Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅತ್ತ ಡಿಕೆಶಿಗೆ ಜೈಲು, ಇತ್ತ ಜಮೀರ್ ಅಹ್ಮದ್‍ಗೆ ಸಿಬಿಐ ನೋಟಿಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅತ್ತ ಡಿಕೆಶಿಗೆ ಜೈಲು, ಇತ್ತ ಜಮೀರ್ ಅಹ್ಮದ್‍ಗೆ ಸಿಬಿಐ ನೋಟಿಸ್

Bengaluru City

ಅತ್ತ ಡಿಕೆಶಿಗೆ ಜೈಲು, ಇತ್ತ ಜಮೀರ್ ಅಹ್ಮದ್‍ಗೆ ಸಿಬಿಐ ನೋಟಿಸ್

Public TV
Last updated: September 19, 2019 10:12 pm
Public TV
Share
3 Min Read
zameer ahmed
SHARE

ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ತಿಹಾರ್ ಜೈಲಿಗೆ ಶಿಫ್ಟ್ ಆಗಿದ್ದಾರೆ. ಈ ಬೆನ್ನಲ್ಲೇ ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್‍ನ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ.

ಜಮೀರ್ ಅಹ್ಮದ್ 90 ಕೋಟಿ ರೂ. ಬೆಲೆಬಾಳುವ ನಿವೇಶನವನ್ನು ಐಎಂಎಗೆ 9.38 ಕೋಟಿ ರೂ.ಗಳಿಗೆ ಮಾರಾಟ ಮಾಡಿ, ಬಾಕಿ 80 ಕೋಟಿ ರೂ.ಗಳನ್ನು ಹವಾಲಾ ರೂಪದಲ್ಲಿ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಜಮೀರ್ ಅಹ್ಮದ್ ಅವರಿಗೆ ನೋಟಿಸ್ ನೀಡಿದೆ. ಇದನ್ನೂ ಓದಿ: ಡಿಕೆಶಿಗೆ ತಿಹಾರ್ ಜೈಲೇ ಗತಿ – ಶನಿವಾರಕ್ಕೆ ವಿಚಾರಣೆ ಮುಂದೂಡಿಕೆ

Zameer Ahmed Khan

ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಮೊನ್ನೆಯಷ್ಟೇ ಹೈಕೋರ್ಟ್ ಸಿಬಿಐ ವಿರುದ್ಧ ಚಾಟಿ ಬೀಸಿತ್ತು. ಈ ಪ್ರಕರಣವು ತನಿಖೆ ಕುಂಠಿತವಾಗುತ್ತಿದೆ. ತನಿಖೆ ಪ್ರಗತಿಯಲ್ಲಿ ಇಲ್ಲವೆಂದು ಬೇಸರ ವ್ಯಕ್ತಪಡಿಸಿತ್ತು. ಹೀಗಾಗಿ ತನಿಖೆ ಚುರುಕುಗೊಳಿಸಿರುವ ಸಿಬಿಐ, ಪ್ರಮುಖ ಆರೋಪಿಗಳಿಗೆ ನೋಟಿಸ್ ನೀಡಿ ವಿಚಾರಣೆ ನಡೆಸುತ್ತಿದೆ. ಇದನ್ನೂ ಓದಿ: ಮಾಜಿ ಸಚಿವರಿಗೆ ಟ್ರಾಫಿಕ್ ನಿಯಮ ಅನ್ವಯ ಆಗಲ್ವಾ? ರಸ್ತೆಯಲ್ಲಿಯೇ ಬಸ್ ಪಾರ್ಕ್

ನೋಟಿಸ್ ಹಿನ್ನೆಲೆಯಲ್ಲಿ ಮಾಜಿ ಸಚಿವರು ಗುರುವಾರ ಬೆಳಗ್ಗೆ 11:30 ಗಂಟೆಗೆ ಸಿಬಿಐ ಕಚೇರಿಗೆ ಹೋಗಿದ್ದಾರೆ. ಈ ವೇಳೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿರುವ ಅವರು, ಶುಕ್ರವಾರ ವಿಚಾರಣೆಗೆ ಬರುವುದಕ್ಕೆ ಆಗುವುದಿಲ್ಲ. ಪೂರ್ವ ನಿಯೋಜಿತ ಕಾರ್ಯಕ್ರಮವಿದೆ. ದೇವರ ಕಾರ್ಯದ ನಿಮಿತ್ತ ರಾಜಸ್ಥಾನದ ಜೈಪುರಕ್ಕೆ ತೆರಳಬೇಕಿದೆ. ವಿಚಾರಣೆಗೆ ಕಾಲಾವಕಾಶ ನೀಡಿ ಎಂದು ಕೇಳಿದ್ದಾರೆ ಎನ್ನಲಾಗಿದೆ.

IMA Mansoor Khan

ಜಮೀರ್ ವಿರುದ್ಧದ ಆರೋಪವೇನು?:
ಮಾಜಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಜೂನ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಬಿಜೆಪಿ ಮುಖಂಡ ಎನ್. ರಮೇಶ್ ಅವರು, 90 ಕೋಟಿ ರೂ. ಮೌಲ್ಯದ ನಿವೇಶನವನ್ನು ಕೇವಲ 9.38 ಕೋಟಿ ರೂ.ಗೆ ಮಾರಾಟ ಮಾಡಿದ್ದು, ಉಳಿದ 80 ಕೋಟಿ ರೂ.ಗಳನ್ನು ಕಪ್ಪು ಹಣ ಹವಾಲಾ ರೂಪದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಪಡೆದಿದ್ದಾರೆ. ವಿವಾದಿತ ನಿವೇಶನವನ್ನು ಅಕ್ರಮ ಮಾರಾಟ ಮಾಡಿ ಉಳಿದ ಹಣವನ್ನು ತಮ್ಮ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. 2001ರಲ್ಲಿ ಕೇವಲ ಎರಡೂವರೆ ಕೋಟಿ ರೂ.ಗೆ ನಿವೇಶನವನ್ನು ಖರೀದಿಸಿ ಅಕ್ರಮವಾಗಿ ಐಎಂಎಗೆ ಮಾರಾಟ ಮಾಡಿದ್ದಾರೆ ಎಂದು ದೂರಿದ್ದರು.

ಭೂ ಮಾಲೀಕನಿಗೆ ಕೇವಲ ಎರಡೂವರೆ ಕೋಟಿ ರೂ.ಗಳನ್ನು ನೀಡಿ ಜಮೀನು ಖರೀದಿಸಿದ್ದು, ಅದೇ ಜಮೀನನ್ನು 9 ಕೋಟಿ ರೂ.ಗೆ ಐಎಂಎ ಮಾಲೀಕನಿಗೆ ಮಾರಾಟ ಮಾಡಿದ್ದಾರೆ. ಆದರೆ ಆ ಜಮೀನಿನ ಸದ್ಯದ ಮಾರುಕಟ್ಟೆ ಬೆಲೆ ಕನಿಷ್ಟ 90 ಕೋಟಿ ರೂ.ಗಳಾಗಿದ್ದು, 2018ರಲ್ಲಿ ಮನ್ಸೂರ್ ಖಾನ್‍ಗೆ ಕೇವಲ 9.38 ಕೋಟಿ ರೂ.ಗೆ ಜಮೀರ್ ಅಹ್ಮದ್ ಖಾನ್ ಮಾರಾಟ ಮಾಡಿದ್ದಾರೆ. ಉಳಿದ 80 ಕೋಟಿ ರೂ. ಕಪ್ಪು ಹಣವನ್ನು ತನ್ನ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.

zameer nr ramesh mansoor khan

9 ವರ್ಷಗಳಿಂದ ರಿಚ್ಮಂಡ್ ಟೌನ್‍ನ ಸರ್ಪಟೈನ್ ಸ್ಟ್ರೀಟ್‍ನಲ್ಲಿರುವ ವಿವಾದಿತ ನಿವೇಶನ ಕೋರ್ಟ್ ಅಂಗಳದಲ್ಲಿದ್ದು, 2014ರಲ್ಲಿ ಆಸ್ತಿ ಪ್ರಕರಣ ಕೋರ್ಟಿನಲ್ಲಿರುವಾಗಲೇ ಜಮೀರ್ ಪಾಲಿಕೆಗೆ ಪತ್ರ ಬರೆದು ಆಸ್ತಿಯನ್ನು ನಾನು ಖರೀದಿಸಿದ್ದೇನೆ ಖಾತೆ ಮಾಡಿಕೊಡಿ ಎಂದು ಕೇಳಿಕೊಂಡಿದ್ದಾರೆ. ಆಗಲೇ ಪಾಲಿಕೆ ನೌಕರರು ಈ ಆಸ್ತಿ ವ್ಯಾಜ್ಯ ಕೋರ್ಟ್ ನಲ್ಲಿದೆ. ಹೀಗಾಗಿ ಖಾತೆ ಮಾಡಿಕೊಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದರು. ಹೀಗಿದ್ದರೂ ಸಹ ಹತ್ತು ಹಲವು ಬಾರಿ ಪತ್ರ ವ್ಯವಹಾರ ನಡೆಸಿ ಖಾತೆ ಮಾಡಿಸಿಕೊಂಡಿದ್ದಾರೆ ಎಂದು ರಮೇಶ್ ಹೇಳಿದ್ದರು.

ತಾವು ಖಾತೆ ಮಾಡಿಸಿದ ನಂತರ ಮನ್ಸೂರ್ ಖಾನ್‍ಗೆ ಮಾರಾಟ ಮಾಡಿರುವ ಜಮೀನಿಗೆ ಖಾತೆ ಮಾಡಿಸಲು ಜಮೀರ್ ಕಸರತ್ತು ಮಾಡಿದ್ದಾರೆ. ಸಚಿವ ಜಮೀರ್ ಸುಳ್ಳು ಲೆಕ್ಕ ಕೊಡುವುದರಲ್ಲಿ ಎಕ್ಸ್‍ಪರ್ಟ್. ಚುನಾವಣಾ ಪ್ರಮಾಣಪತ್ರದಲ್ಲೇ ತಪ್ಪು ಮಾಹಿತಿ ನೀಡಿದ್ದು, 2018ರ ವಿಧಾನಸಭೆ ಚುನಾವಣೆಯಲ್ಲಿ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿಯೂ ಮಾಜಿ ಶಾಸಕ ಚೆಲುವರಾಯ ಸ್ವಾಮಿಯಿಂದ 42 ಲಕ್ಷ ಸಾಲ ಪಡೆದಿರುವುದಾಗಿ ಸುಳ್ಳು ಮಾಹಿತಿ ನೀಡಿದ್ದಾರೆ. ಆದರೆ, ಚೆಲುವರಾಯ ಸ್ವಾಮಿ ಅದೇ 2018ರ ವಿಧಾನಸಭಾ ಚುನಾವಣೆಯಲ್ಲಿ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಜಮೀರ್ ಅಹ್ಮದ್ ಖಾನ್ ಸಾಲ ನೀಡಿರುವ ಮಾಹಿತಿಯನ್ನೇ ನೀಡಿಲ್ಲ ಎಂದು ಎನ್.ಆರ್.ರಮೇಶ್ ಆರೋಪಿಸಿದ್ದರು.

TAGGED:cbicongressIMA scamnoticePublic TVZameer Ahmed Khanಐಎಂಎ ಪ್ರಕರಣಕಾಂಗ್ರೆಸ್ಜಮೀರ್ ಅಹ್ಮದ್ನೋಟಿಸ್ಪಬ್ಲಿಕ್ ಟಿವಿಸಿಬಿಐ
Share This Article
Facebook Whatsapp Whatsapp Telegram

Cinema news

Bharti Singh Haarsh Limbachiyaa
ಹಾಸ್ಯನಟಿ ಭಾರ್ತಿ ಸಿಂಗ್‌, ಹರ್ಷ್‌ ಲಿಂಬಾಚಿಯಾ ದಂಪತಿಗೆ 2ನೇ ಮಗು ಜನನ
Bollywood Cinema Latest Top Stories
Koragajja Kannada Film 1
ಕೊರಗಜ್ಜ ಚಿತ್ರಕ್ಕಿದೆ ಮೆಸ್ಸಿ ಹಾಡು ಕ್ರಿಯೇಟ್ ಮಾಡಿದ ತಂಡದ ಲಿಂಕ್
Cinema Latest TV Shows
Ranya Rao 1
ಕಾಫಿಪೋಸಾ ಆದೇಶ ಪ್ರಶ್ನಿಸಿದ್ದ ರನ್ಯಾಗೆ ಮತ್ತೆ ಶಾಕ್ – ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru City Cinema Court Districts Karnataka Latest Top Stories
Vijay Deverakonda
ವಿಜಯ್ ದೇವರಕೊಂಡ ನಟನೆಯ ಹೊಸ ಚಿತ್ರದ ಅಪ್‌ಡೇಟ್‌
Cinema Latest South cinema

You Might Also Like

Abuse in school for mentally Disabled children Bagalkote action against teachers Lakshmi Hebbalkar
Bagalkot

ಬುದ್ದಿಮಾಂದ್ಯ ಮಕ್ಕಳ ಶಾಲೆಯಲ್ಲಿ ದೌರ್ಜನ್ಯ – ಶಿಕ್ಷಕರ ವಿರುದ್ಧ ಕ್ರಮಕ್ಕೆ ಹೆಬ್ಬಾಳ್ಕರ್‌ ಸೂಚನೆ

Public TV
By Public TV
41 seconds ago
Telangana Woman Beaten To Death By Husband Allegedly Over Dowry
Crime

ಪ್ರೀತಿಸಿ ಮದುವೆಯಾದ ಎಂಟೇ ತಿಂಗಳಿಗೆ ಪತ್ನಿಯನ್ನು ಥಳಿಸಿ ಕೊಂದ ಪತಿ – ಸಿಸಿಟಿವಿಯಲ್ಲಿ ಕೃತ್ಯ ಸೆರೆ

Public TV
By Public TV
30 minutes ago
Mandya SP
Crime

ಮಂಡ್ಯ | `ನಿಗೂಢ ರಕ್ತ’ ಪ್ರಕರಣದ ರಹಸ್ಯ ಬಯಲು

Public TV
By Public TV
37 minutes ago
Modi 4
Latest

ಲ್ಯಾಂಡ್‌ ಆಗದೇ ಕೋಲ್ಕತ್ತಾಗೆ ಮೋದಿ ಹೆಲಿಕಾಪ್ಟರ್‌ ವಾಪಸ್‌

Public TV
By Public TV
37 minutes ago
DK Shivakumar 11
Bengaluru City

ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಕೆಶಿ

Public TV
By Public TV
38 minutes ago
Bangladesh Hindu Man
Latest

ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಕ್ರೂರ ಹತ್ಯೆ – 7 ಮಂದಿ ಅರೆಸ್ಟ್‌

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?