Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಕ್ರಮ ಹೋಂಸ್ಟೇ, ರೆಸಾರ್ಟ್‌ಗೆ ಅವಕಾಶ ನೀಡುವುದಿಲ್ಲ: ಈಶ್ವರ್‌ ಖಂಡ್ರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಅಕ್ರಮ ಹೋಂಸ್ಟೇ, ರೆಸಾರ್ಟ್‌ಗೆ ಅವಕಾಶ ನೀಡುವುದಿಲ್ಲ: ಈಶ್ವರ್‌ ಖಂಡ್ರೆ

Chamarajanagar

ಅಕ್ರಮ ಹೋಂಸ್ಟೇ, ರೆಸಾರ್ಟ್‌ಗೆ ಅವಕಾಶ ನೀಡುವುದಿಲ್ಲ: ಈಶ್ವರ್‌ ಖಂಡ್ರೆ

Public TV
Last updated: November 2, 2025 6:35 pm
Public TV
Share
Eshwara Khandre
SHARE

ಚಾಮರಾಜನಗರ: ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಅಕ್ರಮ ಹೋಂಸ್ಟೇ (Illegal Homestays) ಅಥವಾ ರೆಸಾರ್ಟ್‌ ಆಗಲಿ (Resorts), ಅಕ್ರಮ ಕಲ್ಲು ಗಣಿಗಾರಿಕೆಗಾಗಲೀ ನಮ್ಮ ಸರ್ಕಾರ ಅವಕಾಶ ನೀಡಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಬಿ ಖಂಡ್ರೆ (Eshwara Khandre) ಸ್ಪಷ್ಟಪಡಿಸಿದ್ದಾರೆ.

ಚಾಮರಾಜನಗರದ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿಂದು ನಡೆದ ಜಿಲ್ಲೆಯ ಅರಣ್ಯ ಸಮಸ್ಯೆ ಕುರಿತಂತೆ ರೈತರು ಹಾಗೂ ಸಾರ್ವಜನಿಕರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ, ಹೋಂಸ್ಟೇ, ರೆಸಾರ್ಟ್ ನಡೆಯುತ್ತಿದ್ದರೆ ಸ್ಪಷ್ಟ ದೂರು ಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುವ ಭರವಸೆ ನೀಡಿದರು.

ಮಾನವ ವನ್ಯಜೀವಿ ಸಂಘರ್ಷ ಇಂದು ನಿನ್ನೆಯದಲ್ಲ ನೂರಾರು, ಸಾವಿರಾರು ವರ್ಷದಿಂದ ಇದೆ. ಈಗ ವನ್ಯಜೀವಿಗಳ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ. ಇದರಿಂದ ಸಂಘರ್ಷ ಹೆಚ್ಚಳವಾಗುತ್ತಿದ್ದು, ಸ್ಥಳೀಯರ, ಸಾರ್ವಜನಿಕರ, ರೈತರ ಸಲಹೆ, ಅಭಿಪ್ರಾಯ ಪಡೆದು ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಸಲುವಾಗಿ ಈ ಸಭೆ ನಡೆಸಲಾಗಿದೆ ಎಂದರು.

ಈಗಾಗಲೇ ಇಲಾಖೆಯ ವತಿಯಿಂದ 2 ತಜ್ಞರ ಸಮಿತಿ ರಚಿಸಲಾಗಿದ್ದು, ವನ್ಯಜೀವಿಗಳು ನಾಡಿಗೆ ಬರುತ್ತಿರುವ ಬಗ್ಗೆ ಅಧ್ಯಯನ ಮಾಡಿಸಿ ಪರಿಹಾರ ಕಂಡುಕೊಳ್ಳುವ ಪ್ರಯತ್ನವನ್ನೂ ಮಾಡಲಾಗುತ್ತಿದೆ. ಇದರ ಜೊತೆಗೆ ಇಂದಿನ ಸಭೆಯಲ್ಲಿ ರೈತರು, ಸಾರ್ವಜನಿಕರು ನೀಡಿರುವ ಎಲ್ಲ ಸಲಹೆ ಕ್ರೋಡೀಕರಿಸಿ, ಚರ್ಚಿಸಿ ಅನುಷ್ಠಾನಕ್ಕೆ ತರಲಾಗುವುದು ಎಂದು ಖಂಡ್ರೆ ತಿಳಿಸಿದರು.

ವನ್ಯಜೀವಿಯಿಂದ ಬೆಳೆ ಹಾನಿ, ಜಾನುವಾರಗಳ ಹಾನಿ ಆದಾಗ ಪರಿಹಾರ ಹೆಚ್ಚಿಸಬೇಕು ಎಂಬ ಬೇಡಿಕೆ ಇದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದು ತಿಳಿಸಿದರು. 1972ರಲ್ಲಿ ಬಂಡೀಪುರದಲ್ಲಿ ಕೇವಲ 12 ಹುಲಿಗಳಿದ್ದವು. ಇಂದು 153ಕ್ಕೂ ಹೆಚ್ಚು ಹುಲಿಗಳಿವೆ. ಹುಲಿಗಳ ಸಂಖ್ಯೆಯಲ್ಲಿ ಹೆಚ್ಚಳ ಆಗಿದೆ. ಹುಲಿಗಳಿಗೆ ಅರಣ್ಯ ಪ್ರದೇಶ ಕಡಿಮೆ ಆಗಿರುವುದರಿಂದ ಸಮಸ್ಯೆ ಉಲ್ಬಣಿಸಲು ಕಾರಣವಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ವನ್ಯಜೀವಿಗಳ ದಾಳಿಗೆ ಸರಾಸರಿ 55-60 ಜನರು ಸಾವಿಗೀಡಾಗುತ್ತಿದ್ದಾರೆ. 2021-22ರ ಸಾಲಿನಲ್ಲಿ 41 ಜನರು ಮೃತಪಟ್ಟಿದ್ದರು. ಈ ಪೈಕಿ ಆನೆ ದಾಳಿಯಿಂದ 28, ಹುಲಿ ದಾಳಿಯಿಂದ ಇಬ್ಬರು ಮತ್ತು ಇತರ ಪ್ರಾಣಿಗಳ ದಾಳಿಯಿಂದ 11 ಜನರು ಮೃತಪಟ್ಟಿದ್ದರು. 2022-23ನೇ ಸಾಲಿನಲ್ಲಿ 57 ಜನರು ವನ್ಯಜೀವಿ ದಾಳಿಯಿಂದ ಸಾವಿಗೀಡಾಗಿದ್ದಾರೆ. ಆನೆ ದಾಳಿಗೆ 32 ಜನರು ಮೃತಪಟ್ಟಿದ್ದರೆ, ಹುಲಿ ದಾಳಿಯಿಂದ 5 ಜನರು ಅಸುನೀಗಿದ್ದರು. 2023-24ನೇ ಸಾಲಿನಲ್ಲಿ ಒಟ್ಟು 65 ಜನರು ಮೃತಪಟ್ಟಿದ್ದರು ಈ ಪೈಕಿ ಆನೆ ದಾಳಿಯಿಂದ 48, ಹುಲಿ ದಾಳಿಯಿಂದ 5 ಜನರು ಮೃತಪಟ್ಟಿದ್ದರು. 2024-25ನೇ ಸಾಲಿನಲ್ಲಿ 46 ಜನರು ಸಾವಿಗೀಡಾಗಿದ್ದು, ಆನೆ ದಾಳಿಯಿಂದ 36 ಜನರು ಹುಲಿ ದಾಳಿಯಿಂದ ಇಬ್ಬರು ಮೃತಪಟ್ಟಿದ್ದರು. ಈ ಸಾಲಿನಲ್ಲಿ ಅಂದರೆ 2025-26ರಲ್ಲಿ ಈವರೆಗೆ 30 ಜನರು ವನ್ಯಜೀವಿ ದಾಳಿಗೆ ಬಲಿಯಾಗಿದ್ದಾರೆ. ಈ ಪೈಕಿ 20 ಜನರು ಆನೆ ದಾಳಿಯಿಂದ ಮೃತಪಟ್ಟಿದ್ದರೆ, 4 ಜನರು ಹುಲಿ ದಾಳಿಯಿಂದ ಮೃತಪಟ್ಟಿದ್ದಾರೆ ಎಂದು ವಿವರ ನೀಡಿದರು.

ಆಧುನಿಕ ತಂತ್ರಜ್ಞಾನ ಬಳಸಿ:
ಸಾವಿರಾರು ಚದರ ಕಿಲೋ ಮೀಟರ್ ಅರಣ್ಯದ ಸಂಪೂರ್ಣ ಗಸ್ತು ಸಾಧ್ಯವಿಲ್ಲ. ಹೀಗಾಗಿ ಆಧುನಿಕ ತಂತ್ರಜ್ಞಾನ ಬಳಸಿ ಸಾರ್ವಜನಿಕರಿಗೆ ಮಾಹಿತಿ ನೀಡಲು ಮತ್ತು ವನ್ಯಜೀವಿಗಳನ್ನು ಮರಳಿ ಕಾಡಿಗೆ ಕಳಿಸಲು ಸಮಗ್ರ ಕಮಾಂಡ್ ಕೇಂದ್ರ ರಚಿಸಲು ಕ್ರಮ ಕೈಗೊಳ್ಳಲಾಗಿದೆ. ಹಿರಿಯ ಅಧಿಕಾರಿಗಳು ಕಚೇರಿಯಲ್ಲಿ ಕೂರದೆ, ಸಂಘರ್ಷ ಇರುವ ಗ್ರಾಮಗಳಿಗೆ ತೆರಳಿ ಸ್ಥಳದಲ್ಲೇ ಮೊಕ್ಕಾಂ ಹೂಡಿ ಸಮಸ್ಯೆ ಪರಿಹರಿಸಬೇಕು ಮತ್ತು ಅರಣ್ಯಾಧಿಕಾರಿಗಳು ಫೋನ್ ಬಂದ್ ಮಾಡದೇ ಜನರಿಗೆ ಸ್ಪಂದಿಸುವಂತೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.

ಹುಲಿ ಸೆರೆ, ಆನೆ ಸೆರೆ ಕಾರ್ಯಾಚರಣೆ ಮಾಡುವಾಗ ಪ್ರಮಾಣಿತ ಮಾನದಂಡ ಪಾಲನೆ ಮಾಡಬೇಕು ಎಂದು ನಿರ್ದೇಶನ ನೀಡಲಾಗಿದೆ. ಜೊತೆಗೆ ಹುಲಿ, ಆನೆ ಸೆರೆ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳುವ ಸಿಬ್ಬಂದಿಗೆ ಸೂಕ್ತ ತರಬೇತಿ ಕೊಡಲಾಗುವುದು ಎಂದರು.

ಪ್ರಸ್ತುತ ಪಶು ಸಂಗೋಪನಾ ಇಲಾಖೆಯಿಂದ ಪಶುವೈದ್ಯರ ಎರವಲು ಸೇವೆ ಪಡೆಯಲಾಗುತ್ತಿದೆ. ಹೀಗಾಗಿ ವನ್ಯಜೀವಿ ವೈದ್ಯರ ಕೇಡರ್ ಸೃಷ್ಟಿಸಿ ನೇರ ನೇಮಕಾತಿ ಮಾಡಿಕೊಳ್ಳಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಈಗಾಗಲೇ ಬಂಡೀಪುರದಲ್ಲಿ ಕೊನೆಯ ಸಫಾರಿ ಟ್ರಿಪ್ ಕಡಿತ ಮಾಡಿದ್ದು, ಸಫಾರಿಯಿಂದ ವನ್ಯಜೀವಿಗಳು ನಾಡಿಗೆ ಬರುತ್ತಿದ್ದರೆ ಸಫಾರಿಗೆ ಇನ್ನೂ ಹೆಚ್ಚಿನ ಅಂಕುಶ ಹಾಕಲಾಗುವುದು ಎಂದು ತಿಳಿಸಿದರು.

ಅರಣ್ಯ ಪ್ರದೇಶದ ಅಂಚಿನಲ್ಲಿ ಮತ್ತು ಒಳಗಿರುವ ವಸತಿ ಪ್ರದೇಶಗಳಿಗೆ ವಿದ್ಯುತ್ ಸಂಪರ್ಕ ಇಲ್ಲ, ಕುಡಿಯುವ ನೀರಿನ ಸಂಪರ್ಕ ಇಲ್ಲ ಎಂದು ತಿಳಿಸಿದ್ದೀರಿ. ಮೂಲಸೌಕರ್ಯ ಒದಗಿಸಲು ಯಾವುದೇ ತೊಂದರೆ ನೀಡದಂತೆ ನಿಯಮಾನುಸಾರ ಅನುಮತಿ ನೀಡಲು ಸೂಚಿಸಲಾಗುವುದು, ಈಗಾಗಲೇ ಹುಲಿ ಸಂರಕ್ಷಿತ ಪ್ರದೇಶದಲ್ಲಿರುವ ವಸತಿ ಪ್ರದೇಶಕ್ಕೆ ವಿದ್ಯುತ್ ನೀರು ಸಂಪರ್ಕ ನೀಡಲು ಕೋರಿ ಕೇಂದ್ರ ಹವಾಮಾನ ಬದಲಾವಣೆ ಮತ್ತು ಅರಣ್ಯ ಸಚಿವಾಲಯಕ್ಕೆ ಹಾಗೂ ಎನ್.ಟಿ.ಸಿ.ಎ.ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೆಲವೊಂದು ಪ್ರಸ್ತಾವನೆಗಳನ್ನು ಕೇಂದ್ರ ತಿರಸ್ಕರಿಸಿದೆ ಎಂದರು.

TAGGED:ChamarajanagaracongressEshwara Khandrepoliticsಈಶ್ವರ್ ಖಂಡ್ರೆಕಾಂಗ್ರೆಸ್ಚಾಮರಾಜನಗರ
Share This Article
Facebook Whatsapp Whatsapp Telegram

Cinema news

Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood
Muddu Gumma Karavali Movie
ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್
Cinema Latest Sandalwood Top Stories
Rakshita Shetty 2
ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ
Cinema Latest Main Post Sandalwood TV Shows

You Might Also Like

Suryakumar Yadav
Cricket

ಒಂದೇ ಓವರ್‌ನಲ್ಲಿ 24 ರನ್‌ ಚಚ್ಚಿ 24 ಇನ್ನಿಂಗ್ಸ್‌ ಬಳಿಕ ಫಿಫ್ಟಿ ಹೊಡೆದ ಸ್ಕೈ

Public TV
By Public TV
1 hour ago
ed enters into nagamangala land scam
Crime

ನಾಗಮಂಗಲ ಭೂ ಹಗರಣಕ್ಕೆ ಇಡಿ ಎಂಟ್ರಿ

Public TV
By Public TV
2 hours ago
PREGNENT
Bengaluru City

ಭ್ರೂಣ ಹತ್ಯೆ ತಡೆಗೆ ಸರ್ಕಾರದ  ದಿಟ್ಟ ಕ್ರಮ – ಮಾಹಿತಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ

Public TV
By Public TV
2 hours ago
Ishan Kishan Suryakumar Yadav
Cricket

ಸೂರ್ಯ, ಕಿಶನ್‌ ಸ್ಫೋಟಕ ಆಟಕ್ಕೆ ಪಾಕ್‌ ದಾಖಲೆ ಉಡೀಸ್‌ – ರನ್‌ ಮಳೆಯಲ್ಲಿ ಗೆದ್ದ ಭಾರತ

Public TV
By Public TV
2 hours ago
Chickpea
Dharwad

ರಾಜ್ಯ ಕಡಲೆ ಬೆಳೆಗಾರರ ಬೆನ್ನಿಗೆ ನಿಂತ ಕೇಂದ್ರ – 1 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಅಸ್ತು

Public TV
By Public TV
3 hours ago
Lakkundi Excavation Gadag 2
Districts

ಲಕ್ಕುಂಡಿಯಲ್ಲಿ ಕಬ್ಬಿಣದ ಉಂಡೆ, ಪಚ್ಚೆ ಕಲ್ಲು ಪತ್ತೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?