ಲಕ್ಷ್ಮೀ ಹೆಬ್ಬಾಳ್ಕರ್ ಒಂದು ಮಾತನ್ನು ಹೇಳಿದ್ರೆ, ಕಾಂಗ್ರೆಸ್‍ಗೆ ನಮ್ಮೆಲ್ಲರ ಮತ: ಬಿಜೆಪಿ ಶಾಸಕ ಸಂಜಯ್ ಪಾಟೀಲ್

Public TV
1 Min Read
Sanajy Patil Laxmi Hebbalakar

ಬೆಳಗಾವಿ: ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ರಾಮ ಮಂದಿರ ಕಟ್ಟಲು ನಾವು ಬದ್ಧರಿದ್ದೇವೆ ಅಂತಾ ಒಂದು ಮಾತನ್ನು ಹೇಳಿದ್ರೆ ಈ ಬಾರಿ ಚುನಾವಣೆಯಲ್ಲಿ ನಮ್ಮೆಲ್ಲರ ಮತ ಕಾಂಗ್ರೆಸ್ ಅಂತಾ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಶಾಸಕ ಸಂಜಯ್ ಪಾಟೀಲ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ವಿಧಾನಸಭಾ ಚುನಾವಣೆ ಪ್ರಯುಕ್ತ ಸುಳೆಬಾವಿ ಗ್ರಾಮದಲ್ಲಿ ಪ್ರಚಾರಕೈಗೊಂಡಿದ್ದ ವೇಳೆ ಮಾತನಾಡಿದ ಶಾಸಕರು, ಭಾರತ ಹಿಂದೂ ರಾಷ್ಟ್ರ. ರಾಮ ಮಂದಿರ ನಿರ್ಮಾಣ ಆಗಬೇಕಿದ್ದು, ಇದಕ್ಕಾಗಿ ಯಾವ ತ್ಯಾಗಕ್ಕೂ ನಾನು ಸಿದ್ಧ. ನಾವು ರಾಮ ಮಂದಿರ ನಿರ್ಮಾಣ ಮಾಡೋರು, ಅವರು ಬಾಬರಿ ಮಸೀದಿ ಕಟ್ಟುವರು. ಲಕ್ಷ್ಮೀ ಹೆಬ್ಬಾಳ್ಕರ್ ಅವರು ಒಂದು ಬಾರಿ ರಾಮ ಮಂದಿರ ಕಟ್ಟಲು ನಾವು ಬದ್ಧರಿದ್ದೇವೆ ಅಂತಾ ಒಂದು ಮಾತನ್ನು ಹೇಳಿದ್ರೆ ನಾವೆಲ್ಲರೂ ಕಾಂಗ್ರೆಸ್‍ಗೆ ಮತ ಹಾಕೋಣ ಅಂತಾ ಹೇಳಿದ್ದಾರೆ.

ಈ ಚುನಾವಣೆ ರಸ್ತೆ, ಚರಂಡಿ, ಕುಡಿಯುವ ನೀರಿಗಾಗಿ ಇಲ್ಲ. ಇದು ಹಿಂದು, ಮುಸ್ಲಿಂ ಧರ್ಮದ ಬಗ್ಗೆ ಇದೆ. ಯಾರಿಗೆ ಬಾಬಾರಿ ಮಸೀದಿ, ಟಿಪ್ಪು ಜಯಂತಿ ಮಾಡೋದು ಇಷ್ಟವೋ ಅವರೆಲ್ಲರು ಕಾಂಗ್ರೆಸ್‍ಗೆ ಬೆಂಬಲ ನೀಡಿ, ಶಿವಾಜಿ ಮಹರಾಜರು ಬೇಕಿದರೆ ಬಿಜೆಪಿಗೆ ನಿಮ್ಮ ಬೆಂಬಲ ನೀಡಿ ಎಂಬ ಹೇಳಿರುವ ವಿವಾದಾತ್ಮಕ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

vlcsnap 2018 04 19 11h32m09s233

Share This Article
Leave a Comment

Leave a Reply

Your email address will not be published. Required fields are marked *