Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಂಜದಲ್ಲಿ ಎಗ್ಗಿಲ್ಲದೇ ನಡೀತಿದೆ ಅಕ್ರಮ ಮರಳುಗಾರಿಕೆ – ಅಧಿಕಾರಿಗಳ ಮೌನಕ್ಕೆ ಗ್ರಾಮಸ್ಥರ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಪಂಜದಲ್ಲಿ ಎಗ್ಗಿಲ್ಲದೇ ನಡೀತಿದೆ ಅಕ್ರಮ ಮರಳುಗಾರಿಕೆ – ಅಧಿಕಾರಿಗಳ ಮೌನಕ್ಕೆ ಗ್ರಾಮಸ್ಥರ ಆಕ್ರೋಶ

Dakshina Kannada

ಪಂಜದಲ್ಲಿ ಎಗ್ಗಿಲ್ಲದೇ ನಡೀತಿದೆ ಅಕ್ರಮ ಮರಳುಗಾರಿಕೆ – ಅಧಿಕಾರಿಗಳ ಮೌನಕ್ಕೆ ಗ್ರಾಮಸ್ಥರ ಆಕ್ರೋಶ

Public TV
Last updated: February 19, 2022 3:17 pm
Public TV
Share
3 Min Read
MNG SAND
SHARE

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ನಿರಾತಂಕವಾಗಿ ನಡಿಯುತ್ತಿದ್ದು, ದಂಧೆ ತಡೆಯಬೇಕಾದ ಭೂ ಮತ್ತು ಗಣಿ ವಿಜ್ಞಾನ ಇಲಾಖೆಯೇ ದಂಧೆಕೋರರ ಜೊತೆ ಶಾಮೀಲಾಗಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

MNG SAND 2

ಮಂಗಳೂರು ನಗರ ಪ್ರದೇಶ ಹೊರತುಪಡಿಸಿ ಗ್ರಾಮಾಂತರ ಪ್ರದೇಶಗಳಲ್ಲಿ ದಂಧೆ ಯಥಾಪ್ರಕಾರ ಮತ್ತೆ ಚಿಗುರಿಕೊಂಡಿದ್ದು ಇದರ ಅಟ್ಟಹಾಸಕ್ಕೆ ಸ್ಥಳೀಯರು ಕಂಗಾಲಾಗಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಎರಡು ದಿನಗಳ ಹಿಂದಷ್ಟೇ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ವ್ಯಾಪ್ತಿಯ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿ ಮೂರು ದೋಣಿ ಹಾಗೂ ಅಪಾರ ಪ್ರಮಾಣದ ಸೊತ್ತು, ಮರಳನ್ನು ಜಪ್ತಿ ಮಾಡಿದ್ದರು. ಆದರೆ ಜಿಲ್ಲೆಯ ಗಡಿಭಾಗದ ನಿಂತಿಕಲ್, ಪಂಜ ಸುತ್ತಮುತ್ತ ಹತ್ತಾರು ಕಡೆಗಳಲ್ಲಿ ಅಕ್ರಮ ಮರಳುಗಾರಿಕೆ “ಮಾಮೂಲಿ” ಎಂಬಂತೆ ನಡೀತಿದ್ದು ಅಧಿಕಾರಿಗಳೇ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬ ಆರೋಪವಿದೆ. ಇದನ್ನೂ ಓದಿ: ಹಿಜಬ್‍ಗೆ ಅವಕಾಶ ನೀಡಿ – ಪ್ರತಿಭಟಿಸುತ್ತಿದ್ದ 58 ವಿದ್ಯಾರ್ಥಿಗಳು ಸಸ್ಪೆಂಡ್!

ಮಣಿನಾಲ್ಕೂರಿನ ಅಕ್ರಮ ಮರಳು ಅಡ್ಡೆಗೆ ಭೂ ವಿಜ್ಞಾನಿ ಡಾ. ಮಹದೇಶ್ವರ ಅವರು ದಾಳಿ ನಡೆಸಿ 3 ಬೋಟ್, 3 ಮೋಟಾರ್ ಹಾಗೂ ಬೋಟ್‍ನಲ್ಲಿ ಅಳವಡಿಸಿದ್ದ 5 ಗ್ಯಾಸ್ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದರು. ಒಂದು ದೋಣಿಯಿಂದ 1 ಟನ್ ಮರಳು ಹಾಗೂ 2 ದೋಣಿಗಳಿಂದ ತಲಾ ಅರ್ಧ ಅರ್ಧ ಟನ್ ಮರಳು ವಶಪಡಿಸಿಕೊಳ್ಳಲಾಗಿತ್ತು. ಗಣಿ ಇಲಾಖೆ ಅಧಿಕಾರಿಗಳು ಅಲ್ಲಲ್ಲಿ ಅಕ್ರಮ ಮರಳು ಅಡ್ಡೆಯ ಮೇಲೆ ಕ್ರಮ ಜರುಗಿಸುತ್ತಿದ್ದರೆ ನಿಂತಿಕಲ್, ಪಂಜ ಸಮೀಪದ ಕೇನ್ಯ ತ್ರಿಶೂಲಿನಿ ದೇವಸ್ಥಾನ ರಸ್ತೆಯಾಗಿ ವಿಷ್ಣುಮೂರ್ತಿ ದೈವಸ್ಥಾನಕ್ಕೆ ಸಾಗುವಾಗ ಕೆಲವೇ ಕಿ.ಮೀ. ದೂರದಲ್ಲಿ ನದಿಯ ಕವಲು ಹೊಳೆಯಿಂದ ಕಳೆದ ಕೆಲವು ಸಮಯಗಳಿಂದ ಅಕ್ರಮ ಮರಳುಗಾರಿಕೆ ಯಥಾಪ್ರಕಾರ ನಡೆಯುತ್ತಿದೆ. ಈ ಬಗ್ಗೆ ಮಾಹಿತಿ ಇದ್ದರೂ ಗಣಿ ಇಲಾಖೆ ಅಧಿಕಾರಿಗಳು, ಪೊಲೀಸ್ ಇಲಾಖೆ, ಜಿಲ್ಲಾಡಳಿತ ಕಣ್ಮುಚ್ಚಿ ಕೂತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

MNG SAND 3

ಜಿಲ್ಲೆಯ ಗಡಿಭಾಗದ ಆಯಕಟ್ಟಿನ ಜಾಗಗಳಲ್ಲಿ ಅಕ್ರಮ ಮರಳುಗಾರಿಕೆ ನಿರಾತಂಕವಾಗಿ ನಡೆಯುತ್ತಿದ್ದು ಸಕಲೇಶಪುರ ಮಾರ್ಗವಾಗಿ ಹಾಸನ, ಬೆಂಗಳೂರಿಗೂ ಮರಳು ಸಾಗಾಟವಾಗುತ್ತಿದೆ. ದಿನವೊಂದಕ್ಕೆ ನೂರಾರು ಲೋಡ್ ಗಳಷ್ಟು ಮರಳು ಸಾಗಿಸುತ್ತಿದ್ದು ಸ್ಥಳೀಯ ಜನಪ್ರತಿನಿಧಿಗಳ ಆಪ್ತರೊಬ್ಬರು ದಂಧೆಯಲ್ಲಿ ಶಾಮೀಲಾಗಿರುವ ಕಾರಣ ಅಧಿಕಾರಿಗಳು ಚಕಾರವೆತ್ತದೆ ಮೌನಂ ಸಮ್ಮತಿ ಲಕ್ಷಣಂ ಎಂದು ಸುಮ್ಮನಿದ್ದಾರೆ. ಇಲ್ಲೇ ಅಕ್ಕಪಕ್ಕ ಹತ್ತಾರು ಕಡೆಗಳಲ್ಲಿ ದಂಧೆ ನಡೀತಿದ್ದರೂ ಸ್ಥಳೀಯ ಸುಬ್ರಮಣ್ಯ ಪೊಲೀಸರು ಮಾತ್ರ ಏನೂ ನಡೆದೇ ಇಲ್ಲವೆಂಬಂತಿದ್ದಾರೆ. ಇದನ್ನೂ ಓದಿ: ಅಹ್ಮದಾಬಾದ್ ಸರಣಿ ಬಾಂಬ್ ಸ್ಫೋಟ – 38 ಮಂದಿಗೆ ಮರಣ ದಂಡನೆ, 11 ಮಂದಿಗೆ ಜೀವಾವಧಿ ಶಿಕ್ಷೆ

ಇಲ್ಲಿ ತೆಪ್ಪ, ದೋಣಿ ಬಳಸಿ ಮರಳು ಸಂಗ್ರಹಿಸುತ್ತಿದ್ದು ಟಿಪ್ಪರ್ ಮೂಲಕ ಸುಬ್ರಮಣ್ಯ, ಗುಂಡ್ಯ, ಸಕಲೇಶಪುರ ಕಡೆಗೆ ದಿನವೊಂದಕ್ಕೆ 40-50 ಲೋಡ್‍ಗಳಷ್ಟು ಮರಳು ಸಾಗಾಟ ಮಾಡಲಾಗುತ್ತಿದೆ. ದಂಧೆಕೋರರು ಸರ್ಕಾರಕ್ಕೆ ರಾಜಧನ ವಂಚಿಸಿ ವಿವಿಧ ಇಲಾಖೆಗಳಿಗೆ ಮಾಮೂಲಿ ಕೊಟ್ಟು ದಂಧೆ ನಡೆಸುತ್ತಿದ್ದು ಇನ್ನಾದರೂ ಸಂಬಂಧಪಟ್ಟ ಇಲಾಖೆಗಳು ನಿದ್ದೆಯಿಂದ ಎದ್ದೇಳಬೇಕಿದೆ.

MNG SAND 1

ಸುಳ್ಯ, ಕಡಬದಲ್ಲಿ ಇನ್ನೂ ಬಿದ್ದಿಲ್ಲ ಬ್ರೇಕ್!
ಮರಳು ದಿಬ್ಬ ತೆರವು ಮಾಡಲು ಲೀಸ್‍ಗೆ ಪಡೆದಿರುವ ಗುತ್ತಿಗೆದಾರರು ತಮ್ಮ ವ್ಯಾಪ್ತಿ ಬಿಟ್ಟು ಎಲ್ಲೆಂದರಲ್ಲಿ ಹಿಟಾಚಿ, ಡ್ರೆಜ್ಜಿಂಗ್ ಮೆಷಿನ್ ಬಳಸಿ ಮರಳುಗಾರಿಕೆ ನಡೆಸುತ್ತಿದ್ದು ಕಡಬ, ಸುಬ್ರಮಣ್ಯ, ಬೆಳ್ತಂಗಡಿ, ಸುಳ್ಯ, ಸಂಪಾಜೆ ಭಾಗದಲ್ಲಿ ನದಿಯ ಒಡಲನ್ನೇ ಬರಿದು ಮಾಡುತ್ತಿದ್ದಾರೆ. ಭಾರೀ ಗಾತ್ರದ ಲಾರಿಗಳ ಓಡಾಟದಿಂದ ಸಾರ್ವಜನಿಕ ಸಂಪರ್ಕ ರಸ್ತೆ ಹದಗೆಟ್ಟಿದ್ದು ಜನರು ಜೀವಭಯದಲ್ಲೇ ಬದುಕುವಂತಾಗಿದೆ. ಕಡಬ, ಸುಬ್ರಮಣ್ಯ ಸುತ್ತಮುತ್ತ ಹತ್ತಾರು ಕಡೆಗಳಲ್ಲಿ ಅಕ್ರಮ ಮರಳುಗಾರಿಕೆ ನಡಿಯುತ್ತಿದ್ದು, ಗಣಿ ಇಲಾಖೆ ಅಧಿಕಾರಿಗಳು ಇತ್ತ ಕಡೆ ತಲೆ ಹಾಕಿಯೂ ಮಲಗುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಇದನ್ನೂ ಓದಿ: ಇದು RSS ಕುತಂತ್ರ – ಈಶ್ವರಪ್ಪ ಪೆದ್ದ: ಸಿದ್ದರಾಮಯ್ಯ

TAGGED:MangaluruSandಕಡಬಮರಳುಸುಳ್ಯ
Share This Article
Facebook Whatsapp Whatsapp Telegram

Cinema news

Toxic Teaser
Toxic Teaser | ಡ್ಯಾಡಿ ಈಸ್ ಹೋಮ್ – ಯಶ್ ʻಟಾಕ್ಸಿಕ್ʼ ಕಿಕ್ ಅಬ್ಬಬ್ಬಾ!
Bollywood Cinema Latest Main Post Sandalwood
yash
40ನೇ ವರ್ಷದ ಹುಟ್ಟುಹಬ್ಬ ಸಂಭ್ರಮದಲ್ಲಿ ʻಮಾಸ್ಟರ್‌ಪೀಸ್‌ʼ ರಾಕಿಭಾಯ್‌
Cinema Latest Main Post Sandalwood
Thalapathy Vijay Jana Nayagan
ವಿಜಯ್‌ ಫ್ಯಾನ್ಸ್‌ಗೆ ಶಾಕ್‌; ಜ.9 ಕ್ಕೆ ‘ಜನನಾಯಗನ್‌’ ರಿಲೀಸ್‌ ಆಗಲ್ಲ
Cinema Latest Main Post South cinema
Supreme Court and Ramya
ಪುರುಷರ ಮನಸ್ಸನ್ನು ಅರ್ಥ ಮಾಡ್ಕೊಳ್ಳಕ್ಕೆ ಆಗಲ್ಲ, ಹಾಗಾದ್ರೆ ಎಲ್ಲರನ್ನೂ ಜೈಲಿಗೆ ಹಾಕ್ಬೇಕಾ? – ರಮ್ಯಾ ವಿವಾದಾತ್ಮಕ ಪೋಸ್ಟ್
Latest Sandalwood Top Stories

You Might Also Like

A Khata
Bengaluru City

ರಾಜ್ಯದಲ್ಲೂ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ಭಾಗ್ಯ: ಕ್ಯಾಬಿನೆಟ್ ಮಹತ್ವದ ತೀರ್ಮಾನ

Public TV
By Public TV
22 minutes ago
SIDDARAMAIAH PRATAP SIMHA
Kodagu

ಸಿದ್ದರಾಮಯ್ಯ ಅವ್ರು ದೇವರಾಜ ಅರಸು ಆಗಲು ಸಾಧ್ಯವಿಲ್ಲ: ಪ್ರತಾಪ್ ಸಿಂಹ

Public TV
By Public TV
28 minutes ago
Chitradurga Son Kills Father
Chitradurga

ಸಕಾಲಕ್ಕೆ ಮದುವೆ ಮಾಡ್ಲಿಲ್ಲ ಅಂತ ತಂದೆಯನ್ನೇ ಕೊಂದ ಮಗ

Public TV
By Public TV
1 hour ago
C.T Ravi
Chikkamagaluru

ಡಿಸಿಸಿ ಬ್ಯಾಂಕ್ ಚುನಾವಣಾ ಅಖಾಡಕ್ಕೆ ಸಿ.ಟಿ.ರವಿ – ಕಾಂಗ್ರೆಸ್ಸಿಂದ ಒಂದೂ ನಾಮಪತ್ರವಿಲ್ಲ, ನಾಳೆಯೇ ಲಾಸ್ಟ್ ಡೇಟ್!

Public TV
By Public TV
1 hour ago
Tilak Varma
Cricket

ಟೀಂ ಇಂಡಿಯಾಗೆ ಬಿಗ್‌ ಶಾಕ್‌ – ತಿಲಕ್‌ ವರ್ಮಾ T20 ವಿಶ್ವಕಪ್‌ ಆಡೋದು ಡೌಟ್!

Public TV
By Public TV
1 hour ago
Boiler explosion in Bailhongal factory Three more dead death toll rises to 7
Belgaum

ಬೆಳಗಾವಿ ಫ್ಯಾಕ್ಟರಿಯಲ್ಲಿ ಬಾಯ್ಲರ್‌ ಸ್ಫೋಟ – ಮತ್ತೆ ಮೂವರು ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?