Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಬಿಎಸ್‍ವೈ ಕಾಂಗ್ರೆಸ್‍ಗೆ ಬಂದ್ರೆ ಸಿಎಂ ಆಗಲು ಸಹಾಯ ಮಾಡ್ತೀನಿ: ಎಂಬಿಪಿ

Public TV
Last updated: June 5, 2019 3:47 pm
Public TV
Share
2 Min Read
bsy mbp
SHARE

ವಿಜಯಪುರ: ಬಿಎಸ್ ಯಡಿಯೂರಪ್ಪ ಕಾಂಗ್ರೆಸ್‍ಗೆ ಬಂದರೆ ಸಿಎಂ ಆಗಲು ಸಹಾಯ ಮಾಡುತ್ತೇನೆ ಎಂದು ಗೃಹ ಸಚಿವ ಎಂಬಿ ಪಾಟೀಲ್ ಹೇಳುವ ಮೂಲಕ ಸಿಟಿ ರವಿ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

ಸುರೇಶ್ ಅಂಗಡಿಯವರಿಗೆ ರಾಜ್ಯ ದರ್ಜೆಯ ಸ್ಥಾನಮಾನ ನೀಡಿ ಲಿಂಗಾಯತರಿಗೆ ಅವಮಾನ ಮಾಡಲಾಗಿದೆ ಎಂದು ಎಂಬಿಪಿ ಹೇಳಿದ್ದರು. ಇದಕ್ಕೆ ಲಿಂಗಾಯತ ಸಮಾಜದ ಪ್ರಭಾವಿ ನಾಯಕ ಯಡಿಯೂರಪ್ಪ ಸಿಎಂ ಆಗಲು ಎಂಬಿ ಪಾಟೀಲ್ ಕಾಂಗ್ರೆಸ್ಸಿಗೆ ಬೆಂಬಲ ನೀಡಲಿ ಎಂದು ಬಿಜೆಪಿ ನಾಯಕ ಸಿಟಿ ರವಿ ಟ್ವೀಟ್ ಮಾಡಿ ತಿರುಗೇಟು ನೀಡಿದ್ದರು.

ಮಾನ್ಯ @MBPatil ಅವರೆ,

ರೈತ ಬಂಧು @BSYBJP ರವರನ್ನು ಈ ಕೂಡಲೇ ಮುಖ್ಯಮಂತ್ರಿಯಾಗಿ ಮಾಡಲು @BJP4Karnataka ಸಿದ್ಧವಿದೆ.

ನಿಮ್ಮ ಕೈಯಲ್ಲಿ ಇಲ್ಲದ ಭವಿಷ್ಯ ಹೇಳುವುದನ್ನು ಬಿಟ್ಟು ವರ್ತಮಾನದ ಬಗ್ಗೆ ಮಾತನಾಡಿ.

ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ನಿಮ್ಮ ಕೈಯಲ್ಲಿದೆ. ಈಗ ತೋರಿಸಿ ನಿಮ್ಮ ಲಿಂಗಾಯತ ಪರ ಕಾಳಜಿಯನ್ನು. https://t.co/RpzXCMQKaK

— C T Ravi ???????? ಸಿ ಟಿ ರವಿ (@CTRavi_BJP) June 3, 2019

ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಜೊತೆ ಮಾತನಾಡಿದ ಎಂಬಿಪಿ ಬಿಎಸ್‍ವೈರನ್ನು ಕಾಂಗ್ರೆಸ್ಸಿಗೆ ಆಹ್ವಾನಿಸುವ ಮೂಲಕ ಸಿ.ಟಿ ರವಿ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

ನಾಯಕ ರಾಮಲಿಂಗಾರೆಡ್ಡಿ ಪರ ಬ್ಯಾಟಿಂಗ್ ನಡೆಸಿದ ಗೃಹ ಸಚಿವರು, ರಾಮಲಿಂಗಾರೆಡ್ಡಿ ನಮ್ಮ ಪಕ್ಷದ ಅತ್ಯುನ್ನತ ನಾಯಕರು. ಅವರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಅವರು ಪಕ್ಷಕ್ಕೆ ದೊಡ್ಡ ಸ್ವತ್ತು. ಪಕ್ಷ ಅವರ ಭಾವನೆಗಳಿಗೆ ಗೌರವಿಸಬೇಕಾಗುತ್ತೆ ಎಂದರು.

mb patil 1

ಗುರುವಾರ ಬೆಂಗಳೂರಿಗೆ ಹೋದ ಮೇಲೆ ರಾಮಲಿಂಗಾರೆಡ್ಡಿಯವರನ್ನ ಭೇಟಿ ಮಾಡುತ್ತೇನೆ. ಅವರಿಗೆ ಪಕ್ಷದ ಮೇಲಿರುವ ನಿಷ್ಠೆ ನಮಗಿಲ್ಲ. ಅವರು ನಿಷ್ಠಾವಂತ, ಪ್ರಭಾವ ಹೊಂದಿರುವ ನಾಯಕರು. ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು. ಅಲ್ಲದೆ ಮೂಲ ಹಾಗೂ ಹೊಸ ಕಾಂಗ್ರೆಸ್ಸಿಗರ ಬಗ್ಗೆ ಅವರು ಹೇಳಿದ್ದು ಸರಿ ಇದೆ ಎಂದು ರಾಮಲಿಂಗಾ ರೆಡ್ಡಿ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಅಲ್ಲದೇ ರಾಮಲಿಂಗಾ ರೆಡ್ಡಿಯವರನ್ನ ವೇಣುಗೋಪಾಲ್ ಅವರು ಕರೆದು ಚರ್ಚೆ ಮಾಡುತ್ತಾರೆ ಎಂದು ಸ್ಪಷ್ಟ ಪಡಿಸಿದರು.

ಪೊಲೀಸ್ ಇಲಾಖೆಯಲ್ಲಿರುವ ವೇತನ ತಾರತಮ್ಯ ನಿವಾರಣೆಗಾಗಿ ಔರದ್ಕರ್ ಸಮಿತಿ ನೀಡಿರುವ ವರದಿ ಜಾರಿ ಸಂಬಂಧ ಜೂನ್ 10ರಂದು ಸಿಎಂ ಜೊತೆ ಚರ್ಚೆ ನಡೆಸುತ್ತೇನೆ. ಅಂದು ಒಳ್ಳೆಯ ತೀರ್ಮಾನ ಹೊರ ಬೀಳುವ ವಿಶ್ವಾಸವಿದೆ ಎಂದು ತಿಳಿಸಿದರು.

Mr Prahlad Joshi is a 4 time MP. Mr Suresh Angadi is also a 4 time MP.
Mr Joshi is made Cabinet Minister with 3 portfolios, Mr Angadi just a MoS.

This is an injustice for Lingayats. WHY this differential treatment @BJP4Karnataka @BJP4India ?

— M B Patil (@MBPatil) June 3, 2019

ಅಂಗಡಿ ಬಗ್ಗೆ ಪಾಟೀಲ್ ಹೇಳಿದ್ದೇನು?
ಮಾಧ್ಯಮಗಳ ಜೊತೆ ವಿಜಯಪುರದಲ್ಲಿ ಮಾತನಾಡಿದ್ದ ಪಾಟೀಲ್ ಅವರು, ಸುರೇಶ್ ಅಂಗಡಿ ಹಾಗೂ ಪ್ರಹ್ಲಾದ್ ಜೋಶಿಗೆ ಮಾನದಂಡ ಬೇರೆ-ಬೇರೆಯಾಗಿದೆ. ಇಬ್ಬರು ನಾಲ್ಕು ಬಾರಿ ಗೆದ್ದು ಬಂದಿದ್ದು, ಅನುಭವ ಹೊಂದಿದ್ದಾರೆ. ಆದರೆ ಪ್ರಹ್ಲಾದ್ ಜೋಶಿಗೆ ಕ್ಯಾಬಿನೆಟ್ ಸ್ಥಾನ ಸಿಕ್ಕಿದರೆ ಸುರೇಶ್ ಅಂಗಡಿಯವರು ರಾಜ್ಯ ಸಚಿವರು. ಇಬ್ಬರು ಒಂದೇ ಸಮಾನವಾಗಿದ್ದರೂ ವ್ಯತ್ಯಾಸ ಮಾಡಿದ್ದಾರೆ. ಈ ವಿಚಾರವನ್ನು ಲಿಂಗಾಯತರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದರು.

ಶ್ರೀಯುತ @CTRavi_BJP ಅವರೆ, ನಮ್ಮ ಯಡಿಯೂರಪ್ಪನವರ ಪರಿಸ್ಥಿತಿಯೂ ಅದೇ ರೀತಿ ಆಗಬಹುದೇನೊ ಅನ್ನಿಸುತ್ತಿದೆ…???? https://t.co/K8QWDB5Fwb

— M B Patil (@MBPatil) June 3, 2019

ಸುರೇಶ್ ಅಂಗಡಿಯವರಿಗೂ ಕ್ಯಾಬಿನೆಟ್ ದರ್ಜೆ ನೀಡಬೇಕಿತ್ತು. ಇದಕ್ಕೆ ಬಿಜೆಪಿ ನಾಯಕರು ಉತ್ತರ ನೀಡಬೇಕು. ಇದು ಒಂದು ದೊಡ್ಡ ಅನ್ಯಾಯ. ಈ ಮೂಲಕ ಲಿಂಗಾಯತರಿಗೆ ಅಗೌರವ ತೋರಿಸಿದ್ದಾರೆ. ಪಾಪ ಸುರೇಶ್ ಅಂಗಡಿಯವರು ಕೇಂದ್ರದ ರಾಜ್ಯ ಸಚಿವರು. ಅದಕ್ಕಾಗಿ ಪ್ರಹ್ಲಾದ್ ಜೋಶಿ ಕಡೆಗೆ ಅಂಗಡಿ ನೋಡಬೇಕು. ಸ್ವಾಭಿಮಾನವಿದ್ದರೆ ಸುರೇಶ್ ಅಂಗಡಿ ಜಾಗದಲ್ಲಿ ನಾನು ಇದ್ದಿದ್ದರೆ ಸಚಿವ ಸ್ಥಾನ ತಿರಸ್ಕಾರ ಮಾಡುತ್ತಿದ್ದೆ ಎಂದು ಹೇಳಿಕೆ ನೀಡಿದ್ದರು.

BSY 3

ಸಿಟಿ ರವಿ ಹೇಳಿದ್ದು ಏನು?
ಬಿಜೆಪಿ ಪಕ್ಷ ಲಿಂಗಾಯುತ ಸಮುದಾಯದ ನಾಯಕರರಾದ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲು ಸಿದ್ಧವಿದೆ. ಲಿಂಗಾಯುತ ಸಮುದಾಯದ ಮೇಲೆ ಕಾಳಜಿ ಇರುವ ನೀವು ಏಕೆ ಕಾಂಗ್ರೆಸ್‍ಗೆ ರಾಜೀನಾಮೆ ನೀಡಿ ಬಿಜೆಪಿಗೆ ಬಂದು ಲಿಂಗಾಯುತ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಬಾರದು. ನಿಮ್ಮ ಕೈಯಲ್ಲಿ ಇಲ್ಲದ ಭವಿಷ್ಯ ಹೇಳುವುದನ್ನು ಬಿಟ್ಟು ವರ್ತಮಾನದ ಬಗ್ಗೆ ಮಾತನಾಡಿ. ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ನಿಮ್ಮ ಕೈಯಲ್ಲಿದೆ. ನಿಮ್ಮ ಲಿಂಗಾಯತ ಪರ ಕಾಳಜಿಯನ್ನು ಈಗ ತೋರಿಸಿ ಎಂದು ಬರೆದು ಕಾಲೆಳೆದಿದ್ದರು.

TAGGED:bjpcongressM.B PatilPublic TVRamalinga reddyvijayapurayeddyurappaಎಂ.ಬಿ.ಪಾಟೀಲ್ಕಾಂಗ್ರೆಸ್ಪಬ್ಲಿಕ್ ಟಿವಿಬಿಜೆಪಿಯಡಿಯೂರಪ್ಪರಾಮಲಿಂಗಾ ರೆಡ್ಡಿವಿಜಯಪುರ
Share This Article
Facebook Whatsapp Whatsapp Telegram

You Might Also Like

Siddaramaiah 8
Karnataka

ಸಿಗಂದೂರು ಸೇತುವೆ| ಇಂದಿನ ಕಾರ್ಯಕ್ರಮವನ್ನು ಮುಂದೂಡಿ, ಬೇರೆ ದಿನ ನಿಗದಿಗೆ ಸಿಎಂ ಪತ್ರ

Public TV
By Public TV
24 minutes ago
Auto Advertisement RTO Fine
Bengaluru City

ಆಟೋ ಚಾಲಕರೇ ಗಮನಿಸಿ, ಹಿಂದೆ ಜಾಹೀರಾತು ಹಾಕ್ತೀರಾ? ಹಣದಾಸೆಗೆ ಪೋಸ್ಟರ್ ಹಾಕಿದ್ರೆ ಬೀಳುತ್ತೆ ಭಾರೀ ದಂಡ!

Public TV
By Public TV
29 minutes ago
Sigandur Bridge Nitin Gadkari
Districts

2019 ರಲ್ಲಿ ಶಂಕು, ಇಂದು ಲೋಕಾರ್ಪಣೆ – ಸಿಗಂದೂರು ಸೇತುವೆಯನ್ನು ಉದ್ಘಾಟಿಸಲಿದ್ದಾರೆ ಗಡ್ಕರಿ

Public TV
By Public TV
54 minutes ago
Leopard 2
Latest

ಸಂಜಯ್‌ ಗಾಂಧಿ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆ ಸಫಾರಿಗೆ ಪ್ಲ್ಯಾನ್‌ – ಪ್ರವಾಸಿಗರಿಗೆ ಸಿಗಲಿದೆ ಥ್ರಿಲ್ಲಿಂಗ್‌ ಅನುಭವ

Public TV
By Public TV
1 hour ago
Chitradurga Molakalmuru Yogesh Babu Flex Fight
Chitradurga

ಮೊಳಕಾಲ್ಮೂರಲ್ಲಿ ಬೀದಿಗೆ ಬಂದ ‘ಕೈ’ ನಾಯಕರ ಶೀತಲ ಸಮರ – ಪ.ಪಂ. ಕಚೇರಿ ಬಳಿ ಯೋಗೀಶ್ ಬಾಬು ಧರಣಿ

Public TV
By Public TV
1 hour ago
Saina Nehwal Parupalli Kashyap
Latest

ಡಿವೋರ್ಸ್‌ ಘೋಷಿಸಿದ ಸೈನಾ ನೆಹ್ವಾಲ್‌-ಪರುಪಳ್ಳಿ ಕಶ್ಯಪ್ ದಂಪತಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?