Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಡಿಮೆ ಮಕ್ಕಳಿದ್ದರೆ ಪ್ರಗತಿ, ಹೆಚ್ಚು ಮಕ್ಕಳಿದ್ರೆ ಖರ್ಚು ಜಾಸ್ತಿ – ಕೆ.ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಡಿಮೆ ಮಕ್ಕಳಿದ್ದರೆ ಪ್ರಗತಿ, ಹೆಚ್ಚು ಮಕ್ಕಳಿದ್ರೆ ಖರ್ಚು ಜಾಸ್ತಿ – ಕೆ.ಸುಧಾಕರ್

Bengaluru City

ಕಡಿಮೆ ಮಕ್ಕಳಿದ್ದರೆ ಪ್ರಗತಿ, ಹೆಚ್ಚು ಮಕ್ಕಳಿದ್ರೆ ಖರ್ಚು ಜಾಸ್ತಿ – ಕೆ.ಸುಧಾಕರ್

Public TV
Last updated: July 11, 2022 4:35 pm
Public TV
Share
3 Min Read
SUDHAKAR MEETING 1 1
SHARE

ಬೆಂಗಳೂರು: ಕುಟುಂಬದಲ್ಲಿ ಹೆಚ್ಚು ಮಕ್ಕಳಿದ್ದರೆ ಖರ್ಚು ಹೆಚ್ಚಾಗುತ್ತದೆ. ಕಡಿಮೆ ಮಕ್ಕಳಿದ್ದರೆ ದೇಶ ಪ್ರಗತಿಯಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಡೆದ `ವಿಶ್ವ ಜನಸಂಖ್ಯಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 4 ಮಕ್ಕಳ ಬದಲು ಇಬ್ಬರಿದ್ದರೆ ಅವರಿಗೆ ಉತ್ತಮ ಶಿಕ್ಷಣ, ಆರೋಗ್ಯ ಸೌಲಭ್ಯ ನೀಡಬಹುದು. ನೈಸರ್ಗಿಕ ಸಂಪನ್ಮೂಲ ಹಿಂದೆ ಇದ್ದಷ್ಟೇ ಇರುತ್ತದೆ. ಹಾಗೆಯೇ ಭೌಗೋಳಿಕ ವಿಸ್ತೀರ್ಣ ಕೂಡ ಅಷ್ಟೇ ಇರುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಧ್ವಜ ಸಂಹಿತೆ ತಿದ್ದುಪಡಿ ಮೂಲಕ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ: ಬಿ.ಕೆ ಹರಿಪ್ರಸಾದ್

Sudhakar 1

ಹಿಂದಿಗಿಂತ ದೇಶದ ಜನಸಂಖ್ಯೆ 6-7 ಪಟ್ಟು ಹೆಚ್ಚಿದ್ದರೂ, ಭೂಮಿ, ನೀರು ಮೊದಲಾದ ಸಂಪನ್ಮೂಲಗಳೇನೂ ಹೆಚ್ಚಾಗುವುದಿಲ್ಲ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭೂ ಕುಸಿತ, ಭಾರಿ ಮಳೆ ಸೇರಿದಂತೆ ವಿವಿಧ ಬಗೆಯ ಹವಾಮಾನ ವೈಪರೀತ್ಯ ಉಂಟಾಗುತ್ತಿದೆ. ಇದಕ್ಕೆ ಜನಸಂಖ್ಯೆ ಏರಿಕೆ ಕೂಡ ಕಾರಣ ಎಂದು ಹೇಳಿದ್ದಾರೆ.  ಇದನ್ನೂ ಓದಿ: ಗೋವಾದಲ್ಲೂ ಆಪರೇಷನ್ ಕಮಲ ಸದ್ದು – ಇಬ್ಬರು ಕಾಂಗ್ರೆಸ್ ಶಾಸಕರ ಅನರ್ಹತೆ ಕೋರಿ ಸ್ಪೀಕರ್‌ಗೆ ಮನವಿ

ಹಿಂದೆ ಆರೋಗ್ಯ ಸೌಲಭ್ಯಗಳು ಕಡಿಮೆ ಇದ್ದಿದ್ದರಿಂದ ಆತಂಕ ಇತ್ತು. ಆದರೆ ಇಂದು ಆರೋಗ್ಯ ಸೌಲಭ್ಯಗಳು ಉತ್ತಮವಾಗಿದೆ. ಜೀವನ ಗುಣಮಟ್ಟ ಹೆಚ್ಚಿದೆ. ಆದ್ದರಿಂದ ಸಣ್ಣ ಸಂಸಾರವಿದ್ದರೆ ಆರ್ಥಿಕತೆ ಉತ್ತಮವಾಗಿರುತ್ತದೆ. ಈ ಬಗ್ಗೆ ಹೆಚ್ಚು ಅರಿವು ಮೂಡಿಸುವ ಕೆಲಸವಾಗಬೇಕು. ಕುಟುಂಬ ಯೋಜನೆಯ ಜಾರಿಯಲ್ಲಿ ಆಶಾ ಕಾರ್ಯಕರ್ತೆಯರು ಪ್ರಮುಖ ಪಾತ್ರ ವಹಿಸಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಈ ಕುರಿತು ಇನ್ನಷ್ಟು ಜಾಗೃತಿ ಕಾರ್ಯ ನಡೆಯಬೇಕು ಎಂದು ಸಲಹೆ ನೀಡಿದ್ದಾರೆ.

SUDHAKAR

ಕುಟುಂಬ ಯೋಜನೆ ಜನಾಂದೋಲನವಾಗಲಿ: ಭಾರತದ ಜನಸಂಖ್ಯೆ 140 ಕೋಟಿಗೆ ಸಮೀಪಲ್ಲಿದ್ದರೂ, ಯುವಜನರ ಸಂಖ್ಯೆ ಹೆಚ್ಚಿರುವುದು ದೇಶಕ್ಕೆ ಲಾಭದಾಯಕ. ಆದರೂ ಜನಸಂಖ್ಯೆ ಏರಿಕೆಗೆ ಮಿತಿ ಹೇರಲು ಕುಟುಂಬ ಯೋಜನೆಯ ಅಳವಡಿಕೆ ಜನಾಂದೋಲನದಂತೆ ನಡೆಯಬೇಕಿದೆ. ಇದನ್ನೂ ಓದಿ: ಕಾಪು ಕಡಲ್ಕೊರೆತಕ್ಕೆ ತುತ್ತಾದ ಪ್ರದೇಶಕ್ಕೆ ಶೋಭಾ ಕರಂದ್ಲಾಜೆ ಭೇಟಿ- ಪರಿಹಾರದ ಭರವಸೆ

ವೈದ್ಯಕೀಯ ಆವಿಷ್ಕಾರ ಹಾಗೂ ಉತ್ಕೃಷ್ಟ ಆರೋಗ್ಯ ಸೇವೆಗಳಿಂದಾಗಿ ಜನರ ಗರಿಷ್ಠ ವಯೋಮಿತಿ 65-70ಕ್ಕೆ ತಲುಪಿದೆ. ಮುಂದುವರಿದ ದೇಶಗಳಲ್ಲಿ 80 ವರ್ಷ ವಯಸ್ಸಿನವರು ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಜಪಾನ್, ಇಟಲಿ, ಸ್ಪೇನ್ ಮೊದಲಾದ ದೇಶಗಳಲ್ಲಿ ಹಿರಿಯ ನಾಗರಿಕರು ಹೆಚ್ಚಿದ್ದು, ಯುವಜನರ ಸಂಖ್ಯೆ ಕಡಿಮೆಯಾಗಿದೆ. ಆದರೆ ಭಾರತದಲ್ಲಿ ಶೇ.60 ರಷ್ಟು ಮಂದಿ 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ. ಇಂತಹ ಯುವಜನರು ದೇಶದ ಶಕ್ತಿಯಾಗಿದ್ದಾರೆ. ಜನಸಂಖ್ಯೆ ಹೆಚ್ಚಿದ್ದರೂ, ಯುವಜನರು ಹೆಚ್ಚಿರುವುದರಿಂದ ದೇಶಕ್ಕೆ ಲಾಭವಾಗಿದೆ. ಜಗತ್ತಿನಲ್ಲಿ ಭಾರತ 3ನೇ ಅತಿ ದೊಡ್ಡ ಆರ್ಥಿಕ ವ್ಯವಸ್ಥೆಯಾಗಿದೆ. ಅತಿ ಹೆಚ್ಚು ಗ್ರಾಹಕರನ್ನು ದೇಶ ಹೊಂದಿರುವುದರಿಂದ ಬಹುರಾಷ್ಟ್ರೀಯ ಕಂಪನಿಗಳು ಇತ್ತ ಕಡೆ ನೋಡುತ್ತಿವೆ ಎಂದು ಶ್ಲಾಘಿಸಿದ್ದಾರೆ.

SUDHAKAR

ಭಾರತದಲ್ಲಿ ಜನಸಂಖ್ಯೆ ವೇಗವಾಗಿ ಏರಿಕೆಯಾಗುತ್ತಿದೆ. ಜಗತ್ತಿನ ಜನಸಂಖ್ಯೆ 500 ಕೋಟಿಯಿಂದ 800 ಕೋಟಿಗೆ ತಲುಪಿದೆ. ಭಾರತದ ಜನಸಂಖ್ಯೆ 1.4 ಬಿಲಿಯನ್‌ಗೆ ತಲುಪಿದೆ. ಇದರಿಂದಾಗಿ ಸಮಾಜಕ್ಕೆ, ಪರಿಸರಕ್ಕಾಗುವ ದುಷ್ಪರಿಣಾಮವೇನು? ಎಂಬುದನ್ನೂ ಆಲೋಚಿಸಬೇಕು. ಸೂಕ್ಷಮವಾಗಿ ಅವಲೋಕಿಸಿ ನಿರ್ಧಾರಗಳನ್ನು ಕೈಗೊಳ್ಳಬೇಕು. ಹಿಂದೆ ಭಾರತದ ಕುಟುಂಬಗಳಲ್ಲಿ ಮೂರು ನಾಲ್ಕು ಮಕ್ಕಳಿರುತ್ತಿದ್ದರು. ಕಾಲಕ್ರಮೇಣ ಅವಿಭಕ್ತ ಕುಟುಂಬ ಪದ್ಧತಿ ಮರೆಯಾಗುತ್ತಿದೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು `ನಮ್ಮ ಕ್ಲಿನಿಕ್’ ಯೋಜನೆ ಜಾರಿಗೆ ತಂದಿದ್ದಾರೆ. ಕೇಂದ್ರ ಸರ್ಕಾರವು ಮಹಿಳೆಯರಿಗಾಗಿ ಕ್ಲಿನಿಕ್‌ಗಳನ್ನು ತೆರೆಯಬೇಕು ಎಂದು ಹೇಳಿದೆ. ಇಂತಹ ಕ್ಲಿನಿಕ್‌ಗಳಲ್ಲಿ ಕುಟುಂಬ ಯೋಜನೆ ಕುರಿತು ಜನರಿಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದರು.

Live Tv
[brid partner=56869869 player=32851 video=960834 autoplay=true]

TAGGED:Basavaraj Bommaichief ministerDepartment Of Health And Family WelfareK SudhakarNamma Clinicpopulationಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಜನಸಂಖ್ಯೆನಮ್ಮ ಕ್ಲಿನಿಕ್ಬಸವರಾಜ ಬೊಮ್ಮಾಯಿಮುಖ್ಯಮಂತ್ರಿಸುಧಾಕರ್
Share This Article
Facebook Whatsapp Whatsapp Telegram

Cinema news

bigg boss season 12 kannada Dhanush becomes captain for the second time
ನಿಯಮ ಉಲ್ಲಂಘಿಸಿದ್ರೂ ಮನೆ ಮಂದಿಯ ಸಹಾಯದಿಂದ ಮತ್ತೆ ನಾಯಕನಾದ ಧನುಷ್‌
Cinema Latest Top Stories TV Shows
Akshay Kumar Rani Mukerji
ʻOh My God 3ʼ ಸಿನಿಮಾಗಾಗಿ ಒಂದಾದ ರಾಣಿ ಮುಖರ್ಜಿ – ಅಕ್ಷಯ್‌ ಕುಮಾರ್
Bollywood Cinema Latest
Ashwini Gowda and Gilli Nata Talk Fight
ಉಣ್ಕೊಂಡ್‌ ತಿನ್ಕೊಂಡ್ ಇರೋಕೆ ಬಿಗ್‌ಬಾಸ್ ಮನೆಗೆ ಬಂದಿದ್ಯಾ? – ಗಿಲ್ಲಿ ವಿರುದ್ಧ ಅಶ್ವಿನಿ ಕೆಂಡಾಮಂಡಲ
Cinema Latest Sandalwood
Dear Comrade
ವಿಜಯ್ ದೇವರಕೊಂಡ-ರಶ್ಮಿಕಾ ನಟನೆಯ ಸಿನಿಮಾ ಹಿಂದಿಯಲ್ಲಿ ರಿಮೇಕ್
Bollywood Cinema Latest Top Stories

You Might Also Like

FBI
Latest

ಹೊಸ ವರ್ಷದ ಮುನ್ನಾದಿನ ಅಮೆರಿಕದಲ್ಲಿ ಐಸಿಎಸ್‌ ಪ್ರೇರಿತ ದಾಳಿ ವಿಫಲ – ಅಪ್ರಾಪ್ತ ವಶಕ್ಕೆ

Public TV
By Public TV
33 minutes ago
Mohan Bhagwat
Latest

ಬಿಜೆಪಿ ಸ್ವತಂತ್ರವಾಗಿ ಕೆಲಸ ಮಾಡುತ್ತೆ, RSS ರಿಮೋಟ್ ಕಂಟ್ರೋಲ್‌ನಿಂದಲ್ಲ: ಮೋಹನ್ ಭಾಗವತ್

Public TV
By Public TV
1 hour ago
stone pelting in front of Reddys house over banner issue police lathi charge Ballari
Bellary

ಬ್ಯಾನರ್ ಗಲಾಟೆಗೆ ಜನಾರ್ದನ ರೆಡ್ಡಿ ಪ್ರತಿದೂರು – ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ FIR

Public TV
By Public TV
1 hour ago
shivananda patil handloom mela
Bengaluru City

ಜವಳಿ ನೀತಿಯಲ್ಲಿ ಕೈಮಗ್ಗ ಉದ್ದಿಮೆಗೆ ಉತ್ತೇಜನ: ಸಚಿವ ಶಿವಾನಂದ ಪಾಟೀಲ

Public TV
By Public TV
2 hours ago
Raichuru Ambadevi Fair
Districts

400 ವರ್ಷಗಳ ಇತಿಹಾಸವಿರುವ ಅಂಬಾದೇವಿ ಜಾತ್ರೆಯಲ್ಲಿ ಗಾಂಜಾ ಘಾಟು – ಸಾಧು ಸಂತರಿಗೆ, ಭಕ್ತರಿಗೂ ಕಿಕ್

Public TV
By Public TV
2 hours ago
gold in india
Latest

ದೇಶದ ಜಿಡಿಪಿಗಿಂತಲೂ ಹೆಚ್ಚು ಮೌಲ್ಯದ ಚಿನ್ನ ಹೊಂದಿದ್ದಾರೆ ಭಾರತೀಯರು!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?