ರಕ್ತದಲ್ಲಿ ಬರೆದುಕೊಡ್ತೇನೆ, ಜಾಧವ್ ಗೆಲ್ತಾರೆ: ಬಿಎಸ್‍ವೈ

Public TV
1 Min Read
JADHAV

– ವೇದಿಕೆಯಲ್ಲಿ ಜಾಧವ್ ಸಾಷ್ಟಾಂಗ ನಮಸ್ಕಾರ

ಕಲಬುರಗಿ: ತೀವ್ರ ಕುತೂಹಲ ಕೆರಳಿಸಿರುವ ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಇದೀಗ ಮತಗಳಿಸಲು ಪ್ಲಾನ್ ಮೇಲೆ ಪ್ಲಾನ್ ನಡೆಯುತ್ತಿದೆ. ಮೊನ್ನೆಯಷ್ಟೇ ವೀರಶೈವ ಲಿಂಗಾಯತ ಸಮಾವೇಶ ನಡೆಸಿದ ಕೈ ಪಡೆಗೆ ಶಾಕ್ ಎನ್ನುವಂತೆ ಬಿಜೆಪಿ ಮಂಗಳವಾರ ವೀರಶೈವ ಲಿಂಗಾಯತರ ಬೃಹತ್ ಸಮಾವೇಶ ನಡೆಸಿತು.

jadhav 1

ನಗರದ ಎನ್‍ವಿ ಕಾಲೇಜು ಆವರಣದಲ್ಲಿ ನಡೆದ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಇವತ್ತೇ ನಾನು ನನ್ನ ರಕ್ತದಲ್ಲಿ ಬರೆದು ಕೊಡುತ್ತೇನೆ ಉಮೇಶ್ ಜಾಧವ್ ಸೇರಿ 300 ಜನರು ಗೆದ್ದು ಮೋದಿಯವರನ್ನ ಮತ್ತೊಮ್ಮೆ ಪ್ರಧಾನಿ ಮಾಡುತ್ತೇವೆ ಎಂದರು.

ಸಮಾವೇಶ ವೀರಶೈವ ಲಿಂಗಾಯತ ಮುಖಂಡರಾಗಿದ್ದರೂ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಕೇಂದ್ರ ಬಿಂದುವಾಗಿದ್ದರು. ಶಾಸಕ ಸ್ಥಾನಕ್ಕೆ ರಿಸೈನ್ ಮಾಡಿ ರಿಸ್ಕ್ ತಗೊಂಡಿದ್ದೇನೆ. ಕಾಂಗ್ರೆಸ್ ನಾಯಕರ ವರ್ತನೆಗೆ ನೊಂದು ಹೊರಬಂದಿದ್ದೇನೆ. ನೀವು ನನಗೆ ಆಶೀರ್ವಾದ ಮಾಡಿ ಎಂದು ಬೇಡಿಕೊಂಡ್ರು. ನಂತರ ಇಡೀ ಜನಸ್ತೋಮದ ಮುಂದೆ ವೇದಿಕೆಯಲ್ಲಿ ಸಾಷ್ಟಾಂಗ ನಮಸ್ಕಾರ ಹಾಕಿದ್ರು. ಒಟ್ಟಾರೆ ಇಡೀ ಸಮಾವೇಶ ಖರ್ಗೆಗೆ ಟಾರ್ಗೆಟ್ ಮಾಡಿದ್ರೆ ಮತ್ತೊಂದೆಡೆ ಲಿಂಗಾಯತರ ಮತ ಸೆಳೆಯಲು ಸಹಾಯ ಮಾಡಿದಂತಿತ್ತು.

Share This Article
Leave a Comment

Leave a Reply

Your email address will not be published. Required fields are marked *