ಮಂಡ್ಯ: ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ್ದ ಕ್ರಷರ್ ಮಾಲೀಕನ ಮೇಲೆ ಪಾಂಡವಪುರದಲ್ಲಿ ಪ್ರಕರಣ ದಾಖಲಾಗಿದೆ.
ಪಾಂಡವಪುರದ ಕ್ರಷರ್ ಮಾಲೀಕ ತೌಫಿಕ್ ಬಳಿ ಪಿಸ್ತೂಲ್ ಗಳಿವೆ ಎಂದು ರೈತರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ಕ್ರಷರ್ ಮಾಲೀಕನ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ತೌಫಿಕ್ ನ ಇನ್ನೋವಾ ಕಾರಿನಲ್ಲಿ ಒಂದು ಪಿಸ್ತೂಲ್ ಹಾಗೂ ಎರಡು ಸಜೀವ ಗುಂಡುಗಳು ಪತ್ತೆಯಾಗಿದೆ.
ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡ ಪೊಲೀಸರು ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಕ್ರಷರ್ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕ್ರಷರ್ ನಿಂದಾಗಿ ರೈತರ ಬೆಳೆ ಹಾಳಾಗುತ್ತದೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದರು. ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದ್ದಕ್ಕೆ ಕ್ರಷರ್ ಮಾಲೀಕ ತೌಫಿಕ್ ಹಾಗೂ ಬೆಂಬಲಿಗರು ರೈತರ ಮೇಲೆಯೇ ಹಲ್ಲೆ ನಡೆಸಿದ್ದರು.