Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೊಮ್ಮಾಯಿಯವರೇ, ಬಿಎಸ್‌ವೈಯೊಂದಿಗೆ ತಿರುಗಾಡಿದ್ರೆ ನೀವೂ ಲಗಾ ಹೊಡಿತೀರಿ: ಯತ್ನಾಳ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಬೊಮ್ಮಾಯಿಯವರೇ, ಬಿಎಸ್‌ವೈಯೊಂದಿಗೆ ತಿರುಗಾಡಿದ್ರೆ ನೀವೂ ಲಗಾ ಹೊಡಿತೀರಿ: ಯತ್ನಾಳ್

Belgaum

ಬೊಮ್ಮಾಯಿಯವರೇ, ಬಿಎಸ್‌ವೈಯೊಂದಿಗೆ ತಿರುಗಾಡಿದ್ರೆ ನೀವೂ ಲಗಾ ಹೊಡಿತೀರಿ: ಯತ್ನಾಳ್

Public TV
Last updated: October 7, 2022 10:52 pm
Public TV
Share
2 Min Read
Basanagowda Yatnal,
SHARE

ಬೆಳಗಾವಿ: ಬೊಮ್ಮಾಯಿಯವರೇ (Basavaraj Bommai) ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಿ. ಇಲ್ಲವಾದರೆ ನೀವು ಪರ್ಮನೆಂಟ್ ಆಗಿ ಮಾಜಿ ಸಿಎಂ ಆಗ್ತೀರಿ ಎಂದು ಬಿಜೆಪಿ (BJP) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಟಾಂಗ್ ನೀಡಿದರು.

ಮೂಡಲಗಿ ತಾಲೂಕಿನ ಕಲ್ಲೋಳಿ ಗ್ರಾಮದಲ್ಲಿ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ 2ಎ ಸಂಬಂಧ ಹಮ್ಮಿಕೊಂಡ ಸಮಾವೇಶದಲ್ಲಿ ಮಾತನಾಡಿ, ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ವಿರುದ್ಧ ಮತ್ತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದರು. ಬೊಮ್ಮಾಯಿಯವರೇ, ಬಿಎಸ್‌ವೈಯವರೊಂದಿಗೆ ತಿರುಗಾಡಿದರೆ ನೀವೂ ಲಗಾ ಹೊಡೆಯುತ್ತೀರಿ. ಮೊನ್ನೆ ಅಧಿವೇಶನದಲ್ಲಿ ನಾನು ಪಂಚಮಸಾಲಿ ವಿರೋಧಿ ಅಲ್ಲ ಅಂತ ಯಡಿಯೂರಪ್ಪ ಭಾಷಣ ಮಾಡಿದರು. ಹಾಗಾದರೆ ಸಿಎಂ ಆದ ವೇಳೆ ಪಂಚಮಸಾಲಿ ಸಮುದಾಯಕ್ಕೆ ಏಕೆ ಮೀಸಲಾತಿ ನೀಡಲಿಲ್ಲ? ಮೀಸಲಾತಿಗಾಗಿ ಸೂಚಿಸಿದ್ದೇನೆ ಅಂದ್ರು, ಸಿಎಂ ಆದವ್ರು ಯಾರಾದರೂ ಸೂಚಿಸುತ್ತಾರಾ? ಬೊಮ್ಮಾಯಿಯವರೇ, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು. ಇಲ್ಲವಾದರೆ ನೀವು ಪರ್ಮನೆಂಟ್ ಆಗಿ ಮಾಜಿ ಸಿಎಂ ಆಗುತ್ತೀರಿ ಎಂದರು.

Basavaraj Bommai

ಯಡಿಯೂರಪ್ಪ, ಬೊಮ್ಮಾಯಿ ತಿರುಪತಿಯಲ್ಲಿ ಏನ್ ಮಾತನಾಡಿದ್ದಾರೆ ಗೊತ್ತು. ಯಡಿಯೂರಪ್ಪ, ಬೊಮ್ಮಾಯಿ 3 ಪ್ರಮುಖ ಅಂಶ ಮಾತನಾಡಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬಾರದು. ನನ್ನ ಮಗನನ್ನು ಮಂತ್ರಿ ಮಾಡಬೇಕು. ಯತ್ನಾಳ್ ಅವರನ್ನು ಮಂತ್ರಿ ಮಾಡಬೇಡಿ ಅಂದಿದ್ದಾರೆ. ನಮ್ಮನ್ನೆಲ್ಲರೂ ಬಳಸಿಕೊಂಡು ಶೇ.2 ರಷ್ಟು ಇರುವವವರು ಸಿಎಂ ಆಗಿದ್ದಾರೆ. ನನಗೂ ಸಿಎಂ ಆಗಿ ಒಳ್ಳೆಯ ಆಡಳಿತ ನೀಡುವ ತಾಕತ್ ಇದೆ. ನಮ್ಮವರು ಅಂತವರ ಮುಂದೆ ಕೈಕಟ್ಟಿ ನಿಂತು ಮಂತ್ರಿ ಸ್ಥಾನ ಕೇಳುವ ಸ್ಥಿತಿ ಬಂತು. ಕೆಲ ದಿನಗಳ ಹಿಂದೆ ಸಿಎಂ ಬಸವರಾಜ್ ಬೊಮ್ಮಾಯಿ ನನ್ನ ಜೊತೆಗೆ ಕ್ಲೋಸ್ ಡೋರ್ ಮೀಟಿಂಗ್ ಮಾಡಿದ್ರು. ಬಸನಗೌಡ್ರೆ, ನೀವು ಸ್ವಲ್ಪ ಶಾಂತವಾಗಿರಿ, ನಿಮ್ಮನ್ನು ಮಂತ್ರಿ ಮಾಡ್ತಿನಿ ಅಂದಿದ್ದಾರೆ. ನನಗೇನೂ ಮಂತ್ರಿಸ್ಥಾನ ಕೊಡಬೇಡಿ, ನಮ್ಮ ಸಮಾಜಕ್ಕೆ 2ಎ ಮೀಸಲಾತಿ ಕೊಡಿ ಎಂದಿದ್ದೇನೆ. ಚುನಾವಣೆಗೆ 6 ತಿಂಗಳು ಬಾಕಿ ಇದೆ. ಮಂತ್ರಿ ಆಗಲು ನಾನೇನು ಹುಚ್ಚನಾ ಎಂದು ಪ್ರಶ್ನಿಸಿದರು.

BSY

ಬಿಎಸ್‌ವೈ ಜೊತೆಗೆ ಸಿಎಂ ರಾಜ್ಯದ 50 ಕ್ಷೇತ್ರದಲ್ಲಿ ಜೋಡಿ ಪ್ರವಾಸ ಮಾಡಲಿದ್ದಾರಂತೆ. ಇಬ್ಬರ ಪ್ರವಾಸದಿಂದ ಏನೂ ಆಗುವುದಿಲ್ಲ. ಸಿಎಂ ಬೊಮ್ಮಾಯಿ ಅವರೊಂದಿಗೆ ಪ್ರವಾಸ ಮಾಡಿದ್ರೆ ಲಗಾ ಹೊಡಿಸ್ತಾರೆ. ರಾಜ್ಯದ ಎಲ್ಲಾ ಕಡೆಯೂ ಲಿಂಗಾಯತ ಪಂಚಮಸಾಲಿ ಸಮಾಜದ ಬಂಧುಗಳಿದ್ದಾರೆ. ಮೀಸಲಾತಿ ಕೊಡದಿದ್ರೆ ಅವರು ಪ್ರವಾಸ ಮಾಡಿದ ಕಡೆಗಳಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬಿಎಸ್ ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ ನಡೆಸಿದರು. ಇದನ್ನೂ ಓದಿ:

Basangouda Patil Yatnal

ಈರಣ್ಣ ಕಡಾಡಿ ಪಂಚಮಸಾಲಿ ಸಮಾಜದವರು ಎಂದು ರಾಜ್ಯಸಭೆಗೆ ಹೋಗಿದ್ದಾರೆ. ನನ್ನ ಮೇಲೆ ಯಾರೋ ನಾಯಕ ಇದಾರೆ ಅನ್ನೋದೇನಿಲ್ಲ. ನನ್ನನ್ನು ಸೋಲಿಸಲು ನಮ್ಮ ಪಕ್ಷದವರೂ ಸೇರಿ ಹಲವರು ಈಗಲೇ ಹಣ ವಿತರಣೆ ಮಾಡ್ತಿದ್ದಾರೆ. ನಮ್ಮ ವಿಜಯಪುರದಲ್ಲಿ ಒಬ್ಬ ಮಲ್ಲಪ್ಪ ಶೆಟ್ಟಿ ಇದ್ದಾನೆ. ಅವನಿಗೆ ಹಣ ನೀಡುತ್ತಿದ್ದಾರೆ. ಬೆಳಗಾವಿಯಲ್ಲಿ ಇನ್ನು ಮುಂದೆ ನಮ್ಮ ಸಮಾಜಕ್ಕೆ ಗೌರವ ವೃದ್ಧಿ ಆಗಲಿದೆ. ಎಸ್‌ಸಿ, ಎಸ್‌ಟಿ ಬಳಿಕ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡುವ ಭರವಸೆ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನನಗೆ ಭರವಸೆ ನೀಡಿದ್ದಾರೆ. ಮೀಸಲಾತಿ ಕೊಡಲೇಬೇಕು ಎಂದು ನಾನು ಆಗ್ರಹ ಮಾಡಿದ್ದೇನೆ. ಇಲ್ಲವಾದರೆ ನವೆಂಬರ್ ಮೊದಲ ವಾರದಲ್ಲೇ ವಿಧಾನಸೌಧ ಮುತ್ತಿಗೆ ಹಾಕಲಾಗುವುದು. ಸಮಾಜದ 25 ಲಕ್ಷ ಜನರು ವಿಧಾನಸೌಧ ಮುತ್ತಿಗೆ ಹಾಕಲಿದ್ದಾರೆ ಎಂದು ರಾಜ್ಯ ಸರ್ಕಾರಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ:

Live Tv
[brid partner=56869869 player=32851 video=960834 autoplay=true]

TAGGED:Basangouda Patil YatnalBasavaraj BommaibjpBS Yediyurappaಬಸನಗೌಡ ಪಾಟೀಲ್ ಯತ್ನಾಳ್ಬಸವರಾಜ ಬೊಮ್ಮಾಯಿಬಿಎಸ್ ಯಡಿಯೂರಪ್ಪಬಿಜೆಪಿ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Sudeep 2
Districts

ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌ – ಅಧಿಕಾರಿಗಳಲ್ಲಿ ಕೆಲಕಾಲ ಆತಂಕ

Public TV
By Public TV
5 minutes ago
BWSSB Bengaluru Water Board
Bengaluru City

ಜಲಮಂಡಳಿಯ ಒನ್ ಟೈಮ್ ಸೆಟಲ್ಮೆಂಟ್ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Public TV
By Public TV
6 minutes ago
Jeevaraj 3
Chikkamagaluru

ಶೃಂಗೇರಿ | ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಮೇಲುಗೈ – ಶಾರದಾಂಬೆ ದರ್ಶನ ಪಡೆದ ಅಭ್ಯರ್ಥಿ ಜೀವರಾಜ್

Public TV
By Public TV
27 minutes ago
Air Arabia flight
Latest

ಫ್ಲೈಟ್‌ನಲ್ಲಿ 2 ಬಾರಿ ವಾಂತಿ – ಚೆನ್ನೈನಲ್ಲಿ ಚಲಿಸುತ್ತಿದ್ದ ವಿಮಾನದಿಂದ ಹೊರಕ್ಕೆ ಜಿಗಿದ ಪ್ರಯಾಣಿಕ

Public TV
By Public TV
43 minutes ago
DK Shivakumar TB Dam
Bellary

ಟಿಬಿ ಡ್ಯಾಂ ಮುಂದಿನ 50 ವರ್ಷ ಸುಭದ್ರ, ಕ್ರಸ್ಟ್ ಗೇಟ್‌ಗಳ ಅಳವಡಿಕೆ ಪೂರ್ಣ- ಮೇ 15ಕ್ಕೆ ಲೋಕಾರ್ಪಣೆ: ಡಿಕೆಶಿ

Public TV
By Public TV
44 minutes ago
Preity Zinta Invites PBKS Fan Injured
Cricket

ಸಿಕ್ಸರ್‌ನಿಂದ ಗಾಯಗೊಂಡಿದ್ದ ಅಭಿಮಾನಿಗೆ ವಿವಿಐಪಿ ಟಿಕೆಟ್ ನೀಡಿದ ಪ್ರೀತಿ ಜಿಂಟಾ

Public TV
By Public TV
49 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?