Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಮಲ್ ಹಾಸನ್ ಚಿತ್ರ ರಿಲೀಸ್ ಆದ್ರೆ ಥಿಯೇಟರ್‌ಗಳಿಗೆ ಬೆಂಕಿ ಹಚ್ತೀವಿ: ನಾರಾಯಣಗೌಡ ಎಚ್ಚರಿಕೆ

Public TV
Last updated: May 30, 2025 11:26 pm
Public TV
Share
3 Min Read
KARAVE NARAYAN GOWDA
SHARE

– ಶಿವರಾಜ್‌ಕುಮಾರ್ ಸಮರ್ಥನೆ ಬಿಟ್ಟು ಕಮಲ್‌ಗೆ ಬುದ್ದಿ ಹೇಳಲಿ: ಕರವೇ ಅಧ್ಯಕ್ಷ

ಬೆಂಗಳೂರು: ನಟ ಕಮಲ್ ಹಾಸನ್ (Kamal Haasan) ಚಿತ್ರ ಬಿಡುಗಡೆ ಮಾಡಿದರೆ ಥಿಯೇಟರ್‌ಗಳಿಗೆ ಬೆಂಕಿ ಹಚ್ಚುತ್ತೇವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ (Narayana Gowda) ಎಚ್ಚರಿಕೆ ನೀಡಿದರು.

ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿಕೆ ಖಂಡಿಸಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಾರಾಯಣಗೌಡ, ಆಗಾಗ ಕನ್ನಡಿಗರ ವಿಚಾರದಲ್ಲಿ ಮಾತು ಜಾಸ್ತಿ ಆಗಿದೆ. ಹೊರಗಿಂದ ಬಂದವರು ಕರ್ನಾಟಕ, ಕನ್ನಡದವರ ವಿರುದ್ಧ ಮಾತು ಆಡುತ್ತಿದ್ದಾರೆ. ತಮಿಳುನಾಡು ಆಗಾಗ ಕಾವೇರಿ ವಿಚಾರದಲ್ಲಿ ಸಂಘರ್ಷ ನಡೆಸುತ್ತಿತ್ತು. ಸಂಘರ್ಷಕ್ಕೆ ನಾಂದಿ ಹಾಡುವ ನಿಟ್ಟಿನಲ್ಲಿ ದ್ರಾವಿಡ ರಾಜ್ಯದ ಪ್ರಮುಖ ಸಾಹಿತ್ಯ ಜೊತೆ ಮಾತನಾಡಿದ್ದೆ. ಆದರೆ ಇದೇ ಸಂದರ್ಭದಲ್ಲಿ ಕಮಲ್ ಹಾಸನ್ ಈ ರೀತಿ ಹೇಳಿದ್ದಾರೆ. ನಟನ ಬಗ್ಗೆ ಅಭಿಮಾನ ಇತ್ತು. ಆದರೆ ಮೊನ್ನೆ ಆಡಿದ ಮಾತು ಕನ್ನಡಿಗರನ್ನ ಕೆರಳಿಸುವ, ಕನ್ನಡಿಗರನ್ನ ಒಗ್ಗೂಡಿಸುವ, ಪ್ರತಿಭಟಿಸುವ ಸಂದರ್ಭಕ್ಕೆ ಬಂದಿದ್ದಾರೆ. ಯಾವ ಆಧಾರದಲ್ಲಿ ಹೇಳಿಕೆ ಕೊಟ್ಟಿದ್ದಾರೋ ಗೊತ್ತಿಲ್ಲ. ಏಕಾಏಕಿ ತಮಿಳುಗರನ್ನ ಓಲೈಸುವ ನಿಟ್ಟಿನಲ್ಲಿ ದುರಹಂಕಾರ, ದುರಾಭಿಮಾನದ ಹೇಳಿಕೆ ಕೊಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ತಪ್ಪು ಮಾಡಿದ್ಮೇಲೆ ಕ್ಷಮೆ ಕೇಳೋದ್ರಲ್ಲಿ ತಪ್ಪೇನಿದೆ- ಕಮಲ್ ಹಾಸನ್ ಹೇಳಿಕೆಗೆ ರಚಿತಾ ರಾಮ್ ಕಿಡಿ

Kamal Haasan 1

ತಮಿಳಿನ ಬಗ್ಗೆ ಅವರು ಏನು ಬೇಕಾದರೂ ಹೇಳಲಿ. ಇನ್ನೊಂದು ಭಾಷೆ ಬಗ್ಗೆ ಮಾತನಾಡುವಾಗ ಕನಿಷ್ಠ ಅರಿವು ಇರಬೇಕಿತ್ತು. ಅದೇ ಸಂದರ್ಭದಲ್ಲಿ ಕನ್ನಡಿಗರನ್ನ ಒಗ್ಗೂಡಿಸುವ ನಿಟ್ಟಿನಲ್ಲಿ ಹೋರಾಟ ಮಾಡಿದವರ ಸುಪುತ್ರ ಶಿವರಾಜ್ ಕುಮಾರ್ ಇದ್ದರು. ಅವರು ಅಲ್ಲಿಯೇ ಹೇಳಬಹುದಾಗಿತ್ತು. ಕನ್ನಡಕ್ಕೆ ತನ್ನದೇ ಸ್ವಂತಿಕೆ ಇದೆ ಅಂತ ಹೇಳಬಹುದಾಗಿತ್ತು. ವಿಶ್ವದ ಲಿಪಿ ರಾಣಿ ಅಂತ ಕರೆದಿರೋದು ಕನ್ನಡ ಅಂತ ಹೇಳಬಹುದಾಗಿತ್ತು. ಆ ಸಂದರ್ಭದಲ್ಲಿ ಅವರಿಗೆ ಮಾಹಿತಿ ಇಲ್ಲದೆ ಇದ್ದಿರಬಹುದು. ಆದರೆ ಇವತ್ತಿಗೂ ಶಿವರಾಜ್ ಕುಮಾರ್ ಕಮಲ್ ಹಾಸನ್‌ರನ್ನ ವಹಿಸಿಕೊಳ್ಳುತ್ತಿರೋದನ್ನ ಸಹಿಕೊಳ್ಳೋಕೆ ಆಗಲ್ಲ. ಶಿವರಾಜ್ ಕುಮಾರ್ ಆಗಿದ್ದರೆ ದೊಡ್ಡ ವಿಷಯ ಯಾವುದು? ಏಳೂವರೆ ಕೋಟಿ ಕನ್ನಡಿಗರ ಭಾವನೆ ದೊಡ್ಡದು ಅನ್ನಿಸಲಿಲ್ಲವಾ? ಅಥವಾ ಇದನ್ನ ನೇರವಾಗಿ ಹೇಳುವ ಧೈರ್ಯ ಇಲ್ಲವಾ ಎಂದು ಶಿವರಾಜ್‌ಕುಮಾರ್ ನಡೆಗೂ ಅಸಮಾಧಾನ ವ್ಯಕ್ತಪಡಿಸಿದರು.

ಶಿವರಾಜ್ ಕುಮಾರ್ ಸಮರ್ಥನೆ ಬಿಟ್ಟು, ಕಮಲ್ ಹಾಸನ್‌ಗೆ ಹೇಳಿ. ಕ್ಷಮೆಯಾಚಿಸುವಂತೆ ಹೇಳಿ. ಅದನ್ನ ಬಿಟ್ಟು ಕನ್ನಡಿಗರಿಗೆ ಹೇಳೋದು ಸರಿಯಲ್ಲ. ದೊಡ್ಮನೆಗೆ ಇದು ಧಕ್ಕೆಯಾಗುತ್ತೆ. ನೀವೇ ಬುದ್ದಿ ಹೇಳಿ ಕ್ಷಮೆ ಕೇಳಿಸಿ. ಇದನ್ನ ಶಿವರಾಜ್ ಕುಮಾರ್ ಮಾಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಕ್ಷಮೆ ಕೇಳಲ್ಲ ಅಂದಾಗ ಬಿಸಿ ಮುಟ್ಟಿಸಬೇಕು- ಕಮಲ್ ಹಾಸನ್ ವಿರುದ್ಧ ವಸಿಷ್ಠ ಸಿಂಹ ಆಕ್ರೋಶ

kamal haasan

ಯದುವೀರ್ ಒಡೆಯರ್ ರಾಜ್ಯವಿಲ್ಲದ ರಾಜ. ಇವರು ಹೇಳುತ್ತಾರೆ. ಇವರಿಗೆ ಕರ್ನಾಟಕದ ಭಾಷ ಇತಿಹಾಸ ಗೊತ್ತಿಲ್ಲ. ಕನ್ನಡ ಸಂಸ್ಕೃತದಿAದಲೂ ಬಂದಿಲ್ಲ, ತಮಿಳಿನಿಂದಲೂ ಬಂದಿಲ್ಲ ಅನ್ನೋದನ್ನ ಇತಿಹಾಸ ಸಾರಿ ಸಾರಿ ಹೇಳುತ್ತದೆ. ಕನ್ನಡಕ್ಕೆ ತನ್ನದೇ ಸ್ವಂತಿಕೆ ಇದೆ. ಕೆಲವು ಪದಗಳು ಹೊರ ಭಾಷೆಯಿಂದ ಬಂದಿರಬಹುದಷ್ಟೇ. ಕನ್ನಡದ ಮೂಲ ಯಾವುದೇ ಭಾಷೆ ಅಲ್ಲ ಅನ್ನೋದನ್ನ ಯದುವೀರ್ ಒಡೆಯರು ಅರ್ಥ ಮಾಡಿಕೊಳ್ಳಬೇಕು ಎಂದು ಟಾಂಗ್ ಕೊಟ್ಟರು.

ರಮ್ಯ ಹೇಳಿಕೆ ಸರಿಯಲ್ಲ. ತಮಿಳಿನ ಯಾವುದೇ ಸಾಮಾನ್ಯ ಕಲಾವಿದರನ್ನ ಮಾತನಾಡಿಸಿ. ಆದರೆ ನಮ್ಮಲ್ಲಿ ಎಲ್ಲರೂ ತಜ್ಞರು ಆಗುತ್ತಾರೆ. ರಮ್ಯ ಉಪದೇಶ ಮಾಡಬೇಡಿ, ಇಲ್ಲಿ ಉಪದೇಶ ತೆಗೆದುಕೊಳ್ಳೋಕೆ ಯಾರೂ ಇಲ್ಲ. ನಮ್ಮ ನೆಲದಲ್ಲಿ ಕನ್ನಡವೇ ದೊಡ್ಡದು. ಮೂರ್ಖತನದ ವಿಚಾರವನ್ನ ಸಮರ್ಥನೆ ಮಾಡಿಕೊಳ್ಳುವಾಗ ಉಪಯೋಗಿಸಬೇಡಿ. ಬುದ್ದಿ ಹೇಳೋ ಆಗಿದ್ದರೆ ಕಮಲ್ ಹಾಸನ್‌ಗೆ ಹೇಳಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಕಮಲ್ ಹಾಸನ್ ಚಾಲ್ತಿಯಲ್ಲಿಲ್ಲದ ನಾಣ್ಯ, ವ್ಯಾಲ್ಯೂ ಇಲ್ಲ: ಶೋಭಾ ಕರಂದ್ಲಾಜೆ ವ್ಯಂಗ್ಯ

ಕಮಲ್ ಹಾಸನ್ ಸಿನಿಮಾ ಬಿಡುಗಡೆಯಾಗಬೇಕಾದ್ರೆ ಕ್ಷಮೆಯಾಚಿಸಲೇಬೇಕು. ಇಲ್ಲದಿದ್ದರೆ ಚಿತ್ರ ಬಿಡುಗಡೆಗೆ ಬಿಡಲ್ಲ. ನಮ್ಮ ರಾಜ್ಯದ ನಟರು ತಮಿಳು ಕನ್ನಡಿದಿಂದ ಹುಟ್ಟಿದೆ ಅಂದಿದ್ದರೆ ತಮಿಳುನಾಡು ಹತ್ತಿ ಉರಿಯುತ್ತಿತ್ತು. ನಾವು ಎಲ್ಲವನ್ನ ಸಹಿಸಿಕೊಳ್ಳುವವರು. ಹಾಗಾಗಿ ತಾಳ್ಮೆಯಿಂದ ಇದ್ದೇವೆ. ಶಿವರಾಜ್ ಕುಮಾರ್ ಈಗಲೂ ಕಮಲ್ ಹಾಸನ್ ಬುದ್ದಿ ಹೇಳಿ. ಕನ್ನಡಿಗರಿಗೆ ಹೇಳೋದನ್ನ ಬಿಟ್ಟು ಬಿಡಿ. ಎಲ್ಲಾ ಕನ್ನಡದ ನಟ-ನಟಿಯರು ಕಮಲ್ ಹಾಸನ್ ಹೇಳಿಕೆಯನ್ನ ಖಂಡಿಸಿಬೇಕು. ಇಲ್ಲದಿದ್ದರೆ ನಿಮ್ಮನ್ನ ರಣಹೇಡಿಗಳು ಅಂತ ತೀರ್ಮಾನ ಮಾಡಿ, ಕನ್ನಡಿಗರು ಪಾಠ ಕಲಿಸುತ್ತಾರೆ. ಶಿವರಾಜ್ ಕುಮಾರ್‌ರನ್ನ ಭೇಟಿ ಮಾಡುತ್ತೇವೆ. ಒಂದಷ್ಟು ಕನ್ನಡದ ಇತಿಹಾಸದ ಪುಸ್ತಕಗಳನ್ನ ತೆಗೆದುಕೊಂಡು ಹೋಗಿ ಇತಿಹಾಸದ ಬಗ್ಗೆ ಹೇಳುತ್ತೇವೆ ಎಂದು ತಿರುಗೇಟು ನೀಡಿದರು.

TAGGED:Kamal HaasankannadakannadigasKarave Narayana Gowdaಕನ್ನಡಕಮಲ್ ಹಾಸನ್ಕರವೇ ನಾರಾಯಣಗೌಡ
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
3 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
4 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
4 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
6 hours ago

You Might Also Like

mahesh joshi
Bengaluru City

ಮಹೇಶ್ ಜೋಶಿಗೆ ರಾಜ್ಯ ಸಚಿವ ಸ್ಥಾನಮಾನ ಹಿಂಪಡೆದ ಸರ್ಕಾರ

Public TV
By Public TV
24 seconds ago
CDS Anil Chauhan
Latest

ಪಾಕ್ ದಾಳಿಯಿಂದ ನಮ್ಮ ಫೈಟರ್ ಜೆಟ್‌ಗಳಿಗೂ ಹಾನಿ? – ಮೊದಲ ಬಾರಿಗೆ ಸಿಡಿಎಸ್ ಪ್ರತಿಕ್ರಿಯೆ ಏನು?

Public TV
By Public TV
28 minutes ago
MeghaPramod 2
Bengaluru City

ಅಖಂಡ ರಾಷ್ಟ್ರ ತಪಸ್ವಿನಿ ಅಹಲ್ಯಾಬಾಯಿ ಹೋಳ್ಕರ್: ಮೇಘಾ ಪ್ರಮೋದ್

Public TV
By Public TV
29 minutes ago
Saleem DGP KARNATAKA
Bengaluru City

ಮಂಡ್ಯ ಮಗು ಸಾವಿನ ಬಳಿಕ ಎಚ್ಚೆತ್ತ ಪೊಲೀಸ್‌ ಇಲಾಖೆ – ಕದ್ದು ಮುಚ್ಚಿ ಗಾಡಿ ಹಿಡಿಯದಂತೆ ಡಿಜಿ & ಐಜಿಪಿ ಆದೇಶ

Public TV
By Public TV
50 minutes ago
covid 19 1
Bengaluru City

ಕೋವಿಡ್ ಕೇಸ್ ಏರಿಕೆ – ಆರೋಗ್ಯ ಇಲಾಖೆಯಿಂದ ಸಹಾಯವಾಣಿ ಬಿಡುಗಡೆ

Public TV
By Public TV
1 hour ago
dinesh gundu rao meeting
Dakshina Kannada

ಅಬ್ದುಲ್ ರಹಿಮಾನ್ ಹತ್ಯೆ ಕೇಸ್ – ಸಭೆಯಲ್ಲಿ ಉಸ್ತುವಾರಿ ಸಚಿವರ ಮುಂದೆಯೇ ಮುಸ್ಲಿಂ ಮುಖಂಡರ ಆಕ್ರೋಶ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?