Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಯಾರಿಗೆ ಟಿಕೆಟ್ ಕೊಟ್ಟರೂ ನಾನು ಕೆಲಸ ಮಾಡ್ತೀನಿ: ಭವಾನಿ ರೇವಣ್ಣ

Public TV
Last updated: September 20, 2022 8:16 pm
Public TV
Share
3 Min Read
bhavani revanna 3
SHARE

ಹಾಸನ: ವಿಧಾಸಭಾ ಚುನಾವಣೆಯಲ್ಲಿ (Assembly Elections) ಸ್ಪರ್ಧಿಸುವಂತೆ ಸಾಕಷ್ಟು ಜನ ನನಗೆ ಒತ್ತಡ ಹೇರುತ್ತಿದ್ದಾರೆ. ಹಾಸನ (Hassan) ವಿಧಾನಸಭಾ ಕ್ಷೇತ್ರದಿಂದ ಯಾರಿಗೆ ಟಿಕೆಟ್ ಕೊಟ್ಟರೂ ನಾನು ಕೆಲಸ ಮಾಡುತ್ತೇನೆ. ಜೆಡಿಎಸ್ (JDS) ವರಿಷ್ಠರ ತೀರ್ಮಾನಕ್ಕೆ ನಾನು ಬದ್ಧ ಎಂದು ಭವಾನಿ ರೇವಣ್ಣ (Bhavani Revanna) ಹೇಳಿದ್ದಾರೆ.

ಹಾಸನದ ಎರಡನೇ ವಾರ್ಡ್‌ನ ಅಶೋಕ ಬಡಾವಣೆಯಲ್ಲಿ 12.40 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಪುತ್ರ ಹಾಗೂ ಸಂಸದ ಪ್ರಜ್ವಲ್ ಪರವಾಗಿ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಯಾರಿಗೆ ಟಿಕೆಟ್ ಕೊಟ್ಟರೂ ಭವಾನಿಯಾಗಿ, ರೇವಣ್ಣ ಅವರ ಪತ್ನಿಯಾಗಿ, ಪ್ರಜ್ವಲ್, ಸೂರಜ್ ಅವರ ತಾಯಿಯಾಗಿ ಕಾರ್ಯಕರ್ತರ ಜೊತೆ ಏನು ಕೆಲಸ ಮಾಡುತ್ತಿದ್ದೇನೋ, ಮುಂದೆಯೂ ಅದೇ ಕೆಲಸ ಮಾಡುತ್ತೇನೆ ಎಂದಿದ್ದಾರೆ.

bhavani revanna

ಸಾರ್ವಜನಿಕರು ನನ್ನನ್ನು ತಮ್ಮ ಮನೆ ಮಗಳು ಎನ್ನುವ ಭಾವನೆಯಲ್ಲಿ ಕಾರ್ಯಕ್ರಮಕ್ಕೆ ಕರೆದಾಗ ಬರುತ್ತಿದ್ದೇನೆ. ನನ್ನ ಮಕ್ಕಳು ಮಾತ್ರ ಅಲ್ಲ, ದೇವೇಗೌಡರ ರಾಜಕೀಯ ಜೀವನದಲ್ಲಿ ಹಾಸನದ ಜನರ ಜೊತೆ ನಿಂತಿದ್ದಾರೆ. ಅವರು ಕರೆದಾಗ ಬರದೆ ಇರಬಾರದು ಎನ್ನುವ ಕಾರಣಕ್ಕೆ ಬರುತ್ತಾ ಇದ್ದೇನೆ ಅಷ್ಟೇ. ಅದನ್ನು ಬಿಟ್ಟರೆ ಬೇರೆ ಯಾವುದೇ ಚರ್ಚೆ ಇಲ್ಲ ಎಂದರು.

ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡುತ್ತೇನೆ ಎಂಬ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಆ ಬಗ್ಗೆ ನನಗೇನೂ ಗೊತ್ತಿಲ್ಲ. ನಾನು ಬೆಂಗಳೂರಿನಲ್ಲಿ ಇರಲಿಲ್ಲ. ದೆಹಲಿಯಲ್ಲಿ ನಡೆದ ಡೈರಿ ಶೃಂಗಸಭೆಯಲ್ಲಿ ನಮ್ಮ ಕುಟುಂಬದವರೆಲ್ಲರೂ ಭಾಗವಹಿಸಿದ್ದೆವು. ಅವರು ಏನು ಮಾತನಾಡಿದ್ದಾರೆ ಅದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ತೆರವು ಪ್ರಹಸನಕ್ಕೆ ಬಿತ್ತಾ ಬ್ರೇಕ್..?- ವಿಲ್ಲಾಗಳ ಕಡೆ ಮುಖಮಾಡದ ಜೆಸಿಬಿ!

bhavani revanna 1

ನನ್ನ ಬೆಂಬಲಿಗರು ತುಂಬಾ ಒತ್ತಡ ಹೇರುತ್ತಿದ್ದಾರೆ. ದಿನ ಬೆಳಗ್ಗೆಯಾದರೆ ಫೋನ್ ಮಾಡುತ್ತಿದ್ದಾರೆ. ಮನೆಯ ಬಳಿ ಬಂದು ಹಾಸನದಿಂದ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಹಾಸನಕ್ಕೆ ಬಂದಾಗ, ಹೊಳೆನರಸೀಪುರದಲ್ಲಿದ್ದಾಗ, ಹಲವಾರು ಕಾರ್ಯಕ್ರಮಗಳಲ್ಲಿ, ಎಲ್ಲಾ ಕಡೆ ತುಂಬಾ ಒತ್ತಡ ಹಾಕುತ್ತಿದ್ದಾರೆ. ಆದರೆ ಈ ವಿಷಯದಲ್ಲಿ ನಾನಾಗಿಯೇ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ನಮ್ಮ ಕುಟುಂಬದಲ್ಲಿ ಹಿರಿಯರಿದ್ದಾರೆ, ಕುಮಾರಣ್ಣ, ದೇವೇಗೌಡರು, ರೇವಣ್ಣ ಇದ್ದಾರೆ. ಇಲ್ಲಿನ ಶಾಸಕರು, ಮುಖಂಡರು, ಕಾರ್ಯಕರ್ತರು ಇದ್ದಾರೆ. ಹಾಸನದಲ್ಲಿ ಮಹಿಳೆಯರು ನನ್ನ ಮೇಲೆ ಹೆಚ್ಚಿನ ಪ್ರೀತಿ ಇಟ್ಟುಕೊಂಡಿದ್ದಾರೆ. ಅವರೆಲ್ಲ ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ಅದಕ್ಕೆ ನಾನು ಬದ್ಧಳಾಗಿರುತ್ತೇನೆ, ನಾನೇ ಸ್ಪರ್ಧಿಸುತ್ತೇನೆ ಎಂದು ಎಲ್ಲೂ ಹೇಳಿಲ್ಲ ಎಂದರು.

bhavani revanna 4

ಬೇಲೂರು, ಕೆ.ಆರ್ ಪೇಟೆ, ಕೆ.ಆರ್ ನಗರದಿಂದಲೂ ನನ್ನ ಹೆಸರು ಕೇಳಿಬಂದಿತ್ತು. 2004 ರಿಂದಲೂ ಎಲ್ಲಾ ಕಡೆ ನನಗೆ ಒತ್ತಡ ಇತ್ತು. ಅವತ್ತು ಎಲ್ಲರೂ ಸೇರಿ ಏನು ತೀರ್ಮಾನ ತೆಗೆದುಕೊಂಡಿದ್ದರು ಅದರಂತೆ ನಡೆದುಕೊಂಡಿದ್ದೇನೆ. ಈಗಲೂ ಅಷ್ಟೇ, ಎಲ್ಲರ ತೀರ್ಮಾನಕ್ಕೆ ಬದ್ಧ ಎಂದು ಹೇಳಿದರು.

ಶಾಸಕ ಪ್ರೀತಂ ಗೌಡ ಸವಾಲು ಹಾಕಿರುವ ಬಗ್ಗೆ ಮಾತನಾಡಿದ ಭವಾನಿ ರೇವಣ್ಣ, ಅವರು ತುಂಬಾ ಬುದ್ಧಿವಂತರಿದ್ದಾರೆ. ಅವರಿಗೆ ಉತ್ತರ ಕೊಡವಷ್ಟು ನಾನು ದೊಡ್ಡವಳಲ್ಲ. ಅವರ ಸವಾಲಿಗೆ ರೇವಣ್ಣನವರು, ನಮ್ಮ ಪಕ್ಷದ ಮುಖಂಡರು, ಹಿರಿಯರು ಉತ್ತರ ಕೊಡುತ್ತಾರೆ. ನಾನು ಅದರ ಬಗ್ಗೆ ಏನೂ ಯೋಚನೆ ಮಾಡಲ್ಲ. ನನಗೆ ಬೇಡವಾದ ವಿಷಯಗಳನ್ನು ನೋಡಲು ಹೋಗಲ್ಲ, ಕೇಳಲು ಹೋಗಲ್ಲ. ಅದರ ಬಗ್ಗೆ ನಮ್ಮ ಮನೆಯಲ್ಲಿಯೂ ಚರ್ಚೆ ಮಾಡಿಲ್ಲ, ಮಾತು ಆಡಲ್ಲ ರೇವಣ್ಣ ಸಾಹೇಬ್ರು ಡೈಲಿ ಮನೆಗೆ ಬರುವಾಗ ತಡರಾತ್ರಿ ಆಗುತ್ತದೆ. ಅವರು ಬಂದಾಗ ಫುಲ್ ಟೈಯರ್ಡ್ ಆಗಿರ್ತಾರೆ. ಹಾಗಾಗಿ ನಾವೇನೂ ಟಿಕೆಟ್ ವಿಚಾರವಾಗಿ ಮನೆಯಲ್ಲಿ ಚರ್ಚೆ ಮಾಡಲ್ಲ ಎಂದು ಹೇಳಿದರು. ಇದನ್ನೂ ಓದಿ: ಎರಡು ವರ್ಷಗಳಿಂದ ನನ್ನ ಫೈಲನ್ನೇ ಅಧಿಕಾರಿಗಳು ಕ್ಲಿಯರ್ ಮಾಡಿಲ್ಲ: ಮುರುಗೇಶ್ ನಿರಾಣಿ ಅಸಹಾಯಕತೆ

bhavani revanna 5

ಶಾಸಕ ಹೆಚ್.ಎಸ್ ಪ್ರಕಾಶ್ ಹುಟ್ಟುಹಬ್ಬ ಕಾರ್ಯಕ್ರಮ ನನಗೆ ಗೊತ್ತೇ ಇಲ್ಲ ಎಂಬ ರೇವಣ್ಣ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನನಗೂ ಆ ವಿಷಯ ಗೊತ್ತಿಲ್ಲ. ನಾನು ಅವರಿಗಿಂತ 2 ದಿನ ಮುಂಚೆಯೇ ದೆಹಲಿಗೆ ಹೋಗಿದ್ದೆ. ನನಗೆ ನಿಜವಾಗಲು ಕಾರ್ಯಕ್ರಮದ ಬಗ್ಗೆ ಗೊತ್ತಿಲ್ಲ. ನನಗೆ ಯಾರೂ ಕೂಡ ಫೋನ್ ಮಾಡಿಲ್ಲ, ಯಾರೂ ಆಹ್ವಾನ ನೀಡಿಲ್ಲ. ಆ ಫಂಕ್ಷನ್ ಇದೆ ಅನ್ನೋದೆ ನನಗೆ ಗೊತ್ತಿಲ್ಲ. ಅಣ್ಣ-ತಮ್ಮಂದಿರು ಮಾತನಾಡಿರುವ ವಿಷಯ ನನಗೆ ಗೊತ್ತಿಲ್ಲ ಎಂದರು.

Live Tv
[brid partner=56869869 player=32851 video=960834 autoplay=true]

TAGGED:Assembly Electionsbhavani revannahassanjdsticketಜೆಡಿಎಸ್ಟಿಕೆಟ್ಭವಾನಿ ರೇವಣ್ಣವಿಧಾನಸಭಾ ಚುನಾವಣೆಹಾಸನ
Share This Article
Facebook Whatsapp Whatsapp Telegram

Cinema Updates

rukmini vasanth
ಬಿಗ್ ಆಫರ್ ಗಿಟ್ಟಿಸಿಕೊಂಡ ಕನ್ನಡತಿ- ಪ್ರಭಾಸ್‌ಗೆ ರುಕ್ಮಿಣಿ ವಸಂತ್ ನಾಯಕಿ?
13 minutes ago
Megastar Chiranjeevi 1 1
ನಿರ್ದೇಶಕರಿಗೆ ದುಬಾರಿ ವಾಚ್‌ ಗಿಫ್ಟ್‌ ಕೊಟ್ಟ ಮೆಗಾಸ್ಟಾರ್ – ಈ ಕ್ಷಣವನ್ನು ಸದಾ ನೆನಪಲ್ಲಿಟ್ಟುಕೊಳ್ಳುತ್ತೇನೆ ಎಂದ ಬಾಬಿ!
58 minutes ago
Sees Kaddi
‘ಸೀಸ್ ಕಡ್ಡಿ’ ಚಿತ್ರದ ಟ್ರೈಲರ್ ಬಿಡುಗಡೆ!
1 hour ago
divya madenur manu
ಬೇಕಂತಲೇ ಪಿತೂರಿ ಮಾಡಲಾಗಿದೆ, ನನ್ನ ಗಂಡನಿಗೆ ನ್ಯಾಯ ಸಿಗೋವರೆಗೂ ಹೋರಾಡ್ತೀನಿ: ಮಡೆನೂರು ಮನು ಪತ್ನಿ
1 hour ago

You Might Also Like

guest teacher class
Bengaluru City

51 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಆದೇಶ

Public TV
By Public TV
6 minutes ago
Tamannaah Bhatia 1
Districts

ತಮನ್ನಾನು ಬೇಡ, ಸುಮನ್ನಾನು ಬೇಡ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ರಾಯಭಾರಿ ಆಗ್ತೀನಿ: ವಾಟಾಳ್ ನಾಗರಾಜ್

Public TV
By Public TV
18 minutes ago
H D Kumaraswamy 3
Karnataka

ಪರಂ ವಿರುದ್ಧದ ಷಡ್ಯಂತ್ರಕ್ಕೆ ಕಾಂಗ್ರೆಸ್‌ನ ಮಹಾನಾಯಕನೇ ಸೂತ್ರಧಾರ: ಹೆಚ್‌ಡಿಕೆ ಬಾಂಬ್

Public TV
By Public TV
37 minutes ago
DK Shivakumar 5
Latest

ಹೌದು ನಾವು ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ ಕೊಟ್ಟಿದ್ದೇವೆ, ತಪ್ಪೇನಿದೆ?: ಡಿಕೆಶಿ ಸಮರ್ಥನೆ

Public TV
By Public TV
42 minutes ago
Angelo Mathews 2
Cricket

ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಏಂಜೆಲೊ ಮ್ಯಾಥ್ಯೂಸ್

Public TV
By Public TV
53 minutes ago
H D Kumaraswamy 1
Latest

ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ & ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಕೇಂದ್ರ ಅಸ್ತು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?