Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

75th Republic Day: M-29 ಯುದ್ಧ ವಿಮಾನ ಹಾರಾಟ ನಡೆಸಿ ಮಿಂಚಿದ ಕೊಡಗಿನ ಪುಣ್ಯಾ ನಂಜಪ್ಪ

Public TV
Last updated: January 27, 2024 12:20 am
Public TV
Share
2 Min Read
Punya Nanjappa
SHARE

ನವದೆಹಲಿ: 75ನೇ ಗಣರಾಜ್ಯೋತ್ಸವ ಅಂಗವಾಗಿ ಕರ್ತವ್ಯ ಪಥದಲ್ಲಿ ಶುಕ್ರವಾರ ನಡೆದ ಪಥಸಂಚಲನದ ವೇಳೆ ಆಕಾಶದಲ್ಲಿ ಯುದ್ಧವಿಮಾನಗಳು ಹಾರಾಟ ನಡೆಸಿ ಭಾರತದ ವಾಯುಸೇನೆ ಶಕ್ತಿ ಪ್ರದರ್ಶಿಸಿದವು. ಐಎಎಫ್‌ನ (IAF) ಮಹಿಳಾ ಪೈಲಟ್‌ಗಳು ಫ್ಲೈಪಾಸ್ಟ್‌ ಸಮಯದಲ್ಲಿ ಯುದ್ಧವಿಮಾನಗಳ ಹಾರಾಟ ನಡೆಸಿ ತಾವೂ ಸಮರ್ಥರಿದ್ದೇವೆ ಎಂಬುದನ್ನು ಸಾಬೀತುಪಡಿಸಿದರು. ಪರಾಕ್ರಮ, ಕೌಶಲದ ಮಹಿಳಾ ಪೈಲಟ್‌ಗಳ ಪೈಕಿ ಮೈಸೂರಿನ ಅಸಾಧಾರಣ ಪ್ರತಿಭೆ, ಕೊಡಗಿನ ಕೊಲುವಂಡ ಪುಣ್ಯಾ ನಂಜಪ್ಪ (Punya Nanjappa) ಯುದ್ಧ ವಿಮಾನ ಯಶಸ್ವಿ ಹಾರಾಟ ನಡೆಸಿ ಗಮನ ಸೆಳೆದಿದ್ದಾರೆ.

ಪುಣ್ಯಾ ನಂಜಪ್ಪ, MiG-29 ಫೈಟರ್ ಜೆಟ್ ಹಾರಾಟ ನಡೆಸಿ ವಾಯುಪಡೆಯ ನಾರಿ ಶಕ್ತಿ ಪ್ರದರ್ಶಿಸಿದರು. ವಾಯುಪಡೆಯ 46 ವಿಮಾನಗಳು ಆಕಾಶದಲ್ಲಿ ವಿವಿಧ ಕಸರತ್ತು ಪ್ರದರ್ಶಿಸಿದವು. 29 ಯುದ್ಧ ವಿಮಾನಗಳು, 7 ಸರಕು ಸಾಗಣೆ ವಿಮಾನಗಳು, 9 ಹೆಲಿಕಾಪ್ಟರ್‌ಗಳು ಕೂಡ ಪ್ರದರ್ಶನದಲ್ಲಿ ಭಾಗಿಯಾಗಿದ್ದವು. ಇದನ್ನೂ ಓದಿ: ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದ ಒಂದಿಷ್ಟು ಝಲಕ್‌ಗಳು..

punya Nanjappa IAF

ದೇಶೀಯವಾಗಿ ತಯಾರಿಸಿರುವ ಅತ್ಯಾಧುನಿಕ ಯುದ್ಧವಿಮಾನ ‘ತೇಜಸ್’‌ ಪ್ರದರ್ಶನ ಪಥಸಂಚಲನದ ಮೆರುಗು ಹೆಚ್ಚಿಸಿತ್ತು.

ಯಾರು ಈ ಪುಣ್ಯಾ ನಂಜಪ್ಪ?
ಪುಣ್ಯ ಅವರು ವಿಜಯನಗರದ ಸೇಂಟ್ ಜೋಸೆಫ್ ಸೆಂಟ್ರಲ್ ಸ್ಕೂಲ್‌ನಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಕೋಲುವಂಡ ಅನುರಾಧಾ ನಂಜಪ್ಪ ಮತ್ತು ಪ್ರಭಾ ಥಿಯೇಟರ್‌ನಲ್ಲಿ ಮ್ಯಾನೇಜರ್ ಹುದ್ದೆಯಲ್ಲಿದ್ದ ದಿವಂಗತ ಕೋಳುವಂಡ ಪಿ.ಬಾಲ ನಂಜಪ್ಪ ಅವರ ಪುತ್ರಿ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಚಂಬೆಬೆಳ್ಳೂರಿನವರು. ಇದನ್ನೂ ಓದಿ: ಕರ್ತವ್ಯ ಪಥದಲ್ಲಿ ಮಿಂಚಿದ ʻರಾಕೆಟ್‌ ಗರ್ಲ್‌ʼ – ಚಂದ್ರಯಾನ-3 ಸಕ್ಸಸ್‌ನಲ್ಲಿ ಮಹಿಳಾ ವಿಜ್ಞಾನಿಗಳ ಕೊಡುಗೆ ನೆನಪಿಸಿದ ಟ್ಯಾಬ್ಲೊ

Watch | #RepublicDay2024

Baaz formation: Three MiG-29 aircraft flying past in a ‘Vic’ formation.@rajnathsingh@DefenceMinIndia@giridhararamane@HQ_IDS_India@adgpi@IAF_MCC@PIB_India pic.twitter.com/ppJEcay6T8

— A. Bharat Bhushan Babu (@SpokespersonMoD) January 26, 2024

ವಿಜಯನಗರದ ಸೇಂಟ್ ಜೋಸೆಫ್ ಸೆಂಟ್ರಲ್ ಸ್ಕೂಲ್‌ನಲ್ಲಿ ಶಾಲಾ ಶಿಕ್ಷಣ, ಸರಸ್ವತಿಪುರಂನ ವಿಜಯ ವಿಟ್ಲ ಪಿಯು ಕಾಲೇಜಿನಲ್ಲಿ ಪಿಯುಸಿ ಮತ್ತು ಮೈಸೂರಿನ NIE ನಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ಪುಣ್ಯಾ ಅವರು ಫ್ಲೈಯಿಂಗ್ ಬ್ರಾಂಚ್‌ನಲ್ಲಿ ಅಧಿಕಾರಿಗಳ ನೇಮಕಾತಿಗಾಗಿ ನಡೆಸಲಾಗಿದ್ದ ಏರ್ ಫೋರ್ಸ್ ಕಾಮನ್ ಅಡ್ಮಿಷನ್ ಟೆಸ್ಟ್ (AFCAT) ಪರೀಕ್ಷೆ ಬರೆದರು. 1,000 ಅಭ್ಯರ್ಥಿಗಳ ಶಾರ್ಟ್‌ಲಿಸ್ಟ್‌ನಲ್ಲಿ ಪುಣ್ಯಾ ನಂಜಪ್ಪ 135 ನೇ ಸ್ಥಾನ ಪಡೆದರು.

ಮೈಸೂರಿನಲ್ಲಿ ನಡೆದ ಐಎಎಫ್ ಸೇವಾ ಆಯ್ಕೆ ಮಂಡಳಿ ಪರೀಕ್ಷೆಯಲ್ಲೂ ಆಯ್ಕೆಯಾದರು. 2018 ರಲ್ಲಿ AFCAT ನಲ್ಲಿ ಉತ್ತೀರ್ಣರಾದ ಅವರು ನಂತರ ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆಯಲ್ಲಿ ತೇರ್ಗಡೆಯಾಗಿ, ಟ್ರೈನಿ ಪೈಲಟ್ ಆಗಿ ಆಯ್ಕೆಯಾದರು. ನಂತರ ತೆಲಂಗಾಣದ ದುಂಡಿಗಲ್‌ನಲ್ಲಿರುವ ಇಂಡಿಯನ್ ಏರ್ ಫೋರ್ಸ್ ಅಕಾಡೆಮಿಯಲ್ಲಿ ಕಠಿಣ ತರಬೇತಿ ಪಡೆದಿರುವ ಪುಣ್ಯಾ ನಂಜಪ್ಪ ಅವರು ಈಗ IAF ನಲ್ಲಿ ಹೆಮ್ಮೆಯ ಯುದ್ಧವಿಮಾನ ಪೈಲಟ್ ಆಗಿದ್ದಾರೆ. ಗಣರಾಜ್ಯೋತ್ಸವ ಪರೇಡ್‌ ಸಂದರ್ಭದಲ್ಲಿ MiG-29 ಫೈಟರ್ ಜೆಟ್ ಅನ್ನು ಯಶಸ್ವಿಯಾಗಿ ಹಾರಿಸಿ ನಾಡಿಗೆ ಕೀರ್ತಿ ತಂದಿದ್ದಾರೆ. ಇದನ್ನೂ ಓದಿ: ಕರ್ತವ್ಯ ಪಥದ ಪರೇಡ್‍ನಲ್ಲಿ ಮಿಂಚಿದ ಬಾಲಕರಾಮ!

TAGGED:75th Republic DayKodaguPunya Nanjappaಕೊಡಗುಗಣರಾಜ್ಯೋತ್ಸವಪುಣ್ಯಾ ನಂಜಪ್ಪ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
2 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
2 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
3 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
4 hours ago

You Might Also Like

Ahmedabad Plane Crash
Latest

ಅಹಮದಾಬಾದ್‌ನ ವಸತಿ ಪ್ರದೇಶದಲ್ಲಿ 242 ಪ್ರಯಾಣಿಕರಿದ್ದ ವಿಮಾನ ಪತನ

Public TV
By Public TV
10 minutes ago
Vijay Rupani 3
Latest

ಪತನಗೊಂಡ ಏರ್‌ ಇಂಡಿಯಾ ವಿಮಾನದಲ್ಲಿದ್ದರು ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ

Public TV
By Public TV
16 minutes ago
Rain Landslide Udupi
Districts

ಉಡುಪಿ | ಭಾರೀ ಮಳೆಗೆ ರೈಲ್ವೇ ಸೇತುವೆ ಬಳಿಯೇ ಭೂಕುಸಿತ

Public TV
By Public TV
20 minutes ago
Yadhuveer Wodeyar
Districts

ಕೆಆರ್‌ಎಸ್ ಅಮ್ಯೂಸ್ಮೆಂಟ್ ಪಾರ್ಕ್‌ಗೆ ನನ್ನ ವಿರೋಧವಿದೆ: ಯದುವೀರ್ ಒಡೆಯರ್

Public TV
By Public TV
47 minutes ago
r ashok
Districts

ಸಿಎಂಗೆ ಮಾನಸಿಕ ಸ್ಥಿತಿ ಸರಿ ಇಲ್ಲ: ಅಶೋಕ್

Public TV
By Public TV
2 hours ago
CRIME
Crime

ಇಂದೋರ್| ಹಣಕ್ಕಾಗಿ ಅಜ್ಜಿಯನ್ನು ಕೊಂದು ಬೆಡ್‌ನ ಬಾಕ್ಸ್‌ನಲ್ಲಿ ಬಚ್ಚಿಟ್ಟ ಮೊಮ್ಮಗ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?