Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನಗೆ ಮಕ್ಕಳಿರೋದು ಸಾಬೀತಾದರೆ ಪೀಠ ತ್ಯಾಗ ಮಾಡುತ್ತೇನೆ: ಪೇಜಾವರ ಶ್ರೀ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನನಗೆ ಮಕ್ಕಳಿರೋದು ಸಾಬೀತಾದರೆ ಪೀಠ ತ್ಯಾಗ ಮಾಡುತ್ತೇನೆ: ಪೇಜಾವರ ಶ್ರೀ

Districts

ನನಗೆ ಮಕ್ಕಳಿರೋದು ಸಾಬೀತಾದರೆ ಪೀಠ ತ್ಯಾಗ ಮಾಡುತ್ತೇನೆ: ಪೇಜಾವರ ಶ್ರೀ

Public TV
Last updated: July 24, 2018 12:11 am
Public TV
Share
3 Min Read
Shiroor Swamiji pejawar shree
SHARE

ಚೆನ್ನೈ: ನನ್ನ ವಿರುದ್ಧ ಶೀರೂರು ಶ್ರೀಗಳು ಮಾಡಿದ್ದಾರೆ ಎನ್ನಲಾದ ಆರೋಪ ಸಾಬೀತಾದರೆ ನಾನು ಪೀಠ ತ್ಯಾಗ ಮಾಡುತ್ತೇನೆ ಎಂದು ಪೇಜಾವರಶ್ರೀಗಳು ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ನಾನು ಯಾವುದೇ ಪರೀಕ್ಷೆ ಅಥವಾ ವಿಚಾರಣೆ ಎದುರಿಸಲು ಸಿದ್ಧ ಎಂದು ಹೇಳಿದ್ದಾರೆ. ಶೀರೂರು ಶ್ರೀಗಳ ಸಾವಿನ ಬಳಿಕ ದಿನಕ್ಕೊಂದು ವಿಚಾರಗಳು ಬೆಳಕಿಗೆ ಬರುತ್ತಿದ್ದು, ಇದರಲ್ಲಿ ಪೇಜಾವರ ಶ್ರೀಗಳು ಹಣಕ್ಕಾಗಿ ಬೇಡಿಕೆಯಿಟ್ಟಿದ್ದಾರೆ ಎಂಬ ವಾಟ್ಸಪ್ ಆಡಿಯೋ ಕೂಡಾ ಬಹಿರಂಗವಾಗಿತ್ತು. ಈ ಹಿನ್ನೆಲೆಯಲ್ಲಿ ಸದ್ಯ ಪೇಜಾವರಶ್ರೀಗಳು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಪೇಜಾವರ ಶ್ರೀಗಳ ಹೇಳಿಕೆಯಲ್ಲೇನಿದೆ..?: ಇಡೀ ಪ್ರಕರಣಕ್ಕೆ ಸಂಬಂಧಿಸಿದಂತೆ ಪೇಜಾವರ ಶ್ರೀಗಳು ಒಂದು ಪುಟದ ಹೇಳಿಕೆಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. ಅದರ ಪೂರ್ಣ ರೂಪ ಇಂತಿದೆ.

ಶೀರೂರು ಮಠದ ಗತಿಸಿದ ಶ್ರೀ ಲಕ್ಷ್ಮೀವರತೀರ್ಥರ ಆಪ್ತವರ್ಗವು ಬಹಿರಂಗಗೊಳಿಸಿದ ಆಡಿಯೋದಲ್ಲಿ ತಾರುಣ್ಯದಲ್ಲಿ ನನಗೆ ಸ್ತ್ರೀ ಸಂಗವಿತ್ತು. ಪದ್ಮಾ ಎಂಬ ಹೆಣ್ಣು ಮಗಳು ತಮಿಳುನಾಡಿನಲ್ಲಿದ್ದಾಳೆಂಬ ಶುದ್ಧ ಸುಳ್ಳು ಸಂಗತಿಯನ್ನು ಉಲ್ಲೇಖಿಸಲಾಗಿದೆ. ಡಿಸೆಂಬರ್‍ನಲ್ಲಿ ಇವರೇ ಕಳುಹಿಸಿರಬಹುದಾದ ಪತ್ರದಲ್ಲಿ ಅವನು ಗಂಡು ಮಗನೆಂದು ಅವನ ಕುಲನಾಮವನ್ನು ಉಲ್ಲೇಖಿಸಲಾಗಿದೆ. ಈ ವ್ಯತ್ಯಾಸದಿಂದ ಇದು ಕಲ್ಪನೆಯೆಂದು ಗೊತ್ತಾಗುತ್ತದೆ. ಇದನ್ನು ನಮ್ಮ ದೇಶದ ಯಾರೂ ನಂಬುವುದಿಲ್ಲವೆಂದು ನನಗೆ ಗೊತ್ತಿದೆ. ಈ ಬಗ್ಗೆ ಯಾವ ವಿಚಾರಣೆ ಹಾಗೂ ಪರೀಕ್ಷೆಯನ್ನು ಎದುರಿಸಲು ನಾನು ಸಿದ್ಧನಿದ್ದೇನೆ. ಇದು ಬರೇ ಸುಳ್ಳು ಆರೋಪ.

PEJAWARA

ಇದನ್ನು ಸಿದ್ದಪಡಿಸಲು ಸಾಧ್ಯವೇ ಇಲ್ಲ. ಇದು ಸಿದ್ಧವಾದರೆ ನಾನು ತಕ್ಷಣ ಪೀಠ ತ್ಯಾಗ ಮಾಡುವೆನು. ಲಕ್ಷೀವರ ತೀರ್ಥರ ನಿಧನದ ನಂತರ ಅವರ ಅವ್ಯವಹಾರದ ಬಗ್ಗೆ ಹೇಳಿಕೆ ಸರಿಯಿಲ್ಲವೆಂದು ಕೆಲವರು ಆಕ್ಷೇಪಿಸಿದ್ದಾರೆ. ಲಕ್ಷೀವರತೀರ್ಥರಿಗೆ ವಿಠಲ ದೇವರನ್ನು ಯಾಕೆ ಕೊಟ್ಟಿಲ್ಲ? ಅವರ ಅಂತ್ಯದರ್ಶನಕ್ಕೆ ಯಾಕೆ ಹೋಗಿಲ್ಲ ಮುಂತಾದ ಪ್ರಶ್ನೆ, ಆಕ್ಷೇಪವನ್ನು ಮಾದ್ಯಮದವರು ಮಾಡಿದ್ದರಿಂದ ಅದಕ್ಕೆ ಉತ್ತರವಾಗಿ ಅವರು ಸನ್ಯಾಸಧರ್ಮವನ್ನು ಪೂರ್ಣವಾಗಿ ಉಲ್ಲಂಘಿಸಿದ್ದಾರೆಂಬುದನ್ನು ಅನಿವಾರ್ಯವಾಗಿ ನಾನು ವಿವರಿಸ ಬೇಕಾಯಿತು.

ಹಿಂದಿನ ಪಲಿಮಾರು ಸ್ವಾಮಿಗಳಾದ ರಘುವಲ್ಲಭ ತೀರ್ಥರು, ಹಿಂದಿನ ಶೀರೂರು ಸ್ವಾಮಿಗಳಾದ ಮನೋಜ್ಞ ತೀರ್ಥರು, ಸುಬ್ರಹ್ಮಣ್ಯ ಮಠದ ಸ್ವಾಮಿಗಳಾದ ವಿದ್ಯಾಭೂಷಣರು ಪೀಠ ತ್ಯಾಗ ಮಾಡಲು ನನ್ನ ಪಾತ್ರವೇನೂ ಇಲ್ಲ. ಅವರನ್ನು ಪೀಠದಲ್ಲಿ ಉಳಿಸಲು ಎಲ್ಲಾ ಪ್ರಯತ್ನ ಮಾಡಿದ್ದೇನೆ. ಅವರಾಗಿ ಸ್ವೇಚ್ಛೆಯಿಂದ ಹೋಗಿದ್ದಾರೆ. ಅದಕ್ಕಾಗಿ ನನ್ನನ್ನು ಹಂತಕನನ್ನಾಗಿ ದೂಷಿಸುವುದು ಸರ್ವಥಾ ತಪ್ಪು. ರಘುವಲ್ಲಭರಿಗೆ 5 ಲಕ್ಷ ರೂ. ಕೊಟ್ಟಿರುವೆನೆಂದು ಆರೋಪಿಸುವುದೂ ಪೂರ್ಣ ಸುಳ್ಳು. ಅವರಿಗೆ ಇದಕ್ಕಾಗಿ ಒಂದು ಪೈಸೆ ಕೂಡ ಕೊಟ್ಟಿಲ್ಲ. ವಿಶ್ವ ವಿಜಯರನ್ನು ನಾನು ಕಳುಹಿಸಿಯೇ ಇಲ್ಲ. ಅವರಾಗಿಯೇ ಹೋದರು. ಹೋದರೆ ಅನೇಕ ಸಮಸ್ಯೆಯಾಗುವುದೆಂದು ನಾನು ಹೇಳಿದ್ದೆ. ಆದರೂ ಹೋದರು. ಬಂದ ಮೇಲೆ ಸೂಕ್ತ ವ್ಯವಸ್ಥೆಯನ್ನು ಮಾಡುವುದಾಗಿಯೂ ಹೇಳಿದೆ. ಆದರೆ ಅವರು ನನಗೆ ತಿಳಿಸದೇ ಪೀಠ ತ್ಯಾಗ ಮಾಡಿದ್ದಾರೆ. ವ್ಯಾಸರಾಜ ಸ್ವಾಮಿಗಳ ಆಶ್ರಮ, ಸುವಿದ್ಯೇಂದ್ರರ ಆಶ್ರಮ ಸ್ವೀಕಾರ ಮತ್ತು ಪೀಠ ತ್ಯಾಗದಲ್ಲಿ ನನ್ನ ಪಾತ್ರ ಕಿಂಚಿತ್ತು ಇಲ್ಲ. ಆದರೂ ಇದೆಲ್ಲವುಗಳಿಗೂ ನಾನೇ ಕಾರಣವೆಂದು ದೂಷಿಸುವುದು ಸರ್ವಾಥಾ ಸರಿಯಲ್ಲ. ಶೀರೂರು ಸ್ವಾಮಿಗಳಿಂದ ನಾನು ಯಾವುದೇ ರೀತಿಯ ಹಣವನ್ನು ಅಪೇಕ್ಷಿಸಲೂ ಇಲ್ಲ, ಕೇಳಲೂ ಇಲ್ಲ. ಇದೆಲ್ಲದರ ಬಗ್ಗೆಯೂ ಬಹಿರಂಗ ವಿಚಾರಣೆಗೆ ನಾನು ಯಾವಾಗಲೂ ಸಿದ್ಧ.

SHIROORU SHREE

 

ಡಿವಿಆರ್ ಎಲ್ಲಿ?: ಇನ್ನು ಶೀರೂರು ಶ್ರೀಗಳು ನೆಲೆಸಿದ್ದ ಮೂಲಮಠದ ಸಿಸಿಟಿವಿಯ ಡಿವಿಆರ್ ನಾಪತ್ತೆಯಾಗಿರುವ ಅಂಶ ಬೆಳಕಿಗೆ ಬಂದಿದ್ದು, ಪ್ರಕರಣ ಮತ್ತಷ್ಟು ನಿಗೂಢವಾಗುತ್ತಿದೆ. ಶ್ರೀಗಳು ಆಸ್ಪತ್ರೆಗೆ ದಾಖಲಾದ ದಿನವೇ ಡಿವಿಆರ್ ನಾಪತ್ತೆಯಾಗಿದೆ. ಅಷ್ಟೇ ಅಲ್ಲ ಶೀರೂರು ಮೂಲಮಠದಿಂದ ಇನ್ನು ಕೆಲ ವಸ್ತುಗಳು ಕಾಣೆಯಾಗಿವೆ. ಉದ್ದೇಶಪೂರ್ವಕವಾಗಿ ಡಿವಿಆರ್ ತೆಗೆದುಕೊಂಡು ಹೋಗಿದ್ದಾರಾ ಅಥವಾ ಸಿಸಿಟಿವಿ ಬರಿ ಪ್ರದರ್ಶನಕ್ಕೆ ಮಾತ್ರ ಅಳವಡಿಸಲಾಗಿತ್ತಾ ಎಂಬುವುದರ ಕುರಿತು ಎಸ್‍ಪಿ ಲಕ್ಷ್ಮಣ್ ನಿಂಬರ್ಗಿ ನೇತೃತ್ವದಲ್ಲಿ ತನಿಖೆ ಮುಂದುವರೆದಿದೆ.

ಇದೇ ವೇಳೆ ಇನ್ನೆರಡು ದಿನಗಳಲ್ಲಿ ಶ್ರೀಗಳ ಮರಣೋತ್ತರ ಪರೀಕ್ಷೆಯ ತಾತ್ಕಾಲಿಕ ವರದಿ ಬರಲಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ. ಈ ನಡುವೆ ಪಟ್ಟದ ದೇವರ ವಾಪಸ್ ಗಾಗಿ ಶಿರೂರು ಶ್ರೀಗಳು ಸಲ್ಲಿಸಿದ್ದ ಕೇವಿಯಟ್ ಅರ್ಜಿ ಸ್ವಾಮೀಜಿಗಳ ಸಾವಿನಿಂದಾಗಿ ಅನೂರ್ಜಿತವಾಗಿದೆ. ಹೀಗಾಗಿ ಕೃಷ್ಣ ಮಠದ ಆರು ಮಠಾಧೀಶರಿಗೆ ಬಿಗ್ ರಿಲೀಫ್ ಸಿಕ್ಕಿದೆ.

TAGGED:chennaiPejawara SwamijiPress releasePublic TVudupiಆರೋಪಉಡುಪಿಚೆನ್ನೈಪತ್ರಿಕಾ ಹೇಳಿಕೆಪಬ್ಲಿಕ್ ಟಿವಿಪೇಜಾವರ ಶ್ರೀಶಿರೂರು ಶ್ರೀ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
5 minutes ago
Janivar Protest
Bengaluru City

ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ – ಪ್ರತ್ಯೇಕ ಕಾನೂನು ರೂಪಿಸುವಂತೆ ಬ್ರಾಹ್ಮಣ ಮಹಾಸಭಾ ಆಗ್ರಹ

Public TV
By Public TV
6 minutes ago
UT Khader 2
Bengaluru City

ಶಾಸಕರ ಸದಸ್ಯತ್ವ ರದ್ದು ಮಾಡೋ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ.ಖಾದರ್

Public TV
By Public TV
8 minutes ago
Hassan Accident
Crime

ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Public TV
By Public TV
14 minutes ago
Ganga Expressway PM Modi
Latest

ಗಂಗಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Public TV
By Public TV
19 minutes ago
America Passport
Latest

ಅಮೆರಿಕದ ಪಾಸ್‌ಪೋರ್ಟ್‌ಗಳಲ್ಲಿ ಡೊನಾಲ್ಡ್ ಟ್ರಂಪ್ ಚಿತ್ರ

Public TV
By Public TV
23 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?