Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಮಾರಸ್ವಾಮಿಗೂ ಮೊದಲು ಚನ್ನಪಟ್ಟಣ ನೋಡಿದವನು ನಾನು: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಕುಮಾರಸ್ವಾಮಿಗೂ ಮೊದಲು ಚನ್ನಪಟ್ಟಣ ನೋಡಿದವನು ನಾನು: ಡಿಕೆಶಿ

Dakshina Kannada

ಕುಮಾರಸ್ವಾಮಿಗೂ ಮೊದಲು ಚನ್ನಪಟ್ಟಣ ನೋಡಿದವನು ನಾನು: ಡಿಕೆಶಿ

Public TV
Last updated: June 25, 2024 4:22 pm
Public TV
Share
3 Min Read
DKShivakumar
SHARE

ಮಂಗಳೂರು: ಕುಮಾರಸ್ವಾಮಿ (HD Kumaraswamy) ಅವರು ಚನ್ನಪಟ್ಟಣ (Channapatna) ನೋಡುವುದಕ್ಕೂ ಮೊದಲೇ ನಾನು ನೋಡಿದ್ದೇನೆ. ಅವರು ತಡವಾಗಿ ರಾಜಕೀಯಕ್ಕೆ ಬಂದವರು. ಅವರಿಗಿಂತ 10 ವರ್ಷ ಮೊದಲೇ ನನಗೆ ಚನ್ನಪಟ್ಟಣ ಗೊತ್ತು. ನಾನು ಅದೇ ಜಿಲ್ಲೆಯವನು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣಕ್ಕೆ ನೀವು ಏನೂ ಮಾಡಿಲ್ಲ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ ಚನ್ನಪಟ್ಟಣಕ್ಕೆ ನಾನು ಏನು ಮಾಡಿದ್ದೇನೆ, ಏನು ಮಾಡಿಲ್ಲ ಎಂದು ಹೆಚ್‌ಡಿ ಕುಮಾರಸ್ವಾಮಿಯವರಿಗೇನು ಗೊತ್ತು? ನಾನು 1985ರಲ್ಲೇ ಚುನಾವಣೆಗೆ ನಿಂತವನು. ಕುಮಾರಸ್ವಾಮಿ ಅವರು 1995ರ ಬಳಿಕ ಲೋಕಸಭಾ ಚುನಾವಣೆಗೆ ನಿಂತವರು. ದೊಡ್ಡವರು ಅಧಿಕಾರ ಅನುಭವಿಸಿದರೂ ಚನ್ನಪಟ್ಟಣದಲ್ಲಿ ಏನೂ ಅಭಿವೃದ್ಧಿ ಆಗಿಲ್ಲ ಎಂಬ ಭಾವನೆ ಅಲ್ಲಿನ ಜನರಲ್ಲಿದೆ. ಅಲ್ಲಿನ ಜನರಿಗೆ ಅಳಿಲು ಸೇವೆ ಮಾಡೋಣ. ಹಿಂದೆ ಮಂತ್ರಿಯಾಗಿದ್ದಾಗ ಸೇವೆ ಮಾಡಿದ್ದೇನೆ. ಈಗ ಉತ್ತಮ ಸಮಯ ಒದಗಿ ಬಂದಿದೆ. ಸಣ್ಣ ಸಹಾಯ ಮಾಡೋಣ ಎಂದು ಕಾರ್ಯಪ್ರವೃತ್ತನಾಗಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ: ಚಲುವರಾಯಸ್ವಾಮಿ

ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ತಮ್ಮ ಡಿ.ಕೆ. ಸುರೇಶ್‌ಗೆ ಆಸಕ್ತಿಯಿಲ್ಲ. ಜನರು ಸುರೇಶ್‌ಗೆ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೆ ಹೇಳಿದ್ದಾರೆ. ಆದರೆ ಅವರಿಗೆ ಪಕ್ಷದ ಕೆಲಸ ಮಾಡಬೇಕೆಂಬ ಆಸೆಯಿದೆ. ನಮ್ಮನ್ನು ನಂಬಿ ಚನ್ನಪಟ್ಟಣದ ಜನ 85 ಸಾವಿರ ಮತ ಕೊಟ್ಟಿದ್ದಾರೆ. ನಮ್ಮನ್ನು ನಂಬಿದ ಜನರ ಕೈ ಬಿಡುವುದಕ್ಕೆ ಆಗುವುದಿಲ್ಲ. ಜನ ರಾಜ್ಯದಲ್ಲಿ ನಮಗೆ 136 ಸ್ಥಾನ ಗೆಲ್ಲಿಸಿ ಅಧಿಕಾರ ಕೊಟ್ಟಿದ್ದಾರೆ. ಅದನ್ನು ಜನರ ಅಭಿವೃದ್ಧಿಗೆ ವಿನಿಯೋಗಿಸಬೇಕಿದೆ ಎಂದರು. ಇದನ್ನೂ ಓದಿ: ಲೋಕಸಭೆಯಲ್ಲಿ ಜೈ ಪ್ಯಾಲೆಸ್ತೀನ್ ಎಂದು ಘೋಷಣೆ ಕೂಗಿದ ಓವೈಸಿ

ಹೆಚ್ಚುವರಿ ಡಿಸಿಎಂ ಸ್ಥಾನಗಳ ಬೇಡಿಕೆ ಬಗ್ಗೆ ಉತ್ತರಿಸಿದ ಅವರು, ನೀವು ದಿನವೂ ಈ ಬಗ್ಗೆ ಸುದ್ದಿ ಮಾಡುತ್ತಿದ್ದೀರಿ. ಇದರಿಂದ ಖುಷಿ ಆಗುವವರಿಗೆ ಆಗಲಿ. ಖುಷಿ ಪಡುವವರಿಗೆ ಬೇಡ ಎಂದು ಹೇಳಲು ಆಗುತ್ತದೆಯೇ? ಯಾರು ಏನು ಬೇಕಾದರೂ ಬೇಡಿಕೆ ಇಡಲಿ. ಪಕ್ಷವು ಯಾರಿಗೆ ಏನು ಉತ್ತರ ಕೊಡಬೇಕೋ ಕೊಡುತ್ತದೆ ಎಂದು ಹೇಳಿದರು. ಇದನ್ನೂ ಓದಿ: ನಿಗಮಗಳ ನಿರ್ದೇಶಕರು, ಸದಸ್ಯರ ಆಯ್ಕೆ; ಸಿಎಂ ವಹಿಸಿರುವ ಜವಾಬ್ದಾರಿ ನಿಭಾಯಿಸುವೆ: ಪರಮೇಶ್ವರ್

ಪಕ್ಷದಿಂದ ಉತ್ತರ ನೀಡುವ ಆಲೋಚನೆ ಇದೆಯೇ ಎಂದಾಗ, ನಮ್ಮ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಜ್ಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿಯವರನ್ನು ಭೇಟಿ ಮಾಡಿ ಅಥವಾ ಈ ಬಗ್ಗೆ ಮುಖ್ಯಮಂತ್ರಿಗಳನ್ನೇ ಕೇಳಿ ಎಂದರು. ಇದನ್ನೂ ಓದಿ: ಮುಸ್ಲಿಂ ಮತಗಳಿಂದ್ಲೇ ಸಾಗರ್‌ ಖಂಡ್ರೆ ಗೆದ್ದಿರೋದು: ಜಮೀರ್ ವಿವಾದ

ತಮ್ಮ ಮೇಲಿನ ದ್ವೇಷದ ಕಾರಣಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ ಗಣಿಗಾರಿಕೆಗೆ ರಾಜ್ಯ ಸರ್ಕಾರ ಅನುಮತಿ ನೀಡುತ್ತಿಲ್ಲ ಎಂಬ ಕುಮಾರಸ್ವಾಮಿಯವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮೈನಿಂಗ್ ಬಗ್ಗೆ ಹೆಚ್‌ಡಿಕೆ ಅವರಿಗೆ ತಿಳುವಳಿಕೆ ಇದೆಯೋ ಇಲ್ಲವೋ ಗೊತ್ತಿಲ್ಲ. ನನಗಂತೂ ಆ ಬಗ್ಗೆ ಏನೂ ಗೊತ್ತಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಬಂಡವಾಳ ಹೂಡಿಕೆ ವಿಚಾರದಲ್ಲಿ ಮೋದಿಯಿಂದ ಕೆಲ ಕಂಪನಿಗಳಿಗೆ ಬೆದರಿಕೆ – ಪ್ರಿಯಾಂಕ್‌ ಖರ್ಗೆ ಬಾಂಬ್‌!

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ಬಗ್ಗೆ ಪ್ರತಿಕ್ರಿಯಿಸಿ, ನಾವು ಹಿಂದೂ ಧರ್ಮದವರು. ನಮ್ಮ ರಾಜ್ಯದಲ್ಲಿ ಎಲ್ಲಾ ಸಂಸ್ಕೃತಿಯನ್ನು ಒಟ್ಟಿಗೆ ತೆಗೆದುಕೊಂಡು ಹೋಗುವವರು. ಬಹಳ ದಿನದಿಂದ ಸುಬ್ರಹ್ಮಣ್ಯಕ್ಕೆ ಹೋಗಬೇಕೆಂಬ ಆಸೆಯಿತ್ತು. ಆದ ಕಾರಣ ಕುಟುಂಬ ಸಮೇತ ಹೋಗುತ್ತಿದ್ದೇನೆ. ಅವರವರ ನಂಬಿಕೆ ಪ್ರಕಾರ ಅವರು ಪ್ರಾರ್ಥಿಸುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಪುಣೆ ಪೋರ್ಶೆ ಕಾರು ಅಪಘಾತ ಪ್ರಕರಣದ ಅಪ್ರಾಪ್ತ ಆರೋಪಿಗೆ ಜಾಮೀನು

TAGGED:ChannapatnaDK Shivakumarhd kumarswamyMangaluruಚನ್ನಪಟ್ಟಣಡಿಕೆ ಶಿವಕುಮಾರ್ಮಂಗಳೂರುಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Sudeep
ರೂಮಿನಲ್ಲಿ ಕೆಟ್ಟ ವಾಸನೆ ಬಂದ್ರೆ ಬಿಟ್ಟಿದ್ದು ಯಾರು ಅನ್ನೋದು ಬಿಟ್ಟವನಿಗೆ ಮಾತ್ರ ಗೊತ್ತಿರುತ್ತೆ: ಸುದೀಪ್‌
Cinema Karnataka Latest Main Post National Sandalwood South cinema
Dhurandhar
600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ
Bollywood Cinema Latest Top Stories
Sudeep
`ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?
Bengaluru City Cinema Dharwad Districts Karnataka Latest Main Post Sandalwood
chandrachuda
ಪೈರಸಿ ವಿರುದ್ಧ ಕಿಚ್ಚನ ನಡೆ, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ? – ಚಕ್ರವರ್ತಿ ಚಂದ್ರಚೂಡ್
Cinema Latest Sandalwood Top Stories

You Might Also Like

MGNREGA VB G RAM G
Latest

ಮನರೇಗಾ ರದ್ದು ಮೂಲಕ SC/ST, ಹಿಂದುಳಿದ ಭೂಹೀನರ ಅನ್ನ ಕಸಿಯುವ ಕುತಂತ್ರ – ಎಐಸಿಸಿ ಪರಿಶಿಷ್ಟ ಜಾತಿ ಘಟಕ ಆಕ್ರೋಶ

Public TV
By Public TV
8 hours ago
Bengaluru PG fined Rs 50000 for not maintaining cleanliness
Bengaluru City

ಸ್ವಚ್ಛತೆ ಕಾಪಾಡದ್ದಕ್ಕೆ ಬೆಂಗಳೂರು ಪಿಜಿಗೆ ಬಿತ್ತು 50 ಸಾವಿರ ದಂಡ

Public TV
By Public TV
8 hours ago
Pakistan Army Asim Munir
Latest

ಆಪರೇಷನ್‌ ಸಿಂಧೂರ ವೇಳೆ ದೇವರ ದಯೆಯಿಂದ ಬದುಕುಳಿದಿದ್ದೇವೆ: ಮುನೀರ್‌

Public TV
By Public TV
9 hours ago
Mandya Youth Drowned In Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

Public TV
By Public TV
9 hours ago
ಡಿಕೆ ಆದಿಕೇಶವುಲು ಪುತ್ರಿ ಕಲ್ಪಜಾ, ಪುತ್ರ ಶ್ರೀನಿವಾಸ್‌
Bengaluru City

ಉದ್ಯಮಿ ರಘುನಾಥ್‌ ಹತ್ಯೆ ಕೇಸ್‌ – ಸಿಬಿಐನಿಂದ ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು ಅರೆಸ್ಟ್‌

Public TV
By Public TV
10 hours ago
DK Shivakumar 9
Bengaluru City

ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಕೆಶಿ

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?