ಅಕ್ರಮ ಪಡಿತರ ಅಕ್ಕಿ ಸಾಗಾಟ – ಇಬ್ಬರ ಬಂಧನ

Public TV
1 Min Read
Rationed rice

ರಾಯಚೂರು: ನಗರದ ಗದ್ವಾಲ್ ರಸ್ತೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಯಚೂರು ತಾಲೂಕಿನ ಚಂದ್ರಬಂಡಾ ಗ್ರಾಮದ ವೀರೇಶ್ ಹಾಗೂ ತಿಮ್ಮಾಪುರಪೇಟೆಯ ಈರಣ್ಣ ಬಂಧಿತ ಆರೋಪಿಗಳು.

ಬಡವರಿಗೆ ಸೇರಬೇಗಿದ್ದ ಅಕ್ಕಿಯ ಚೀಲವನ್ನು ಆರೋಪಿಗಳು ಬದಲಿಸಿ ಸಾಗಾಟ ಮಾಡುತ್ತಿದ್ದರು. ಮಾಹಿತಿ ತಿಳಿದ ಮಾರ್ಕೆಟ್ ಯಾರ್ಡ್ ಪೊಲೀಸರು ದಾಳಿ ನಡೆಸಿ ಪಡಿತರ ಅಕ್ಕಿ ಸಮೇತ ವಾಹನ ಜಪ್ತಿ ಮಾಡಿದ್ದಾರೆ. ಇದನ್ನೂ ಓದಿ: ದಾವುದ್ ಅಲ್ಲ, ಅವರಪ್ಪ ಬಂದ್ರು ಕೂಡ ಏನು ಮಾಡಲು ಆಗಲ್ಲ: ಪ್ರಮೋದ್ ಮುತಾಲಿಕ್

Rationed rice 1

ಪೊಲೀಸರು ತಪಾಸಣೆ ನಡೆಸಿದಾಗಿ 17 ಕ್ವಿಂಟಾಲ್ ಅಕ್ಕಿ ಪತ್ತೆಯಾಗಿದ್ದು, ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಯುತ್ತಿದೆ. ಇದನ್ನೂ ಓದಿ: ಚಿಕ್ಕ ವಯಸ್ಸಿನಲ್ಲೇ ಬಾರ್ ಲೈಸೆನ್ಸ್‌ಗಾಗಿ ಸುಳ್ಳು ಮಾಹಿತಿ ನೀಡಿದ್ದ ಸಮೀರ್ ವಾಂಖೆಡೆ ವಿರುದ್ಧ ಎಫ್‌ಐಆರ್

Share This Article
Leave a Comment

Leave a Reply

Your email address will not be published. Required fields are marked *