ಕಲಬುರಗಿ: ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮ (PSI Recruitment Scam) ಪ್ರಕರಣ ಮರೆಮಾಚುವ ಮುನ್ನವೇ ಕಲಬುರಗಿಯಲ್ಲಿ (Kalaburagi) ಮತ್ತೊಂದು ನೇಮಕಾತಿಯಲ್ಲಿ ಅಭ್ಯರ್ಥಿಗಳು ಅಕ್ರಮವೆಸಗಿರುವುದು ಪತ್ತೆಯಾಗಿದೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ (KKRTC) ಡ್ರೈವರ್ ಕಂ ಕಂಡಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ಹುದ್ದೆಗಿಟ್ಟಿಸಲು ಅಭ್ಯರ್ಥಿಗಳು ವಾಮಮಾರ್ಗ ಹಿಡಿದಿದ್ದಾರೆ. ತಮ್ಮ ತೂಕ ಹೆಚ್ಚಳಕ್ಕೆ ಒಳ ಉಡುಪುಗಳಲ್ಲಿ ಕಬ್ಬಿಣದ ರಾಡ್, ಕಲ್ಲು ಕಟ್ಟಿಕೊಂಡು ಪರೀಕ್ಷೆಗೆ ಹಾಜರಾಗಿರುವುದು ನೇಮಕಾತಿಯ ಜಾಗೃತ ದಳದ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣ – ಡಿಕೆಶಿಗೆ ಬಿಗ್ ರಿಲೀಫ್
ಕೆಕೆಆರ್ಟಿಸಿಯಲ್ಲಿ ಚಾಲಕ ಕಂ ಕಂಡಕ್ಟರ್ ಹುದ್ದೆಗೆ ಆಯ್ಕೆಯಾಗಬೇಕಾದರೆ ಅಭ್ಯರ್ಥಿ 55 ಕೆಜಿ ತೂಕ ಇರುವುದು ಕಡ್ಡಾಯವಾಗಿದೆ. ಆದರೆ ಕಡಿಮೆ ತೂಕ ಇರುವ ಅಭ್ಯರ್ಥಿ ತೂಕ ಹೆಚ್ಚಿಸಿಕೊಳ್ಳಲು ವಾಮಮಾರ್ಗ ಅನುಸರಿಸಿ, ಒಳ ಉಡುಪಿನಲ್ಲಿ ಭಾರವಾದ ಕಬ್ಬಿಣದ ರಾಡ್ಗಳು, ತಕ್ಕಡಿಯಲ್ಲಿ ಬಳಸುವ ಕಬ್ಬಿಣದ ಕಲ್ಲುಗಳನ್ನು ಕಟ್ಟಿಕೊಂಡು ದೇಹದಾರ್ಢ್ಯ ಪರೀಕ್ಷೆಗೆ ಹಾಜರಾಗಿದ್ದಾರೆ.
ಇದನ್ನು ದೇಹದಾರ್ಢ್ಯ ಪರೀಕ್ಷೆ ಸಂದರ್ಭದಲ್ಲಿ ಜಾಗೃತ ದಳದ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. 5-10 ಕೆಜಿ ತೂಕದ ಕಲ್ಲುಗಳನ್ನು ಅಭ್ಯರ್ಥಿಗಳು ಒಳ ಉಡುಪಿನಲ್ಲಿ ಹಲವು ಗಂಟೆಗಳ ಕಾಲ ಇಟ್ಟುಕೊಂಡಿರುವುದೇ ಅಚ್ಚರಿ ಮೂಡಿಸಿದೆ. ಇದನ್ನೂ ಓದಿ: ಫೆ.14 ಗೋವುಗಳನ್ನು ಅಪ್ಪಿಕೊಳ್ಳುವ ದಿನ ರದ್ದು
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k