ಪ್ರಣಾಳಿಕೆಗೆ ತಕ್ಕಂತೆ ನಡೆಯದಿದ್ದರೆ ಪ್ರತಿಭಟನೆ ಎದುರಿಸಿ: ಶ್ರೀರಾಮುಲು

Public TV
1 Min Read
HDK Sreeramalu

ರಾಯಚೂರು: ಪ್ರಣಾಳಿಕೆಯನ್ನು ಕಾರ್ಯರೂಪಕ್ಕೆ ತರಬೇಕು, ಇಲ್ಲದಿದ್ದರೆ ಒಂದು ಕ್ಷಣ ಕೂಡ ನೀವು ಅಧಿಕಾರದಲ್ಲಿ ಉಳಿಯದಂತೆ ಪ್ರತಿಭಟನೆ ಮಾಡುತ್ತೇವೆ ಎಂದು ಶಾಸಕ ಶ್ರೀರಾಮುಲು ಹೇಳಿದ್ದಾರೆ.

ವಿಧಾನ ಪರಿಷತ್ ಪದವಿಧರ ಕ್ಷೇತ್ರದ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಜಿಲ್ಲೆಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಸಹಕಾರಿ ಬ್ಯಾಂಕ್‍ಗಳಲ್ಲಿರುವ ರೈತರ ಸಾಲವನ್ನು ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ರೈತರ ಸಾಲ ಮನ್ನಾ ಮಾಡದಿದ್ದರೆ ವಿಧಾನಸಭೆ ಹೊರಗೆ ಹಾಗೂ ಒಳಗೆ ಹೋರಾಟ ಮಾಡುತ್ತೇವೆ. ಹೋರಾಟ ಮಾಡುವ ಹಕ್ಕಿದೆ. ಮುಖ್ಯಮಂತ್ರಿಗಳಾಗಿ ಅವರು ಏನು ಕ್ರಮಬೇಕಾದರೂ ತಗೆದುಕೊಳ್ಳಲಿ. ಬೆಂಗಳೂರು ಹೊರತುಪಡೆಸಿ ರಾಜ್ಯದ ವಿವಿಧೆಡೆ ಬಂದ್ ಕೈಗೊಳ್ಳಲಾಗುವುದು. ರೈತರಿಗಾಗಿ ನಾವು ಹೋರಾಟ ಮಾಡುತ್ತಿದ್ದು ಅವರು ಬೆಂಬಲ ನೀಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

sreeramulu

ಬಿಜೆಪಿಯು ಕಾಂಗ್ರೆಸ್ ಹಾಗೂ ಜೆಡಿಎಸ್ ಗಿಂತ ಹೆಚ್ಚು ಸ್ಥಾನ ಪಡೆದಿತ್ತು. ನಾವು ರೈತರ ಸಾಲ ಮನ್ನಾ ಮಾಡುತ್ತಿದ್ದೇವು. ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಮುಖ್ಯಮಂತ್ರಿ ಆಗುತ್ತಿದ್ದಂತೆ ಪ್ರಣಾಳಿಕೆ ಕೈಚೆಲ್ಲುತ್ತಿದ್ದಾರೆ ಎಂದು ಎಚ್‍ಡಿಕೆ ವಿರುದ್ಧ ವಾಗ್ದಾಳಿ ನಡೆಸಿದರು.

ವಾಮಮಾರ್ಗದಿಂದ ರಚನೆಯಾದ ಸರ್ಕಾರಕ್ಕೆ ಮಂತ್ರಿ ಮಂಡಲ ರಚನೆ ಕಷ್ಟವಾಗುತ್ತಿದೆ. ಸಮ್ಮಿಶ್ರ ಸರ್ಕಾರಕ್ಕೆ ಬಹಳ ದಿನ ನಡೆಯುವುದಿಲ್ಲ, ಮುಂದೆ ನಾವೇ ಅಧಿಕಾರಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *