ಮೈಸೂರು: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಯಾರೇ ಎದುರಾಳಿ ಬರಲಿ. ಯಾರೇ ಬಂದರೂ ಕೂಡ ನಾನು ಅವರನ್ನು ಎದುರಿಸುತ್ತೇನೆ. ಅಲ್ಲದೇ ದೇವೇಗೌಡರನ್ನು ಎದುರಿಸಲು ನಾನು ಸಿದ್ಧವಾಗಿದ್ದೇನೆ ಎಂದು ಸಂಸದ ಪ್ರತಾಪ್ ಸಿಂಹ ಪರೋಕ್ಷವಾಗಿ ಸವಾಲ್ ಹಾಕಿದ್ದಾರೆ.
ಮೈಸೂರಿನಲ್ಲಿ ನಡೆಯುತ್ತಿರುವ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶದಲ್ಲಿ ಪ್ರತಾಪ್ ಸಿಂಹ ಪರೋಕ್ಷವಾಗಿ ದೇವೇಗೌಡರಿಗೆ ಸವಾಲು ಹಾಕಿದ್ದಾರೆ. ಈ ವೇಳೆ ಮಾತನಾಡಿದ ಅವರು, ನನಗೆ ನಮ್ಮ ಜನ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಳೆದ ಬಾರಿ ನಾನು ಗೆದ್ದಾಗ ಈ ಭಾಗದಲ್ಲಿ ಬಿಜೆಪಿಯ ಅಸ್ತಿತ್ವ ಇರಲಿಲ್ಲ. ಒಂದು ಗ್ರಾಮ ಪಂಚಾಯ್ತಿಯನ್ನು ಸಹ ನಾವು ಗೆದ್ದಿರಲಿಲ್ಲ. ಆದರೆ ಈ ಬಾರಿ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದಲ್ಲಿ ನಾಲ್ವರು ಎಂಎಲ್ಎಗಳು ಇದ್ದಾರೆ ಎಂದರು.
ಬಳಿಕ ಅಮಿತಾಬ್ ಬಚ್ಚನ್ ಸಿನಿಮಾ ಒಂದರಲ್ಲಿ “ಮೇರಾ ಪಾಸ್ ಮಾ ಹೇ” ಎಂದು ಹೇಳಿದ್ದಾರೆ. ಅದೇ ರೀತಿ ನಾವು ಮೇರಾ ಪಾಸ್ ಮೋದಿ ಎಂದು ಹೇಳೋಣ. ಈ ಬಾರಿ ಜನ ಮೋದಿ ಹಾಗೂ ನಮ್ಮ ಪರವಾಗಿ ಇರೋದ್ರಿಂದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv