Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chitradurga

ಮೇ 3ರ ಬಳಿಕವೂ ಲಾಕ್‍ಡೌನ್ ಮುಂದುವರಿಸಿದರೆ ಒಳ್ಳೆಯದು: ಸಚಿವ ರಮೇಶ್ ಜಾರಕಿಹೊಳಿ

Public TV
Last updated: April 23, 2020 5:50 pm
Public TV
Share
2 Min Read
ramesh jarakiholi
SHARE

ಚಿತ್ರದುರ್ಗ: ಕೊರೊನಾ ಸೋಂಕು ಹರಡದಂತೆ ಭಾರತ ಲಾಕ್‍ಡೌನ್ ಆಗಿ ಒಂದು ತಿಂಗಳು ಕಳೆದಿದೆ. ಇನ್ನೇನು ಲಾಕ್‍ಡೌನ್ ತೆರವು ದಿನಾಂಕ ಸಮೀಪಿಸಿದ್ದು, ಕೆಲ ವಲಯಗಳಲ್ಲಿ ರಾಜ್ಯ ಸರ್ಕಾರ ನಿಯಮಗಳನ್ನು ಸಡಿಲ ಮಾಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ನಮ್ಮ ಆರೋಗ್ಯಕ್ಕಾಗಿ ಜನರು ಮನೆಯಲ್ಲಿ ಇರುವುದು ಸೂಕ್ತ. ಅಲ್ಲದೇ ಭಾರತದಲ್ಲಿ ಲಾಕ್‍ಡೌನ್ ಮೇ 3ಕ್ಕೆ ಅಂತ್ಯಗೊಳಿಸದೆ ಮುಂದುವರಿಸಿದರೆ ಉತ್ತಮ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಸಂಸದರು ನೀಡುತ್ತಿರುವ ಉಚಿತ ಅನ್ನದಾಸೋಹ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಸಚಿವರು, ಪ್ರಧಾನ ಮಂತ್ರಿಗಳು ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ದೇಶವನ್ನು ಲಾಕ್‍ಡೌನ್ ಮಾಡಿದ್ದಾರೆ. ಇದನ್ನು ಸರಿಯಾದ ರೀತಿಯಲ್ಲಿ ಎಲ್ಲರೂ ಪಾಲಿಸಬೇಕಿದೆ. ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಸಹ ಕಾಳಜಿ ವಹಿಸಬೇಕು. ವೈರಸ್ ನಿಯಂತ್ರಣಕ್ಕೆ ಸಹಕಾರ ನೀಡಬೇಕಿದೆ ಎಂದು ಮನವಿ ಮಾಡಿದರು.

Corona 26

ದೇಶವನ್ನು ರೋಗದಿಂದ ನಿಯಂತ್ರಣ ಮಾಡುವ ಸಲುವಾಗಿ ಮೇ.3ರವರೆಗೆ ಮಾತ್ರ ಲಾಕ್‍ಡೌನ್ ಮಾಡಲಾಗಿದೆ. ಇದು ಇಲ್ಲಿಗೆ ನಿಲ್ಲದೆ ರೋಗ ನಿಯಂತ್ರಣಕ್ಕೆ ಬರುವವರೆಗೂ ಲಾಕ್‍ಡೌನ್ ಮುಂದುವರಿಸಬೇಕು ಎಂಬುವುದು ನನ್ನ ವೈಯುಕ್ತಿಕ ಅಭಿಪ್ರಾಯವಾಗಿದೆ. ಲಾಕ್‍ಡೌನ್ ಸಮಯದಲ್ಲಿ ಇಲ್ಲಿನ ಸಂಸದರಾದ ಎ.ನಾರಾಯಣಸ್ವಾಮಿಯವರು ತಮ್ಮ ವೈಯುಕ್ತಿಕವಾಗಿ ಜನತೆ ಹಸಿವಿನಿಂದ ಇರಬಾರದೆಂದು ಉಚಿತವಾಗಿ ಪ್ರತಿ ದಿನ ಆಹಾರವನ್ನು ನೀಡುತ್ತಿದ್ದಾರೆ. ಇದಕ್ಕೆ ಕೆಲ ಸಂಘ ಸಂಸ್ಥೆಯವರು ಸಹಕಾರ ನೀಡಬೇಕಿದೆ ಎಂದರು.

ಸರ್ಕಾರ ಒಳ್ಳೆಯ ಉದ್ದೇಶದಿಂದ ಕಠಿಣ ಕ್ರಮವನ್ನು ತೆಗೆದುಕೊಂಡಿದೆ. ಸರ್ಕಾರದಿಂದ ಮಾತ್ರವೇ ರೋಗವನ್ನು ನಿಯಂತ್ರಣದಲ್ಲಿಡಲು ಸಾಧ್ಯವಿಲ್ಲ. ಎಲ್ಲರೂ ಒಟ್ಟಾಗಿ ಸೇರಿದಾಗ ಮಾತ್ರ ಇದು ಸಾಧ್ಯವಿದೆ. ಈ ನಿಟ್ಟಿನಲ್ಲಿ ಪ್ರಧಾನ ಮಂತ್ರಿಗಳು ಮತ್ತು ಮುಖ್ಯಮಂತ್ರಿಗಳು ಮುಂದಿನ ದಿನದಲ್ಲಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರು ಬದ್ಧರಾಗಿರಬೇಕಿದೆ. ಎಲ್ಲರೂ ಸಾಮಾಜಿಕ ಅಂತರವನ್ನು ಕಾಪಾಡಬೇಕು. ಬೆಳಗಾವಿ ಜಿಲ್ಲೆಯ ಎರಡು ಗ್ರಾಮಗಳಲ್ಲಿ ಕೊರೊನಾ ಹೆಚ್ಚಿನ ಪ್ರಮಾಣದಲ್ಲಿ ಇದೆ. ಹೀಗಾಗಿ ತಬ್ಲಿಕ್ ಜಮಾತ್‍ನಲ್ಲಿ ಭಾಗಿಯಾಗಿದ್ದವರು ವೈಯುಕ್ತಿಕವಾಗಿ ತಪಾಸಣೆಗೆ ಒಳಗಾಗಬೇಕಿದೆ. ಸಮಾಜದ ಮುಖಂಡರು ಕೂಡ ಈ ಕುರಿತು ಗಮನ ನೀಡಬೇಕು ಎಂದರು.

vlcsnap 2020 04 23 17h40m53s653

ಕೊರೊನಾ ತಡೆಯುವ ವಿಚಾರದಲ್ಲಿ ಪೊಲೀಸರಿಗೆ ಎಲ್ಲಾ ರೀತಿಯ ಅಧಿಕಾರವನ್ನು ನೀಡಲಾಗಿದೆ. ಇದಕ್ಕೆ ಜನತೆ ಸಹಕಾರ ನೀಡಬೇಕಿದೆ. ಸರ್ಕಾರ ಮತ್ತು ಪೋಲಿಸರು ಹೇಳುವುದಕ್ಕಿಂತ ಜನತೆ ತಿಳಿದು ಮಾಡುವುದರಿಂದ ಇದರ ನಿಯಂತ್ರಣ ಸಾಧ್ಯವಿದೆ. ವೈರಸ್ ನಿಯಂತ್ರಣ ಮಾಡುವಲ್ಲಿ ಪೊಲೀಸ್ ಆರೋಗ್ಯ ಇಲಾಖೆ ಅಧಿಕಾರಿಗಳು ಸೇರಿದಂತೆ ಹಲವರು ಉತ್ತಮವಾದ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಲಾಕ್‍ಡೌನ್ ಮುಗಿದ ನಂತರ ಚಿತ್ರದುರ್ಗ ಜಿಲ್ಲೆಯ ಜೀವನಾಡಿಯಾದ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಯನ್ನು ತ್ವರಿತಗೊಳಿಸಲಾಗುವುದು. ನೀರಾವರಿ ವಿಷಯದಲ್ಲಿ ಚಿತ್ರದುರ್ಗ ಜಿಲ್ಲೆಗೆ ಅನ್ಯಾಯವಾಗಿದೆ. ಇದನ್ನು ಸರಿಪಡಿಸಲಾಗುವುದು ಎಂದು ಭರವಸೆ ನೀಡಿದರು. ಇದಕ್ಕೂ ಮುನ್ನ ಸಚಿವರು ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಿವಿಸಾಗರದಲ್ಲಿ ಚಳ್ಳಕೆರೆಗೆ ನೀರನ್ನು ಹರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇವರಿಗೆ ಸಂಸದ ಎ.ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಮುರುಳಿ, ಮುಖಂಡರಾದ ಜಿ.ಎಂ.ಸುರೇಶ್, ನಂದಿನಾಗರಾಜ್ ಸೇರಿದಂತೆ ಇತರರು ಸಾಥ್ ನೀಡಿದ್ದರು.

vlcsnap 2020 04 23 17h41m49s347

TAGGED:ChitradurgaCoronaLockdownMinister Ramesh JarkiholiPublic TVಕೊರೊನಾಚಿತ್ರದುರ್ಗಪಬ್ಲಿಕ್ ಟಿವಿರಮೇಶ್ ಜಾರಕಿಹೊಳಿಲಾಕ್‍ಡೌನ್ಸಚಿವ ರಮೇಶ್ ಜಾರಕಿಹೊಳಿ
Share This Article
Facebook Whatsapp Whatsapp Telegram

Cinema Updates

Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
18 hours ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
22 hours ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
1 day ago
Ananth Nag MODI
ಹೈ ಟೀ ಸಮಾರಂಭದಲ್ಲಿ ಮೋದಿ ಭೇಟಿಯಾದ ಅನಂತ್‌ನಾಗ್‌
2 days ago

You Might Also Like

FBI arrests 2 Chinese researchers for smuggling ‘dangerous fungus called ‘Fusarium graminearum into USA FBI director Kash Patel
Latest

ಕೃಷಿ ಬೆಳೆಯನ್ನೇ ಧ್ವಂಸ ಮಾಡೋ ಅಪಾಯಕಾರಿ ಶಿಲೀಂಧ್ರ ಕಳ್ಳ ಸಾಗಾಣೆ-ಅಮೆರಿಕದಲ್ಲಿ ಇಬ್ಬರು ಚೀನಿಯರು ಅರೆಸ್ಟ್‌

Public TV
By Public TV
11 seconds ago
Sunil Gavaskar Virat Kohli
Cricket

ಕೊಹ್ಲಿಗೆ ಎಚ್ಚರಿಕೆ ನೀಡದ ಅಂಪೈರ್‌ ವಿರುದ್ಧ ಗವಾಸ್ಕರ್ ಗರಂ

Public TV
By Public TV
1 hour ago
CRIME
Bengaluru City

Bengaluru | ಗೆಲುವಿನ ಸಂಭ್ರಮಾಚರಣೆಯಲ್ಲಿದ್ದ ಆರ್‌ಸಿಬಿ ಅಭಿಮಾನಿಗೆ ಚಾಕು ಇರಿತ

Public TV
By Public TV
2 hours ago
special RCB victory parade in Bengaluru on Wednesday
Bengaluru City

ಇಂದು ಸಂಜೆ ಬೆಂಗಳೂರಿನಲ್ಲಿ ಆರ್‌ಸಿಬಿ ವಿಕ್ಟರಿ ಪರೇಡ್

Public TV
By Public TV
2 hours ago
Josh Hazlewood
Cricket

IPL 2025 – ಫೈನಲ್ ಪಂದ್ಯದ ‘ಲಕ್ಕಿ ಕ್ರಿಕೆಟರ್’ ಹೇಜಲ್‌ವುಡ್

Public TV
By Public TV
2 hours ago
Krunal Pandya 1
Cricket

ಪಂದ್ಯಶ್ರೇಷ್ಠ ಗೆದ್ದು ಐಪಿಎಲ್‌ನಲ್ಲಿ ದಾಖಲೆ ಬರೆದ ಕೃನಾಲ್‌!

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?