ಕಾರವಾರ: ಹಿರಿಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಗ್ರಹಣ ಸಮಯದಲ್ಲಿ ಸ್ಕೂಬಾ ಡೈವಿಂಗ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬ ಸಮೇತ ಆಗಮಿಸಿ ಮುರಡೇಶ್ವರದ ನೇತ್ರಾಣಿ ನಡುಗಟ್ಟೆಯಲ್ಲಿ ಗ್ರಹಣ ಸಮಯದಲ್ಲಿ ಸ್ಕೂಬಾ ಡೈವಿಂಗ್ ಮಾಡಿದರು.
ನೇತ್ರಾಣಿ ಅಡ್ವೆಂಚರ್ಸ್ ಸಂಸ್ಥೆಯ ತರಬೇತಿದಾರ ಗಣೇಶ್ ಹರಿಕಂತ್ರ ರೋಹಿಣಿ ಸಿಂಧೂರಿ ಹಾಗೂ ಅವರ ಕುಟುಂಬ ಸದಸ್ಯರಿಗೆ ತರಬೇತಿಯನ್ನು ನೀಡಿದರು. ಬಳಿಕ ಗಣೇಶ್ ಹರಿಕಂತ್ರ ಅವರು ರೋಹಿಣಿ ಹಾಗೂ ಅವರ ಕುಟುಂಬಸ್ಥರನ್ನು ನೇತ್ರಾಣಿ ನಡುಗಡ್ಡೆಗೆ ಕರೆದುಕೊಂಡು ಹೋಗಿ ಸ್ಕೂಬಾ ಡೈವಿಂಗ್ ಮಾಡಿಸಿದರು.
ಸುಮಾರು ಅರ್ಧ ಗಂಟೆಗೂ ಅಧಿಕ ಕಾಲ ಸ್ಕೂಬಾ ಡೈವಿಂಗ್ ಮಾಡುವ ಮೂಲಕ ಅಪರೂಪದ ಮತ್ಸ್ಯಗಳನ್ನು ಹಾಗೂ ಹವಳದ ದಂಡೆಗಳನ್ನು ನೋಡಿ ರೋಹಿಣಿ ಸಿಂಧೂರಿ ಸ್ಕೂಬಾ ಡೈವಿಂಗ್ ಚಟುವಟಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.