ಚಾಮರಾಜನಗರ: ಕಾಮುಕನೊಬ್ಬನು ಅನೈತಿಕ ಸಂಬಂಧಕ್ಕೆ ಒಪ್ಪದ ಕಾರಣ ಗೃಹಿಣಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರ ಗ್ರಾಮದಲ್ಲಿ ನಡೆದಿದೆ.
ಕಾಮುಕ ನಟರಾಜು ಕೆಲವು ತಿಂಗಳಿಂದ ಮಹಿಳೆಗೆ ಲೈಂಗಿಕ ಕಿರುಕುಳಕ್ಕೆ ಒತ್ತಾಯಿಸುತ್ತಿದ್ದ. ಆರೋಪಿಯು ನನ್ನ ಜೊತೆ ಅನೈತಿಕ ಸಂಬಂಧ ಬೆಳೆಸಿದರೆ ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೆನೆಂದು ಗೃಹಿಣಿಗೆ ಆಮಿಷ ಒಡ್ಡುತ್ತಿದ್ದ. ಈ ಹಿನ್ನೆಲೆ ಅದಕ್ಕೆ ಒಪ್ಪದ ಗೃಹಿಣಿ ಮನೆಗೆ ತಡರಾತ್ರಿ ನುಗ್ಗಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ತಡೆಯಲು ಬಂದ ಗೃಹಿಣಿಯ ಮಗಳ ಮೇಲೆಯೂ ಹಲ್ಲೆ ಮಾಡಿದ್ದಾನೆ. ಇದನ್ನೂ ಓದಿ: ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದ ಆರೋಗ್ಯ ಅಧಿಕಾರಿ ವಿರುದ್ಧ ಡಿಕೆಶಿ ಗರಂ
ಹಲ್ಲೆಗೊಳಗಾದ ಅಮ್ಮ ಮಗಳಿಗೆ ಸಕಾ9ರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ಪೋಲಿಸರು ಸಂತ್ರಸ್ತೆ ನೀಡಿದ ದೂರಿನನ್ವಯ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನನ್ನನ್ನು ನೋಡಿದ್ರೆ ಕೊರೊನಾ ಇದೆ ಅಂತ ಅನ್ನಿಸುತ್ತಾ?: ಡಿ.ಕೆ. ಶಿವಕುಮಾರ್