ಬೀದರ್: ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆ, ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು ಹಾಗೂ ರಾಹುಲ್ ಗಾಂಧಿ ಅವರನ್ನು ಪ್ರಧಾನಿಯಾಗಿ ಮಾಡಬೇಕೆಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ಸಿನ ಬೃಹತ್ ಜನಸ್ಪಂದನಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸನ್ನು ಮುಗಿಸೋದು ಹಾಗೂ ಅಳಿಸುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಇಂದು ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾಗಿದೆ. ಹೀಗಾಗಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಬೇಕು. ನಮ್ಮ ಅಧ್ಯಕ್ಷರಾದ ರಾಹುಲ್ ಗಾಂಧಿಯವರನ್ನು ನಾವು ಪ್ರಧಾನಿಯಾಗಿ ಮಾಡಲೇಬೇಕೆಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಏನೋ ಹೇಳಿಕೊಂಡು ಹೋಗುತ್ತಿದ್ದಾರೆ. ಅವರ ಮಾತನ್ನು ಕೇಳುವ ಅವಶ್ಯಕತೆ ನಮಗಿಲ್ಲ, ನಾವೆಲ್ಲರೂ ಇಂದು ದೇಶ ಉಳಿಸುವ ಅಗತ್ಯತೆ ಎದುರಾಗಿದೆ. ಈ ಕುರಿತು ಎಲ್ಲರೂ ಹೋರಾಟ ನಡೆಸಬೇಕಾಗಿದೆ. ಕಾರ್ಯಕರ್ತರು ಎಚ್ಚೆತ್ತು ಕಾಂಗ್ರೆಸ್ ಬಲಪಡಿಸಲು ಸಿದ್ದರಾಗಬೇಕು ಎಂದು ಹೇಳಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews