Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸ್ಯಾಂಡಲ್‍ವುಡ್ ಐಟಿ ದಾಳಿ ಪ್ರಕರಣ – ಸಿಕ್ಕಿದ್ದು ಕೋಟಿ ಕೋಟಿ ಆಸ್ತಿ !

Public TV
Last updated: January 6, 2019 4:59 pm
Public TV
Share
2 Min Read
IT Raid
SHARE

ಬೆಂಗಳೂರು: ಚಂದನವನದ ನಟ, ನಿರ್ಮಾಪಕರ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿದಂತೆ ಐಟಿ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಬರೋಬ್ಬರಿ 109 ಕೋಟಿ ರೂ. ಮೌಲ್ಯದ ಅಘೋಷಿತ ಆದಾಯದ ದಾಖಲೆ ಹಾಗೂ 25.3 ಕೆಜಿ ಚಿನ್ನಾಭರಣ, 2.85 ಕೋಟಿ ರೂ. ನಗದು ವಶಕ್ಕೆ ಪಡೆದಿರುವುದಾಗಿ ಮಾಹಿತಿ ನೀಡಿದ್ದಾರೆ.

ಸಿನಿಮಾ ಕ್ಷೇತ್ರ ವಿವಿಧ ನಟ, ನಿರ್ಮಾಪಕರ ಮೇಲೆ ನಡೆದ ಈ ದಾಳಿಯಲ್ಲಿ ಕರ್ನಾಟಕ ಮತ್ತು ಗೋವಾ ಆದಾಯ ತೆರಿಗೆ ಇಲಾಖೆಗೆ ಸಂಬಂಧಿಸಿದ 180 ಅಧಿಕಾರಿಗಳು ಭಾಗವಹಿಸಿದ್ದು, 21 ಕಡೆ ದಾಳಿ ಮಾಡಿ ಇದರಲ್ಲಿ 5 ಸ್ಥಳಗಳಲ್ಲಿ ಹುಡುಕಾಟವನ್ನು ನಡೆಸಲಾಗಿದೆ.

IT Raid B.JPG

ದಾಳಿ ನಡೆಸಲು ಇಲಾಖೆ ಕಳೆದ 3 ತಿಂಗಳಿನಿಂದ ಕೂಡ ಮಾಹಿತಿ ಸಂಗ್ರಹಿಸಿದ್ದು, ಈ ವೇಳೆ ಗುರುತಿಸಲಾದ ವ್ಯಕ್ತಿಗಳು ಹಾಗೂ ಸ್ಥಳಗಳ ಮೇಲೆ ದಾಳಿ ನಡೆದಿದೆ. ಇದರಲ್ಲಿ ಸಿನಿಮಾ ನಿಮಾರ್ಪಕರು, ನಟರು, ಸಿನಿಮಾ ಸಂಸ್ಥೆಗಳು ಕೂಡ ಸೇರಿದೆ. ದಾಳಿಯ ವೇಳೆ ಆಘೋಷಿತ ಆಸ್ತಿ, ಹಣ ಸೇರಿದಂತೆ ವಿವಿಧ ಆದಾಯಕ್ಕೆ ಸಂಬಂಧಿಸಿದ ದಾಖಲೆಗಳು ಕೂಡ ಲಭ್ಯವಾಗಿದೆ. ಪ್ರಮುಖವಾಗಿ ಸಿನಿಮಾ ರಂಗದಲ್ಲಿ ಚಿತ್ರಮಂದಿರದಿಂದ ಬರುವ ಆದಾಯವನ್ನು ಬೇರೆಡೆ ವರ್ಗಾವಣೆ ಮಾಡಿ ಹೂಡಿಕೆ ಮಾಡಿರುವ ಬಗ್ಗೆ ತಿಳಿದುಬಂದಿದ್ದು, ಬಹು ದೊಡ್ಡ ಆರ್ಥಿಕ ಅವ್ಯವಹಾರ ನಡೆದಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.

ಸಿನಿಮಾ ಹಕ್ಕುಗಳ ಮಾರಾಟ, ಡಿಜಿಟಲ್ ರೈಟ್ಸ್, ಚಿತ್ರ ಮಂದಿರದ ಆದಾಯ, ಟಿವಿ ಹಕ್ಕುಗಳು, ಆಡಿಯೋ ಮತ್ತು ಸ್ಯಾಟಲೈಟ್ ಹಕ್ಕುಗಳು ಸೇರಿದಂತೆ ಇತರೇ ಮೂಲಗಳಿಂದ ಗಳಿಸಿದ ಆದಾಯದ ಬಗ್ಗೆ ಸರಿಯಾದ ಮಾಹಿತಿ ನೀಡಿಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಲಾಗಿದೆ.

IT Raid A

ಸಿನಿಮಾದಿಂದ ಪಡೆದ ಆದಾಯದೊಂದಿಗೆ ಬೇರೆ ಬೇರೆ ವ್ಯವಹಾರಗಳಲ್ಲಿ ಹೂಡಿಕೆ ಮಾಡಿರುವ ಬಗ್ಗೆ ಸ್ಪಷ್ಟವಾಗಿದ್ದು, ಈ ಮೂಲಗಳಿಂದ ಬಂದ ಆದಾಯದ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಆದ್ದರಿಂದ ಒಟ್ಟು ಮೊತ್ತದಲ್ಲಿ ಹೆಚ್ಚಾಗುವ ಸಾಧ್ಯತೆಯ ಬಗ್ಗೆಯೂ ಐಟಿ ಇಲಾಖೆ ತಿಳಿಸಿದೆ. ಐಟಿ ಅಧಿಕಾರಿಗಳು ಸಂಗ್ರಹಿಸಿರುವ ಮಾಹಿತಿಯನ್ನು ಇಡಿ ಇಲಾಖೆಗೆ ಪತ್ರ ಬರೆದಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಒಂದೊಮ್ಮೆ ಇಡಿ ಅಧಿಕಾರಿಗಳು ಪ್ರಕರಣಕ್ಕೆ ಪ್ರವೇಶ ಪಡೆದರೆ ಎಲ್ಲರಿಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ತೆರಿಗೆ ವಂಚನೆ ಮಾಡಲು ಹಣ ವರ್ಗಾವಣೆ ಮಾಡಿರುವುದು ಸಾಬೀತಾದರೆ ಇಡಿ ಪ್ರಕರಣ ದಾಖಲಿಸುವ ಸಾಧ್ಯತೆ ಇದೆ. ಸದ್ಯ ಲಭ್ಯವಾಗಿರುವ ಮಾಹಿತಿ ಅನ್ವಯ ಐಟಿ ಕಾಯ್ದೆ 278 (ಡಿ) ಅಡಿ ಪ್ರಕರಣ ದಾಖಲಿಸಲು ಐಟಿ ಅಧಿಕಾರಿಗಳು ನಿರ್ಧಾರ ಮಾಡಿದ್ದಾರೆ.

ಕಳೆದ 3 ದಿನಗಳಿಂದ ನಡೆದ ದಾಳಿಯ ವೇಳೆ ಪತ್ತೆಯಾದ ಆಸ್ತಿ, ಹಣ, ಆದಾಯದ ಒಟ್ಟು ಮಾಹಿತಿಯನ್ನು ಮಾತ್ರ ಐಟಿ ಅಧಿಕಾರಿಗಳು ನೀಡಿದ್ದಾರೆ. ಆದರೆ ವೈಯಕ್ತಿಕವಾಗಿ ಯಾವುದೇ ನಟ, ನಿರ್ಮಾಪಕರ ಮನೆಯಲ್ಲಿ ಎಷ್ಟು ಹಣ ಲಭಿಸಿದೆ ಎಂಬ ಬಗ್ಗೆ ಮಾಹಿತಿ ನೀಡಿಬೇಕಿದೆ. ಸದ್ಯ ಐಟಿ ಇಲಾಖೆ ವಶಕ್ಕೆ ಪಡೆದಿರುವ ಆದಾಯ ಹಾಗೂ ಹಣದ ಬಗ್ಗೆ ನಾಳೆಯಿಂದ ವಿಚಾರಣೆ ನಡೆಸುವ ಸಾಧ್ಯತೆ ಇದೆ. ನಟ ಹಾಗೂ ನಿರ್ಮಾಪಕರು ಐಟಿ ಇಲಾಖೆಗೆ ಆಗಮಿಸಿ ಸೂಕ್ತ ದಾಖಲೆ ಹಾಗೂ ಸ್ಪಷ್ಟನೆ ನೀಡಲು ಅವಕಾಶ ಇದೆ. ಜನವರಿ 3 ರಂದು ನಡೆದ ಐಟಿ ದಾಳಿಯಲ್ಲಿ ನಾಲ್ವರು ನಿರ್ಮಾಪಕರು ಹಾಗೂ ನಾಲ್ವರು ಸ್ಟಾರ್ ನಟರ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು.

IT Raid E

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bengalurucinemaIT departmentPress releasePublic TVsandalwoodUnauthorized Propertyಆಘೋಷಿತ ಆಸ್ತಿಐಟಿ ಇಲಾಖೆಪತ್ರಿಕಾ ಪ್ರಕಟಣೆಪಬ್ಲಿಕ್ ಟಿವಿಬೆಂಗಳೂರುಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
17 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
19 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
21 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 day ago

You Might Also Like

Rajasthan Youth Tea Selling 1
Latest

ಅತ್ತೆ ಮನೆ ಮುಂದೆ ಅಳಿಯನ ಟೀ ಅಂಗಡಿ – ಕೈಗೆ ಕೋಳ ಧರಿಸಿ ಚಹಾ ಮಾರಾಟ

Public TV
By Public TV
52 seconds ago
Nikhil Kumaraswamy 1 2
Bengaluru City

ಕೇಂದ್ರ ಜಾತಿಗಣತಿ ಮಾಡೋವಾಗ ರಾಜ್ಯ ಸರ್ಕಾರದಿಂದ ಜಾತಿಗಣತಿ ಬೇಡ: ನಿಖಿಲ್ ಕುಮಾರಸ್ವಾಮಿ

Public TV
By Public TV
4 minutes ago
Nikhil Kumaraswamy
Bengaluru City

ರಾಜ್ಯಕ್ಕೆ ಅನುದಾನದ ಕೊರತೆ ಆಗಿದ್ದರೆ ಪ್ರಧಾನಿಗಳ ಜೊತೆ ಸಿಎಂ ಮಾತಾಡಲಿ: ನಿಖಿಲ್ ಕುಮಾರಸ್ವಾಮಿ

Public TV
By Public TV
12 minutes ago
Ram Mohan Naidu
Latest

ಏರ್‌ ಇಂಡಿಯಾ ವಿಮಾನ ದುರಂತ ತನಿಖೆಗೆ ಉನ್ನತ ಮಟ್ಟದ ಸಮಿತಿ – 3 ತಿಂಗಳ ಡೆಡ್‌ಲೈನ್: ಸಚಿವ ರಾಮಮೋಹನ್ ನಾಯ್ಡು

Public TV
By Public TV
15 minutes ago
Payal Khatik 2
Latest

Plane Crash | ಇಂಜಿನಿಯರ್‌ ಆಗುವ ಕನಸು ಕಂಡಿದ್ದ ಆಟೋ ಚಾಲಕನ ಮಗಳ ದುರಂತ ಅಂತ್ಯ

Public TV
By Public TV
26 minutes ago
Harangi Dam
Districts

ಕೊಡಗಿನಲ್ಲಿ ಮಳೆ – ಹಾರಂಗಿ ಜಲಾಶಯದಿಂದ ಕಾವೇರಿ ನದಿಗೆ 4,000 ಕ್ಯೂಸೆಕ್ ನೀರು ಬಿಡುಗಡೆ

Public TV
By Public TV
30 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?