ಕೊಪ್ಪಳ: ಅಲೆಮಾರಿ ಸಮುದಾಯಕ್ಕೆ 1% ಮೀಸಲಾತಿ ಮಾಡಿಸಿ ಕೊಡ್ತೀನಿ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ (Basavaraj Rayareddy) ಭರವಸೆ ನೀಡಿದ್ದಾರೆ.
ಕೊಪ್ಪಳದ (Koppal) ಕುಕನೂರು ಪಟ್ಟಣಕ್ಕೆ ಬಸವರಾಜ ರಾಯರೆಡ್ಡಿ ಅವರು ಕಾರ್ಯಕ್ರಮಕ್ಕೆಂದು ಆಗಮಿಸಿದ್ದರು. ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಅಲೆಮಾರಿ ಸಮುದಾಯದವರು (Nomadic Communities) ರಾಯರೆಡ್ಡಿ ಅವರನ್ನು ಭೇಟಿ ಮಾಡಿದರು.ಇದನ್ನೂ ಓದಿ: ಛತ್ತೀಸ್ಗಢ | ಬಲರಾಂಪುರದಲ್ಲಿ ಅಣೆಕಟ್ಟು ಕುಸಿದು ಪ್ರವಾಹ – ನಾಲ್ವರು ಸಾವು, ಮೂವರು ನಾಪತ್ತೆ
ಈ ವೇಳೆ ಅಲೆಮಾರಿ ಸಮುದಾಯದವರು ಮಾತನಾಡಿ, 1% ಮೀಸಲಾತಿಗಾಗಿ ಅಲೆಮಾರಿ ಸಮುದಾಯದವರು ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತಿದ್ದೇವೆ. ಜೊತೆಗೆ ಮೀಸಲಾತಿಗಾಗಿ ಬೆಂಗಳೂರಿಗೆ ಹೋಗುತ್ತೇವೆ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ನಿಮಗೆ 1% ಮೀಸಲಾತಿ ಮಾಡಿಸಿ ಕೊಡ್ತೀನಿ ಎಂದು ತಿಳಿಸಿದರು.