ತುಮಕೂರು: ಕೊಡಗಿನಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದರೆ ಪಕ್ಕಾ ಹೆಣ ಬೀಳುತ್ತೆ. ಹೀಗಾಗಿ ಪ್ರತಿಭಟನೆಗೆ ಅವಕಾಶ ಕೊಟ್ಟು ಹೆಣ ಬಿದ್ದು ದೊಡ್ಡ ಗಲಾಟೆಯಾಗಲು ಯಾಕೆ ಅವಕಾಶ ನೀಡಬೇಕು ಎಂದು ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್ ಪ್ರಶ್ನಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಷ್ಟು ಕೊಲೆ ನಡೆದಿದೆ ಗೊತ್ತಾ ನಿಮಗೆ. ಎಲ್ಲೆಲ್ಲಿಂದ ಬಂದು ಕೊಲೆ ಮಾಡಿದ್ದಾರೆ ಗೊತ್ತಾ..?. ಕೇರಳ ಗಡಿ ದಾಟಿ ಬಂದು ಕೊಲೆ ಮಾಡ್ತಾರೆ. ಅದಕ್ಕೆ ಸಾಕಷ್ಟು ಅವಕಾಶವಿದೆ. ಅದನ್ನು ಅವೈಡ್ ಮಾಡಬೇಕು ಎಂದರು. ಇದನ್ನೂ ಓದಿ: ಮಡಿಕೇರಿ ಚಲೋ ಕೈಬಿಟ್ಟ ಕಾಂಗ್ರೆಸ್ ನಿಲುವು ಸ್ವಾಗತಿಸಿದ ಮಾಜಿ ಸಿಎಂ ಬಿಎಸ್ವೈ
ಕಾಂಗ್ರೆಸ್ ಕಾರ್ಯಕರ್ತನೇ ಮೊಟ್ಟೆ ಎಸೆದಿದ್ದಾನೆ. ಆತ ಯಾವುದೋ ವಿಚಾರಕ್ಕೆ ಬೇಸರಗೊಂಡು ಎಸೆದಿದ್ದಾನೆ. ಇದು ಜಗಜ್ಜಾಹೀರಾಗಿದೆ. ಆತನ ಸಂದೇಶಗಳನ್ನು ನೋಡಿದ್ದೇನೆ. ಆತ ನಾನು ಜೆಡಿಎಸ್ ನಲ್ಲಿದ್ದೆ ಆನಂತರ ಕಾಂಗ್ರೆಸ್ ಗೆ ಬಂದೆ ಅಂದಿದ್ದಾನೆ. ಇದೀಗ ಆತನನ್ನ ಅರೆಸ್ಟ್ ಮಾಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ನಾನು ಎಲ್ಲರೊಂದಿಗೆ ಅಡ್ಜಸ್ಟ್ ಆಗಿದ್ದರೆ, ನೀವ್ಯಾರು ಮುಖ್ಯಮಂತ್ರಿ ಆಗುತ್ತಿರಲಿಲ್ಲ: ಬಸನಗೌಡ ಯತ್ನಾಳ್
ಕಾಂಗ್ರೆಸ್ ಹೋರಾಟ ನೆಕ್ಸ್ಟ್ ಜೂನ್ ವರೆಗೂ ಇರಬಹುದು. ಆಮೇಲೆ ಎಲ್ಲಾ ತಣ್ಣಾಗಿ ಬಿಡುತ್ತೆ. ರಾಜ್ಯದ ಜನತೆಗೆ ಗೊತ್ತಿದೆ ಯಾಕೆ ಈಗ ಪ್ರತಿಭಟನೆ ಆಗ್ತಿದೆ ಅಂತ. ಪ್ರತಿಯೊಬ್ಬರಿಗೂ ಆ ಜಾಗ ಹಿಡಿಯಬೇಕು ಎಂಬ ಹುಮ್ಮಸಿದೆ. ಬಟ್ ವಿಷಯಗಳಿಲ್ಲ, ವಿಷಯ ಇದ್ದಿದ್ದರೆ ಅದ್ಭುತ ಡಿಬೆಟ್ ನಡೆಯುತ್ತಿತ್ತು. ಡಿಬೆಟ್ ನಡೆಯದೇ ಬರೀ ಮೊಟ್ಟೆ ವಿಚಾರವೇ ಚರ್ಚೆ ನಡೆಯುತ್ತಿದೆ ಅಂದರೆ ಇಶ್ಯೂ ಇಲ್ಲ ಅಂತ ಜಗ್ಗೇಶ್ ತಿಳಿಸಿದರು.