ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ನಾನು ಬಿಜೆಪಿಗೆ ಬರಲ್ಲ. ಪಕ್ಷೇತರಳಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಸುಮಲತಾ ಅಂಬರೀಶ್ ಕಮಲ ಮುಖಂಡರ ಬಳಿ ತಮ್ಮ ಮನದ ಇಂಗಿತ ವ್ಯಕ್ತಪಡಿಸಿದ್ದಾರೆ.
ಗುರುವಾರ ಮಂಡ್ಯದಲ್ಲಿ ಸುಮಲತಾ ಅವರು ಬಿಜೆಪಿ ಮುಖಂಡ ಶಿವಲಿಂಗಯ್ಯ ಅವರ ಮನೆಗೆ ತೆರಳಿ ಮಾತುಕತೆ ನಡೆಸಿದ್ದರು. ಮಾತುಕತೆ ವೇಳೆ ತಮಗೆ ಬೆಂಬಲ ನೀಡುವಂತೆ ಬಿಜೆಪಿ ಮುಖಂಡ ಶಿವಲಿಂಗಯ್ಯ ಅವರನ್ನು ಸುಮಲತಾ ಮನವಿ ಮಾಡಿಕೊಂಡಿದ್ದಾರೆ. ಈ ವೇಳೆ ಶಿವಲಿಂಗಯ್ಯ ಅವರು ಬಿಜೆಪಿಗೆ ಸೇರ್ಪಡೆಯಾಗುವಂತೆ ಸುಮಲತಾಗೆ ಆಹ್ವಾನ ನೀಡಿದ್ದಾರೆ. ಎಂದು ಹೇಳಲಾಗುತ್ತಿದೆ.
ನಾನು ಇನ್ನೂ ಕಾಂಗ್ರೆಸ್ ಟಿಕೆಟ್ ನಿರೀಕ್ಷೆಯಲ್ಲಿದ್ದೇನೆ. ಆದರೆ ಮಂಡ್ಯ ಜನ ಮಾತ್ರ ಸ್ವತಂತ್ರ ಅಭ್ಯರ್ಥಿ ಆಗಿ ಸ್ಪರ್ಧಿಸಲು ಹೇಳುತ್ತಿದ್ದಾರೆ. ಹೀಗಾಗಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದಾರೆ. ಸುಮಲತಾ ಅವರಿಗೆ ಬಿಜೆಪಿ ಸಪೋರ್ಟ್ ಮಾಡುವ ಬಗ್ಗೆ ಪಕ್ಷದ ತೀರ್ಮಾನಕ್ಕೆ ನಾವು ಬದ್ಧ. ಪಕ್ಷದ ಹಿತದೃಷ್ಟಿಯಿಂದ ಬಿಜೆಪಿ ಮಂಡ್ಯದಲ್ಲಿ ಅಭ್ಯರ್ಥಿ ಹಾಕಲಿ ಎಂದು ಶಿವಲಿಂಗಯ್ಯ ಅಭಿಮತ ವ್ಯಕ್ತಪಡಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv