ನಾನೂ ಸೀನಿಯರ್, ನನಗೆ ಸಚಿವಸ್ಥಾನ ನೀಡಿ: ನೆಹರು ಓಲೇಕಾರ

Public TV
1 Min Read
hvr olekar

ಹಾವೇರಿ: ನಾನೂ ಸೀನಿಯರ್ ಇದ್ದೇನೆ, ಮೂರು ಬಾರಿ ಶಾಸಕನಾಗಿದ್ದೇನೆ. ನನಗೆ ಸಚಿವಸ್ಥಾನ ನೀಡಿ ಎಂದು ಹಾವೇರಿ ಶಾಸಕ ನೆಹರು ಓಲೇಕಾರ ಆಗ್ರಹಿಸಿದ್ದಾರೆ.

ಜನವರಿ 29ಕ್ಕೆ ಸಚಿವ ಸಂಪುಟ ವಿಸ್ತರಣೆ ಮಾಡೋದಾಗಿ ಸಿಎಂ ಹೇಳಿದ್ದಾರೆ ಎಂದು ಓಲೇಕಾರ ಅವರು ತಿಳಿಸಿದರು. ಹಾವೇರಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟದಲ್ಲಿ ಎಲ್ಲಾ ಸಮುದಾಯದವರು ಇದ್ದರೆ ಗೌರವ ಇರುತ್ತೆ. ಸಚಿವ ಸ್ಥಾನಕ್ಕೆ ಮಠಾದೀಶರು ಸೇರಿದಂತೆ ಎಲ್ಲರೂ ಸಿಎಂ ಮೇಲೆ ಒತ್ತಡ ಹಾಕುತ್ತಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಸಮಸ್ಯೆ ಇದೆ. ಹದಿನೇಳು ಜನರಿಂದಲೇ ಬಿಜೆಪಿ ಸರ್ಕಾರ ಬಂದಿದೆ. ಅವರ ತ್ಯಾಗದಿಂದಲೇ ಯಡಿಯೂರಪ್ಪ ಅವರು ಸಿಎಂ ಆಗಿದ್ದಾರೆ. ಅವರಿಗೆ ಸಚಿವ ಸ್ಥಾನ ಕೊಡಲು ತಕರಾರಿಲ್ಲ ಎಂದು ಓಲೇಕಾರ ಹೇಳಿದರು.

CM BSY

ಸೋತವರಿಗೆ ನಿಗಮ ಮಂಡಳಿ ಅಧ್ಯಕ್ಷಗಿರಿ ಕೊಟ್ಟು ತೃಪ್ತಿ ಮಾಡಬೇಕು. ಸೋತವರಿಗೆ ಸಚಿವ ಸ್ಥಾನ ಕೊಟ್ಟರೆ ಜನರು ತಪ್ಪಾಗಿ ಮಾತನಾಡಿಕೊಳ್ತಾರೆ. ಹಿರಿಯರಿಗೆ ಪಕ್ಷ ಸಂಘಟನೆ ಜವಾಬ್ದಾರಿ ಕೊಡುವ ಬಗ್ಗೆ ಪಕ್ಷದ ನಾಯಕರು ಚರ್ಚಿಸಿದ್ದಾರೆ. ಹಿರಿಯರನ್ನ ಕೈಬಿಟ್ಟು ಹೊಸಬರಿಗೆ ಕೊಡೋ ವಿಚಾರವಿದೆ ಎಂದು ನೆಹರು ಓಲೇಕಾರ ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *