ್ತಾನಸಿಆರ್‍ಪಿಎಫ್
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

HD Kumaraswamy 3
Latest

ಜೆಡಿಎಸ್‌ʼಗೆ ಜಮೀರ್‌ – ಗಾಳಿಸುದ್ದಿಗೆ ಕುಮಾರಸ್ವಾಮಿ ಸ್ಪಷ್ಟನೆ

Public TV
By Public TV
34 seconds ago
Tamil Nadu factory blast 20 killed several injured as massive blast rips through firecracker factory in Virudhunagar
Crime

ತಮಿಳುನಾಡಿನಲ್ಲಿ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ – 20 ಸಾವು, ಹಲವರ ಸ್ಥಿತಿ ಚಿಂತಾಜನಕ

Public TV
By Public TV
19 minutes ago
Anurag Thakur
Bengaluru City

ಹಿಂದಿನಿಂದ ಬಂದು ಮಹಿಳೆಯರಿಗೆ ಕಾಂಗ್ರೆಸ್‌ ಚೂರಿ, ದೇಶದ ತಾಯಂದಿರು ಇವರನ್ನು ಕ್ಷಮಿಸಲ್ಲ: ಅನುರಾಗ್‌ ಠಾಕೂರ್‌

Public TV
By Public TV
26 minutes ago
Mallikarjun Kharge 2
Bengaluru City

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ, ಮೋದಿಯ ಸುಳ್ಳು ಆರೋಪ ಖಂಡಿಸುತ್ತೇನೆ: ಖರ್ಗೆ ಕೆಂಡಾಮಂಡಲ

Public TV
By Public TV
1 hour ago
Tejasvi Surya
Bengaluru City

ನಾರಿಶಕ್ತಿಗೆ ವಿಪಕ್ಷಗಳ ವಿರೋಧ – ಇದರ ಪರಿಣಾಮ ಪ.ಬಂಗಾಳ ಚುನಾವಣೆಯಲ್ಲೇ ಗೊತ್ತಾಗಲಿದೆ: ತೇಜಸ್ವಿ ಸೂರ್ಯ ಭವಿಷ್ಯ

Public TV
By Public TV
1 hour ago
Patahi Airport
Latest

ಬಿಹಾರದಲ್ಲಿ ಮತ್ತೊಂದು ಏರ್‌ಪೋರ್ಟ್‌ ನಿರ್ಮಾಣ – ಶೀಘ್ರದಲ್ಲೇ ವಿಮಾನ ಸೇವೆ ಆರಂಭ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?