ಲಿಂಗಾಯತರ ಬಗ್ಗೆ ಕಾಳಜಿ ಇದ್ದವರು ಜನಾಂದೋಲನ ಕೈಗೊಳ್ಳಲಿ: ಜಗದೀಶ್ ಶೆಟ್ಟರ್ ಸವಾಲು

Public TV
1 Min Read
jadeesh shetter

ಹುಬ್ಬಳ್ಳಿ: ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಕಾಳಜಿ ಇರುವವರು ಈಗ ಜನಾಂದೋಲನ ಹೋರಾಟಕ್ಕೆ ಮುಂದಾಗಲಿ. ರಾಜಕೀಯ ಉದ್ದೇಶಕ್ಕಾಗಿ ಹೋರಾಟ ಮಾಡಿ ಸಮಾಜದಲ್ಲಿ ಒಡಕು ತಂದಿಟ್ಟರು ಎಂದು ಶಾಸಕ ಜಗದೀಶ್ ಶೆಟ್ಟರ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಭಾನುವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಲಿಂಗಾಯತ ಹಾಗೂ ವೀರಶೈವ ಲಿಂಗಾಯತ ಒಂದೇ. ಚುನಾವಣೆ ಹಿನ್ನೆಲೆಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟಕ್ಕೆ ಕೆಲವರು ಮುಂದಾದರು. ಅಂತವರಿಗೆ ಜನರು ಚುನಾವಣೆಯ ಫಲಿತಾಂಶದಲ್ಲಿ ತಕ್ಕ ಪಾಠ ಕಲಿಸಿದ್ದಾರೆ. ಲಿಂಗಾಯತರ ಬಗ್ಗೆ ಕಾಳಜಿ ಇದ್ದವರು ಈಗ ಹೋರಾಟಕ್ಕೆ ಇಳಿಯಲಿ ಎಂದು ಸವಾಲು ಹಾಕಿದರು.

ಪ್ರತ್ಯೇಕ ಲಿಂಗಾಯತ ಧರ್ಮದ ಪ್ರಸ್ತಾವವನ್ನು ಕೇಂದ್ರ ಸರ್ಕಾರ ಯಾವ ಕಾರಣಕ್ಕೆ ವಾಪಸ್ ಕಳುಹಿಸಿದೆ ಎಂದು ರಾಜ್ಯ ಸರ್ಕಾರ ಬಹಿರಂಗ ಪಡಿಸಲಿ. ಇದೊಂದು ಸ್ವಾರ್ಥ ಸಾಧನೆಗಾಗಿ ಮಾಡಿದ ಹೋರಾಟ ಅಷ್ಟೇ. ಕೆಲವೇ ಕೆಲವು ನಾಯಕರು, ಸ್ವಾಮೀಜಿಗಳು ಮುಂಚೂಣಿಯಲ್ಲಿದ್ದರು, ಸ್ವಹಿತಾಸಕ್ತಿಗೋಸ್ಕರ ನಡೆಸಿದ ಹೋರಾಟಕ್ಕೆ ಮಹತ್ವ ನೀಡುವುದು ಬೇಡ ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *