– ನಮಗೆ ನೋವಿದೆ, ನಾನು ಇವತ್ತಿನ ಮ್ಯಾಚ್ ನೋಡಲ್ಲ
– ಬಿಜೆಪಿಗೆ ಧಮ್ಮು, ತಾಕತ್ ಇದ್ರೆ ಕೇಂದ್ರ ಸರ್ಕಾರಕ್ಕೆ ಹೇಳಿ ಮ್ಯಾಚ್ ನಿಲ್ಲಿಸಿ
ಬೆಂಗಳೂರು: ಕೇಂದ್ರದಲ್ಲಿ ನಮ್ಮ ಸರ್ಕಾರ ಇದ್ದಿದ್ರೆ ಭಾರತ-ಪಾಕಿಸ್ತಾನ ಮ್ಯಾಚ್ (India-Pakistan Match) ರದ್ದು ಮಾಡಿಸುತ್ತಿದ್ದೆವು ಎಂದು ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಹೇಳಿದ್ದಾರೆ.
ಇಂದು ಭಾರತ-ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತ ಪಾಕಿಸ್ತಾನ ಮ್ಯಾಚ್ ರದ್ದು ಮಾಡಬೇಕು. ಯಾವ ಮುಖ ಇಟ್ಟುಕೊಂಡು ಮ್ಯಾಚ್ ನಡೆಸುತ್ತಿದ್ದಾರೆ? ಪಹಲ್ಗಾಮ್ ಘಟನೆಯ ನೋವು ನಮಗೆ ಇನ್ನೂ ಇದೆ. ಕೇಂದ್ರದ ಬಿಜೆಪಿ (BJP) ಈ ಮ್ಯಾಚ್ ನಿಲ್ಲಿಸಬಹುದಿತ್ತು, ಆದ್ರೆ ನಿಲ್ಲಿಸಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ನಾನು ಶಿವನ ಭಕ್ತ, ಎಲ್ಲಾ ವಿಷವನ್ನು ನುಂಗುತ್ತೇನೆ: ಅಸ್ಸಾಂನಲ್ಲಿ ಅಬ್ಬರಿಸಿದ ಮೋದಿ
ಅಮಿತಾ ಶಾ ಮಗ ಜೈ ಶಾ ಇದ್ದಾರೆ, ಅವರಿಗೆ ಬ್ಯುಸಿನೆಸ್ ಮುಖ್ಯ. ಇಲ್ಲಿ ಅಶೋಕ, ವಿಜಯೇಂದ್ರ, ಯತ್ನಾಳ್ ಹೇಳಿದ್ರು ಪಾಕಿಸ್ತಾನ ಅಂತ ಬೊಬ್ಬೆ ಹಾಕಿದ್ರು. ನಿಮಗೆ ಧಮ್ಮು, ತಾಕತ್ ಇದ್ರೆ ಕೇಂದ್ರ ಸರ್ಕಾರಕ್ಕೆ ಹೇಳಿ ಮ್ಯಾಚ್ ನಿಲ್ಲಿಸಿ. ನಾವಿನ್ನೂ ಪಹಲ್ಗಾಮ್ ಘಟನೆ ಮರೆತಿಲ್ಲ. ನಮಗೆ ನೋವಿದೆ, ಅದಕ್ಕೆ ನಾನು ಇವತ್ತಿನ ಮ್ಯಾಚ್ ನೋಡಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ದುಬೈನಲ್ಲಿ ಇಂಡಿಯಾ-ಪಾಕ್ ಮ್ಯಾಚ್ನ ಟಿಕೆಟ್ ಅನ್ ಸೋಲ್ಡ್!
ಇನ್ನು ಛಲವಾದಿ ನಾರಾಯಣಸ್ವಾಮಿ ಕುರಿತು ಪ್ರತಿಕ್ರಿಯಿಸಿದ ಅವರು, ಜನರಿಗೆ ಒಳ್ಳೆದು ಮಾಡೋದರಲ್ಲಿ ನಾನು ಅಣ್ಣ, ಅವರು ತಮ್ಮ. ದಲಿತರ ಬಗ್ಗೆ ನಾರಾಯಣಸ್ವಾಮಿ ಮಾತನಾಡುತ್ತಾರೆ. ಎಐಸಿಸಿ ಅಧ್ಯಕ್ಷರ ಬಗ್ಗೆ ಬಾಯಿಗೆ ಬಂದ ಹಾಗೆ ಮಾತನಾಡುತ್ತಾರೆ. ನಮ್ನ ಕ್ಷೇತ್ರದಲ್ಲಿ ದಲಿತ ಹುಡುಗ ಆತ್ಮಹತ್ಯೆ ಮಾಡಿಕೊಂಡ. ನಿಮ್ಮ ಸಂಸದರ ಹೆಸರು ಹೇಳಿ ಸತ್ತು ಹೋದ. ನೀವು ಅವರ ಕುಟುಂಬವನ್ನ ಮಾತನಾಡಿಸಲು ಬಂದ್ರಾ? ಇದೇನಾ ನಿಮ್ಮ ದಲಿತ ಪ್ರೀತಿ? ನನ್ನನ್ನು ನಿಮ್ಹಾನ್ಸ್ಗೆ ಸೇರಿಸುತ್ತೇನೆ ಅಂದಿದ್ದೀರಿ? ಮೊದಲು ನೀವು ಟ್ರೀಟ್ಮೆಂಟ್ ತೆಗೆದುಕೊಂಡು ಬನ್ನಿ. ರವಿಕುಮಾರ್, ಯತ್ನಾಳ್, ಪ್ರತಾಪ್ ಸಿಂಹ ಅವರನ್ನು ಕರೆದುಕೊಂಡು ಹೋಗಿ. ಹೆಚ್ಚಿನ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ಹಣ ಕೊಡಿಸುತ್ತೇನೆ. ರಾಜ್ಯದ ಸಿಎಂ ಬಗ್ಗೆ ಬಾಯಿಗೆ ಬಂದಹಾಗೆ ಮಾತನಾಡಿದ್ರೆ ಅದು ಸಂವಿಧಾನ ಗೌರವನಾ? ನೀವು ಸಿಎಂ ಬಗ್ಗೆ ಕೆಟ್ಟದಾಗಿ ಮಾತನಾಡಬಹುದು, ನಾನು ನಿಮ್ಮ ಬಗ್ಗೆ ಮಾತನಾಡಬಾರದಾ? ಕೋತಿಗಳನ್ನ ಕೋತಿ ಅಂದ್ರೆ ತಪ್ಪಾ ಎಂದು ಹರಿಹಾಯ್ದರು. ಇದನ್ನೂ ಓದಿ: Video | ಮಂಗನಿಗೆ ಮನುಷ್ಯರೂ ಮಂಗನಂತೆ ಕಾಣ್ತಾರೆ – ಪ್ರದೀಪ್ ಈಶ್ವರ್ಗೆ ಕುಟುಕಿದ ಯತ್ನಾಳ್