– ಅರಸೀಕೆರೆ ಕ್ಷೇತ್ರಕ್ಕೆ ಕುಡಿಯುವ ನೀರು ಸಿಕ್ಕಿದ್ದೇ ಶಿವಲಿಂಗೇಗೌಡ ಅವರಿಂದ ಎಂದ ಮಾಜಿ ಸಿಎಂ
ಹಾಸನ: ಜೆಡಿಎಸ್ನಲ್ಲಿ (JDS) ದೇವೇಗೌಡರ (HD Devegowda) ಕುಟುಂಬದವರು ಹೇಳಿದ್ದನ್ನ ಕೇಳಿಕೊಂಡು ಬಿದ್ದಿರಬೇಕು, ಪ್ರಶ್ನೆ ಮಾಡಿದ್ರೆ ಪಕ್ಷದಲ್ಲಿ ಯಾರೂ ಉಳಿಯಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹಾಸನ (Hassan) ಜಿಲ್ಲೆಯ ಅರಸೀಕೆರೆ ಪಟ್ಟಣದಲ್ಲಿ ಮಾಜಿ ಶಾಸಕ ಕೆ.ಎಂ ಶಿವಲಿಂಗೇಗೌಡ (Shivalinge Gowda) ಅವರನ್ನ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷದಲ್ಲಿ ಶಿವಲಿಂಗೇಗೌಡ ಅವರಿಗೆ ಉಸಿರುಗಟ್ಟಿಸುವ ವಾತಾವರಣ ಇತ್ತು. ದೇವೇಗೌಡರ ಕುಟುಂಬದವರು ಹೇಳಿದ್ದನ್ನ ಕೇಳಿಕೊಂಡು ಬಿದ್ದಿರಬೇಕು, ಪ್ರಶ್ನೆ ಮಾಡಿದ್ರೆ ಯಾರೂ ಉಳಿಯಲ್ಲ. ಅದಕ್ಕಾಗಿ ಅವರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನ್ಯಾಯಾಧೀಶರ ಮುಂದೆ ಪುನೀತ್ ಕೆರೆಹಳ್ಳಿ ಹಾಜರು – ಮತ್ತೆ 7 ದಿನ ಕಸ್ಟಡಿಗೆ ಪಡೆದ ಪೊಲೀಸರು
ಅರಸೀಕೆರೆ ಕ್ಷೇತ್ರಕ್ಕೆ ಕುಡಿಯುವ ನೀರು ಸಿಕ್ಕಿದ್ದರೆ ಅದಕ್ಕೆ ಶಿವಲಿಂಗೇಗೌಡ ಅವರೇ ಕಾರಣ, ಬೇರೆ ಯಾರೂ ಅಲ್ಲ. ಶಿವಲಿಂಗೇಗೌಡ ಅವರು ಹಾಲಿಗಾದ್ರೂ ಹಾಕಿ, ನೀರಿಗಾದ್ರೂ ಹಾಕಿ ಅಂದಿದ್ದಾರೆ. ಆದರೆ ನಾವು ಹಾಲಿಗೇ ಹಾಕೋದು. ನಾವೆಲ್ಲ ನಿಮ್ಮ ಜೊತೆ ಇದ್ದೇವೆ. ನೀವೂ ಈಗ ನಮ್ಮ ಮನೆ ಸದಸ್ಯರು, ನಿಮ್ಮ ಹಾಗೂ ನಿಮ್ಮ ಕ್ಷೇತ್ರದ ಯೋಗಕ್ಷೇಮ ನೋಡಿಕೊಳ್ತೇವೆ. ನಾವು ಕೊಟ್ಟ ಭರವಸೆ ಈಡೇರಿಸಲು ಆಗದಿದ್ದರೆ ಒಂದು ಸೆಕೆಂಡ್ ಕೂಡ ಅಧಿಕಾರದಲ್ಲಿ ಇರಲ್ಲ. ಕೊಟ್ಟ ಮಾತು ಈಡೇರಿಸದಿದ್ದರೆ ನಿಮಗೆ ನಮಸ್ಕಾರ ಮಾಡಿ ರಾಜಕೀಯದಿಂದಲೇ ನಿವೃತ್ತಿ ಆಗುತ್ತೇವೆ ಎಂದು ಶಪಥ ಮಾಡಿದ್ದಾರೆ. ಇದನ್ನೂ ಓದಿ: ಮಾಜಿ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ