Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಸರ್ಕಾರದ ಹಗರಣಗಳ ಬಗ್ಗೆ ಸಿನಿಮಾ ಮಾಡಿದ್ರೆ ಬಾಕ್ಸ್ಆಫೀಸ್ ಹಿಟ್ ಆಗುತ್ತೆ: ಸಿ.ಸಿ ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾಂಗ್ರೆಸ್ ಸರ್ಕಾರದ ಹಗರಣಗಳ ಬಗ್ಗೆ ಸಿನಿಮಾ ಮಾಡಿದ್ರೆ ಬಾಕ್ಸ್ಆಫೀಸ್ ಹಿಟ್ ಆಗುತ್ತೆ: ಸಿ.ಸಿ ಪಾಟೀಲ್

Districts

ಕಾಂಗ್ರೆಸ್ ಸರ್ಕಾರದ ಹಗರಣಗಳ ಬಗ್ಗೆ ಸಿನಿಮಾ ಮಾಡಿದ್ರೆ ಬಾಕ್ಸ್ಆಫೀಸ್ ಹಿಟ್ ಆಗುತ್ತೆ: ಸಿ.ಸಿ ಪಾಟೀಲ್

Public TV
Last updated: November 1, 2024 3:43 pm
Public TV
Share
3 Min Read
c c patil
SHARE

ಗದಗ: ಕಾಂಗ್ರೆಸ್ (Congress) ಸರ್ಕಾರದ ಹಗರಣಗಳ ಬಗ್ಗೆ ಸಿನೆಮಾ ಮಾಡಿದ್ರೆ ಬಾಕ್ಸ್ಆಫೀಸ್ ಹಿಟ್ ಆಗುತ್ತದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ (BJP) ನರಗುಂದ ಶಾಸಕ ಸಿ.ಸಿ ಪಾಟೀಲ್ (C C Patil) ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದ ಕಚೇರಿಯಲ್ಲಿ ಮಾತನಾಡಿದ ಅವರು, ಹಗರಣಗಳ ಸುಳಿಯಲ್ಲಿ ಸರ್ಕಾರ ಸಿಲುಕಿದೆ. ತನ್ನ ಹಗರಣಗಳು ಬೆಳಕಿಗೆ ಬರಬಾರದೆಂದು ಒಂದಲ್ಲ ಒಂದು ಕಥೆ ಬಿಡುತ್ತಿದೆ. ಮೊದಲು ಹುಲಿ ಉಗುರಿನದು ಬಿಟ್ಟರು. ವಾಲ್ಮೀಕಿ ಹಗರಣ ಬಂದಾಗ ದರ್ಶನ್ ವಿಚಾರ ಬಂತು. ಈಗ ಮುಡಾ ಹಗರಣ ಬಂದಾಗ ವಕ್ಫ್ ಬೋರ್ಡ್ ಬಂದಿದೆ. ಹಗರಣಗಳನ್ನ ಮುಚ್ಚಿಹಾಕಲು ಒಂದಿಲ್ಲೊಂದು ದಂತಕಥೆಗಳನ್ನು ತೇಲಿಬಿಡುತ್ತಾರೆ. ಆಡಳಿತದ ವೈಫಲ್ಯತೆ ಕಡೆಗೆ ರಾಜ್ಯದ ಜನರ ಗಮನ ಹೋಗದ ಹಾಗೆ ನೋಡುತ್ತಿದ್ದಾರೆ. ಸಿಎಂ ಅವರು ಗಾಳಿ ಸುದ್ದಿ ಬಿಡುವುದರಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಸಿದ್ದಗಂಗಾ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ಹೆಚ್‍ಡಿಕೆ

ನಿಮ್ಮ ಆಡಳಿತ ನಿಮಗೆ ತೃಪ್ತಿ ತರುತ್ತಿದೆಯಾ ಎಂದು ಆತ್ಮಸಾಕ್ಷಿಯಾಗಿ ಸಿಎಂ ಹೇಳಿ. 2 ವರ್ಷದಲ್ಲಿ ರಾಜ್ಯ ಏನು ಅಭಿವೃದ್ಧಿ ಆಗಿದೆ. ಗ್ಯಾರಂಟಿ ಕೊಟ್ಟಿದ್ದೇನೆ ಅಂತೀರಾ ಅದಕ್ಕೆ ವಿರೋಧ ಇಲ್ಲ. ಅಭಿವೃದ್ಧಿ ಏನು ಮಾಡಿದ್ದೀರಿ? ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಕರೆದು ಶಾಸಕರ ಅಭಿಪ್ರಾಯ ಕೇಳಿ. ಆಗ ನಿಮ್ಮ ನೈಜ ಬಣ್ಣ ಗೊತ್ತಾಗುತ್ತೆ. ಸಿಎಂ ಡಿಸಿಎಂಗೆ ಹೇಳೋಕೆ ಇಚ್ಚೆ ಪಡುತ್ತೇನೆ. ಕನ್ನಡ ರಾಜ್ಯೋತ್ಸವದ ಬಗ್ಗೆ ಕೇವಲ ಡಿಸಿಎಂ ಜಾಹೀರಾತು ಬರುತ್ತದೆ. ಸಿಎಂದು ಹೆಚ್ಚು ಜಾಹಿರಾತು ಇಲ್ಲವೇ ಇಲ್ಲ. ಏನು ವಿಚಿತ್ರ ಸರ್ಕಾರ. ನಾನು 4ನೇ ಬಾರಿ ಶಾಸಕ, ನಾನಂತೂ ಇಂತಹ ಸರ್ಕಾರ ನೋಡಿದ್ದೇ ಇಲ್ಲ ಎಂದರು. ಇದನ್ನೂ ಓದಿ: ಬಿಜಿಎಸ್ ಆಸ್ಪತ್ರೆ ತಲುಪಿದ ದರ್ಶನ್‌ – ಸರ್ಜರಿ ಕೊನೇ ಆಯ್ಕೆಯಾಗಿ ಪರಿಗಣಿಸುವಂತೆ ಕುಟುಂಬಸ್ಥರ ಮನವಿ

ಇನ್ನು ವಕ್ಫ್ ಆಸ್ತಿ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಮಾತನಾಡಿ, ಪಂಚಮಸಾಲಿ ಕೂಡಲಸಂಗಮ ಪೀಠ, ಹರಿಹರ ಪಂಚಮಸಾಲಿ ಪೀಠ ವಕ್ಫ್ ಬೋರ್ಡ್ ಅನ್ನುತ್ತಾರೋ ಏನೋ. ವಕ್ಫ್ ಬೋರ್ಡ್ ವಿಚಾರಕ್ಕೆ ಕಾಂಗ್ರೆಸ್‌ಗೆ ಮತ ಹಾಕಿದ ಹಿಂದೂಗಳು ವಿಚಾರ ಮಾಡಬೇಕು. ಇಂದು ಯಾರದೋ ಹೊಲಕ್ಕೆ ಬಂದಿದೆ, ನಾಳೆ ನನ್ನ ಮನೆಗೆ ಬರಲ್ಲ ಅನ್ನುವ ಗ್ಯಾರಂಟಿ ಏನು? ನಮ್ಮ ಮಠಕ್ಕೆ ಬರಲ್ಲ ಅನ್ನೋ ಗ್ಯಾರಂಟಿ ಏನಿದೆ? ಕೂಡಲಸಂಗಮ ಪಂಚಮಸಾಲಿ ಪೀಠಾನೂ ವಕ್ಫ್ ಬೋರ್ಡ್ ಅಂತಾರೋ ಏನೋ? ಕಾಂಗ್ರೆಸ್ ತುಷ್ಟೀಕರಣ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಸಾವಿರಾರು ಎಕರೆ ಜಮೀನು ಹಿಂದಿನ ದಿನ ರೈತರ ಹೆಸರಲ್ಲಿತ್ತು. ಮರುದಿನ ವಕ್ಫ್ ಬೋರ್ಡ್ ಹೆಸರಿನಲ್ಲಿ ಪಹಣಿ ಆಗಿದೆ. ಸಚಿವ ಜಮೀರ್ ಅಹ್ಮದ್ ವಿಜಯಪುರಕ್ಕೆ ಭೇಟಿ ಕೊಟ್ಟು ಬಂದ 24 ಗಂಟೆಯೊಳಗೆ ಸಾವಿರಾರು ಎಕರೆ ಜಮೀನನ್ನು ವಕ್ಫ್ ಬೋರ್ಡ್‌ಗೆ ವರ್ಗಾವಣೆ ಮಾಡಿದರು. ಇದಕ್ಕೆಲ್ಲಾ ಕಾರಣರಾದ ಅಲ್ಲಿನ ಜಿಲ್ಲಾಧಿಕಾರಿ ಬೂಬಾಲನ್ ಮೇಲೆ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ರಾಜ್ಯ ಸರ್ಕಾರದ ತೊಳಲಾಟವನ್ನು ಬಹಿರಂಗವಾಗಿ ಹೇಳಿದ ಡಿಕೆಶಿಗೆ ಅಭಿನಂದನೆ: ವಿ.ಸೋಮಣ್ಣ ವ್ಯಂಗ್ಯ

ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ಹಿನ್ನೆಲೆ ಪುನಃ ರೈತರ ಖಾತೆಗೆ ವರ್ಗಾವಣೆ ಮಾಡಿದ್ದಾರೆ. ಈ ರಾಜ್ಯದಲ್ಲಿ ಏನು ನಡೆಯುತ್ತಿದೆ. ಹಲವಾರು ಮಂತ್ರಿಗಳು ಬಿಜೆಪಿಯವರ ಹುನ್ನಾರ ಅನ್ನುತ್ತಾರೆ. ಬಿಜೆಪಿಯವರು ಪಹಣಿ ತಿದ್ದಿಸಿದ್ರಾ? ಡಿಸಿ ಬಿಜೆಪಿಯವರ ಮಾತು ಕೇಳುತ್ತಾನಾ? ಕಾಂಗ್ರೆಸ್‌ನವರ ಮಾತು ಕೇಳುತ್ತಾನಾ?ಜಿಲ್ಲಾಧಿಕಾರಿಗೆ ತನ್ನ ಕರ್ತವ್ಯದ ಅರಿವಿರಬೇಕಿತ್ತು. ಸರ್ಕಾರ ಹೇಳಿದ್ದನ್ನು ಕೇಳಲು ಜಿಲ್ಲಾಧಿಕಾರಿ ಇರಲ್ಲ, ಅವರು ಐಎಎಸ್ ಕೇಡರ್ ಅಧಿಕಾರಿ. ಈ ದೇಶದ ಕಾನೂನಿನಲ್ಲಿ ಕೆಲಸ ಮಾಡಬೇಕಾಗುತ್ತದೆ. ಆ ಜಿಲ್ಲಾಧಿಕಾರಿ ಮೇಲೂ ಕ್ರಮ ಆಗಬೇಕೆಂದು ಹೇಳಿದರು. ಇದನ್ನೂ ಓದಿ: ಬೆನ್ನುನೋವಿನ ಚಿಕಿತ್ಸೆಗಾಗಿ ಬಿಜಿಎಸ್ ಆಸ್ಪತ್ರೆಯತ್ತ ದರ್ಶನ್ – ಆಸ್ಪತ್ರೆ ಸುತ್ತಲೂ ಬಿಗಿ ಭದ್ರತೆ

ವಕ್ಫ್ ಬೋರ್ಡ್ (Waqf Board) ಆಸ್ತಿ ಸಲುವಾಗಿ ಬಸವಣ್ಣನ ಕಾಲದ ಸಿಂಧಗಿಯ ವಿರಕ್ತಮಠ, ಬೀರಲಿಂಗೇಶ್ವರ ಮಠ ಅದೂ ವಕ್ಫ್ ಎಂದು ಮಾಡಿದ್ದಾರೆ. ಬೀರಲಿಂಗೇಶ್ವರ ಮಠ ವಕ್ಫ್ ಎಂದು ಗೊತ್ತಾದ ಮೇಲೆ ಮುಖ್ಯಮಂತ್ರಿ ಕಣ್ಣು ತೆರೆದರು ಅನಿಸುತ್ತದೆ. ಇದೊಂದು ತುಘಲಕ್ ಸರ್ಕಾರ ಅಂದ್ರೆ ತಪ್ಪಲ್ಲ. ಮತಗಳಿಕೆಗಾಗಿ ಯೋಜನೆ ಕೊಡಲಿ, ಮಾಡಲಿ. ಆದರೆ ಒಂದು ಸಮಾಜ, ವರ್ಗವನ್ನ ತುಳಿದು ಇನ್ನೊಂದು ಸಮಾಜವನ್ನು ಓಲೈಕೆ ಮಾಡೋದು ಎಷ್ಟು ಸಮಂಜಸ? ಸಿಎಂ ಆಗೋವಾಗ ಈ ನಾಡಿನ ಕಾನೂನಿಗನುಗುಣವಾಗಿ ಕೆಲಸ ಮಾಡುತ್ತೇನೆ ಎಂದು ಪ್ರಮಾಣ ವಚನ ತೆಗೆದುಕೊಳ್ಳುತ್ತೀರಿ. ಇದೇನಾ ನಿಮ್ಮ ಕಾನೂನು? ಇಂತಹ ಬೇಜವಾಬ್ದಾರಿ ಆಡಳಿತ ಕರ್ನಾಟಕದ ಜನತೆ ನೋಡಲಿಲ್ಲ. ಗೊಂದಲದಲ್ಲಿ ಇರೋದಕ್ಕಿಂತ ವಿಧಾನಸಭೆ ವಿಸರ್ಜನೆ ಮಾಡಿ ಚುನಾವಣೆಗೆ ಹೋಗೋದು ಸೂಕ್ತ. ಮರು ಜನಾದೇಶ ಪಡೆಯೋದು ಸೂಕ್ತ ಎಂದು ಹರಿಹಾಯ್ದರು.  ಇದನ್ನೂ ಓದಿ: ಮಹಿಳೆಯನ್ನ ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟು ಹಾಕಿದ ದುಷ್ಕರ್ಮಿಗಳು

TAGGED:bjpC. C. PatilcongressGadagaWaqf Boardಕಾಂಗ್ರೆಸ್ಗದಗಬಿಜೆಪಿವಕ್ಫ್ ಬೋರ್ಡ್ಸಿ.ಸಿ.ಪಾಟೀಲ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Elephant runs amok in Angamaly ernakulam tramples driver to death
Latest

ಮದವೇರಿದ ಆನೆಯ ಅಟ್ಟಹಾಸಕ್ಕೆ ಚಾಲಕ ಬಲಿ – ರಣರಂಗವಾದ ದೇವಸ್ಥಾನದ ಆವರಣ

Public TV
By Public TV
7 minutes ago
hyderabad techie 300546490 16x9 0 1
Crime

ಪತ್ನಿಗೆ ಹಲವರ ಜೊತೆ ಅನೈತಿಕ ಸಂಬಂಧ, ವಿಡಿಯೋ ವೈರಲ್‌ – 19 ಪುಟ ಡೆತ್‌ನೋಟ್‌ ಬರೆದಿಟ್ಟು ಟೆಕ್ಕಿ ಆತ್ಮಹತ್ಯೆ

Public TV
By Public TV
1 hour ago
Water crisis in Banahatti Gadag Village Panchayat office vacated besieged with cattle
Districts

ಬನಹಟ್ಟಿಯಲ್ಲಿ ನೀರಿನ ಹಾಹಾಕಾರ: ಗ್ರಾ.ಪಂ ಕಚೇರಿಗೆ ಖಾಲಿ ಕೊಡ, ಜಾನುವಾರುಗಳೊಂದಿಗೆ ಮುತ್ತಿಗೆ

Public TV
By Public TV
2 hours ago
Pawan Khera
Court

ಬಂಧನ ಭೀತಿಯಿಂದ ಪಾರು – ಪವನ್ ಖೇರಾಗೆ ಸುಪ್ರೀಂ ಜಾಮೀನು

Public TV
By Public TV
2 hours ago
Untitled 1 copy 1
Crime

ಪ್ರೀತಿ ಹೆಸರಲ್ಲಿ ವಂಚನೆ ಆರೋಪ – ಕಾಂಗ್ರೆಸ್‌ ಮುಖಂಡ ಮದನ್‌ ರಾಜ್‌ ವಿರುದ್ಧ ದೂರು

Public TV
By Public TV
2 hours ago
ಸಾಂದರ್ಭಿಕ ಚಿತ್ರ
Latest

24 ಗಂಟೆಯಲ್ಲಿ ಇಸ್ರೇಲಿಗೆ ಅಮೆರಿಕದಿಂದ ಬಂತು 6,500 ಟನ್ ಯುದ್ಧಸಾಮಗ್ರಿ – ಮತ್ತೆ ಯುದ್ಧ ಆರಂಭ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?