Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 6 ಬಾರಿ ಗೆದ್ರೂ ಸಚಿವ ಸ್ಥಾನ ನೀಡದಿರುವುದು ಆಘಾತವಾಗಿದೆ: ತಿಪ್ಪಾರೆಡ್ಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | 6 ಬಾರಿ ಗೆದ್ರೂ ಸಚಿವ ಸ್ಥಾನ ನೀಡದಿರುವುದು ಆಘಾತವಾಗಿದೆ: ತಿಪ್ಪಾರೆಡ್ಡಿ

Chitradurga

6 ಬಾರಿ ಗೆದ್ರೂ ಸಚಿವ ಸ್ಥಾನ ನೀಡದಿರುವುದು ಆಘಾತವಾಗಿದೆ: ತಿಪ್ಪಾರೆಡ್ಡಿ

Public TV
Last updated: August 20, 2019 12:58 pm
Public TV
Share
3 Min Read
ctd tippareddy
SHARE

– ಬೈಕಿಗೆ ಬೆಂಕಿ ಹಚ್ಚಿ ತಿಪ್ಪಾರೆಡ್ಡಿ ಬೆಂಬಲಿಗರ ಆಕ್ರೋಶ

ಚಿತ್ರದುರ್ಗ: ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕ ತಿಪ್ಪಾರೆಡ್ಡಿ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದಾರೆ. ಜಿಲ್ಲೆಯಲ್ಲಿ ಬಿಜೆಪಿ ತಳಮಟ್ಟದವರೆಗೆ ಬೇರೂರಲು ಶಕ್ತಿಯಾಗಿದ್ದ ತಿಪ್ಪಾರೆಡ್ಡಿ ಬಿಜೆಪಿ ಹೈಕಮಾಂಡ್ ಹಾಗು ಯಡಿಯೂರಪ್ಪನವರ ನಡೆಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಪದೇ ಪದೇ ಈ ಜಿಲ್ಲೆಗೆ ವಲಸಿಗರೇ ಉಸ್ತುವಾರಿ ಸಚಿವರಾಗ್ತಿರೋದು ಚಿತ್ರದುರ್ಗದ ದೌರ್ಭಾಗ್ಯ ಎಂದಿದ್ದಾರೆ. ಶಾಸಕರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗೈರಾಗಿದ್ದ ಅವರು ಇಂದು ಮಧ್ಯಾಹ್ನ ಬೆಂಗಳೂರಿನ ಶಾಸಕರ ಭವನದಲ್ಲಿ ಸಚಿವ ಸ್ಥಾನ ವಂಚಿತ ಹಿರಿಯ ಶಾಸಕರೊಂದಿಗೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.

bjp minister yeddyurppa 2 1

ನಾನು ಸುಮಾರು 50 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. 6 ಬಾರಿ ಶಾಸಕನಾಗಿದ್ದೇನೆ. ಕಳೆದ 16-17 ವರ್ಷದಿಂದ ಹೊರಗಿನವರೇ ನಮ್ಮ ಜಿಲ್ಲೆಯ ಉಸ್ತವಾರಿ ಸಚಿವರಾಗುತ್ತಿರೋದು ದುರಂತ. ನಮ್ಮಲ್ಲಿ ಒಂದು ಅಭಿವೃದ್ಧಿ ಕೆಲಸ ಕೂಡ ಆಗಿರುವ ಉದಾಹರಣೆ ಇಲ್ಲ. ನನ್ನ ರಾಜಕೀಯ ಇತಿಹಾಸದಲ್ಲಿ ಯಾವುದೇ ಮೈನಸ್ ಪಾಯಿಂಟ್ ಇಲ್ಲ. ಯಾರೊಬ್ಬರು ಬೆರಳು ಮಾಡಿ ತೋರಿಸುವಂತ ಕೆಲಸ ಕೂಡ ನಾನು ಮಾಡಿಲ್ಲ. ನಿಷ್ಪಕ್ಷಪಾತವಾಗಿ ಪಕ್ಷದ ಸಂಘಟನೆಗೆ ನಾವು ದುಡಿದಿದ್ದೇವೆ. ಪಕ್ಷ ಸೋತಾಗಲೂ ಜಿಲ್ಲೆಯಲ್ಲಿ ನಾವು ಲೀಡ್ ಪಡೆದು ಗೆದ್ದಿದ್ದೇವೆ. ನಾವು ಆರು ಬಾರಿ ಗೆದ್ದು, ಜನರ ವಿಸ್ವಾಸ ಗಳಿಸಿ, ಜಿಲ್ಲೆಯ ಎಲ್ಲಾ ಜನಾಂಗಕ್ಕೆ ಭೇದ ಭಾವ ಮಾಡದೇ ಕೆಲಸ ಮಾಡಿದ್ದೇವೆ. ನಮಗೆ ಯಾವಾಗ ಅವಕಾಶ ಕೊಡುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಬೇರೆಯವರ ಹಾಗೆ ಜನ ಕಟ್ಟಿಕೊಂಡು ಲಾಬಿ ಮಾಡುವ ಅವಶ್ಯಕತೆ ನನಗಿಲ್ಲ. ಯಾಕೆಂದರೆ ನಾನು ವಯಸ್ಸಿನಲ್ಲಿ ಹಾಗೂ ಶಾಸಕರಲ್ಲಿ ಅತ್ಯಂತ ಹಿರಿಯ ನಾಯಕ. ಈ ರೀತಿ ಇರುವಾಗ ನಮಗೆ ಅವಕಾಶ ಕೊಡದಿರುವುದು ಬಹಳ ನೋವಿನ ಸಂಗತಿ. ಈ ವಿಚಾರದಲ್ಲಿ ನಮ್ಮ ಸಿಎಂ ಹಾಗೂ ಕೇಂದ್ರದ ನಾಯಕರಿಗೆ ನಾನು ವಿನಂತಿ ಮಾಡಿಕೊಳ್ಳುತ್ತೇನೆ. ಸದ್ಯದಲ್ಲೇ ಹಿರಿಯ ನಾಯಕರೆಲ್ಲ ಸೇರಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ. ಇಂದು ಪ್ರಮಾಣ ವಚನ ಸಮಾರಂಭಕ್ಕೆ ಹೋಗಬಾರದೆಂದು ನಾನು ನಿರ್ಧರಿಸಿದ್ದೆ. ಆದರೆ ನಮ್ಮ ಸ್ನೇಹಿತರು ಹಾಗೂ ಶಾಸಕರು ಕರೆ ಮಾಡಿ ಬರಲು ಹೇಳಿದ್ದಾರೆ, ಹೀಗಾಗಿ ಬೆಂಗಳೂರಿಗೆ ತೆರೆಳುತ್ತೇನೆ. ಅಲ್ಲಿ ರಾಜ್ಯದ ಅಭಿವೃದ್ಧಿಗೆ, ಪಕ್ಷಕ್ಕೆ ಅನುಕೂಲವಾಗುವ ರೀತಿ ಹೇಗೆ ನಮ್ಮ ನೋವನ್ನು ಹಿರಿಯ ನಾಯಕರಿಗೆ ತಿಳಿಸಬೇಕು ಎನ್ನುವುದನ್ನು ಚರ್ಚೆ ಮಾಡುತ್ತೇವೆ ಎಂದರು.

ctd protest 1

ಜಿಲ್ಲೆಯಲ್ಲಿ ಎಲ್ಲರೂ ಪಕ್ಷಕ್ಕಾಗಿ ಕೆಲಸ ಮಾಡಿದ್ದೇವೆ. ಆದರೆ ಕೆಲ ಜನಾಂಗಕ್ಕೆ ಮಾನ್ಯತೆ ಕೊಡುತ್ತಿಲ್ಲ. ಹಿಂದಿನ ಕ್ಯಾಬಿನೆಟ್‍ನಲ್ಲಿ ಹಿಂದುಳಿದ ಜನಾಂಗದವರು ಕೆಲಸ ಮಾಡಿದ್ದಾರೆ. ಆದರೆ ಈಗ ಯಾವ ದೃಷ್ಟಿಯಿಂದ ನಮಗೆ ಅವಕಾಶ ಕೊಡುತ್ತಿಲ್ಲ ಎಂದು ಗೊತ್ತಿಲ್ಲ. ನಾನು ಬೇರೆಯವರಿಗೆ ಸಚಿವ ಸ್ಥಾನ ಕೊಟ್ಟಿರುವ ಬಗ್ಗೆ ಟೀಕೆ ಮಾಡಲ್ಲ. ಆದರೆ ನನಗೆ ಸಚಿವ ಸ್ಥಾನ ಕೊಡದಿದ್ದಕ್ಕೆ ನನ್ನ ನೋವನ್ನು ವ್ಯಕ್ತಪಡಿಸುತ್ತಿದ್ದೇನೆ ಎಂದು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದರು.

ಸಿಎಂ ಯಡಿಯೂರಪ್ಪ ಅವರಿಗೆ ನನ್ನ ಮೇಲೆ ಯಾವುದೇ ಮುನಿಸು, ದ್ವೇಷವಿಲ್ಲ. ಹಾಗೆಯೇ ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಬಗ್ಗೆ ಯಾರಾದರೂ ಕುತಂತ್ರ ನಡೆಸಿದ್ದಾರೋ ಗೊತ್ತಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮಾಹಿತಿ ಪಡೆಯುತ್ತೇವೆ. ಕಳೆದ 4-5 ಸರ್ಕಾರದ ಬಂದ ಅವಧಿಯಲ್ಲೂ ನಮ್ಮ ಜಿಲ್ಲೆಯವರು ಸಚಿವರಾಗದಿರುವುದು ದುರಂತ. ಹೊಸ ಸರ್ಕಾರ ರಚನೆಯಾದಗಲೆಲ್ಲಾ 4ರಿಂದ 5 ಮಂದಿ ಸಚಿವರಾಗುತ್ತಾರೆ ಆದರೆ ಎಲ್ಲರೂ ಹೊರ ಜಿಲ್ಲೆಯವರು. ಹೀಗಾಗಿ ಜನರು ಬೇಸರ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಯಾವೆಲ್ಲ ಹಿರಿಯ ಶಾಸಕರು ಸೇರಿ ಸಭೆ ನಡೆಸುತ್ತೇವೆ ಎಂದು ಮುಂದಿನ ದಿನಗಳಲ್ಲಿ ನಿಮಗೆ ತಿಳಿಯುತ್ತೆ. ಈಗಲೇ ಅದರ ಬಗ್ಗೆ ಹೇಳುವ ಅವಶ್ಯಕತೆ ಇಲ್ಲ. ಎಬಿವಿಪಿ, ಭಜರಂಗದಳ, ಹಿಂದೂ ಸಂಘಟನೆ, ಆರ್‍ಎಸ್‍ಎಸ್ ಹೀಗೆ ಹಲವು ಸಂಘಟನೆ ಜೊತೆ ಸಕ್ರಿಯವಾಗಿದ್ದೇನೆ. ಬಿಜೆಪಿಯ ಯಾವುದೇ ಕಾರ್ಯಾಕ್ರವಿದ್ದರೂ ಕ್ರಿಯಾಶೀಲವಾಗಿ ಭಾಗಿಯಾಗಿದ್ದೇನೆ. ಆದರೂ ಸಚಿವ ಸ್ಥಾನ ಸಿಗದೇ ಇರುವುದು ಅಘಾತವಾಗಿದೆ ಎಂದು ನೋವನ್ನು ಹಂಚಿಕೊಂಡರು.

ctd protest

ಇತ್ತ ಶಾಸಕ ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಅವರ ಬೆಂಬಲಿಗರು ಪ್ರತಿಭಟನೆ ಮಾಡಿದ್ದಾರೆ. ಚಿತ್ರದುರ್ಗದ ಗಾಂಧಿಸರ್ಕಲ್‍ನಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರು, ನಗರಸಭೆ ಸದಸ್ಯರು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಹೀರೋ ಸ್ಕೂಟಿ ಬೈಕಿಗೆ ಬೆಂಕಿ ಹಚ್ಚಿ ಬೆಂಬಲಿಗರು ಆಕ್ರೋಶ ಹೊರಹಾಕಿದ್ದಾರೆ. ಸದ್ಯ ಸ್ಥಳಕ್ಕೆ ಚಿತ್ರದುರ್ಗ ಎಸ್‍ಪಿ ಡಾ.ಕೆ.ಅರುಣ್ ಹಾಗೂ ಇತರೆ ಪೊಲೀಸರು ಭೇಟಿ ನೀಡಿ, ಪ್ರತಿಭಟನಾ ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಪರಿಣಾಮ ದಿಕ್ಕಾಪಾಲಾಗಿ ಪ್ರತಿಭಟನಾಕಾರರು ಓಡಿಹೋಗಿದ್ದಾರೆ. ಅಲ್ಲದೆ ಮುಂಜಾಗೃತ ಕ್ರಮವಾಗಿ 10ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕರಕಲಾದ ಸ್ಕೂಟಿಯನ್ನು ಪೊಲೀಸರು ಸ್ಥಳಾಂತರಿಸಿದ್ದಾರೆ.

TAGGED:bjpcm yeddyurappafireministerPublic TVState Governmentsupportersthippareddyಆಕ್ರೋಶತಿಪ್ಪಾರೆಡ್ಡಿಪಬ್ಲಿಕ್ ಟಿವಿಬಿಜೆಪಿಬೆಂಕಿಬೆಂಬಲಿಗರುರಾಜ್ಯ ಸರ್ಕಾರಸಚಿವ ಸ್ಥಾನಸಿಎಂ ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood
rashmika vijay devarakonda geetha govindam
ರಶ್ಮಿಕಾ, ವಿಜಯ್‌ ಮದುವೆಗೆ ಬೆಂಗಳೂರಿನಿಂದ ಹೂ ಪೂರೈಕೆ
Bengaluru City Cinema Latest Main Post Sandalwood South cinema Top Stories

You Might Also Like

trump US
Latest

ಭಾರತ-EU ವ್ಯಾಪಾರ ಒಪ್ಪಂದದೊಂದಿಗೆ ಯುರೋಪ್ ತನ್ನ ವಿರುದ್ಧವೇ ಯುದ್ಧಕ್ಕೆ ಹಣಕಾಸು ಒದಗಿಸುತ್ತಿದೆ: ಅಮೆರಿಕ

Public TV
By Public TV
32 minutes ago
Bengaluru GBA Election
Bengaluru City

ಜಿಬಿಎ ಚುನಾವಣೆಗೆ ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿ ಏರಿಕೆ – 369 ವಾರ್ಡ್ಗೆ 1,800 ಆಕಾಂಕ್ಷಿಗಳಿಂದ ಅರ್ಜಿ ಸ್ವೀಕಾರ

Public TV
By Public TV
32 minutes ago
India EU Trade Deal
Latest

ಇಂದು ಐತಿಹಾಸಿಕ ಭಾರತ-ಯುರೋಪ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದ

Public TV
By Public TV
1 hour ago
mysuru accident
Latest

ಮೈಸೂರು| ಬೈಕ್‌ಗೆ KSRTC ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು; ಇಬ್ಬರಿಗೆ ಗಾಯ

Public TV
By Public TV
1 hour ago
Bike Taxi Auto Association Supreme Court
Bengaluru City

ಬೈಕ್ ಟ್ಯಾಕ್ಸಿ ಸೇವೆಗೆ ಹೈಕೋರ್ಟ್ ಹಸಿರು ನಿಶಾನೆ – ಸುಪ್ರೀಂ ಕದ ತಟ್ಟಲು ಮುಂದಾದ ಆಟೋ ಸಂಘಟನೆ

Public TV
By Public TV
2 hours ago
daily horoscope dina bhavishya
Astrology

ದಿನ ಭವಿಷ್ಯ 27-01-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?