Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹುಟ್ಟುಹಬ್ಬಕ್ಕೆ ಖರ್ಚು ಮಾಡೋ ಹಣವನ್ನು ಬಡವರಿಗೆ ನೀಡಿದ್ರೆ ಅದೇ ನನಗೆ ನೀಡೋ ಗಿಫ್ಟ್: ಅಭಿಮಾನಿಗಳಿಗೆ ಸುದೀಪ್ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹುಟ್ಟುಹಬ್ಬಕ್ಕೆ ಖರ್ಚು ಮಾಡೋ ಹಣವನ್ನು ಬಡವರಿಗೆ ನೀಡಿದ್ರೆ ಅದೇ ನನಗೆ ನೀಡೋ ಗಿಫ್ಟ್: ಅಭಿಮಾನಿಗಳಿಗೆ ಸುದೀಪ್ ಪತ್ರ

Bengaluru City

ಹುಟ್ಟುಹಬ್ಬಕ್ಕೆ ಖರ್ಚು ಮಾಡೋ ಹಣವನ್ನು ಬಡವರಿಗೆ ನೀಡಿದ್ರೆ ಅದೇ ನನಗೆ ನೀಡೋ ಗಿಫ್ಟ್: ಅಭಿಮಾನಿಗಳಿಗೆ ಸುದೀಪ್ ಪತ್ರ

Public TV
Last updated: July 11, 2017 9:23 pm
Public TV
Share
2 Min Read
sudeep
SHARE

ಬೆಂಗಳೂರು: ಇನ್ನು ಮುಂದೆ ನಾನು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.

ಹುಟ್ಟುಹಬ್ಬಕ್ಕೆ ಸಂಬಂಧಿಸಿದಂತೆ ಅಭಿಮಾನಿಗಳಿಗೆ ಪತ್ರ ಬರೆದಿರುವ ಅವರು, ಬಹಳಷ್ಟು ಮಂದಿ ಕಷ್ಟಪಟ್ಟು ಗಳಿಸಿದ ಹಣವನ್ನು ಕೇಕ್, ಹಾರಗಳಿಗೆ ಖರ್ಚು ಮಾಡುವುದನ್ನು ನಾನು ನೋಡಿದ್ದೇನೆ. ಹುಟ್ಟುಹಬ್ಬದಂದು ರಸ್ತೆಯನ್ನು, ಬೀದಿಯನ್ನು ಮತ್ತು ನನ್ನ ಮನೆಯನ್ನು ಸಿಂಗರಿಸಲು ಹಲವಾರು ಮಂದಿ ಸಿಕ್ಕಾಪಟ್ಟೆ ಹಣ ಖರ್ಚು ಮಾಡುತ್ತಾರೆ. ಆದರೆ ನೀವು ಕೇಕು ಮತ್ತು ಸಿಂಗಾರಕ್ಕೆ ಬಳಸುವ ಆ ಹಣದಿಂದ ಅದೆಷ್ಟೋ ಮನೆಗಳನ್ನು ಉಳಿಸಬಹುದು. ಅದೆಷ್ಟೋ ಜೀವಗಳನ್ನು ಉಳಿಸಬಹುದು. ನನ್ನನ್ನು ನಂಬಿ ಎಂದು ಕೇಳಿಕೊಂಡಿದ್ದಾರೆ.

ಸುದೀಪ್ ಗೂಗಲ್ ಪ್ಲಸ್ ನಲ್ಲಿ ಅಭಿಮಾನಿಗಳಿಗೆ ಬರೆದಿರುವ ಪತ್ರವನ್ನು ಇಲ್ಲಿ ನೀಡಲಾಗಿದೆ.

ನಮಸ್ತೇ ಗೆಳೆಯರೇ,
ಈ ವರ್ಷಗಳಲ್ಲಿ ನೀವು ನನ್ನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುವುದನ್ನು ನೋಡಿ ಖುಷಿ ಪಟ್ಟಿದ್ದೇನೆ. ನಾನೇ ಪುಣ್ಯವಂತ ಎಂದುಕೊಂಡಿದ್ದೇನೆ. ಕಳೆದ ಎರಡು ದಶಕಗಳಿಂದ ನೀವೆಲ್ಲರೂ ನನಗೆ ತೋರಿಸಿದ ಬೇಷರತ್ ಪ್ರೀತಿಗೆ ನಾನು ಋಣಿ. ಇದಕ್ಕೆ ಬದಲಾಗಿ ನಾನು ಪ್ರೀತಿಯನ್ನಷ್ಟೇ ನೀಡಬಲ್ಲೆ ಹೊರತು ಬೇರೇನೂ ಕೊಡುವುದಕ್ಕೆ ಸಾಧ್ಯವಿಲ್ಲ. ನನ್ನ ಕಡೇ ಉಸಿರಿನವರೆಗೂ ಆ ಪ್ರೀತಿ ಹಾಗೇ ಇರುತ್ತದೆ.

ಬಹಳಷ್ಟು ಮಂದಿ ಈ ವರ್ಷಗಳಲ್ಲಿ ತಾವು ಕಷ್ಟಪಟ್ಟು ಗಳಿಸಿದ ಹಣವನ್ನು ಕೇಕ್‍ಗಳು, ಹಾರಗಳು ಮತ್ತಿತರ ವಸ್ತುಗಳಿಗಾಗಿ ವ್ಯಯಿಸುವುದನ್ನು ನಾನು ಗಮನಿಸಿದ್ದೇನೆ. ಅನೇಕರು ನನ್ನನ್ನು ನೋಡಲೆಂದು ತಾವು ದುಡಿದ ಹಣವನ್ನು ಖರ್ಚು ಮಾಡಿ ಬಂದಿದ್ದು ನನಗೆ ಗೊತ್ತಿದೆ. ಹುಟ್ಟುಹಬ್ಬದಂದು ರಸ್ತೆಯನ್ನು, ಬೀದಿಯನ್ನು ಮತ್ತು ನನ್ನ ಮನೆಯನ್ನು ಸಿಂಗರಿಸಲು ಹಲವಾರು ಮಂದಿ ಸಿಕ್ಕಾಪಟ್ಟೆ ಹಣ ಖರ್ಚು ಮಾಡುತ್ತಾರೆ.

ನಾನು ನಿಮ್ಮೆಲ್ಲರ ಹತ್ತಿರ ಮನವಿ ಮಾಡಿಕೊಳ್ಳುವುದಿಷ್ಟೇ. ನೀವು ಖರ್ಚು ಮಾಡುವ ಆ ಎಲ್ಲಾ ಹಣವನ್ನು ಅವಶ್ಯಕತೆ ಇರುವವರಿಗೆ ನೀಡಿ. ಒಂದು ದಿನದ ಊಟಕ್ಕಾಗಿ ಒದ್ದಾಡುವವರ ಹಸಿವು ನೀಗಿಸುವುದಕ್ಕೆ ಈ ಹಣವನ್ನು ಬಳಸಿ. ನೀವು ಕೇಕು ಮತ್ತು ಸಿಂಗಾರಕ್ಕೆ ಬಳಸುವ ಆ ಹಣದಿಂದ ಅದೆಷ್ಟೋ ಮನೆಗಳನ್ನು ಉಳಿಸಬಹುದು. ಅದೆಷ್ಟೋ ಜೀವಗಳನ್ನು ಉಳಿಸಬಹುದು. ನನ್ನನ್ನು ನಂಬಿ.

ಇದು ನೀವು ನನಗೆ ನೀಡಬಹುದಾದ ಅತ್ಯುತ್ತಮ ಉಡುಗೊರೆ. ಸಂಭ್ರಮಿಸುವ ಅತ್ಯುತ್ತಮ ವಿಧಾನ ಕೂಡ ಇದೇ ಅಂತ ನಾನಂದುಕೊಂಡಿದ್ದೇನೆ. ಇದು ಅವಶ್ಯಕತೆಯಲ್ಲಿರುವ ನಮ್ಮ ಜನಕ್ಕೆ ನಾವು ಮಾಡಬಹುದಾದ ಪುಟ್ಟ ಸಹಾಯ.ಇನ್ನು ಮುಂದೆ ನಾನು ನನ್ನ ಹುಟ್ಟುಹಬ್ಬವನ್ನು ಆಚರಿಸುವುದಿಲ್ಲ. ಅವತ್ತು ನಾನು ಮನೆಯಿಂದ ದೂರ ಇರುತ್ತೇನೆ. ಬಹುಶಃ ನಾನು ನಿಮಗೆ ಏನು ಮಾಡಲು ಹೇಳಿದ್ದೇನೋ ಅದನ್ನೇ ಮಾಡುತ್ತಿರುತ್ತೇನೆ. ನನ್ನ ಈ ಮಾತನ್ನು ನೀವೆಲ್ಲರೂ ಗೌರವಿಸುತ್ತೀರಿ ಅಂತಂದುಕೊಂಡಿದ್ದೇನೆ.

ಬದುಕು ಕೊಟ್ಟಿರುವ ಅವಕಾಶವನ್ನು ಅತ್ಯುತ್ತಮವಾಗಿ ಬಳಸಿಕೊಳ್ಳೋಣ. ಒಂದಷ್ಟು ಮಂದಿಯ ಮುಖದಲ್ಲಿ ನಗು ಮೂಡುವಂತೆ ಮಾಡೋಣ. ಒಂದ್ಸಲ ನಮ್ಮ ಸುತ್ತಮುತ್ತ ನೋಡಿದರೆ ಸಾಕು, ನೆರವಿನ ಅವಶ್ಯಕತೆ ಇರುವ ಹಲವಾರು ಮಂದಿ ನಮ್ಮ ಕಣ್ಣಿಗೆ ಬೀಳುತ್ತಾರೆ. ಅವರ ನೆರವಿಗೆ ಧಾವಿಸೋಣ. ಆ ಕೈಗಳನ್ನು ಹಿಡಿಯೋಣ.

ಮುಂದೊಂದು ದಿನ, ಒಂದೇ ಒಂದು ಬೆಳಕಿನ ಕಿರಣಕ್ಕಾಗಿ ಹಂಬಲಿಸುವ ಹೊತ್ತಲ್ಲಿ, ಬೆಳಕು ನಿಮ್ಮ ಮೇಲೆ ಬಿದ್ದು ಹೊಳೆಯುವುದನ್ನು ನೀವು ಕಾಣುತ್ತೀರಿ.

ತುಂಬು ಪ್ರೀತಿಯಿಂದ
ಕಿಚ್ಚ

1973 ಸೆಪ್ಟೆಂಬರ್ 2ರಂದು ಜನಿಸಿದ ಸುದೀಪ್ ಅವರಿಗೆ ಹಾಲಿವುಡ್ ಚಿತ್ರದಲ್ಲಿ ನಟಿಸಲು ಈಗ ಆಫರ್ ಬಂದಿದೆ. ಈ ಚಿತ್ರದ ನಟಿಸಲು ಸುದೀಪ್ ಒಪ್ಪಿಗೆ ನೀಡಿದ್ದು, ಮಾತುಕತೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

 

A small request to all my friends,,
Hope my words r respected.
Much luv,,
Kichcha. https://t.co/c2ogH7lehe

— Kichcha Sudeepa (@KicchaSudeep) July 11, 2017

A few r collecting money in th name of t-shirts n Id cards fr bday has come to my notice..I'd appreciate names being brought to my notice.

— Kichcha Sudeepa (@KicchaSudeep) July 9, 2017

 

SUDEEP POST

sudeep fans

ಪ್ರತಿಫಲ ಬಯಸದೆ ತೋರಿದ ಕರುಣೆಯು ಮೊದಲು ಮನುಜನೆಂಬ ಸಾರ್ಥಕತೆಯ ನೆಮ್ಮದಿ ತರುವುದು, ನಿಮ್ಮ ಹೆಸರಿನಲ್ಲಿ ನಾ ಇತರರ ಸೇವೆ ಮಾಡ್ತೇನೆ ನಿಮ್ಮ ಮೇಲೆ ಪ್ರಮಾಣ ಮಾಡ್ತೇನೆ ಅಣ್ಣ

— Sagar Siddu (@Callme_Siddu) July 11, 2017

Very well said sir.. Grt to hear such a big decision from you

— Deepthi Rao (@Deepu919) July 11, 2017

Way to go @KicchaSudeep !

Hope this catches on among all celebs! https://t.co/FbcCVS2iTN

— Sadharan Desi (@SadharanDesi) July 11, 2017

https://twitter.com/lightdnight/status/884791507206651904

Sudeep 1

Sudeep 2

TAGGED:bengalurubirthdaykannadasandalwoodsudeepಕನ್ನಡಸುದೀಪ್ಸ್ಯಾಂಡಲ್‍ವುಡ್ಹುಟ್ಟುಹಬ್ಬ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
2 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
4 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
4 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
5 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
5 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
5 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?