– ರಾಜ್ಯದ ಕೆಲವು ಜಿಲ್ಲೆಗಳಿಗೆ 2 ದಿನಗಳ ಕಾಲ ಯೆಲ್ಲೋ ಅಲರ್ಟ್
ಬೆಂಗಳೂರು: ಬಂಗಾಳ ಕೊಲ್ಲಿಯ (Bay Of Bengal) ನೈರುತ್ಯ ಭಾಗದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಸಿಲಿಕಾನ್ ಸಿಟಿಯಲ್ಲಿ (Silicon City) ಬೆಳ್ಳಂಬೆಳಗ್ಗೆ ತುಂತುರು ಮಳೆ ಶುರುವಾಗಿದೆ. ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Indian Meteorological Department) ನೀಡಿದೆ.
ರಾಜ್ಯದ ಕೆಲವು ಜಿಲ್ಲೆಗಳಿಗೆ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ (Yellow Alert) ಘೋಷಿಸಿದೆ.ಇದನ್ನೂ ಓದಿ: ರಾಜ್ಯದ ಹವಾಮಾನ ವರದಿ: 13-11-2024
ಇಂದು ಮತ್ತು ನಾಳೆ ಮಳೆಯ ಮುನ್ಸೂಚನೆ ನೀಡಿದ್ದು, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಇಂದು (ನ.13) ಯೆಲ್ಲೋ ಅಲರ್ಟ್ ಘೋಷಿಸಿದೆ ಹಾಗೂ ಶಿವಮೊಗ್ಗ, ಚಾಮರಾಜನಗರ ಜಿಲ್ಲೆಗಳಿಗೆ ನಾಳೆ ಯೆಲ್ಲೋ (ನ.14) ಅಲರ್ಟ್ ಘೋಷಿಸಿದೆ.
ಇನ್ನೂ ದಕ್ಷಿಣ ಒಳನಾಡು, ಕರಾವಳಿಯ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಇದನ್ನೂ ಓದಿ: ದಿನ ಭವಿಷ್ಯ: 13-11-2024