Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

140 ಕೋಟಿ ಭಾರತೀಯರ ಕನಸು ನನಸು – ಚಾಂಪಿಯ‌ನ್ಸ್‌ಗಳಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ!

Public TV
Last updated: March 9, 2025 11:11 pm
Public TV
Share
4 Min Read
team india 01 3
SHARE

– 25 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ಭಾರತ

ದುಬೈ: ಕೊನೆಗೂ 140 ಕೋಟಿ ಭಾರತೀಯರ ಕನಸು ನನಸಾಗಿದೆ. ನ್ಯೂಜಿಲೆಂಡ್ (New Zealand) ವಿರುದ್ಧ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ 4 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಭಾರತ 3ನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ (Champions Trophy) ಕಿರೀಟ ಮುಡಿಗೇರಿಸಿಕೊಂಡಿದೆ. 2024ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟಿ20 ವಿಶ್ವಕಪ್ ಗೆದ್ದಿದ್ದ ಭಾರತಕ್ಕಿದು ಸತತ 2ನೇ ಐಸಿಸಿ ಟ್ರೋಫಿ ಆಗಿರುವುದು ವಿಶೇಷ.

rohit 02

ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿತ್ತು. ಸ್ಪರ್ಧಾತ್ಮಕ ಮೊತ್ತದ ಗುರಿ ಬೆನ್ನಟ್ಟಿದ ಭಾರತ (Team India) 49 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿ ಗೆಲುವು ಸಾಧಿಸಿತು. ಸಂಘಟಿತ ಬೌಲಿಂಗ್, ಬ್ಯಾಟಿಂಗ್ ಪ್ರದರ್ಶನದೊಂದಿಗೆ 2000 ಇಸವಿಯಲ್ಲಿ ಕಿವೀಸ್ ವಿರುದ್ಧ ಫೈನಲ್ ಸೋಲಿಗೆ ಸೇಡು ತೀರಿಸಿಕೊಂಡಿತು.

ind vs nz 2

1998-99ರ ಚೊಚ್ಚಲ ಆವೃತ್ತಿಯಲ್ಲೇ ಚೋಕರ್ಸ್ ದಕ್ಷಿಣ ಆಫ್ರಿಕಾ ಟ್ರೋಫಿ ಮುಡಿಗೇರಿಸಿಕೊಂಡಿತ್ತು. 2000-01ರ ಆವೃತ್ತಿಯಲ್ಲಿ ನ್ಯೂಜಿಲೆಂಡ್ ಟ್ರೋಫಿ ಗೆದ್ದುಕೊಂಡಿತ್ತು. ಆದ್ರೆ 2002-03ರ ಆವೃತ್ತಿಯಲ್ಲಿ 2 ದಿನ ಫೈನಲ್ ನಡೆದರೂ ಮಳೆಗೆ ಪಂದ್ಯ ಬಲಿಯಾಯ್ತು. ಆದ್ದರಿಂದ ಭಾರತ ಮತ್ತು ಶ್ರೀಲಂಕಾವನ್ನ ಜಂಟಿಯಾಗಿ ಚಾಂಪಿಯನ್ಸ್ ಎಂದು ಘೋಷಿಸಲಾಯಿತು. ಇನ್ನೂ 2004ರಲ್ಲಿ ವೆಸ್ಟ್ ಇಂಡೀಸ್, 2006-07, 2009-10ರಲ್ಲಿ ಆಸ್ಟ್ರೇಲಿಯಾ, 2013ರಲ್ಲಿ ಭಾರತ, 2017ರಲ್ಲಿ ಪಾಕಿಸ್ತಾನ ಚಾಂಪಿಯನ್ ಆಗಿತ್ತು. 2000, 2017ರಲ್ಲಿ ಭಾರತ ಫೈನಲ್ ತಲುಪಿದ್ರೂ ಟ್ರೋಫಿ ಗೆಲ್ಲುವ ಅವಕಾಶ ಕಳೆದುಕೊಂಡಿತ್ತು. 2000 ಇಸವಿಯಲ್ಲಿ ಕಿವೀಸ್ ವಿರುದ್ಧ, 2017ರಲ್ಲಿ ಪಾಕಿಸ್ತಾನದ ವಿರುದ್ಧ ಫೈನಲ್‌ನಲ್ಲಿ ಸೋತು ನಿರಾಸೆ ಅನುಭವಿಸಿತ್ತು. ಸದ್ಯ 25 ವರ್ಷಗಳ ಬಳಿಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಿವೀಸ್ ವಿರುದ್ಧ ಗೆದ್ದು ಭಾರತ ಸೇಡು ತೀರಿಸಿಕೊಂಡಿದೆ.

team india

ದಾಖಲೆಯ ಶತಕದ ಜೊತೆಯಾಟ:
ಚೇಸಿಂಗ್ ಆರಂಭಿಸಿದ ಟೀಂ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ (Rohit Sharma), ಶುಭಮನ್ ಗಿಲ್ ಸ್ಫೋಟಕ ಇನ್ನಿಂಗ್ಸ್ ಕಟ್ಟುವಲ್ಲಿ ಯಶಸ್ವಿಯಾದರು. 112 ಎಸೆತಗಳಲ್ಲಿ ಈ ಜೋಡಿ 105 ರನ್‌ಗಳ ಜೊತೆಯಾಟ ನೀಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲೇ ಫೈನಲ್ ಪಂದ್ಯದಲ್ಲಿ ಶತಕದ ಜೊತೆಯಾಟ ಎಂಬ ದಾಖಲೆಗೂ ರೋಹಿತ್ ಗಿಲ್ ಪಾತ್ರರಾದರು. ಗಿಲ್ 50 ಎಸೆತಗಳಲ್ಲಿ 31 ರನ್ ಗಳಿಸಿ ಔಟಾದರು. ಈ ಬೆನ್ನಲ್ಲೇ ವಿರಾಟ್ ಕೊಹ್ಲಿ ಕೇವಲ 1 ರನ್ ಗಳಿಸಿ ಎಲ್‌ಬಿಡಬ್ಲ್ಯೂಗೆ ತುತ್ತಾದರು. ಆ ಬಳಿಕವೂ ಕಿವೀಸ್ ಬೌಲರ್‌ಗಳನ್ನು ಬೆಂಡೆತ್ತಿದ ರೋಹಿತ್ 76 ರನ್ (83 ಎಸೆತ, 3 ಸಿಕ್ಸರ್, 7 ಬೌಂಡರಿ) ಗಳಿಸಿ ಪೆವಿಲಿಯನ್‌ಗೆ ಮರಳಿದರು.

kl rahul

ಇನ್ನಿಂಗ್ಸ್‌ ಕಟ್ಟಿದ ಶ್ರೇಯಸ್‌:
26.1 ಓವರ್‌ಗಳಲ್ಲಿ 122 ರನ್‌ಗಳಿಗೆ ಭಾರತ 3 ವಿಕೆಟ್‌ ಕಳೆದುಕೊಂಡಿದ್ದಾಗ ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಇನ್ನಿಂಗ್ಸ್‌ ಕಟ್ಟುವಲ್ಲಿ ಶ್ರೇಯಸ್‌ ಅಯ್ಯರ್‌ ಯಶಸ್ವಿಯಾದರು. 62 ಎಸೆತಗಳಲ್ಲಿ 48 ರನ್‌ (2 ಸಿಕ್ಸರ್‌, 2 ಬೌಂಡರಿ) ಬಾರಿಸಿದ್ರು. ಇದೇ ವೇಳೆ ಶ್ರೇಯಸ್‌ಗೆ ಜೊತೆಯಾಗಿ ಎಚ್ಚರಿಕೆಯ ಆಟವಾಡಿದ ಅಕ್ಷರ್‌ ಪಟೇಲ್‌ 40 ಎಸೆತಗಳಲ್ಲಿ 29 ರನ್‌ (1 ಸಿಕ್ಸರ್‌, 1 ಬೌಂಡರಿ) ಕೊಡುಗೆ ನೀಡಿದರು.

ind vs nz 1

ರಾಹುಲ್‌ ಎಚ್ಚರಿಕೆಯ ಆಟ:
ಇನ್ನೂ ಲೀಗ್‌ ಸುತ್ತಿನ ಪಂದ್ಯಗಳಲ್ಲಿ ಕಳಪೆ ಪ್ರದರ್ಶನದಿಂದ ಭಾರೀ ಟೀಕೆಗೆ ಗುರಿಯಾಗಿದ್ದ ಕನ್ನಡಿಗ ಕೆ.ಎಲ್‌ ರಾಹುಲ್‌ ಸೆಮಿಫೈನಲ್‌ನಂತೆ ಫೈನಲ್‌ ಪಂದ್ಯದಲ್ಲೂ ಎಚ್ಚರಿಕೆಯ ಆಟವಾಡಿದರು. 33 ಎಸೆತಗಳಲ್ಲಿ 1 ಸಿಕ್ಸರ್‌, 1 ಬೌಂಡರಿ ಸಹಿತ 34 ರನ್‌ ಗಳಿಸಿ ಟೀಂ ಇಂಡಿಯಾ ಗೆಲುವಿಗೆ ನೆರವಾದರು. ಇದರೊಂದಿಗೆ ಪಾಂಡ್ಯ ಜವಾಬ್ದಾರಿಯುತ 18 ರನ್‌, ರವೀಂದ್ರ ಜಡೇಜಾ 3 ರನ್‌ಗಳ ಕೊಡುಗೆ ನೀಡಿದರು. ಹೆಚ್ಚುವರಿಯಾಗಿ 8 ರನ್‌ ತಂಡಕ್ಕೆ ಸೇರ್ಪಡೆಯಾಯ್ತು.

ನ್ಯೂಜಿಲೆಂಡ್‌ ಪರ ಮಿಚೆಲ್‌ ಸ್ಯಾಂಟ್ನರ್‌, ಮೈಕಲ್‌ ಬ್ರೇಸ್‌ವೆಲ್‌ ತಲಾ 2 ವಿಕೆಟ್‌ ಕಿತ್ತರೆ, ಕೈಲ್‌ ಜೇಮಿಸನ್‌, ರಚಿನ್‌ ರವೀಂದ್ರ ತಲಾ ಒಂದು ವಿಕೆಟ್‌ ಪಡೆದರು.

new zealand 2

ಇದಕ್ಕೂ ಮುನ್ನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಮಿಚೆಲ್ ಸ್ಯಾಂಟ್ನರ್ ನಾಯಕತ್ವದ ಕಿವೀಸ್, ಫೀಲ್ಡಿಂಗ್ ಮಾಡುವ ಅವಕಾಶವನ್ನು ಭಾರತಕ್ಕೆ ಬಿಟ್ಟುಕೊಟ್ಟಿತು. ಆರಂಭಿಕರಾಗಿ ಕಣಕ್ಕಿಳಿದ ರಚಿನ್ ರವೀಂದ್ರ ಹಾಗೂ ವಿಲ್ ಯಂಗ್ ಜೋಡಿ ಸ್ಪೋಟಕ ಇನ್ನಿಂಗ್ಸ್ ಕಟ್ಟುವ ಪ್ರಯತ್ನಕ್ಕೆ ಮುಂದಾದರು. ಅಂತೆಯೇ ಮೊದಲ ವಿಕೆಟ್‌ಗೆ 47 ಎಸೆತಗಳಲ್ಲಿ 57 ರನ್‌ಗಳ ಜೊತೆಯಾಟ ನೀಡಿತ್ತು. ಆದ್ರೆ ವಿಲ್ ಯಂಗ್ ವಿಕೆಟ್ ಬೀಳುತ್ತಿದ್ದಂತೆ ಅಗ್ರ ಕ್ರಮಾಂಕದ ಆಟಗಾರರು ಪೆವಿಲಿಯನ್ ಪರೇಡ್ ನಡೆಸಿದರು. ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ ಬ್ಯಾಕ್ ಟು ಬ್ಯಾಕ್ ವಿಕೆಟ್ ಒಪ್ಪಿಸಿದ್ರು.

ಜೀವ ತುಂಬಿದ ಮಿಚೆಲ್, ಫಿಲಿಪ್ಸ್ ಜೊತೆಯಾಟ:
ಇನ್ನೂ 23.2 ಓವರ್‌ಗಳಲ್ಲಿ 108 ರನ್‌ಗಳಿಗೆ ಪ್ರಮುಖ ನಾಲ್ಕು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಕಿವೀಸ್‌ಗೆ ಗ್ಲೇನ್ ಫಿಲಿಪ್ಸ್ ಹಾಗೂ ಡೇರಿಲ್ ಮಿಚೆಲ್ ಅವರ ಜೊತೆಯಾಟ ಜೀವ ತುಂಬಿತು. ಟೀಂ ಇಂಡಿಯಾ ಸ್ಪಿನ್ನರ್‌ಗಳ ಎದುರು ರನ್ ಕದಿಯಲು ತಿಣುಕಾಡಿದ ಈ ಜೋಡಿ 87 ಎಸೆತಗಳಲ್ಲಿ 57 ರನ್ ಗಳಿಸಿತು. ಇದರೊಂದಿಗೆ ಮಧ್ಯಮ ಕ್ರಮಾಂಕದಲ್ಲಿ ಟಾಮ್ ಲಾಥಮ್, ಮಿಚೆಲ್ ಜೋಡಿಯಿಂದ 33 ರನ್ ಹಾಗೂ ಮೈಕಲ್ ಬ್ರೇಸ್‌ವೆಲ್ ಜೊಡಿಯಿಂದ 46 ರನ್‌ಗಳ ಸಣ್ಣ ಪ್ರಮಾಣದ ಜೊತೆಯಾಟ ಕಿವೀಸ್ ತಂಡ 200 ರನ್‌ಗಳ ಗಡಿದಾಟಲು ನೆರವಾಯಿತು.

ind vs nz 2

ಕಿವೀಸ್ ಪರ ಡೇರಿಲ್ ಮಿಚೆಲ್ 63 ರನ್ (101 ಎಸೆತ, 3 ಬೌಂಡರಿ), ಮೈಕಲ್ ಬ್ರೇಸ್‌ವೆಲ್ ಅಜೇಯ 53 ರನ್ (40 ಎಸೆತ, 2 ಸಿಕ್ಸರ್, 3 ಬೌಂಡರಿ), ರಚಿನ್ ರವೀಂದ್ರ 37 ರನ್, ಗ್ಲೆನ್ ಫಿಲಿಪ್ಸ್ 34 ರನ್, ವಿಲ್ ಯಂಗ್ 15 ರನ್, ಕೇನ್ ವಿಲಿಯಮ್ಸನ್ 11 ರನ್, ಟಾಮ್ ಲಾಥಮ್ 14 ರನ್, ಮಿಚೆಲ್ ಸ್ಯಾಂಟ್ನರ್ 8 ರನ್, ಕೊಡುಗೆ ನೀಡಿದರು.

ಟೀಂ ಇಂಡಿಯಾ ಪರ ವರುಣ್ ಚಕ್ರವರ್ತಿ, ಕುಲ್‌ದೀಪ್ ಯಾದವ್ ತಲಾ 2 ವಿಕೆಟ್ ಕಿತ್ತರೆ, ಮೊಹಮ್ಮದ್ ಶಮಿ, ರವೀಂದ್ರ ಜಡೇಜಾ ತಲಾ ಒಂದೊAದು ವಿಕೆಟ್ ಪಡೆದು ಮಿಂಚಿದರು.

TAGGED:Daryl MitchellHardik PandyaKL RahulKuldeep YadavMitchell SantnerRachin RavindraRohit SharmaShreyas Iyervarun chakravarthyvirat kohliಕುಲ್‍ದೀಪ್ ಯಾದವ್ಟೀಂ ಇಂಡಿಯಾಡೇರಿಲ್ ಮಿಚೆಲ್ನ್ಯೂಜಿಲೆಂಡ್ಮಿಚೆಲ್‌ ಸ್ಯಾಂಟ್ನರ್‌ರೋಹಿತ್ ಶರ್ಮಾವರುಣ್ ಚಕ್ರವರ್ತಿ
Share This Article
Facebook Whatsapp Whatsapp Telegram

Cinema News

vijay raghavendra 2
ವಿಷ್ಣುವರ್ಧನ್ ಸ್ಮಾರಕ ನೆಲಸಮ: ವಿಜಯ್ ರಾಘವೇಂದ್ರ ಬೇಸರ
Cinema Latest Top Stories
Dvitva Web Series Pawan Kumar
ಅಪ್ಪುಗೆ ಮಾಡಿದ ದ್ವಿತ್ವ ಕಥೆ ವೆಬ್ ಸಿರೀಸ್ ಆಗಲಿದೆ: ಪವನ್‌ಕುಮಾರ್
Cinema Latest Top Stories
Vishnuvardhan Memorial 1
ವಿಷ್ಣು ಸಮಾಧಿ ತೆರವು; ಹೈಕೋರ್ಟ್‌ಗೆ ಪುನರ್‌ ಪರಿಶೀಲನಾ ಅರ್ಜಿ ಸಲ್ಲಿಕೆ
Cinema Court Latest Sandalwood Top Stories
Gulshan Devaiah kantara chapter 1
ಹೊಂಬಾಳೆ ಫಿಲಮ್ಸ್‌ನ ‘ಕಾಂತಾರ ಚಾಪ್ಟರ್ 1’ ನಲ್ಲಿ ಕುಲಶೇಖರನ ಪಾತ್ರದಲ್ಲಿ ಗುಲ್ಶನ್ ದೇವಯ್ಯ
Cinema Latest Top Stories
Darshan 8
ಸೆಲ್‌ನಲ್ಲೇ ವಾಕಿಂಗ್, ತೆಳುವಾದ ಬೆಡ್ ಮೇಲೆ ಸ್ಲೀಪಿಂಗ್ – ರಾಜಾತಿಥ್ಯ ಇಲ್ದೇ `ಡಿ’ ಗ್ಯಾಂಗ್ ಫುಲ್ ಸೈಲೆಂಟ್
Bengaluru City Cinema Karnataka Latest Top Stories

You Might Also Like

PM Modi Wang Yi
Latest

ಪ್ರಧಾನಿ ಮೋದಿ ಭೇಟಿಯಾದ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ

Public TV
By Public TV
5 hours ago
kiadb farmers protest
Bengaluru Rural

KIADB ಭೂಸ್ವಾಧೀನ ವಿರೋಧಿಸಿ ಆನೇಕಲ್‌ನಲ್ಲಿ ರೈತರಿಂದ ಬೃಹತ್ ಪ್ರತಿಭಟನೆ

Public TV
By Public TV
5 hours ago
siddaramaiah cabinet meeting
Bengaluru City

ದಲಿತ ಸಮುದಾಯ 3 ಗುಂಪಾಗಿ ವರ್ಗೀಕರಿಸಿ ಮೀಸಲಾತಿ ಹಂಚಿಕೆ ಜಾರಿಗೆ ಸಂಪುಟ ನಿರ್ಧಾರ

Public TV
By Public TV
6 hours ago
AI Image
Belgaum

ಧಾರಾಕಾರ ಮಳೆ – ಆ.20ರಂದು ಯಾವ್ಯಾವ ಜಿಲ್ಲೆಯ ಶಾಲೆಗೆ ರಜೆ?

Public TV
By Public TV
6 hours ago
AI Image
Latest

ಕೇಂದ್ರದಿಂದ `ಆನ್‌ಲೈನ್ ಗೇಮಿಂಗ್ ತಡೆ’ ಮಸೂದೆಗೆ ಅನುಮೋದನೆ

Public TV
By Public TV
6 hours ago
DK Shivakumar 5
Bengaluru City

ಕಳಸಾ ಬಂಡೂರಿ ಯೋಜನೆ ಮೂಲಕ ನಮ್ಮ ಪಾಲಿನ ನೀರು ಬಳಸಲು ರಾಜ್ಯಕ್ಕೆ ಸಂಪೂರ್ಣ ಹಕ್ಕಿದೆ: ಡಿಕೆಶಿ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?