ಬೆಂಗಳೂರು: ರಾಜ್ಯದಲ್ಲಿ ಅನ್ನಭಾಗ್ಯ (Anna Bhagya) ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ (KH Muniyappa) ತಿಳಿಸಿದ್ದಾರೆ.
ಸುವರ್ಣಸೌಧದದ ವಿಧಾನ ಪರಿಷತ್ನಲ್ಲಿ ಸದಸ್ಯ ಸಿ.ಟಿ.ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು. ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂದಿಸಿದಂತೆ ಒಟ್ಟು 29,603.15 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡಿದ್ದು, 314 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು. ಇದನ್ನೂ ಓದಿ: ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ, ಯಾವುದೇ ಬದಲಾವಣೆ ಇಲ್ಲ: ಮತ್ತೆ ತಂದೆಯ ಪರ ಯತೀಂದ್ರ ಬ್ಯಾಟಿಂಗ್
ಯಾದಗಿರಿ ಜಿಲ್ಲೆಯಲ್ಲಿ ಆಹಾರ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅನ್ಯ ಇಲಾಖೆಯ ಅಧಿಕಾರಿಗಳನ್ನು ಇಲಾಖೆ ಕರ್ತ್ಯವ್ಯದಿಂದ ಬಿಡುಗಡೆಗೊಳಿಸಲಾಗಿದೆ ಹಾಗೂ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೆ.ಎಫ್.ಸಿ.ಎಸ್.ಸಿ. ಗೋದಾಮು ಅಮಾನತ್ತುಗೊಳಿಸಲಾಗಿರುತ್ತದೆ. ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಣೆ ಮತ್ತು ಮಾರಾಟಕ್ಕೆ ಕಡಿವಾಣ ಹಾಕಲು ಇಲಾಖೆಯ ಅಧಿಕಾರಿಗಳು ಹಾಗೂ ಕಾರ್ಯನಿರ್ವಹಕ ಸಿಬ್ಬಂದಿಗೆ ಕಾಲ ಕಾಲಕ್ಕೆ ಮೇಲ್ವಿಚಾರಣೆ ಮಾಡುವಂತೆ ನಿರ್ದೇಶನ ನೀಡಿ ಅಗತ್ಯ ವಸ್ತುಗಳ ಕಾಯ್ದೆ 1955ರಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಹಿಂದೂ ಅನ್ನೋದು ಧರ್ಮವೇ ಅಲ್ಲ, ಪರ್ಷಿಯನ್ ಪದ: ನಿವೃತ ನ್ಯಾ.ಬಿ.ಜಿ ಕೋಲ್ಸೆ ಪಾಟೀಲ್
ಪಡಿತರ ಚೀಟಿದಾರರು ಪಡಿತರ ಅಕ್ಕಿಯನ್ನು ದುರ್ಬಳಕೆ ಮಾಡಿಕೊಂಡ ಪ್ರಕರಣಗಳು ಕಂಡುಬಂದಲ್ಲಿ ಸದರಿ ಪಡಿತರ ಚೀಟಿಗಳನ್ನು ರದ್ದುಪಡಿಸಿ ಅಂಥವರ ವಿರುದ್ಧ ನಿಯಾಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶಿಸಲಾಗಿದೆ. ನ್ಯಾಯಬೆಲೆ ಅಂಗಡಿ, ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಜಾಗೃತಿ ಸಮಿತಿಗಳನ್ನು ರಚಿಸಿ ಪಡಿತರ ವಿತರಣೆಯನ್ನು ಪರಿಶೀಲಿಸಲಾಗುತ್ತಿದೆ ಎಂದರು. ಇದನ್ನೂ ಓದಿ: ಕುಖ್ಯಾತ ನಕ್ಸಲ್ ನಾಯಕ ರಾಮಧೇರ್ ಮಜ್ಜಿ ಸೇರಿ 11 ಮಂದಿ ಶರಣು – ಮಹಾರಾಷ್ಟ್ರ, ಮಧ್ಯಪ್ರದೇಶ, ಛತ್ತೀಸ್ಗಢ ನಕ್ಸಲ್ ಮುಕ್ತ?
ಪ್ರತಿ ಮಾಹೆ ನ್ಯಾಯಬೆಲೆ ಅಂಗಡಿ ಮಟ್ಟದಲ್ಲಿ ಆಹಾರ ಅದಾಲತ್ಗಳನ್ನು ನಡೆಸಿ ಪಡಿತರ ಚೀಟಿದಾರರಿಗೆ ಪಡಿತರ ವಿತರಣೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ರಾಜ್ಯ ಮಟ್ಟದಲ್ಲಿ ಆಹಾರ ಜಾಗೃತ ದಳ ರಚಿಸಿ ಅಕ್ರಮಗಳ ಬಗ್ಗೆ ನಿಯಮಾನುಸಾರ ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮುಸ್ಲಿಮರ ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ವಂದೇ ಮಾತರಂ ಹಾಡನ್ನು ಒಡೆದು ತುಂಡು ಮಾಡಿತು: ನರೇಂದ್ರ ಮೋದಿ


