ಸಿಎಂ ಇಬ್ರಾಹಿಂನನ್ನು ಎಂಎಲ್‍ಸಿ ಮಾಡಿದ್ದೇ ಹೆಚ್ಚು, ಇನ್ನು ಮಂತ್ರಿ ಬೇರೆ ಮಾಡ್ತಾರ?: ಸಿದ್ದರಾಮಯ್ಯ

Public TV
1 Min Read
cm ibrahim siddaramaiah

ತುಮಕೂರು: ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ನಡುವಿನ ಸಂಬಂಧ ಹಳಸಿದ್ಯಾ? ಹೌದು ಎನ್ನುತಿದೆ ಸಿಎಂ ಸಿದ್ದರಾಮಯ್ಯರ ಈ ಹೇಳಿಕೆ.

cm ibrahim

ತುಮಕೂರಿನಲ್ಲಿ ಸಿಎಂ ಸಿದ್ದರಾಮಯ್ಯ ಇಬ್ರಾಹಿಂ ವಿರುದ್ಧ ಹೇಳಿಕೆ ನೀಡಿದ್ದಾರೆ. ಇಬ್ರಾಹಿಂನನ್ನು ಪರಿಷತ್ ಸದಸ್ಯನಾಗಿ ಮಾಡಿದ್ದೇ ಹೆಚ್ಚು. ಇನ್ನೂ ಮಂತ್ರಿ ಸ್ಥಾನ ಕೊಡ್ತೀನಾ ಎಂದು ಹಗುರವಾಗಿ ಮಾತನಾಡಿದ್ದಾರೆ.

cm ibrahim 1

ಸ್ಥಳೀಯ ಪತ್ರಿಕೆಯೊಂದರಲ್ಲಿ ಇಬ್ರಾಹಿಂಗೆ ಮಂತ್ರಿಸ್ಥಾನ ಸಾಧ್ಯತೆ ಎಂದು ವರದಿ ಮಾಡಲಾಗಿತ್ತು. ಈ ವರದಿ ಓದಿದ ಸಿಎಂ, ಯಾವುದೇ ಕಾರಣಕ್ಕೆ ಇಬ್ರಾಹಿಂನನ್ನು ಮಂತ್ರಿಯನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಏಕವಚನದಲ್ಲೆ ಮಾತನಾಡಿದ್ದಾರೆ.

cm ibrahim 3

ಸಿಎಂ ಸಿದ್ದರಾಮಯ್ಯರ ಈ ಮಾತಿಗೆ ಎದುರಿಗೆ ಕುಳಿತಿದ್ದ ಸಚಿವ ಜಯಚಂದ್ರ, ಶಾಸಕ ರಫಿಕ್ ಅಹಮದ್ ಸೇರಿದಂತೆ ಇತರೇ ಕಾಂಗ್ರೆಸ್ ಮುಖಂಡರು ಗೊಳ್ ಎಂದು ನಕ್ಕಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *