ಮತ್ತೆ ಎದ್ದು ಓಡುತ್ತೇನೆ, ಜನರಿಂದ ದೂರವಾಗುವ ಜಾಯಮಾನ ನಮ್ಮದಲ್ಲ – ನಿಖಿಲ್‌

Public TV
1 Min Read
Nikhil Gowda

ಬೆಂಗಳೂರು: 2019ರ ಲೋಕಸಭಾ ಚುನಾವಣೆಯಲ್ಲಿ ಸುಮಲತಾ (Sumalatha) ಅವರ ಎದುರು ಸೋತಿದ್ದ ಜೆಡಿಎಸ್‌ ಮುಖಂಡ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಈ ಬಾರಿ ವಿಧಾನಸಭಾ ಚುನಾವಣೆಯಲ್ಲೂ (Karnataka Election) ಸೋಲನುಭವಿಸಿದ್ದಾರೆ.

ರಾಮನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ನಿಖಿಲ್‌ ಕುಮಾರಸ್ವಾಮಿ, ಕಾಂಗ್ರೆಸ್‌ (Congress) ಅಭ್ಯರ್ಥಿ ಇಕ್ಬಾಲ್ ಹುಸೇನ್ ಎದುರು 10,715 ಮತಗಳ ಅಂತರದಿಂದ ಸೋಲನುಭವಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ನಿಖಿಲ್‌ ಕುಮಾರಸ್ವಾಮಿ ಫೇಸ್‌ಬುಕ್‌ನಲ್ಲಿ ಭಾವುಕ ಪೋಸ್ಟ್‌ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರಾಮನಗರದಲ್ಲಿ ಜೆಡಿಎಸ್‍ಗೆ ಶಾಕ್ – 3 ಕ್ಷೇತ್ರಗಳಲ್ಲಿ ಕಾಂಗ್ರೆಸ್‍ಗೆ ಗೆಲುವು

ನಿಖಿಲ್‌ ಪ್ರತಿಕ್ರಿಯೆ ಏನು?
ನನ್ನನ್ನು ಅತ್ಯಂತ ಪ್ರೀತಿಯಿಂದ ಬೆಂಬಲಿಸಿ ಆಶೀರ್ವದಿಸಿದ ರಾಮನಗರ ವಿಧಾನಸಭೆ ಕ್ಷೇತ್ರದ ಮಹಾಜನತೆಗೆ ನನ್ನ ಶಿರಸಾಷ್ಟಾಂಗ ನಮನಗಳು. ಈ ಒಂದು ಸೋಲು ನಿಮ್ಮ ಸೇವೆ ಮಾಡಬೇಕು ಎನ್ನುವ ನನ್ನ ಅದಮ್ಯ ಸಂಕಲ್ಪಕ್ಕೆ ತಡೆ ಒಡ್ಡಲಾರದು. ನಾನೆಂದೂ ನಿಮ್ಮ ಜೊತೆಯಲ್ಲೇ ಇರುತ್ತೇನೆ. ನಿಮಗಾಗಿ ಜೀವಿಸುತ್ತೇನೆ.

NikhilKumaraswamy

ಸೋಲನ್ನು ಸಮಚಿತ್ತದಿಂದ ಸ್ವಿಕರಿಸಿ ಮುನ್ನಡೆಯುತ್ತೇನೆ. ಅದು ನಾನು ನನ್ನ ಪೂಜ್ಯ ತಾತನವರಾದ ಹೆಚ್.ಡಿ ದೇವೇಗೌಡ ಸಾಹೇಬರಿಂದ, ತಂದೆ ಹೆಚ್.ಡಿ ಕುಮಾರಸ್ವಾಮಿ ಅವರಿಂದ ಕಲಿತ ಪಾಠ. ಎಡವಿದ್ದೇನೆ, ಮತ್ತೆ ಎದ್ದು ಓಡುತ್ತೇನೆ. ಬಿದ್ದ ಮಗುವನ್ನು ಮೇಲೆತ್ತುವ ನಿಮ್ಮ ಪ್ರೀತಿ, ವಾತ್ಸಲ್ಯವನ್ನು ನಾನು ಬಲ್ಲೆ. ಇದನ್ನೂ ಓದಿ: ನಾನು ಜೈಲಲ್ಲಿದ್ದಾಗ ಸೋನಿಯಾ ಗಾಂಧಿ ಭೇಟಿಯಾಗಲು ಬಂದಿದ್ದನ್ನು ಎಂದೂ ಮರೆಯಲ್ಲ: ಡಿಕೆಶಿ ಭಾವುಕ

Nikhil Kumaraswamy

ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಜಾತ್ಯತೀತ ಜನತಾದಳವನ್ನ ಹರಸಿದ ಸಾರ್ವಜನಿಕ ಬಂಧುಗಳನ್ನು ಇಲ್ಲಿ ಸ್ಮರಿಸುತ್ತೇನೆ. ಸೋಲಿನಿಂದ ಕಂಗೆಟ್ಟು ಜನರಿಂದ ದೂರವಾಗುವ ಜಾಯಮಾನ ನಮ್ಮದಲ್ಲ. ಈ ಪರಾಜಯದಿಂದ ಪಾಠ ಕಲಿಯುತ್ತೇವೆ, ಪುನಾ ಪುಟಿದೆದ್ದು ಬರುತ್ತೇವೆ. ಪ್ರತಿಯೊಬ್ಬರಿಗೂ ಪ್ರಣಾಮಗಳು ಎಂದು ಬರೆದುಕೊಂಡಿದ್ದಾರೆ.

Share This Article