Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಿಕೆಟ್ ಸಿಗದಿದ್ದರೆ ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆ: ಸಿಪಿ ಯೋಗೇಶ್ವರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಟಿಕೆಟ್ ಸಿಗದಿದ್ದರೆ ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆ: ಸಿಪಿ ಯೋಗೇಶ್ವರ್

Bengaluru City

ಟಿಕೆಟ್ ಸಿಗದಿದ್ದರೆ ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆ: ಸಿಪಿ ಯೋಗೇಶ್ವರ್

Public TV
Last updated: October 21, 2024 1:02 pm
Public TV
Share
3 Min Read
CP YOGESHWAR HD KUMARASWAMY
SHARE

– ಜೆಡಿಎಸ್‌ನಿಂದ ನಿಂತರೇ ಕಷ್ಟ, ಬಿಜೆಪಿಯಿಂದಲೇ ನಿಲ್ಲಬೇಕೆಂಬ ಆಸೆ ಇದೆ
– ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿಲ್ಲ

ಬೆಂಗಳೂರು: ಜೆಡಿಎಸ್‌ನಿಂದ (JDS) ನಿಂತರೇ ಕಷ್ಟ ಆಗುತ್ತದೆ. ಬಿಜೆಪಿಯಿಂದಲೇ ನಿಲ್ಲಬೇಕೆಂಬ ಆಸೆ ಇದೆ. ಟಿಕೆಟ್ ಸಿಗದೇ ಇದ್ದರೆ ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆಯಿದೆ ಎಂದು ಬಿಜೆಪಿ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿ ಸಿಪಿ ಯೋಗೇಶ್ವರ್ (CP Yogeshwar) ಹೇಳಿದರು.

ನಗರದಲ್ಲಿ ಮಾತನಾಡಿದ ಅವರು, ಚನ್ನಪಟ್ಟಣ ವಿಚಾರವಾಗಿ ನಾನು ಅವಕಾಶ ಕೊಟ್ಟರೆ ಎನ್‌ಡಿಎ (NDA) ಅಭ್ಯರ್ಥಿ ಆಗುತ್ತೇನೆ. ಆದರೆ ಅವಕಾಶ ಸಿಗಬೇಕು ಅಷ್ಟೇ. ನಾನು ನನ್ನ ಪಾರ್ಟನರ್ ಕುಮಾರಸ್ವಾಮಿ (HD Kumaraswamy) ಮೂರು ದಿನಗಳಿಂದ ಚರ್ಚೆ ಮಾಡುತ್ತಿದ್ದೇವೆ. ನಾನು ಜೆಡಿಎಸ್‌ನಿಂದ ನಿಂತರೇ ಕಷ್ಟ ಆಗುತ್ತದೆ. ಬಿಜೆಪಿಯಿಂದಲೇ ನಿಲ್ಲಬೇಕೆಂಬ ಆಸೆ ಇದೆ. ಆದರೆ ಅವರು ಆಗಲ್ಲ ಅಂತಿದ್ದಾರೆ. ಕುಮಾರಸ್ವಾಮಿ ಮನಸ್ಸಿನಲ್ಲಿ ಅವರ ಮಗನಿಗೆ ಟಿಕೆಟ್ ಕೊಡಬೇಕು ಎಂದು ಆಸೆ ಇದೆ. ಅವರ ಮನಸಲ್ಲೇ ಆತರಹ ಇದ್ದರೆ ಏನು ಮಾಡೋದಕ್ಕೆ ಆಗುತ್ತದೆ ಎಂದು ಪ್ರಶ್ನಿಸಿದರು.ಇದನ್ನೂ ಓದಿ: ಡಿಕೆಶಿ ವಿರುದ್ಧದ ಅಕ್ರಮ ಆಸ್ತಿಗಳಿಕೆ ಕೇಸ್‌ – ಲೋಕಾ ತನಿಖೆ ಪ್ರಶ್ನಿಸಿ ಸಿಬಿಐನಿಂದ ಸುಪ್ರೀಂಗೆ ಅರ್ಜಿ ಸಲ್ಲಿಕೆ

ಚನ್ನಪಟ್ಟಣದಲ್ಲಿ ಕುಮಾರಸ್ವಾಮಿಯವರು ಅವರ ಕುಟುಂಬದವರಿಗೇ ಟಿಕೆಟ್ ಕೊಡಬೇಕು ಎಂದು ಆಸೆಯಿದೆ. ತಾವು ರಾಜೀನಾಮೆ ಕೊಟ್ಟ ನಂತರದಿಂದಲೂ ನಿಖಿಲ್‌ಗೆ ನಿಲ್ಲಿಸಬೇಕು ಎಂದು ಅವರ ಮನಸಿನಲ್ಲಿದೆ. ಅದಕ್ಕಾಗಿ ಪ್ರಯತ್ನ ಮಾಡುತ್ತಿದ್ದಾರೆ. ಮನಸಲ್ಲಿ ಆ ಭಾವನೆ ಇರುವಾಗ ಏನು ಬಲವಂತ ಸಾಧ್ಯ? ಜೆಡಿಎಸ್ ಚಿನ್ಹೆಯಲ್ಲಿ ನಿಲ್ಲಿ ಎಂದು ಅವರು ಮುಕ್ತವಾಗಿ ಹೇಳಿಲ್ಲ. ಅವರ ಪಕ್ಷದ ಮುಖಂಡರು ಬಂದಾಗ ಹೇಳಿದ್ದರೂ ಅಷ್ಟೇ. ನಾನು ನನ್ನ ತಾಲೂಕಿನ ಜನರ ಜೊತೆಗೂ ಇದರ ಬಗ್ಗೆ ಚರ್ಚೆ ಮಾಡಿದ್ದೇನೆ. ಬಹಳ ಭಿನ್ನಾಭಿಪ್ರಾಯ ಬಂದಿದೆ. ಇಷ್ಟು ವರ್ಷ ವಿರೋಧ ಮಾಡಿಕೊಂಡು ಬಂದಿದ್ದೀರಿ, ಈಗ ಮೈತ್ರಿ ಆಗಿದೆ. ಈಗ ಅನಾವಶ್ಯಕವಾಗಿ ಜೆಡಿಎಸ್‌ಗೆ ಹೋಗುವುದು ಬೇಡ ಅಂತ ತಾಲೂಕಿನಲ್ಲಿ ಅಭಿಪ್ರಾಯ ಬಂದಿದೆ. ಮೊದಲೇ ನನಗೆ ಪಕ್ಷಾಂತರಿ ಎಂದು ಕರೆಯುತ್ತಾರೆ. ಹಾಗಾಗಿ ಬಿಜೆಪಿಯಿಂದಲೇ ನಿಲ್ಲಿ ಎಂದು ಹೇಳುತ್ತಿದ್ದಾರೆ. ನಾನು ಬಿಜೆಪಿಯಿಂದಲೇ ನಿಲ್ಲಲು ನಿರ್ಧರಿದ್ದೇನೆ. ಆದರೆ ನನಗೆ ಯಾರೂ ಬೆಂಬಲ ಕೊಡುತ್ತಿಲ್ಲ ಎಂದು ಹೇಳಿದರು.

ಆರೋಪ ಮಾಡಬೇಡಿ
ಯೋಗೀಶ್ವರ್ ಕಾಂಗ್ರೆಸ್ ನಾಯಕರ ಭೇಟಿ ಮಾಡಿದ್ದಾರೆಂಬ ಹೆಚ್‌ಡಿಕೆ ಆರೋಪ ವಿಚಾರವಾಗಿ ಮಾತನಾಡಿ, ಕುಮಾರಸ್ವಾಮಿಯವರೇ ನನ್ನ ಮೇಲೆ ಅನಾವಶ್ಯಕವಾಗಿ ಆರೋಪ ಮಾಡುವ ಅಗತ್ಯ ಇಲ್ಲ. ಟಿಕೆಟ್ ಕೊಡದಿದ್ದರೆ ನಿಮ್ಮ ಮಗನಿಗೇ ಕೊಡಿ. ಆದರೆ ಕಾಂಗ್ರೆಸ್ ನಾಯಕರ ಭೇಟಿ ಮಾಡಿದ್ದೆ ಎಂದು ಅನಾವಶ್ಯಕ ಆರೋಪ ಮಾಡುವುದು ಬೇಡ. ನಾನು ಇಲ್ಲಿಯವರೆಗೆ ಕಾಂಗ್ರೆಸ್‌ನ ಯಾವ ನಾಯಕರನ್ನೂ ಭೇಟಿ ಮಾಡಿಲ್ಲ. ಭೇಟಿ ಮಾಡಿದರೂ ತಪ್ಪೇನಿಲ್ಲ ಆದರೆ ಇಲ್ಲಿಯವರೆಗೆ ಯಾರನ್ನೂ ಭೇಟಿ ಮಾಡಿಲ್ಲ. ಭೇಟಿ ಆಗುವುದಾದರೇ ಭೇಟಿ ಆಗುತ್ತೇನೆ. ಮುಚ್ಚುಮರೆ ಮಾಡಲ್ಲ. ಆದರೆ ಈವರೆಗೆ ಯಾರನ್ನೂ ಭೇಟಿ ಮಾಡಿಲ್ಲ ಎಂದರು.

ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ ಎಂದು ಯಡಿಯೂರಪ್ಪ ಹೇಳಿಕೆ ವಿಚಾರವಾಗಿ ಈ ಸಂದರ್ಭದಲ್ಲಿ ಯಡಿಯೂರಪ್ಪನವರು ಈ ಹೇಳಿಕೆ ಕೊಡುವ ಅಗತ್ಯವಿರಲಿಲ್ಲ. ಅವರೇ ತೀರ್ಮಾನ ಮಾಡಬೇಕು. ಆದರೆ ಕುಮಾರಸ್ವಾಮಿ ಅವರಿಗೆ ದೊಡ್ಡ ಮನಸು ಇದ್ದಿದ್ದರೆ ಅನುಕೂಲ ಆಗುತ್ತಿತ್ತು. ಅವರು ಉದ್ದೇಶಪೂರ್ವಕ ಈ ಹೇಳಿಕೆ ಕೊಟ್ಟಿದ್ದಾರೆ. ಇದರ ಹಿಂದೆ ದುರುದ್ದೇಶ ಇದೆ ಎಂದು ಕಿಡಿಕಾರಿದರು.

ಜೆಡಿಎಸ್ ಚಿನ್ಹೆಯಿಂದ ಸ್ಪರ್ಧೆ ಕುರಿತು ಜೆಡಿಎಸ್ ಆಫರ್‌ನ್ನು ತಿರಸ್ಕರಿಸಿ, ನಾನು ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆ ಇದೆ. ಇನ್ನೂ ಎರಡು ದಿನ ಕಾದು ನೋಡುವ ತಂತ್ರವನ್ನು ಉಪಯೋಗಿಸುತ್ತೇನೆ. ನಾನು ಈ ಕ್ಷಣಕ್ಕೂ ಬಿಜೆಪಿಯಿಂದ ಸ್ಪರ್ಧೆ ಮಾಡಬೇಕು ಎಂದುಕೊಂಡು ಇದ್ದೇನೆ. ಇಂದು (ಅ.21) ಬೆಳಗ್ಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಾರೆ ಎಂದು ನಮ್ಮ ಜಿಲ್ಲಾಧ್ಯಕ್ಷರು ಎಂದು ಹೇಳಿದ್ದರು. ಹಾಗಂದ್ಮೇಲೆ ಇನ್ನೇನಿದೆ, ಆಯ್ತು ಒಳ್ಳೇದಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಹೇಳಿದರು.ಇದನ್ನೂ ಓದಿ: ದಾಂಪತ್ಯ ವಿರಸ- ಮೂವರು ಮಕ್ಕಳಿಗೆ ವಿಷ ಕುಡಿಸಿ, ಆತ್ಮಹತ್ಯೆಗೆ ಯತ್ನಿಸಿದ ತಾಯಿ

TAGGED:bjpchannapattanaCP Yogeshwarhd kumaraswamyjdsಚನ್ನಪಟ್ಟಣಜೆಡಿಎಸ್ಬಿಜೆಪಿಸಿಪಿ ಯೋಗೇಶ್ವರ್ಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Ramesha Bandisiddegowda
Karnataka

ಶ್ರೀಗಳ ಹೆಜ್ಜೆ ಎಲ್ಲೆಲ್ಲೋ ದಾರಿ ತಪ್ಪುತ್ತಿದೆ: ನಿರ್ಮಲಾನಂದನಾಥ ಸ್ವಾಮೀಜಿ ಬಗ್ಗೆ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ

Public TV
By Public TV
15 minutes ago
Rain Pralhad Joshi 1
Dharwad

ಧಾರವಾಡ | ಜೋಶಿ ಭಾಷಣದ ವೇಳೆಯೇ ಅಬ್ಬರಿಸಿದ ಮಳೆರಾಯ – ಕುಸ್ತಿ ಪಂದ್ಯ ರದ್ದು

Public TV
By Public TV
41 minutes ago
Ayatollah Ali Khamenei
Latest

ಆಯತೊಲ್ಲಾ ಖಮೇನಿ ಭಾರತವನ್ನು ಪ್ರೀತಿಸುತ್ತಿದ್ದರು: ಇರಾನ್‌ ಸರ್ವೋಚ್ಚ ನಾಯಕನ ರಾಯಭಾರಿ

Public TV
By Public TV
2 hours ago
Punjab Police Bust ISI Funded Terror Module In Amritsar Recover AK 47 Glock Pistols
Crime

ಪಂಜಾಬ್‌ | ಪಾಕ್‌ ಪೋಷಿತ ಉಗ್ರರ ಘಟಕದ ಮೇಲೆ ಪೊಲೀಸರ ದಾಳಿ – ಇಬ್ಬರು ಶಂಕಿತರು ಅರೆಸ್ಟ್‌

Public TV
By Public TV
2 hours ago
Shri Ramayana Yatra
Latest

ಮಾ.30ರಿಂದ ಭಾರತೀಯ ರೈಲ್ವೇಯಿಂದ ಶ್ರೀ ರಾಮಾಯಣ ಯಾತ್ರೆ; 17 ದಿನಗಳ ಯಾತ್ರೆ – ಕರ್ನಾಟಕದ ಹಂಪಿಗೂ ಬರುತ್ತೆ ಈ ರೈಲು

Public TV
By Public TV
2 hours ago
Lieutenant General Retired Syed Ata Hasnain Takes Oath as bihar governor
Latest

ಬಿಹಾರದ ನೂತನ ರಾಜ್ಯಪಾಲರಾಗಿ ಲೆ.ಸಯ್ಯದ್ ಅತಾ ಹಸ್ನೈನ್ ಪ್ರಮಾಣವಚನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?