ಬೆಂಗಳೂರು: ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಯುವಕನನ್ನು ಮಹಿಳೆಯ ಕುಟುಂಬಸ್ಥರು ಹತ್ಯೆ ಮಾಡಿದ ಘಟನೆ ಯಶವಂತಪುರದ (Yeswanthpur) ಮುತ್ಯಾಲಮ್ಮ ನಗರದಲ್ಲಿ ನಡೆದಿದೆ.
ನರಸಿಂಹರಾಜು (32) ಕೊಲೆಯಾದ ಯುವಕ. ಈತ ಮದುವೆಯಾಗಿದ್ದ ಮಹಿಳೆಯ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಎನ್ನಲಾಗಿದೆ. ಆ ಮಹಿಳೆಯೂ ಆಗಾಗ ಯುವಕನ ಮನೆಗೆ ಬರುತ್ತಿದ್ದಳು. ಶನಿವಾರ (ನ.22) ಆ ಮಹಿಳೆ ನರಸಿಂಹರಾಜು ಮನೆಯಲ್ಲಿ ಇದ್ದರು. ಇದನ್ನು ತಿಳಿದ ಮಹಿಳೆಯ ಮನೆಯವರು ಬಂದಿದ್ದಾರೆ. ಬಳಿಕ ಮನೆಯಲ್ಲಿದ್ದ ನರಸಿಂಹರಾಜುನನ್ನು ಮನೆಯಿಂದ ಹೊರಗಡೆ ಎಳೆದುಕೊಂಡು ಬಂದು ರಸ್ತೆಯಲ್ಲಿ ನಾಲ್ಕೈದು ಜನ ಮನಸ್ಸೋ ಇಚ್ಚೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಬಿಡಿಸಲು ಬಂದ ನರಸಿಂಹರಾಜು ತಾಯಿಯ ಮೇಲೂ ಹಲ್ಲೆ ಮಾಡಲಾಗಿದೆ. ಇದನ್ನೂ ಓದಿ: ವರದಕ್ಷಿಣೆಗಾಗಿ ಪತ್ನಿ ಮೇಲೆ GBA ಮಾರ್ಷಲ್ ದರ್ಪ ಆರೋಪ – ಮಹಿಳೆ ನೇಣಿಗೆ ಶರಣು
ಹಲ್ಲೆಯಿಂದ ಅಸ್ವಸ್ಥನಾಗಿದ್ದ ನರಸಿಂಹರಾಜುನನ್ನು ಕೂಡಲೇ ಕೆ.ಸಿ ಜನರಲ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಆಸ್ಪತ್ರೆಯಲ್ಲಿ ಯುವಕ ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ ಎಂದು ಕುಟುಂಬಸ್ಥರ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: Nelamangala | ಯುವತಿಯನ್ನ ಸ್ನೇಹಿತೆ ರೂಂಗೆ ಕರೆದೊಯ್ದು ಕೊಲೆಗೈದ ಯುವಕ

