ಕೆ.ಆರ್.ಪುರ ಕ್ಷೇತ್ರದಿಂದ ನಾನೇ ಬಿಜೆಪಿ ಅಭ್ಯರ್ಥಿ: ನಂದೀಶ್ ರೆಡ್ಡಿ

Public TV
1 Min Read
nandiesh reddy

-ಬೇರೆ ಪಕ್ಷದಿಂದ ಬಂದವರಿಗೆ ಟಿಕೆಟ್ ನೀಡಿದ್ರೆ ಸಹಿಸಲ್ಲ

ಬೆಂಗಳೂರು: ಮುಂಬರುವ ಉಪ ಚುನಾವಣೆಯಲ್ಲಿ ಕೆ.ಆರ್.ಪುರ ಕ್ಷೇತ್ರದಿಂದ ನಾನೇ ಬಿಜೆಪಿ ಅಭ್ಯರ್ಥಿ ಎಂದು ತಿಳಿಸುವ ಮೂಲಕ ಮಾಜಿ ಶಾಸಕ ನಂದೀಶ್ ರೆಡ್ಡಿ ಅನರ್ಹ ಶಾಸಕ ಬೈರತಿ ಬಸವರಾಜ್ ಗೆ ಟಾಂಗ್ ನೀಡಿದ್ದಾರೆ.

ಕೆ.ಆರ್.ಪುರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ನಡೆಯುವ ಮರು ಚುನಾವಣೆ ಕುರಿತು ಪ್ರತಿಕ್ರಿಯಿಸಿದರು. ಕೆ.ಆರ್.ಪುರ ಕ್ಷೇತ್ರದಿಂದ ನಾನೇ ಬಿಜೆಪಿ ಅಭ್ಯರ್ಥಿ, ಪಕ್ಷಕ್ಕಾಗಿ ನಾನು ದುಡಿದಿದ್ದೇನೆ. ಒಂದು ವೇಳೆ ನನಗೆ ಟಿಕೆಟ್ ಕೊಡದೆ, ನಮ್ಮ ಪಕ್ಷದ ಬೇರೆಯವರಿಗೆ ಟಿಕೆಟ್ ಕೊಟ್ಟರೂ ನಾನು ಅವರಿಗಾಗಿ ಕಾರ್ಯಕರ್ತರ ಜೊತೆ ಸೇರಿ ಕೆಲಸ ಮಾಡುತ್ತೇನೆ. ಆದರೆ ನಮ್ಮ ಪಕ್ಷದವರನ್ನು ಬಿಟ್ಟು ಬೇರೆ ಪಕ್ಷದಿಂದ ಬಂದವರಿಗೆ ಟಿಕೆಟ್ ಕೊಟ್ಟರೆ ಅವರ ಪರ ಕೆಲಸ ಮಾಡಲು ಕೊಂಚ ಯೋಚಿಸಬೇಕಾಗುತ್ತದೆ. ಕಾರ್ಯಕರ್ತರು ಅವರ ಪರ ಕೆಲಸ ಮಾಡಲು ಇಚ್ಛಿಸುವುದಿಲ್ಲ. ಬಿಜೆಪಿ ನಮ್ಮನ್ನ ಕೈ ಬಿಡಲ್ಲ ಎಂಬ ನಂಬಿಕೆ ಇದೆ. ಕಷ್ಟದ ಪರಿಸ್ಥಿತಿಯಲ್ಲೂ ನಾವು ಪಕ್ಷವನ್ನು ಸಂಘಟನೆ ಮಾಡಿದ್ದೇವೆ. ನನಗೆ ಟಿಕೆಟ್ ಸಿಗುತ್ತೆ ಎಂಬ ವಿಶ್ವಾಸ ಇದೆ. ನಮ್ಮ ನಾಯಕರು ಬೇರೆ ಪಕ್ಷದಿಂದ ಬಂದವರಿಗೆ ಟಿಕೆಟ್ ಕೊಟ್ಟು ನಮಗೆ ಮೋಸ ಮಾಡಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

bairati basavaraj

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ಸಂಭ್ರಮಾಚರಣೆಯಲ್ಲಿ ನಂದೀಶ್ ಅವರು ಭಾಗವಹಿಸಿದ್ದರು. ಇಷ್ಟು ವರ್ಷಗಳಿಂದ ಇದ್ದ ಬೇಡಿಕೆಯನ್ನು ಕೇಂದ್ರ ಕೇವಲ 3 ನಿಮಿಷದಲ್ಲಿ ಬಗೆಹರಿಸಿದೆ. ಭಾರತೀಯರಿಗೆ ಇದು ಬಹಳ ಸಂತೋಷದ ವಿಚಾರ ಎಂದು ಖುಷಿಯನ್ನು ಹಂಚಿಕೊಂಡರು.

Share This Article
Leave a Comment

Leave a Reply

Your email address will not be published. Required fields are marked *