ಮೈಸೂರು: ನಮ್ಮನ್ನ ಸಸ್ಪೆಂಡ್ ಮಾಡಿದ್ರು ಪರವಾಗಿಲ್ಲ. ನಾನು ಸುಮಲತಾ ಪರವಾಗಿಯೇ ಪ್ರಚಾರ ಮಾಡೋದು ಎಂದು ಮೈಸೂರಿನ ಕೆ.ಆರ್ ನಗರದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಸುಬ್ರಹ್ಮಣ್ಯ ಹೇಳಿಕೆ ನೀಡಿದ್ದಾರೆ.
ಸುಮಲತಾ ಎಂಪಿ ಆಗೋಕೆ ಸೂಕ್ತ ಅಭ್ಯರ್ಥಿ. ನಾವು ಒಳ್ಳೆಯ ಅಭ್ಯರ್ಥಿ ಜೊತೆ ಕೆಲಸ ಮಾಡ್ತಿದ್ದೀವಿ. ಅದಕ್ಕಾಗಿ ನಮಗೆ ಯಾವುದೇ ಭಯ ಇಲ್ಲ. ಹಿಂದೆಯಲ್ಲ ಕಾಂಗ್ರೆಸ್ ಅಭ್ಯರ್ಥಿ ಓಡಾಡಿದ್ದೇವೆ. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಇಲ್ಲ ಅದಕ್ಕೆ ಸುಮಕ್ಕನ ಜೊತೆ ಓಡಾಡುತ್ತೇವೆ. ಬಹಿರಂಗವಾಗಿ ನಾನು ಸುಮಲತಾ ಅವರಿಗೆ ಬೆಂಬಲಿಸುತ್ತೇನೆ ಎಂದು ಹೇಳುವ ಮೂಲಕ ಮೈತ್ರಿ ಪಕ್ಷಗಳ ಸೂತ್ರಕ್ಕೆ ಡೋಂಟ್ ಕೇರ್ ಎಂದಿದ್ದಾರೆ.
ಸಾ.ರಾ.ಮಹೇಶ್ ಎಚ್ಚರಿಕೆ:
ಮೈತ್ರಿ ಸರ್ಕಾರದಲ್ಲಿ ಎರಡು ಪಕ್ಷದ ನಾಯಕರು ಒಮ್ಮತದಿಂದ ಕೆಲಸ ಮಾಡಬೇಕು. ಆದರೆ ನಿಖಿಲ್ ಕುಮಾರಸ್ವಾಮಿ ಹೆಸರು ಹೇಳಿದ ನಂತರ ಕಾಂಗ್ರೆಸ್ ಮುಖಂಡರು ಮತ್ತೊಬ್ಬ ಆಕಾಂಕ್ಷಿಯ ಜೊತೆ ಓಡಾಡುತ್ತಿದ್ದಾರೆ. ಆದರೆ ಅವರನ್ನು ಸ್ವಾಗತಿಸುತ್ತಿದ್ದಾರೆ. ಈ ರೀತಿ ಮಂಡ್ಯದಲ್ಲಿ ನಡೆದು ಕೊಂಡಾಗ ಮೈಸೂರು ಕಾರ್ಯಕರ್ತರ ಮೇಲೂ ಅದು ಪರಿಣಾಮ ಬೀರುತ್ತದೆ. ಕಾಂಗ್ರೆಸ್-ಜೆಡಿಎಸ್ ಪಕ್ಷದ ನಾಯಕರು ನಮ್ಮ ಗುಂಪುಗಾರಿಕೆ, ವೈಯಕ್ತಿಕ ಇಚ್ಛಾಶಕ್ತಿ ಹಾಗೂ ಭಿನ್ನಾಭಿಪ್ರಾಯ ಬಿಡಬೇಕು ಎಂದು ಹೇಳುವ ಮೂಲಕ ಸಚಿವ ಸಾ.ರಾ ಮಹೇಶ್ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv